AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Closing Bell: ಸೆನ್ಸೆಕ್ಸ್ 767 ಪಾಯಿಂಟ್ಸ್, ನಿಫ್ಟಿ 229 ಪಾಯಿಂಟ್ಸ್ ಏರಿಕೆ; ಟೆಕ್ ಮಹೀಂದ್ರಾ ಶೇ 4ರಷ್ಟು ಹೆಚ್ಚಳ

ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ನವೆಂಬರ್ 12ನೇ ತಾರೀಕಿನ ಶುಕ್ರವಾರದಂದು ಭಾರೀ ಏರಿಕೆ ದಾಖಲಿಸಿದೆ. ನಿಫ್ಟಿಯಲ್ಲಿ ಏರಿಕೆ, ಇಳಿಕೆ ದಾಖಲಿಸಿದ ಷೇರುಗಳ ವಿವರ ಇಲ್ಲಿದೆ.

Closing Bell: ಸೆನ್ಸೆಕ್ಸ್ 767 ಪಾಯಿಂಟ್ಸ್, ನಿಫ್ಟಿ 229 ಪಾಯಿಂಟ್ಸ್ ಏರಿಕೆ; ಟೆಕ್ ಮಹೀಂದ್ರಾ ಶೇ 4ರಷ್ಟು ಹೆಚ್ಚಳ
ಪ್ರಾತಿನಿಧಿಕ ಚಿತ್ರ
TV9 Web
| Updated By: Srinivas Mata|

Updated on: Nov 12, 2021 | 4:34 PM

Share

ಷೇರು ಮಾರುಕಟ್ಟೆ ಸೂಚ್ಯಂಕವಾದ ಸೆನ್ಸೆಕ್ಸ್ ಮತ್ತು ನಿಫ್ಟಿ ನವೆಂಬರ್ 12ನೇ ತಾರೀಕಿನ ಶುಕ್ರವಾರದಂದು ಭರ್ಜರಿ ಏರಿಕೆ ದಾಖಲಿಸಿದೆ. ಸತತ ಮೂರು ದಿನಗಳ ಕುಸಿತದ ನಂತರ ಇಂದು ಭಾರೀ ಪ್ರಮಾಣದಲ್ಲಿ ಹೆಚ್ಚಳವಾಯಿತು. ಮಾಹಿತಿ ತಂತ್ರಜ್ಞಾನ, ವಿದ್ಯುತ್ ಮತ್ತು ರಿಯಾಲ್ಟಿ ಸ್ಟಾಕ್​ಗಳ ಏರಿಕೆ ಮೂಲಕ ನಿಫ್ಟಿ 18000 ಪಾಯಿಂಟ್ಸ್ ಮೇಲ್ಪಟ್ಟು ದಿನಾಂತ್ಯ ಕಂಡಿತು. ದಿನಾಂತ್ಯದ ವಹಿವಾಟು ಮುಕ್ತಾಯಗೊಳ್ಳುವಾಗ ಸೆನ್ಸೆಕ್ಸ್ 767 ಪಾಯಿಂಟ್ಸ್ ಅಥವಾ ಶೇ 1.28ರಷ್ಟು ಏರಿಕೆಯಾದರೆ, ನಿಫ್ಟಿ 229.20 ಪಾಯಿಂಟ್ಸ್ ಅಥವಾ ಶೇ 1.28ರಷ್ಟು ಹೆಚ್ಚಳವಾಯಿತು. ಇಂದಿನ ವಹಿವಾಟಿನಲ್ಲಿ 1556 ಕಂಪೆನಿ ಷೇರುಗಳು ಏರಿಕೆ ದಾಖಲಿಸಿದರೆ, 1628 ಕಂಪೆನಿ ಷೇರುಗಳು ಇಳಿಕೆ ಕಂಡಿವೆ. 143 ಕಂಪೆನಿಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ.

ಇನ್ನು ವಲಯವಾರು ನೋಡುವುದಾದರೆ, ಮಾಹಿತಿ ತಂತ್ರಜ್ಞಾನ, ವಿದ್ಯುತ್, ಕ್ಯಾಪಿಟಲ್ ಗೂಡ್ಸ್, ರಿಯಾಲ್ಟಿ ತಲಾ ಶೇ 1ರಷ್ಟು ಏರಿಕೆ ಕಂಡಿದೆ. ಬಿಎಸ್​ಇ ಮಿಡ್​ಕ್ಯಾಪ್​ ಮತ್ತು ಸ್ಮಾಲ್​ ಕ್ಯಾಪ್​ ಏರಿಕೆಯಲ್ಲಿ ಮುಕ್ತಾಯಗೊಂಡಿವೆ.

ನಿಫ್ಟಿಯಲ್ಲಿ ಏರಿಕೆ ಕಂಡ ಷೇರುಗಳು ಮತ್ತು ಶೇಕಡಾವಾರು ಪ್ರಮಾಣ ಟೆಕ್ ಮಹೀಂದ್ರಾ ಶೇ 4.14 ಹಿಂಡಾಲ್ಕೋ ಶೇ 3.22 ಎಚ್​ಡಿಎಫ್​ಸಿ ಶೇ 2.88 ವಿಪ್ರೋ ಶೇ 2.84 ಇನ್ಫೋಸಿಸ್ ಶೇ 2.71

ನಿಫ್ಟಿಯಲ್ಲಿ ಇಳಿಕೆ ಕಂಡ ಷೇರುಗಳು ಮತ್ತು ಶೇಕಡಾವಾರು ಪ್ರಮಾಣ ಬಜಾಜ್ ಆಟೋ ಶೇ -3.06 ಟಾಟಾ ಸ್ಟೀಲ್ ಶೇ -0.95 ಹೀರೋ ಮೋಟೋಕಾರ್ಪ್ ಶೇ -0.66 ಆಕ್ಸಿಸ್ ಬ್ಯಾಂಕ್ ಶೇ -0.27 ಐಒಸಿ ಶೇ -0.26

ಇದನ್ನೂ ಓದಿ: T+1 Settlement Cycle: ಷೇರುಪೇಟೆಯಲ್ಲಿ T+1 ತೀರುವಳಿ ಫೆಬ್ರವರಿ 25ರಿಂದ ಹಂತ ಹಂತವಾಗಿ ಪರಿಚಯ

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!