AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Closing Bell: ಷೇರುಪೇಟೆ ಸತತ ಎರಡನೇ ದಿನ ಏರಿಕೆ; ಸೆನ್ಸೆಕ್ಸ್ 445 ಪಾಯಿಂಟ್ಸ್, ನಿಫ್ಟಿ 131 ಪಾಯಿಂಟ್ಸ್ ಹೆಚ್ಚಳ

ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಸತತ ಎರಡನೇ ದಿನವಾದ ಅಕ್ಟೋಬರ್ 5 ತಾರೀಕಿನ ಮಂಗಳವಾರ ಕೂಡ ಏರಿಕೆ ದಾಖಲಿಸಿದೆ. ಇಂದು ಏರಿಕೆ ಮತ್ತು ಇಳಿಕೆ ಕಂಡ ಪ್ರಮುಖ ಷೇರುಗಳ ವಿವರ ಇಲ್ಲಿದೆ.

Closing Bell: ಷೇರುಪೇಟೆ ಸತತ ಎರಡನೇ ದಿನ ಏರಿಕೆ; ಸೆನ್ಸೆಕ್ಸ್ 445 ಪಾಯಿಂಟ್ಸ್, ನಿಫ್ಟಿ 131 ಪಾಯಿಂಟ್ಸ್ ಹೆಚ್ಚಳ
ಸಾಂದರ್ಭಿಕ ಚಿತ್ರ
TV9 Web
| Updated By: Srinivas Mata|

Updated on: Oct 05, 2021 | 4:04 PM

Share

ಭಾರತೀಯ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಸತತ ಎರಡನೇ ದಿನವಾದ ಅಕ್ಟೋಬರ್​ 5, 2021ರ ಮಂಗಳವಾರ ಸಹ ಏರಿಕೆಯನ್ನು ದಾಖಲಿಸಿದೆ. ಜಾಗತಿಕ ಪ್ರಭಾವದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಆಗಿದೆ. ದಿನಾಂತ್ಯಕ್ಕೆ ಸೆನ್ಸೆಕ್ಸ್ ಸೂಚ್ಯಂಕವು 445.56 ಪಾಯಿಂಟ್ಸ್ ಅಥವಾ ಶೇ 0.75ರಷ್ಟು ಹೆಚ್ಚಳವಾಗಿ 59,744.88 ಪಾಯಿಂಟ್ಸ್​ನಲ್ಲಿ ವ್ಯವಹಾರವನ್ನು ಮುಗಿಸಿದೆ. ಇನ್ನು ನಿಫ್ಟಿ 131 ಪಾಯಿಂಟ್ಸ್​ ಅಥವಾ ಶೇ 0.74ರಷ್ಟು ಮೇಲೇರಿ 17,822.30 ಪಾಯಿಂಟ್ಸ್​ನೊಂದಿಗೆ ದಿನದ ವಹಿವಾಟನ್ನು ಚುಕ್ತಾ ಮಾಡಿದೆ. ಇಂದಿನ ವ್ಯವಹಾರದಲ್ಲಿ 2025ರಷ್ಟು ಕಂಪೆನಿಗಳ ಷೇರು ಏರಿಕೆಯನ್ನು ದಾಖಲಿಸಿದರೆ, 1184 ಕಂಪೆನಿಗಳ ಷೇರು ಕುಸಿತ ಕಂಡವು. ಮತ್ತು 154 ಕಂಪೆನಿಗಳ ಷೇರಿನಲ್ಲಿ ಯಾವುದೇ ಬದಲಾವಣೆ ಆಗಲಿಲ್ಲ.

ಸಾರ್ವಜನಿಕ ವಲಯದ ಬ್ಯಾಂಕ್​, ರಿಯಾಲ್ಟಿ ಮತ್ತು ಫಾರ್ಮಾಗಳನ್ನು ಹೊರತುಪಡಿಸಿದರೆ ಉಳಿದ ಎಲ್ಲ ವಲಯದ ಸೂಚ್ಯಂಕಗಳು ಸಹ ಏರಿಕೆಯಲ್ಲೇ ದಿನದ ವಹಿವಾಟನ್ನು ಕೊನೆಗೊಳಿಸಿದವು. ತೈಲ ಹಾಗೂ ಅನಿಲ, ವಿದ್ಯುತ್, ಮಾಹಿತಿ ತಂತ್ರಜ್ಞಾನ ಸೂಚ್ಯಂಕಗಳು ಶೇ 1ರಿಂದ ಶೇ 3ರ ತನಕ ಏರಿಕೆಯನ್ನು ದಾಖಲಿಸಿದವು. ಬಿಎಸ್​ಇ ಮಿಡ್​ಕ್ಯಾಪ್ ಮತ್ತು ಸ್ಮಾಲ್​ಕ್ಯಾಪ್ ಸೂಚ್ಯಂಕಗಳು ಏರಿಕೆಯಲ್ಲೇ ದಿನಾಂತ್ಯ ಮುಗಿಸಿದವು.

ನಿಫ್ಟಿಯಲ್ಲಿ ಏರಿಕೆ ಕಂಡ ಪ್ರಮುಖ ಷೇರುಗಳು ಮತ್ತು ಶೇಕಡಾವಾರು ಪ್ರಮಾಣ ಒಎನ್​ಜಿಸಿ ಶೇ 10.87 ಇಂಡಸ್​ಇಂಡ್ ಬ್ಯಾಂಕ್ ಶೇ 4.36 ಕೋಲ್ ಇಂಡಿಯಾ ಶೇ 4.21 ಐಒಸಿ ಶೇ 2.89 ಭಾರ್ತಿ ಏರ್​ಟೆಲ್ ಶೇ 2.62

ನಿಫ್ಟಿಯಲ್ಲಿ ಇಳಿಕೆ ಕಂಡ ಪ್ರಮುಖ ಷೇರುಗಳು ಮತ್ತು ಶೇಕಡಾವಾರು ಪ್ರಮಾಣ ಸಿಪ್ಲಾ ಶೇ -2.40 ಹಿಂಡಾಲ್ಕೋ ಶೇ -2.06 ಶ್ರೀ ಸಿಮೆಂಟ್ಸ್ ಶೇ -1.79 ಟಾಟಾ ಕನ್ಸ್ಯೂಮರ್ ಪ್ರಾಡಕ್ಟ್ಸ್ ಶೇ -1.58 ಸನ್ ಫಾರ್ಮಾ ಶೇ -1.38

ಇದನ್ನೂ ಓದಿ: ಎಲ್ಲ ಕಂಪನಿಗಳ ಷೇರುಗಳು ಹಣವನ್ನು ದ್ವಿಗುಣಗೊಳಿಸಲಾರವು, ಹಣ ಹೂಡುವಾಗ ವಿವೇಚನೆ ಬಳಸಬೇಕು: ಡಾ ಬಾಲಾಜಿ ರಾವ್

ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ