AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Closing Bell: ಜಾಗತಿಕ ಒತ್ತಡದಿಂದ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 433 ಪಾಯಿಂಟ್ಸ್, ನಿಫ್ಟಿ 144 ಪಾಯಿಂಟ್ಸ್ ಕುಸಿತ

ಜಾಗತಿಕ ಪ್ರಭಾವದ ಕಾರಣಕ್ಕೆ ಭಾರತದ ದೇಶೀ ಷೇರು ಮಾರುಕಟ್ಟೆ ಸತತ ಮೂರನೇ ಟ್ರೇಡಿಂಗ್ ಸೆಷನ್ ದಿನವಾದ ನವೆಂಬರ್ 11ನೇ ತಾರೀಕಿನ ಗುರುವಾರ ಕೂಡ ಇಳಿಕೆ ದಾಖಲಿಸಿವೆ.

Closing Bell: ಜಾಗತಿಕ ಒತ್ತಡದಿಂದ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 433 ಪಾಯಿಂಟ್ಸ್, ನಿಫ್ಟಿ 144 ಪಾಯಿಂಟ್ಸ್ ಕುಸಿತ
ಪ್ರಾತಿನಿಧಿಕ ಚಿತ್ರ
TV9 Web
| Updated By: Srinivas Mata|

Updated on: Nov 11, 2021 | 5:17 PM

Share

ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳು ಸತತ ಮೂರನೇ ವಹಿವಾಟು, ನವೆಂಬರ್ 11ನೇ ತಾರೀಕಿನ ಗುರುವಾರದಂದು ಒತ್ತಡಕ್ಕೆ ಸಿಲುಕಿದವು. ದಿನದ ಅಂತ್ಯಕ್ಕೆ ಬಿಎಸ್​ಇ ಸೆನ್ಸೆಕ್ಸ್ 433.33 ಪಾಯಿಂಟ್ಸ್ ಅಥವಾ ಶೇ 0.72ರಷ್ಟು ಇಳಿಕೆಯಾಗಿ 59,919.69ರಲ್ಲಿ ವಹಿವಾಟು ಮುಗಿಸಿತು. ಇನ್ನು ನಿಫ್ಟಿ 143.60 ಪಾಯಿಂಟ್ಸ್ ಅಥವಾ ಶೇ 0.80ರಷ್ಟು ಇಳಿಕೆ ಕಂಡು, 17,873.60 ಪಾಯಿಂಟ್ಸ್​ನಲ್ಲಿ ವ್ಯವಹಾರ ಚುಕ್ತಾ ಮಾಡಿತು. ಜಾಗತಿಕ ಮಾರುಕಟ್ಟೆಯ ಪ್ರಭಾವದಿಂದ ಇಂದು ಮಾರುಕಟ್ಟೆಯ ವ್ಯವಹಾರದ ಆರಂಭ ನಕಾರಾತ್ಮಕವಾಗಿ ಶುರುವಾಯಿತು. ಆದರೆ ಸೆನ್ಸೆಕ್ಸ್ 60 ಸಾವಿರ ಪಾಯಿಂಟ್ಸ್​ಗಿಂತ ಕೆಳಗೆ ಮತ್ತು ನಿಫ್ಟಿ 17,900 ಪಾಯಿಂಟ್ಸ್​ಗಿಂತ ಕೆಳಗೆ ವಹಿವಾಟು ಮುಕ್ತಾಯಗೊಳಿಸಿರುವುದು ಸ್ವಲ್ಪ ಮಟ್ಟಿಗೆ ಆತಂಕಕ್ಕೆ ಕಾರಣ ಆಗಿದೆ. ಜಾಗತಿಕ ಮಟ್ಟದ ಹಣದುಬ್ಬರದ ಒತ್ತಡವು ಅಮೆರಿಕದ ಹಣದುಬ್ಬರದಿಂದ ಪ್ರಭಾವಕ್ಕೆ ಒಳಗಾಗಿದೆ. ಅಂದಹಾಗೆ ಮೂವತ್ತು ವರ್ಷಗಳ ಗರಿಷ್ಠ ಮಟ್ಟವಾದ ಶೇ 6.2ರಷ್ಟನ್ನು ತಲುಪಿದೆ.

ಬಿಎಸ್​ಇ ಮಿಡ್​ಕ್ಯಾಪ್​ ಮತ್ತು ಸ್ಮಾಲ್​ಕ್ಯಾಪ್ ಸೂಚ್ಯಂಕಗಳು ತಲಾ ಶೇ 0.5ರಷ್ಟು ಕುಸಿದವು. ವಲಯವಾರು ಗಮನಿಸಿದಾಗ ನಿಫ್ಟಿ ಬ್ಯಾಂಕ್, ಫಾರ್ಮಾ, ವಾಹನ ಮತ್ತು ಪಿಎಸ್​ಯು ಬ್ಯಾಂಕ್ ಸೂಚ್ಯಂಕಗಳು ತಲಾ ಶೇ 1ರಷ್ಟು ಕುಸಿತಗೊಂಡರೆ, ಲೋಹದ ಷೇರುಗಳಲ್ಲಿ ಖರೀದಿ ಕಂಡುಬಂತು.

ನಿಫ್ಟಿಯಲ್ಲಿ ಏರಿಕೆ ಕಂಡ ಷೇರುಗಳು ಮತ್ತು ಶೇಕಡಾವಾರು ಪ್ರಮಾಣ ಟೈಟನ್ ಕಂಪೆನಿ ಶೇ 1.75 ಹಿಂಡಾಲ್ಕೋ ಶೇ 0.93 ಜೆಎಸ್​ಡಬ್ಲ್ಯು ಸ್ಟೀಲ್ ಶೇ 0.75 ಮಹೀಂದ್ರಾ ಅಂಡ್ ಮಹೀಂದ್ರಾ ಶೇ 0.55 ರಿಲಯನ್ಸ್ ಶೇ 0.18

ನಿಫ್ಟಿಯಲ್ಲಿ ಇಳಿಕೆ ಕಂಡ ಷೇರುಗಳು ಮತ್ತು ಶೇಕಡಾವಾರು ಪ್ರಮಾಣ ಐಒಸಿ ಶೇ -4.41 ಟೆಕ್ ಮಹೀಂದ್ರಾ ಶೇ -2.85 ಎಸ್​ಬಿಐ ಶೇ -2.82 ಒಎನ್​ಜಿಸಿ ಶೇ -2.66 ಎಸ್​ಬಿಐ ಲೈಫ್ ಇನ್ಷೂರೆನ್ಸ್ ಶೇ -2.58

ಇದನ್ನೂ ಓದಿ: T+1 Settlement Cycle: ಷೇರುಪೇಟೆಯಲ್ಲಿ T+1 ತೀರುವಳಿ ಫೆಬ್ರವರಿ 25ರಿಂದ ಹಂತ ಹಂತವಾಗಿ ಪರಿಚಯ

ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ಭಾವಿ ಪತಿಯ ಜೊತೆಗೆ ಆರತಿ ಮಾಡಿದ ಆಂಕರ್ ಅನುಶ್ರೀ, ಹಳೆ ವಿಡಿಯೋ ವೈರಲ್
ಭಾವಿ ಪತಿಯ ಜೊತೆಗೆ ಆರತಿ ಮಾಡಿದ ಆಂಕರ್ ಅನುಶ್ರೀ, ಹಳೆ ವಿಡಿಯೋ ವೈರಲ್
ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ
ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ