AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Closing Bell: ಜಾಗತಿಕ ಒತ್ತಡದಿಂದ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 433 ಪಾಯಿಂಟ್ಸ್, ನಿಫ್ಟಿ 144 ಪಾಯಿಂಟ್ಸ್ ಕುಸಿತ

ಜಾಗತಿಕ ಪ್ರಭಾವದ ಕಾರಣಕ್ಕೆ ಭಾರತದ ದೇಶೀ ಷೇರು ಮಾರುಕಟ್ಟೆ ಸತತ ಮೂರನೇ ಟ್ರೇಡಿಂಗ್ ಸೆಷನ್ ದಿನವಾದ ನವೆಂಬರ್ 11ನೇ ತಾರೀಕಿನ ಗುರುವಾರ ಕೂಡ ಇಳಿಕೆ ದಾಖಲಿಸಿವೆ.

Closing Bell: ಜಾಗತಿಕ ಒತ್ತಡದಿಂದ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 433 ಪಾಯಿಂಟ್ಸ್, ನಿಫ್ಟಿ 144 ಪಾಯಿಂಟ್ಸ್ ಕುಸಿತ
ಪ್ರಾತಿನಿಧಿಕ ಚಿತ್ರ
TV9 Web
| Updated By: Srinivas Mata|

Updated on: Nov 11, 2021 | 5:17 PM

Share

ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳು ಸತತ ಮೂರನೇ ವಹಿವಾಟು, ನವೆಂಬರ್ 11ನೇ ತಾರೀಕಿನ ಗುರುವಾರದಂದು ಒತ್ತಡಕ್ಕೆ ಸಿಲುಕಿದವು. ದಿನದ ಅಂತ್ಯಕ್ಕೆ ಬಿಎಸ್​ಇ ಸೆನ್ಸೆಕ್ಸ್ 433.33 ಪಾಯಿಂಟ್ಸ್ ಅಥವಾ ಶೇ 0.72ರಷ್ಟು ಇಳಿಕೆಯಾಗಿ 59,919.69ರಲ್ಲಿ ವಹಿವಾಟು ಮುಗಿಸಿತು. ಇನ್ನು ನಿಫ್ಟಿ 143.60 ಪಾಯಿಂಟ್ಸ್ ಅಥವಾ ಶೇ 0.80ರಷ್ಟು ಇಳಿಕೆ ಕಂಡು, 17,873.60 ಪಾಯಿಂಟ್ಸ್​ನಲ್ಲಿ ವ್ಯವಹಾರ ಚುಕ್ತಾ ಮಾಡಿತು. ಜಾಗತಿಕ ಮಾರುಕಟ್ಟೆಯ ಪ್ರಭಾವದಿಂದ ಇಂದು ಮಾರುಕಟ್ಟೆಯ ವ್ಯವಹಾರದ ಆರಂಭ ನಕಾರಾತ್ಮಕವಾಗಿ ಶುರುವಾಯಿತು. ಆದರೆ ಸೆನ್ಸೆಕ್ಸ್ 60 ಸಾವಿರ ಪಾಯಿಂಟ್ಸ್​ಗಿಂತ ಕೆಳಗೆ ಮತ್ತು ನಿಫ್ಟಿ 17,900 ಪಾಯಿಂಟ್ಸ್​ಗಿಂತ ಕೆಳಗೆ ವಹಿವಾಟು ಮುಕ್ತಾಯಗೊಳಿಸಿರುವುದು ಸ್ವಲ್ಪ ಮಟ್ಟಿಗೆ ಆತಂಕಕ್ಕೆ ಕಾರಣ ಆಗಿದೆ. ಜಾಗತಿಕ ಮಟ್ಟದ ಹಣದುಬ್ಬರದ ಒತ್ತಡವು ಅಮೆರಿಕದ ಹಣದುಬ್ಬರದಿಂದ ಪ್ರಭಾವಕ್ಕೆ ಒಳಗಾಗಿದೆ. ಅಂದಹಾಗೆ ಮೂವತ್ತು ವರ್ಷಗಳ ಗರಿಷ್ಠ ಮಟ್ಟವಾದ ಶೇ 6.2ರಷ್ಟನ್ನು ತಲುಪಿದೆ.

ಬಿಎಸ್​ಇ ಮಿಡ್​ಕ್ಯಾಪ್​ ಮತ್ತು ಸ್ಮಾಲ್​ಕ್ಯಾಪ್ ಸೂಚ್ಯಂಕಗಳು ತಲಾ ಶೇ 0.5ರಷ್ಟು ಕುಸಿದವು. ವಲಯವಾರು ಗಮನಿಸಿದಾಗ ನಿಫ್ಟಿ ಬ್ಯಾಂಕ್, ಫಾರ್ಮಾ, ವಾಹನ ಮತ್ತು ಪಿಎಸ್​ಯು ಬ್ಯಾಂಕ್ ಸೂಚ್ಯಂಕಗಳು ತಲಾ ಶೇ 1ರಷ್ಟು ಕುಸಿತಗೊಂಡರೆ, ಲೋಹದ ಷೇರುಗಳಲ್ಲಿ ಖರೀದಿ ಕಂಡುಬಂತು.

ನಿಫ್ಟಿಯಲ್ಲಿ ಏರಿಕೆ ಕಂಡ ಷೇರುಗಳು ಮತ್ತು ಶೇಕಡಾವಾರು ಪ್ರಮಾಣ ಟೈಟನ್ ಕಂಪೆನಿ ಶೇ 1.75 ಹಿಂಡಾಲ್ಕೋ ಶೇ 0.93 ಜೆಎಸ್​ಡಬ್ಲ್ಯು ಸ್ಟೀಲ್ ಶೇ 0.75 ಮಹೀಂದ್ರಾ ಅಂಡ್ ಮಹೀಂದ್ರಾ ಶೇ 0.55 ರಿಲಯನ್ಸ್ ಶೇ 0.18

ನಿಫ್ಟಿಯಲ್ಲಿ ಇಳಿಕೆ ಕಂಡ ಷೇರುಗಳು ಮತ್ತು ಶೇಕಡಾವಾರು ಪ್ರಮಾಣ ಐಒಸಿ ಶೇ -4.41 ಟೆಕ್ ಮಹೀಂದ್ರಾ ಶೇ -2.85 ಎಸ್​ಬಿಐ ಶೇ -2.82 ಒಎನ್​ಜಿಸಿ ಶೇ -2.66 ಎಸ್​ಬಿಐ ಲೈಫ್ ಇನ್ಷೂರೆನ್ಸ್ ಶೇ -2.58

ಇದನ್ನೂ ಓದಿ: T+1 Settlement Cycle: ಷೇರುಪೇಟೆಯಲ್ಲಿ T+1 ತೀರುವಳಿ ಫೆಬ್ರವರಿ 25ರಿಂದ ಹಂತ ಹಂತವಾಗಿ ಪರಿಚಯ

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್