AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bank Holiday: ಡಿಸೆಂಬರ್ 31ರವರೆಗೆ ಕ್ರಿಸ್ಮಸ್ ರಜೆಯ ಸೀಸನ್; ಯಾವ್ಯಾವ ರಾಜ್ಯಗಳಲ್ಲಿ ಯಾವ್ಯಾವತ್ತು ಬ್ಯಾಂಕ್ ರಜೆ; ಇಲ್ಲಿದೆ ಡೀಟೇಲ್ಸ್

Christmas Holidays: ಡಿಸೆಂಬರ್ 25ಕ್ಕೆ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಸಾರ್ವತ್ರಿಕ ರಜೆ ಇದೆ. ದೇಶದ ಎಲ್ಲೆಡೆ ಬ್ಯಾಂಕುಗಳು ಬಂದ್ ಆಗುತ್ತವೆ. ಕೆಲ ರಾಜ್ಯಗಳಲ್ಲಿ ಡಿಸೆಂಬರ್ 27ರವರೆಗೂ ಕ್ರಿಸ್ಮಸ್ ಆಚರಣೆ ಇದೆ. ಅಲ್ಲಿ ರಜೆ ಇರಬಹುದು. ಬ್ಯಾಂಕುಗಳು ಬಂದ್ ಆದರೂ ಡಿಜಿಟಲ್ ಬ್ಯಾಂಕಿಂಗ್, ಯುಪಿಐ, ನೆಟ್​ಬ್ಯಾಂಕಿಂಗ್, ಎಟಿಎಂ ಇತ್ಯಾದಿ ಸೇವೆಗಳು ಇದ್ದೇ ಇರುತ್ತವೆ.

Bank Holiday: ಡಿಸೆಂಬರ್ 31ರವರೆಗೆ ಕ್ರಿಸ್ಮಸ್ ರಜೆಯ ಸೀಸನ್; ಯಾವ್ಯಾವ ರಾಜ್ಯಗಳಲ್ಲಿ ಯಾವ್ಯಾವತ್ತು ಬ್ಯಾಂಕ್ ರಜೆ; ಇಲ್ಲಿದೆ ಡೀಟೇಲ್ಸ್
ಕ್ರಿಸ್ಮಸ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 24, 2023 | 4:32 PM

Share

ನವದೆಹಲಿ, ಡಿಸೆಂಬರ್ 24: ಸೆಪ್ಟೆಂಬರ್​ನಲ್ಲಿ ಶುರುವಾದ ಹಬ್ಬದ ಮತ್ತು ರಜೆಗಳ ಸೀಸನ್ ಡಿಸೆಂಬರ್ 31ರವರೆಗೂ ಇದೆ. ನಾಳೆ, ಡಿಸೆಂಬರ್ 25ಕ್ಕೆ ಕ್ರಿಸ್ಮಸ್ ರಜೆ (Christmas holiday) ಇದೆ. ಬಹಳ ಕಡೆ ಕ್ರಿಸ್ಮಸ್​ಗೆ ಸರಣಿ ರಜೆಗಳೇ ಇದೆ. ಬ್ಯಾಂಕುಗಳಿಗೂ ಕೂಡ ರಜೆ ಇದೆ. ಡಿಸೆಂಬರ್ 25ರಿಂದ 31ರವರೆಗೆ ವಿವಿಧ ಕಡೆ ವಿವಿಧ ದಿನಗಳಲ್ಲಿ ಬ್ಯಾಂಕ್ ರಜೆ ಇರುವುದನ್ನು ನೀವು ಗಮನಿಸಬೇಕು.

ಡಿಸೆಂಬರ್ 25, ಸೋಮವಾರ ಎಲ್ಲೆಲ್ಲೆ ರಜೆ?

ಡಿಸೆಂಬರ್ 25 ಕ್ರಿಸ್ಮಸ್ ಹಬ್ಬ. ಅಂದು ಘೋಷಿತ ರಾಷ್ಟ್ರೀಯ ರಜಾ ದಿನವಾಗಿದೆ. ದೇಶದ ಎಲ್ಲೆಡೆಯೂ ಸಾರ್ವತ್ರಿಕ ರಜೆಯಾಗಿದೆ. ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಎಲ್ಲಾ ಕಡೆಯೂ ಬ್ಯಾಂಕ್ ಬಂದ್ ಆಗಿರುತ್ತದೆ.

ಕ್ರಿಸ್ಮಸ್ ಹಬ್ಬ ಕೆಲವೆಡೆ ಹೆಚ್ಚಿನ ಅವಧಿ ಆಚರಿಸಲಾಗುತ್ತದಾದ್ದರಿಂದ ಡಿಸೆಂಬರ್ 25ರ ನಂತರವೂ ಕೆಲ ಪ್ರದೇಶಗಳ ಬ್ಯಾಂಕುಗಳಲ್ಲಿ ರಜೆ ಇರಬಹುದು.

ಇದನ್ನೂ ಓದಿ: Year Ender: 2023ರಲ್ಲಿ ಬೆರಗು ಮೂಡಿಸಿದ ಸ್ಮಾಲ್ ಕ್ಯಾಪ್ ಮ್ಯುಚುವಲ್ ಫಂಡ್​ಗಳು; ಮೂರು ಸ್ತರದ ಫಂಡ್​ಗಳು ತಂದಿವೆ ಅಚ್ಚರಿಯ ರಿಟರ್ನ್ಸ್

ಕ್ರಿಸ್ಮಸ್ ಹಬ್ಬದ ಪ್ರಯುಕ್ತ ರಜೆಗಳೆಲ್ಲೆಲ್ಲಿ?

  • ಡಿಸೆಂಬರ್ 25: ಕ್ರಿಸ್ಮಸ್ ಹಬ್ಬಕ್ಕೆ ಸಾರ್ವತ್ರಿಕ ರಜೆ.
  • ಡಿಸೆಂಬರ್ 26: ಕ್ರಿಸ್ಮಸ್ ಪ್ರಯುಕ್ತ ಮಿಜೋರಾಂ, ನಾಗಾಲ್ಯಾಂಡ್ ಮತ್ತು ಮೇಘಾಲಯದಲ್ಲಿ ಬ್ಯಾಂಕ್ ರಜೆ
  • ಡಿಸೆಂಬರ್ 27: ನಾಗಾಲ್ಯಾಂಡ್​ನಲ್ಲಿ ಬ್ಯಾಂಕ್ ರಜೆ
  • ಡಿಸೆಂಬರ್ 30: ಯು ಕಿಯಾಂಗ್ ನಂಗ್​ಬಾಹ್ ಪ್ರಯುಕ್ತ ಮೇಘಾಲಯದಲ್ಲಿ ರಜೆ ಇದೆ.
  • ಡಿಸೆಂಬರ್ 31: ಭಾನುವಾರದ ರಜೆ

ಇಲ್ಲಿ ಕ್ರೈಸ್ತ ಬಹುಸಂಖ್ಯಾತ ನಾಗಾಲ್ಯಾಂಡ್ ರಾಜ್ಯದಲ್ಲಿ ಡಿಸೆಂಬರ್ 25ರಿಂದ 27ರವರೆಗೆ ಸತತ 3 ದಿನ ಕ್ರಿಸ್ಮಸ್ ಪ್ರಯುಕ್ತ ರಜೆ ಇದೆ.

ಕರ್ನಾಟಕದಲ್ಲಿ ಡಿಸೆಂಬರ್ 25ಕ್ಕೆ ಬ್ಯಾಂಕ್ ರಜೆ ಇದೆ. ಅದು ಬಿಟ್ಟರೆ ಡಿಸೆಂಬರ್ 31ಕ್ಕೆ ಭಾನುವಾರದ ರಜೆ ಮಾತ್ರವೇ ಇರುವುದು.

ಇದನ್ನೂ ಓದಿ: RBI: ನಿರ್ದೇಶಕರಿಗೆ ಸಾಲ ಕೊಟ್ಟು ನಿಯಮ ಉಲ್ಲಂಘನೆ; ಟಿಡಿಸಿಸಿ ಬ್ಯಾಂಕ್​ಗೆ ದಂಡ ವಿಧಿಸಿದ ಆರ್​ಬಿಐ

ಬ್ಯಾಂಕುಗಳು ಬಾಗಿಲು ಹಾಕಿದರೂ ಡಿಜಿಟಲ್ ಬ್ಯಾಂಕಿಂಗ್ ಸೇವೆ ಚಾಲನೆಯಲ್ಲಿ ಇದ್ದೇ ಇರುತ್ತದೆ. ಎಟಿಎಂಗಳು ತೆರೆದೇ ಇರುತ್ತವೆ. ಯುಪಿಐ ಮೂಲಕ ವಹಿವಾಟು ಮಾಡಬಹುದು. ಕ್ರೆಡಿಟ್ ಕಾರ್ಡ್ ಸೇವೆ, ನೆಟ್​ಬ್ಯಾಂಕಿಂಗ್ ಇವೆ ಸೇವೆಗಳು ಯಥಾಪ್ರಕಾರ ಇರುತ್ತವೆ. ಬಹುತೇಕ ಬ್ಯಾಂಕಿಂಗ್ ಸೇವೆಗಳಿಗೆ ಬ್ಯಾಂಕ್ ಬಂದ್​ನಿಂದ ವ್ಯತ್ಯಯವಾಗುವುದಿಲ್ಲ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ