AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Closing Bell: ಷೇರುಪೇಟೆ ಸತತ ಎರಡನೇ ದಿನ ಏರಿಕೆ; ಸೆನ್ಸೆಕ್ಸ್ 445 ಪಾಯಿಂಟ್ಸ್, ನಿಫ್ಟಿ 131 ಪಾಯಿಂಟ್ಸ್ ಹೆಚ್ಚಳ

ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಸತತ ಎರಡನೇ ದಿನವಾದ ಅಕ್ಟೋಬರ್ 5 ತಾರೀಕಿನ ಮಂಗಳವಾರ ಕೂಡ ಏರಿಕೆ ದಾಖಲಿಸಿದೆ. ಇಂದು ಏರಿಕೆ ಮತ್ತು ಇಳಿಕೆ ಕಂಡ ಪ್ರಮುಖ ಷೇರುಗಳ ವಿವರ ಇಲ್ಲಿದೆ.

Closing Bell: ಷೇರುಪೇಟೆ ಸತತ ಎರಡನೇ ದಿನ ಏರಿಕೆ; ಸೆನ್ಸೆಕ್ಸ್ 445 ಪಾಯಿಂಟ್ಸ್, ನಿಫ್ಟಿ 131 ಪಾಯಿಂಟ್ಸ್ ಹೆಚ್ಚಳ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Oct 05, 2021 | 4:04 PM

Share

ಭಾರತೀಯ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಸತತ ಎರಡನೇ ದಿನವಾದ ಅಕ್ಟೋಬರ್​ 5, 2021ರ ಮಂಗಳವಾರ ಸಹ ಏರಿಕೆಯನ್ನು ದಾಖಲಿಸಿದೆ. ಜಾಗತಿಕ ಪ್ರಭಾವದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಆಗಿದೆ. ದಿನಾಂತ್ಯಕ್ಕೆ ಸೆನ್ಸೆಕ್ಸ್ ಸೂಚ್ಯಂಕವು 445.56 ಪಾಯಿಂಟ್ಸ್ ಅಥವಾ ಶೇ 0.75ರಷ್ಟು ಹೆಚ್ಚಳವಾಗಿ 59,744.88 ಪಾಯಿಂಟ್ಸ್​ನಲ್ಲಿ ವ್ಯವಹಾರವನ್ನು ಮುಗಿಸಿದೆ. ಇನ್ನು ನಿಫ್ಟಿ 131 ಪಾಯಿಂಟ್ಸ್​ ಅಥವಾ ಶೇ 0.74ರಷ್ಟು ಮೇಲೇರಿ 17,822.30 ಪಾಯಿಂಟ್ಸ್​ನೊಂದಿಗೆ ದಿನದ ವಹಿವಾಟನ್ನು ಚುಕ್ತಾ ಮಾಡಿದೆ. ಇಂದಿನ ವ್ಯವಹಾರದಲ್ಲಿ 2025ರಷ್ಟು ಕಂಪೆನಿಗಳ ಷೇರು ಏರಿಕೆಯನ್ನು ದಾಖಲಿಸಿದರೆ, 1184 ಕಂಪೆನಿಗಳ ಷೇರು ಕುಸಿತ ಕಂಡವು. ಮತ್ತು 154 ಕಂಪೆನಿಗಳ ಷೇರಿನಲ್ಲಿ ಯಾವುದೇ ಬದಲಾವಣೆ ಆಗಲಿಲ್ಲ.

ಸಾರ್ವಜನಿಕ ವಲಯದ ಬ್ಯಾಂಕ್​, ರಿಯಾಲ್ಟಿ ಮತ್ತು ಫಾರ್ಮಾಗಳನ್ನು ಹೊರತುಪಡಿಸಿದರೆ ಉಳಿದ ಎಲ್ಲ ವಲಯದ ಸೂಚ್ಯಂಕಗಳು ಸಹ ಏರಿಕೆಯಲ್ಲೇ ದಿನದ ವಹಿವಾಟನ್ನು ಕೊನೆಗೊಳಿಸಿದವು. ತೈಲ ಹಾಗೂ ಅನಿಲ, ವಿದ್ಯುತ್, ಮಾಹಿತಿ ತಂತ್ರಜ್ಞಾನ ಸೂಚ್ಯಂಕಗಳು ಶೇ 1ರಿಂದ ಶೇ 3ರ ತನಕ ಏರಿಕೆಯನ್ನು ದಾಖಲಿಸಿದವು. ಬಿಎಸ್​ಇ ಮಿಡ್​ಕ್ಯಾಪ್ ಮತ್ತು ಸ್ಮಾಲ್​ಕ್ಯಾಪ್ ಸೂಚ್ಯಂಕಗಳು ಏರಿಕೆಯಲ್ಲೇ ದಿನಾಂತ್ಯ ಮುಗಿಸಿದವು.

ನಿಫ್ಟಿಯಲ್ಲಿ ಏರಿಕೆ ಕಂಡ ಪ್ರಮುಖ ಷೇರುಗಳು ಮತ್ತು ಶೇಕಡಾವಾರು ಪ್ರಮಾಣ ಒಎನ್​ಜಿಸಿ ಶೇ 10.87 ಇಂಡಸ್​ಇಂಡ್ ಬ್ಯಾಂಕ್ ಶೇ 4.36 ಕೋಲ್ ಇಂಡಿಯಾ ಶೇ 4.21 ಐಒಸಿ ಶೇ 2.89 ಭಾರ್ತಿ ಏರ್​ಟೆಲ್ ಶೇ 2.62

ನಿಫ್ಟಿಯಲ್ಲಿ ಇಳಿಕೆ ಕಂಡ ಪ್ರಮುಖ ಷೇರುಗಳು ಮತ್ತು ಶೇಕಡಾವಾರು ಪ್ರಮಾಣ ಸಿಪ್ಲಾ ಶೇ -2.40 ಹಿಂಡಾಲ್ಕೋ ಶೇ -2.06 ಶ್ರೀ ಸಿಮೆಂಟ್ಸ್ ಶೇ -1.79 ಟಾಟಾ ಕನ್ಸ್ಯೂಮರ್ ಪ್ರಾಡಕ್ಟ್ಸ್ ಶೇ -1.58 ಸನ್ ಫಾರ್ಮಾ ಶೇ -1.38

ಇದನ್ನೂ ಓದಿ: ಎಲ್ಲ ಕಂಪನಿಗಳ ಷೇರುಗಳು ಹಣವನ್ನು ದ್ವಿಗುಣಗೊಳಿಸಲಾರವು, ಹಣ ಹೂಡುವಾಗ ವಿವೇಚನೆ ಬಳಸಬೇಕು: ಡಾ ಬಾಲಾಜಿ ರಾವ್

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ