AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಇವಿ ಸಬ್ಸಿಡಿಗಳಿಗೆ ಚೀನಾ ಅಸಮಾಧಾನ; ಡಬ್ಲ್ಯುಟಿಒದಲ್ಲಿ ದೂರು

China's complaint in WTO against India's EV subsidies: ಚೀನಾದ ದೇಶ ಭಾರತ ಹಾಗೂ ಇತರ ಕೆಲ ದೇಶಗಳ ವಿರುದ್ಧ ವರ್ಲ್ಡ್ ಟ್ರೇಡ್ ಆರ್ಗನೈಸೇಶನ್​ನಲ್ಲಿ ದೂರು ನೀಡಿದೆ. ಭಾರತವು ಇವಿ ತಯಾರಕರಿಗೆ ಸಬ್ಸಿಡಿ ನೀಡುತ್ತಿದೆ. ಇದರಿಂದ ಚೀನಾದ ಇವಿ ಉತ್ಪನ್ನಗಳಿಗೆ ಹಿನ್ನಡೆಯಾಗುತ್ತದೆ ಎಂಬುದು ಚೀನಾದ ತಗಾದೆ. ಭಾರತವಲ್ಲದೆ, ಟರ್ಕಿ, ಕೆನಡಾ ಮತ್ತು ಐರೋಪ್ಯ ಒಕ್ಕೂಟದ ವಿರುದ್ಧ ಡಬ್ಲ್ಯುಟಿಒದಲ್ಲಿ ಚೀನಾ ದೂರು ಕೊಟ್ಟಿದೆ.

ಭಾರತದ ಇವಿ ಸಬ್ಸಿಡಿಗಳಿಗೆ ಚೀನಾ ಅಸಮಾಧಾನ; ಡಬ್ಲ್ಯುಟಿಒದಲ್ಲಿ ದೂರು
ಡಬ್ಲ್ಯುಟಿಒ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 16, 2025 | 5:46 PM

Share

ನವದೆಹಲಿ, ಅಕ್ಟೋಬರ್ 16: ಎಲೆಕ್ಟ್ರಿಕ್ ವಾಹನಗಳು ಹಾಗೂ ಬ್ಯಾಟರಿಗಳ ತಯಾರಿಕೆಗೆ ಭಾರತ ಸಬ್ಸಿಡಿ ನೀಡುತ್ತಿರುವುದನ್ನು ಪ್ರಶ್ನಿಸಿ ಚೀನಾ (China) ವಿಶ್ವ ವ್ಯಾಪಾರ ಸಂಘಟನೆಯಾದ ಡಬ್ಲ್ಯುಟಿಒಗೆ ದೂರು ನೀಡಿದೆ. ಭಾರತ ಸರ್ಕಾರ ನೀಡುತ್ತಿರುವ ಸಬ್ಸಿಡಿಯಿಂದ ಅದರ ದೇಶೀಯ ಉದ್ಯಮಗಳಿಗೆ ಹೆಚ್ಚು ಅನುಕೂಲವಾಗುತ್ತದೆ. ಚೀನಾದ ಉತ್ಪನ್ನಗಳಿಗೆ ಅನನುಕೂಲವಾಗುತ್ತದೆ. ಈ ರೀತಿ ಸಬ್ಸಿಡಿಗಳನ್ನು ನೀಡುವುದು ಜಾಗತಿಕ ವ್ಯಾಪಾರ ನಿಯಮಗಳ ಉಲ್ಲಂಘನೆಯಾಗುತ್ತದೆ ಎಂಬುದು ಚೀನಾ ಎತ್ತಿರುವ ತಗಾದೆ.

ಚೀನಾ ಈ ಸಬ್ಸಿಡಿ ವಿಚಾರದಲ್ಲಿ ಡಬ್ಲ್ಯುಟಿಒದಲ್ಲಿ ಭಾರತದ ವಿರುದ್ಧ ಮಾತ್ರವಲ್ಲ, ಟರ್ಕಿ, ಕೆನಡಾ, ಯೂರೋಪ್ ಯೂನಿಯನ್ ವಿರುದ್ಧವೂ ಇದೇ ರೀತಿಯಲ್ಲಿ ದೂರು ನೀಡಿದೆ. ಎಲೆಕ್ಟ್ರಿಕ್ ವಾಹನ ತಯಾರಿಕೆಯಲ್ಲಿ ವಿಶ್ವದಲ್ಲೇ ಚೀನಾ ಮುಂಚೂಣಿಯಲ್ಲಿದೆ. ವಿಶ್ವದ ಇವಿ ಮಾರುಕಟ್ಟೆಯಲ್ಲಿ ಚೀನಾ ಪೂರ್ಣ ಪ್ರಾಬಲ್ಯ ಸಾಧಿಸಿದೆ. ಚೀನಾದ ಇವಿ ಮಾರುಕಟ್ಟೆಯಲ್ಲಿ ಈಗ ಮೊದಲಿನಷ್ಟು ವೇಗದಲ್ಲಿ ಬೆಳೆಯುತ್ತಿಲ್ಲವಾದ್ದರಿಂದ ಇತರ ಮಾರುಕಟ್ಟೆಗಳಲ್ಲಿ ಸುಲಭ ಪ್ರವೇಶಕ್ಕೆ ಚೀನಾ ಇದಿರು ನೋಡುತ್ತಿದೆ. ಈ ಹಿನ್ನೆಲೆಯಲ್ಲಿ ಅದು ಡಬ್ಲ್ಯುಟಿಒ ಅಸ್ತ್ರ ಬಳಸಲು ಯತ್ನಿಸುತ್ತಿರಬಹುದು.

ಇದನ್ನೂ ಓದಿ: ರಷ್ಯನ್ ತೈಲ ಖರೀದಿಸಲ್ಲ ಅಂತ ಟ್ರಂಪ್​ಗೆ ಮೋದಿ ಭರವಸೆ ಕೊಟ್ಟರಾ? ಇಲ್ಲಿದೆ ಭಾರತದ ನಿಲುವು

ಭಾರತದ ಇವಿ ಮಾರುಕಟ್ಟೆ ಈಗ ಪ್ರವರ್ಧಮಾನಕ್ಕೆ ಬರುತ್ತಿದೆ. ದೇಶೀಯ ಇವಿ ಕಾರು ತಯಾರಕರನ್ನು ಉತ್ತೇಜಿಸಲು ಸರ್ಕಾರ ಪಿಎಲ್​ಐ ಸ್ಕೀಮ್ ಮೂಲಕ ಸಬ್ಸಿಡಿ ಒದಗಿಸುತ್ತಿದೆ. ಇದರಿಂದ ಚೀನಾದ ಇವಿ ಉತ್ಪನ್ನಗಳ ಬೆಲೆ ಅನುಕೂಲತೆಗಳು ಭಾರತೀಯ ಮಾರುಕಟ್ಟೆಯಲ್ಲಿ ಸಿಗದೇ ಹೋಗಬಹುದು ಎನ್ನುವ ಆತಂಕ ಚೀನಾದ್ದು.

ಭಾರತದ ವಾಣಿಜ್ಯ ಕಾರ್ಯದರ್ಶಿ ರಾಜೇಶ್ ಅಗರ್ವಾಲ್ ಅವರು ಪ್ರತಿಕ್ರಿಯಿಸಿದ್ದು, ಚೀನಾದ ಆಕ್ಷೇಪಗಳನ್ನು ವಿವರವಾಗಿ ಅವಲೋಕಿಸಲಾಗುವುದು ಎಂದಿದ್ದಾರೆ.

ಇದನ್ನೂ ಓದಿ: ಈ ವರ್ಷ ಬಿಗ್ ಕ್ರ್ಯಾಷ್; ಕರೆನ್ಸಿಗೆ ಇರಲ್ಲ ಮೌಲ್ಯ; ಚಿನ್ನ, ಬೆಳ್ಳಿ, ಬಿಟ್​ಕಾಯಿನ್​ನಂತಹ ಆಸ್ತಿಗಳಿಗೆ ಉಳಿಗಾಲ: ಕಿಯೋಸಾಕಿ

ಭಾರತದ ಜೊತೆ ಸಮಾಲೋಚನೆಗೆ ಚೀನಾ ಡಬ್ಲ್ಯುಟಿಒದಲ್ಲಿ ಅರ್ಜಿ ಸಲ್ಲಿಸಿದೆ ಎಂದು ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ. ಡಬ್ಲ್ಯುಟಿಒ ನಿಯಮಗಳ ಬಳಿಕ ವಿವಿಧ ದೇಶಗಳ ನಡುವೆ ವ್ಯಾಪಾರ ನಿಯಮಗಳಲ್ಲಿ ವ್ಯಾಜ್ಯ ಕಾಣಿಸಿದಾಗ ಅದನ್ನು ಬಗೆಹರಿಸುವ ನಿಟ್ಟಿನಲ್ಲಿ ಆ ದೇಶಗಳ ನಡುವೆ ಮಾತುಕತೆ ಅಥವಾ ಸಮಾಲೋಚನೆ ನಡೆಯಬೇಕು. ಅದು ಮೊದಲ ಹೆಜ್ಜೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು