AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾದ ಶಿಯೋಮಿ ಸಂಸ್ಥೆಯ 5500 ಕೋಟಿ ರೂ ಜಪ್ತಿ ವಿರುದ್ಧ ಸಂಸ್ಥೆ ಆಕ್ಷೇಪ, ರಿಟ್ ಅರ್ಜಿ ವಿಚಾರಣೆ

ಜಪ್ತಿಯಿಂದ ಹಣದ ವಹಿವಾಟಿಗೆ ಅಡ್ಡಿಯಾಗಿರುವುದಾಗಿ ಸಂಸ್ಥೆ ಆಕ್ಷೇಪ ವ್ಯಕ್ತಪಡಿಸಿದೆ. ಈ ಮಧ್ಯೆ, 5,500 ಕೋಟಿಗೆ ಬ್ಯಾಂಕ್ ಗ್ಯಾರಂಟಿ ನೀಡಲು ಹೈಕೋರ್ಟ್ ಸಲಹೆ ನೀಡಿದೆ.

ಚೀನಾದ ಶಿಯೋಮಿ ಸಂಸ್ಥೆಯ 5500 ಕೋಟಿ ರೂ ಜಪ್ತಿ ವಿರುದ್ಧ ಸಂಸ್ಥೆ ಆಕ್ಷೇಪ, ರಿಟ್ ಅರ್ಜಿ ವಿಚಾರಣೆ
ಜಪ್ತಿಯಿಂದ ಹಣದ ವಹಿವಾಟಿಗೆ ಅಡ್ಡಿಯಾಗಿರುವುದಾಗಿ ಸಂಸ್ಥೆ ಆಕ್ಷೇಪ ವ್ಯಕ್ತಪಡಿಸಿದೆ. ಈ ಮಧ್ಯೆ, 5,500 ಕೋಟಿಗೆ ಬ್ಯಾಂಕ್ ಗ್ಯಾರಂಟಿ ನೀಡಲು ಹೈಕೋರ್ಟ್ ಸಲಹೆ ನೀಡಿದೆ.
TV9 Web
| Edited By: |

Updated on:Oct 06, 2022 | 1:53 PM

Share

ಬೆಂಗಳೂರು: ಚೀನಾ ಮೂಲದ ಶಿಯೋಮಿ (China Xiaomi) ಸಂಸ್ಥೆಯ 5,500 ಕೋಟಿ ರೂ ಜಪ್ತಿ (seizure of over ₹5,500-cr assets) ವಿರುದ್ಧ ಸಂಸ್ಥೆ ಆಕ್ಷೇಪ ವ್ಯಕ್ತಪಡಿಸಿದೆ. ಜಾರಿ ನಿರ್ದೇಶನಾಲಯದ ಜಪ್ತಿ ಕ್ರಮ ಪ್ರಶ್ನಿಸಿ ಸಂಸ್ಥೆ ರಿಟ್ ಅರ್ಜಿ (writ petition) ಸಲ್ಲಿಸಿದ್ದು, ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ರಿಟ್ ಅರ್ಜಿ ವಿಚಾರಣೆ ನಡೆದಿದೆ. ಜಪ್ತಿಯಿಂದ ಹಣದ ವಹಿವಾಟಿಗೆ ಅಡ್ಡಿಯಾಗಿರುವುದಾಗಿ ಸಂಸ್ಥೆ ಆಕ್ಷೇಪ ವ್ಯಕ್ತಪಡಿಸಿದೆ.

ಈ ಮಧ್ಯೆ, 5,500 ಕೋಟಿಗೆ ಬ್ಯಾಂಕ್ ಗ್ಯಾರಂಟಿ ನೀಡಲು ಹೈಕೋರ್ಟ್ ಸಲಹೆ ನೀಡಿದೆ. ಬ್ಯಾಂಕ್ ಗ್ಯಾರಂಟಿ ನೀಡಿದರೆ ಮಾತ್ರ ಜಪ್ತಿಗೆ ತಡೆ ನೀಡಬಹುದು ಎಂದು ಹೈಕೋರ್ಟ್ ನ್ಯಾ. ಎನ್.ಎಸ್. ಸಂಜಯ್ ಗೌಡ ಅಭಿಪ್ರಾಯಪಟ್ಟಿದ್ದಾರೆ. ಪ್ರತಿಕ್ರಿಯೆ ಸಲ್ಲಿಸಲು ಇ.ಡಿ, ಶಿಯೋಮಿ ಸಂಸ್ಥೆಗೆ ಸೂಚನೆ ನೀಡಿ, ವಿಚಾರಣೆಯನ್ನು ಅಕ್ಟೋಬರ್​ 14ಕ್ಕೆ ಮಂದೂಡಿದೆ.

FEMA ಉಲ್ಲಂಘನೆಯಾಗಿಲ್ಲ -ಶಿಯೋಮಿ ಪುನರುಚ್ಚಾರ

ಇಡಿ 5,500 ಕೋಟಿ ರೂಪಾಯಿ ವಿದೇಶಿ ವಿನಿಮಯ ಉಲ್ಲಂಘನೆ ಪ್ರಕರಣದಲ್ಲಿ 84 % ಮೊತ್ತವನ್ನು ಪೇಟೆಂಟ್ ತಂತ್ರಜ್ಞಾನದ ಬಳಕೆಗಾಗಿ ಅಮೆರಿಕದ ಮೊಬೈಲ್ ತಂತ್ರಜ್ಞಾನ ಸಂಸ್ಥೆ ಕ್ವಾಲ್ಕಾಮ್ ಇಂಕ್‌ ಟೆಕ್ ಸಂಸ್ಥೆಗೆ ಪಾವತಿ ಮಾಡಿದ್ದೇವೆ ಎಂದು Xiaomi ಇಂಡಿಯಾ ಕರ್ನಾಟಕ HC ಗೆ ತಿಳಿಸಿದೆ. ಹೀಗೆ ಮೂರು ವಿದೇಶಿ ಕಂಪನಿಗಳಿಗೆ ಪಾವತಿಸಿರುವ ತಂತ್ರಜ್ಞಾನದ ರಾಯಧನವು (ರಾಯಲ್ಟಿ) ಫೆಮಾ ಕಾನೂನಿಗೆ (FEMA) ವಿರುದ್ಧವಾಗಿಲ್ಲ ಎಂದು ಶಿಯೋಮಿ ಇಂಡಿಯಾ ಮೇ ತಿಂಗಳಲ್ಲಿ ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿತ್ತು.

ಶಿಯೋಮಿ ಟೆಕ್ನಾಲಜಿ ಇಂಡಿಯಾ ಸಂಸ್ಥೆಯು 2016 ರಿಂದ ವಿದೇಶಿ ಖಾತೆಗಳಿಗೆ 5,500 ಕೋಟಿ ರೂಪಾಯಿಗಳ ರಾಯಲ್ಟಿ ಪಾವತಿಗಳು ಆಗಿವೆ. ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆಯ (FEMA) ಉಲ್ಲಂಘನೆಯಾಗಿದೆ ಎಂಬ ಆಧಾರದ ಮೇಲೆ ED ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದೆ.

Published On - 1:22 pm, Thu, 6 October 22

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ