Sign In

By signing in or creating an account, you agree with Associated Broadcasting Company's Terms & Conditions and Privacy Policy.

Closing Bell: ಸೆನ್ಸೆಕ್ಸ್ 767 ಪಾಯಿಂಟ್ಸ್, ನಿಫ್ಟಿ 229 ಪಾಯಿಂಟ್ಸ್ ಏರಿಕೆ; ಟೆಕ್ ಮಹೀಂದ್ರಾ ಶೇ 4ರಷ್ಟು ಹೆಚ್ಚಳ

ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ನವೆಂಬರ್ 12ನೇ ತಾರೀಕಿನ ಶುಕ್ರವಾರದಂದು ಭಾರೀ ಏರಿಕೆ ದಾಖಲಿಸಿದೆ. ನಿಫ್ಟಿಯಲ್ಲಿ ಏರಿಕೆ, ಇಳಿಕೆ ದಾಖಲಿಸಿದ ಷೇರುಗಳ ವಿವರ ಇಲ್ಲಿದೆ.

Closing Bell: ಸೆನ್ಸೆಕ್ಸ್ 767 ಪಾಯಿಂಟ್ಸ್, ನಿಫ್ಟಿ 229 ಪಾಯಿಂಟ್ಸ್ ಏರಿಕೆ; ಟೆಕ್ ಮಹೀಂದ್ರಾ ಶೇ 4ರಷ್ಟು ಹೆಚ್ಚಳ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Srinivas Mata

Updated on: Nov 12, 2021 | 4:34 PM

ಷೇರು ಮಾರುಕಟ್ಟೆ ಸೂಚ್ಯಂಕವಾದ ಸೆನ್ಸೆಕ್ಸ್ ಮತ್ತು ನಿಫ್ಟಿ ನವೆಂಬರ್ 12ನೇ ತಾರೀಕಿನ ಶುಕ್ರವಾರದಂದು ಭರ್ಜರಿ ಏರಿಕೆ ದಾಖಲಿಸಿದೆ. ಸತತ ಮೂರು ದಿನಗಳ ಕುಸಿತದ ನಂತರ ಇಂದು ಭಾರೀ ಪ್ರಮಾಣದಲ್ಲಿ ಹೆಚ್ಚಳವಾಯಿತು. ಮಾಹಿತಿ ತಂತ್ರಜ್ಞಾನ, ವಿದ್ಯುತ್ ಮತ್ತು ರಿಯಾಲ್ಟಿ ಸ್ಟಾಕ್​ಗಳ ಏರಿಕೆ ಮೂಲಕ ನಿಫ್ಟಿ 18000 ಪಾಯಿಂಟ್ಸ್ ಮೇಲ್ಪಟ್ಟು ದಿನಾಂತ್ಯ ಕಂಡಿತು. ದಿನಾಂತ್ಯದ ವಹಿವಾಟು ಮುಕ್ತಾಯಗೊಳ್ಳುವಾಗ ಸೆನ್ಸೆಕ್ಸ್ 767 ಪಾಯಿಂಟ್ಸ್ ಅಥವಾ ಶೇ 1.28ರಷ್ಟು ಏರಿಕೆಯಾದರೆ, ನಿಫ್ಟಿ 229.20 ಪಾಯಿಂಟ್ಸ್ ಅಥವಾ ಶೇ 1.28ರಷ್ಟು ಹೆಚ್ಚಳವಾಯಿತು. ಇಂದಿನ ವಹಿವಾಟಿನಲ್ಲಿ 1556 ಕಂಪೆನಿ ಷೇರುಗಳು ಏರಿಕೆ ದಾಖಲಿಸಿದರೆ, 1628 ಕಂಪೆನಿ ಷೇರುಗಳು ಇಳಿಕೆ ಕಂಡಿವೆ. 143 ಕಂಪೆನಿಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ.

ಇನ್ನು ವಲಯವಾರು ನೋಡುವುದಾದರೆ, ಮಾಹಿತಿ ತಂತ್ರಜ್ಞಾನ, ವಿದ್ಯುತ್, ಕ್ಯಾಪಿಟಲ್ ಗೂಡ್ಸ್, ರಿಯಾಲ್ಟಿ ತಲಾ ಶೇ 1ರಷ್ಟು ಏರಿಕೆ ಕಂಡಿದೆ. ಬಿಎಸ್​ಇ ಮಿಡ್​ಕ್ಯಾಪ್​ ಮತ್ತು ಸ್ಮಾಲ್​ ಕ್ಯಾಪ್​ ಏರಿಕೆಯಲ್ಲಿ ಮುಕ್ತಾಯಗೊಂಡಿವೆ.

ನಿಫ್ಟಿಯಲ್ಲಿ ಏರಿಕೆ ಕಂಡ ಷೇರುಗಳು ಮತ್ತು ಶೇಕಡಾವಾರು ಪ್ರಮಾಣ ಟೆಕ್ ಮಹೀಂದ್ರಾ ಶೇ 4.14 ಹಿಂಡಾಲ್ಕೋ ಶೇ 3.22 ಎಚ್​ಡಿಎಫ್​ಸಿ ಶೇ 2.88 ವಿಪ್ರೋ ಶೇ 2.84 ಇನ್ಫೋಸಿಸ್ ಶೇ 2.71

ನಿಫ್ಟಿಯಲ್ಲಿ ಇಳಿಕೆ ಕಂಡ ಷೇರುಗಳು ಮತ್ತು ಶೇಕಡಾವಾರು ಪ್ರಮಾಣ ಬಜಾಜ್ ಆಟೋ ಶೇ -3.06 ಟಾಟಾ ಸ್ಟೀಲ್ ಶೇ -0.95 ಹೀರೋ ಮೋಟೋಕಾರ್ಪ್ ಶೇ -0.66 ಆಕ್ಸಿಸ್ ಬ್ಯಾಂಕ್ ಶೇ -0.27 ಐಒಸಿ ಶೇ -0.26

ಇದನ್ನೂ ಓದಿ: T+1 Settlement Cycle: ಷೇರುಪೇಟೆಯಲ್ಲಿ T+1 ತೀರುವಳಿ ಫೆಬ್ರವರಿ 25ರಿಂದ ಹಂತ ಹಂತವಾಗಿ ಪರಿಚಯ

ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ