AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Closing Bell: ಷೇರುಪೇಟೆ ಸತತ ಎರಡನೇ ದಿನ ಏರಿಕೆ; ಸೆನ್ಸೆಕ್ಸ್ 445 ಪಾಯಿಂಟ್ಸ್, ನಿಫ್ಟಿ 131 ಪಾಯಿಂಟ್ಸ್ ಹೆಚ್ಚಳ

ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಸತತ ಎರಡನೇ ದಿನವಾದ ಅಕ್ಟೋಬರ್ 5 ತಾರೀಕಿನ ಮಂಗಳವಾರ ಕೂಡ ಏರಿಕೆ ದಾಖಲಿಸಿದೆ. ಇಂದು ಏರಿಕೆ ಮತ್ತು ಇಳಿಕೆ ಕಂಡ ಪ್ರಮುಖ ಷೇರುಗಳ ವಿವರ ಇಲ್ಲಿದೆ.

Closing Bell: ಷೇರುಪೇಟೆ ಸತತ ಎರಡನೇ ದಿನ ಏರಿಕೆ; ಸೆನ್ಸೆಕ್ಸ್ 445 ಪಾಯಿಂಟ್ಸ್, ನಿಫ್ಟಿ 131 ಪಾಯಿಂಟ್ಸ್ ಹೆಚ್ಚಳ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Oct 05, 2021 | 4:04 PM

Share

ಭಾರತೀಯ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಸತತ ಎರಡನೇ ದಿನವಾದ ಅಕ್ಟೋಬರ್​ 5, 2021ರ ಮಂಗಳವಾರ ಸಹ ಏರಿಕೆಯನ್ನು ದಾಖಲಿಸಿದೆ. ಜಾಗತಿಕ ಪ್ರಭಾವದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಆಗಿದೆ. ದಿನಾಂತ್ಯಕ್ಕೆ ಸೆನ್ಸೆಕ್ಸ್ ಸೂಚ್ಯಂಕವು 445.56 ಪಾಯಿಂಟ್ಸ್ ಅಥವಾ ಶೇ 0.75ರಷ್ಟು ಹೆಚ್ಚಳವಾಗಿ 59,744.88 ಪಾಯಿಂಟ್ಸ್​ನಲ್ಲಿ ವ್ಯವಹಾರವನ್ನು ಮುಗಿಸಿದೆ. ಇನ್ನು ನಿಫ್ಟಿ 131 ಪಾಯಿಂಟ್ಸ್​ ಅಥವಾ ಶೇ 0.74ರಷ್ಟು ಮೇಲೇರಿ 17,822.30 ಪಾಯಿಂಟ್ಸ್​ನೊಂದಿಗೆ ದಿನದ ವಹಿವಾಟನ್ನು ಚುಕ್ತಾ ಮಾಡಿದೆ. ಇಂದಿನ ವ್ಯವಹಾರದಲ್ಲಿ 2025ರಷ್ಟು ಕಂಪೆನಿಗಳ ಷೇರು ಏರಿಕೆಯನ್ನು ದಾಖಲಿಸಿದರೆ, 1184 ಕಂಪೆನಿಗಳ ಷೇರು ಕುಸಿತ ಕಂಡವು. ಮತ್ತು 154 ಕಂಪೆನಿಗಳ ಷೇರಿನಲ್ಲಿ ಯಾವುದೇ ಬದಲಾವಣೆ ಆಗಲಿಲ್ಲ.

ಸಾರ್ವಜನಿಕ ವಲಯದ ಬ್ಯಾಂಕ್​, ರಿಯಾಲ್ಟಿ ಮತ್ತು ಫಾರ್ಮಾಗಳನ್ನು ಹೊರತುಪಡಿಸಿದರೆ ಉಳಿದ ಎಲ್ಲ ವಲಯದ ಸೂಚ್ಯಂಕಗಳು ಸಹ ಏರಿಕೆಯಲ್ಲೇ ದಿನದ ವಹಿವಾಟನ್ನು ಕೊನೆಗೊಳಿಸಿದವು. ತೈಲ ಹಾಗೂ ಅನಿಲ, ವಿದ್ಯುತ್, ಮಾಹಿತಿ ತಂತ್ರಜ್ಞಾನ ಸೂಚ್ಯಂಕಗಳು ಶೇ 1ರಿಂದ ಶೇ 3ರ ತನಕ ಏರಿಕೆಯನ್ನು ದಾಖಲಿಸಿದವು. ಬಿಎಸ್​ಇ ಮಿಡ್​ಕ್ಯಾಪ್ ಮತ್ತು ಸ್ಮಾಲ್​ಕ್ಯಾಪ್ ಸೂಚ್ಯಂಕಗಳು ಏರಿಕೆಯಲ್ಲೇ ದಿನಾಂತ್ಯ ಮುಗಿಸಿದವು.

ನಿಫ್ಟಿಯಲ್ಲಿ ಏರಿಕೆ ಕಂಡ ಪ್ರಮುಖ ಷೇರುಗಳು ಮತ್ತು ಶೇಕಡಾವಾರು ಪ್ರಮಾಣ ಒಎನ್​ಜಿಸಿ ಶೇ 10.87 ಇಂಡಸ್​ಇಂಡ್ ಬ್ಯಾಂಕ್ ಶೇ 4.36 ಕೋಲ್ ಇಂಡಿಯಾ ಶೇ 4.21 ಐಒಸಿ ಶೇ 2.89 ಭಾರ್ತಿ ಏರ್​ಟೆಲ್ ಶೇ 2.62

ನಿಫ್ಟಿಯಲ್ಲಿ ಇಳಿಕೆ ಕಂಡ ಪ್ರಮುಖ ಷೇರುಗಳು ಮತ್ತು ಶೇಕಡಾವಾರು ಪ್ರಮಾಣ ಸಿಪ್ಲಾ ಶೇ -2.40 ಹಿಂಡಾಲ್ಕೋ ಶೇ -2.06 ಶ್ರೀ ಸಿಮೆಂಟ್ಸ್ ಶೇ -1.79 ಟಾಟಾ ಕನ್ಸ್ಯೂಮರ್ ಪ್ರಾಡಕ್ಟ್ಸ್ ಶೇ -1.58 ಸನ್ ಫಾರ್ಮಾ ಶೇ -1.38

ಇದನ್ನೂ ಓದಿ: ಎಲ್ಲ ಕಂಪನಿಗಳ ಷೇರುಗಳು ಹಣವನ್ನು ದ್ವಿಗುಣಗೊಳಿಸಲಾರವು, ಹಣ ಹೂಡುವಾಗ ವಿವೇಚನೆ ಬಳಸಬೇಕು: ಡಾ ಬಾಲಾಜಿ ರಾವ್

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?