AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Price on July 19: ರಾಜಸ್ಥಾನ, ಹರ್ಯಾಣದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಜುಲೈ 19, ಶುಕ್ರವಾರದ ಪೆಟ್ರೋಲ್, ಡೀಸೆಲ್ ಬೆಲೆಗಳನ್ನು ಬಿಡುಗಡೆ ಮಾಡಿವೆ. ಹರ್ಯಾಣ ಹಾಗೂ ರಾಜಸ್ಥಾನದಲ್ಲಿ ಇಂಧನ ಬೆಲೆ ದುಬಾರಿಯಾಗಿದೆ. ಬಜೆಟ್​ಗೂ ಮುನ್ನ ಹಲವೆಡೆ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ವ್ಯತ್ಯಾಸ ಕಂಡುಬಂದಿದೆ. ನಿಮ್ಮ ನಗರಗಳಲ್ಲಿ ಇಂಧನ ಬೆಲೆ ಎಷ್ಟಿದೆ ಎಂದು ತಿಳಿಯಿರಿ.

Petrol Diesel Price on July 19: ರಾಜಸ್ಥಾನ, ಹರ್ಯಾಣದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ
ಪೆಟ್ರೋಲ್Image Credit source: iStock
ನಯನಾ ರಾಜೀವ್
|

Updated on: Jul 19, 2024 | 7:18 AM

Share

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆಯಲ್ಲಿ ಏರಿಳಿತ ಗೋಚರಿಸುತ್ತಿದೆ. ಕಚ್ಚಾತೈಲ ಬೆಲೆ ಪ್ರತಿ ಬ್ಯಾರೆಲ್​ಗೆ 85.45 ಡಾಲರ್​ ಆಗಿದೆ. ಡಬ್ಲ್ಯೂಟಿಐ ಕಚ್ಚಾತೈಲವು ಪ್ರತಿ ಬ್ಯಾರೆಲ್​ಗೆ 83.38 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ. ಸರ್ಕಾರಿ ತೈಲ ಕಂಪನಿಗಳ ಪ್ರಕಾರ, ಯುಪಿಯ ಗೌತಮ್ ಬುದ್ಧ ನಗರ ಜಿಲ್ಲೆಯಲ್ಲಿ ಪೆಟ್ರೋಲ್ ಅನ್ನು 29 ಪೈಸೆ ಅಗ್ಗವಾಗಿ ಲೀಟರ್‌ಗೆ 94.72 ರೂ.ಗೆ ಮಾರಾಟ ಮಾಡಲಾಗುತ್ತಿದೆ.

ಡೀಸೆಲ್ ಕೂಡ 31 ಪೈಸೆ ಕುಸಿದು ಲೀಟರ್‌ಗೆ 87.91 ರೂ.ಗೆ ತಲುಪಿದೆ. ಹರ್ಯಾಣದ ರಾಜಧಾನಿ ಗುರುಗ್ರಾಮದಲ್ಲಿ ಪೆಟ್ರೋಲ್ ಲೀಟರ್‌ಗೆ 15 ಪೈಸೆ ಏರಿಕೆಯಾಗಿ 95.05 ರೂ.ಗೆ ತಲುಪಿದೆ ಮತ್ತು ಡೀಸೆಲ್ 15 ಪೈಸೆಗಳಷ್ಟು ದುಬಾರಿಯಾಗಿದೆ ಮತ್ತು ಲೀಟರ್‌ಗೆ 87.91 ರೂ.ಗೆ ಮಾರಾಟವಾಗುತ್ತಿದೆ.

ಇಂದು ರಾಜಸ್ಥಾನದ ಜೋಧ್‌ಪುರ ನಗರದಲ್ಲಿ ಪೆಟ್ರೋಲ್‌ಗೆ 39 ಪೈಸೆ ಏರಿಕೆಯಾಗಿ ಲೀಟರ್‌ಗೆ 104.98 ರೂ.ಗೆ ಮಾರಾಟವಾಗುತ್ತಿದ್ದು, ಡೀಸೆಲ್‌ಗೆ 36 ಪೈಸೆ ಏರಿಕೆಯಾಗಿ ಲೀಟರ್‌ಗೆ 90.46 ರೂ.ಗೆ ಮಾರಾಟವಾಗುತ್ತಿದೆ.

ಕಳೆದ 24 ಗಂಟೆಗಳಲ್ಲಿ ಅದರ ಬೆಲೆಯಲ್ಲಿ ತೀವ್ರ ಏರಿಕೆಯಾಗಿದೆ. ಬ್ರೆಂಟ್ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 84.66 ಡಾಲರ್‌ಗೆ ಏರಿಕೆಯಾಗಿದೆ. ಡಬ್ಲ್ಯೂಟಿಐ ದರವು ಪ್ರತಿ ಬ್ಯಾರೆಲ್‌ಗೆ 82.14 ಡಾಲರ್​ಗೆ ಏರಿದೆ.

ಮಹಾನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ – ದೆಹಲಿಯಲ್ಲಿ ಪೆಟ್ರೋಲ್ 94.72 ರೂ. ಮತ್ತು ಡೀಸೆಲ್ ಲೀಟರ್‌ಗೆ 87.62 ರೂ. – ಮುಂಬೈನಲ್ಲಿ ಪೆಟ್ರೋಲ್ 103.44 ರೂ. ಮತ್ತು ಡೀಸೆಲ್ 89.97 ರೂ. – ಚೆನ್ನೈನಲ್ಲಿ ಪೆಟ್ರೋಲ್ 100.76 ರೂ. ಮತ್ತು ಡೀಸೆಲ್ 92.35 ರೂ. -ಕೋಲ್ಕತ್ತಾದಲ್ಲಿ 95 ರೂ. ಮತ್ತು ಡೀಸೆಲ್ ಲೀಟರ್‌ಗೆ 91.76 ರೂ. -ಬೆಂಗಳೂರು: ಪೆಟ್ರೋಲ್ ಲೀಟರ್‌ಗೆ 102.86 ಮತ್ತು ಡೀಸೆಲ್ ಲೀಟರ್‌ಗೆ 88.94 ರೂ.

ಮತ್ತಷ್ಟು ಓದಿ: Petrol Diesel Price on July 18: ಬೆಂಗಳೂರು, ಮುಂಬೈ ಸೇರಿದಂತೆ ದೇಶದ ವಿವಿಧೆಡೆ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?

ಈ ನಗರಗಳಲ್ಲಿ ದರಗಳು ಬದಲಾಗಿವೆ – ಗುರುಗ್ರಾಮದಲ್ಲಿ ಪೆಟ್ರೋಲ್ 95.05 ರೂ. ಮತ್ತು ಡೀಸೆಲ್ ಲೀಟರ್‌ಗೆ 87.91 ರೂ. – ನೋಯ್ಡಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 94.72 ರೂ. ಮತ್ತು ಡೀಸೆಲ್ 87.83 ರೂ. ಆಗಿದೆ. – ಜೋಧ್‌ಪುರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 104.98 ರೂ. ಮತ್ತು ಡೀಸೆಲ್ 90.46 ರೂ. ಆಗಿದೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಬೆಳಗ್ಗೆ 6 ಗಂಟೆಗೆ ಹೊಸ ದರಗಳು ಬಿಡುಗಡೆಯಾಗುತ್ತವೆ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ. ಹೊಸ ದರಗಳು ಬೆಳಗ್ಗೆ 6 ಗಂಟೆಯಿಂದಲೇ ಜಾರಿಗೆ ಬರಲಿವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕ, ಡೀಲರ್ ಕಮಿಷನ್, ವ್ಯಾಟ್ ಮತ್ತು ಇತರ ವಸ್ತುಗಳನ್ನು ಸೇರಿಸಿದ ನಂತರ, ಅದರ ಬೆಲೆ ಮೂಲ ಬೆಲೆಗಿಂತ ಸುಮಾರು ಎರಡು ಪಟ್ಟು ಹೆಚ್ಚಾಗುತ್ತದೆ. ಇದೇ ಕಾರಣಕ್ಕೆ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಏರಿಕೆ ಕಾಣುತ್ತಿದೆ.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ