AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Closing bell: ಸೆನ್ಸೆಕ್ಸ್ 848 ಪಾಯಿಂಟ್, ನಿಫ್ಟಿ 245 ಪಾಯಿಂಟ್ ಭರ್ಜರಿ ಏರಿಕೆ

ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಮೇ 17, 2021 ಸೋಮವಾರ ಭರ್ಜರಿ ಏರಿಕೆ ಕಂಡಿದೆ. ಜಾಗತಿಕ ಪ್ರಭಾವ, ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿನ ಇಳಿಕೆ ಸೇರಿದಂತೆ ಮೊದಲಾದ ಕಾರಣಗಳಿಗೆ ಮಾರುಕಟ್ಟೆ ಏರಿದೆ.

Closing bell: ಸೆನ್ಸೆಕ್ಸ್ 848 ಪಾಯಿಂಟ್, ನಿಫ್ಟಿ 245 ಪಾಯಿಂಟ್ ಭರ್ಜರಿ ಏರಿಕೆ
ಲಾಭದ ನಗದು
Srinivas Mata
|

Updated on:May 17, 2021 | 6:12 PM

Share

ಭಾರತೀಯ ಷೇರು ಮಾರುಕಟ್ಟೆಯ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಸೋಮವಾರ (ಮೇ 17, 2021) ಭರ್ಜರಿ ಏರಿಕೆ ಕಂಡಿದೆ. ಸೆನ್ಸೆಕ್ಸ್ 848.18 ಪಾಯಿಂಟ್ ಅಥವಾ ಶೇ 1.74ರಷ್ಟು ಮೇಲೇರಿ 49,580.73 ಪಾಯಿಂಟ್​ನೊಂದಿಗೆ ವ್ಯವಹಾರ ಚುಕ್ತಾ ಮಾಡಿದರೆ, ನಿಫ್ಟಿ ಸೂಚ್ಯಂಕವು 245.35 ಪಾಯಿಂಟ್​ಗಳು ಅಥವಾ ಶೇ 1.67 ಏರಿಕೆಯಾಗಿ, 14,923.15 ಪಾಯಿಂಟ್​ನೊಂದಿಗೆ ದಿನಾಂತ್ಯ ಕಂಡಿದೆ. ವಲಯವಾರು ಹೇಳಬೇಕೆಂದರೆ, ನಿಫ್ಟಿ ಎನರ್ಜಿ, ಬ್ಯಾಂಕ್, ವಾಹನ, ಲೋಹ ಮತ್ತು ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್​ಗಳ ಸೂಚ್ಯಂಕವು ಶೇ 1ರಿಂದ 4ರಷ್ಟು ಗಳಿಕೆಯನ್ನು ಕಂಡಿವೆ. ಬಿಎಸ್​ಇ ಮಿಡ್​ಕ್ಯಾಪ್ ಮತ್ತು ಸ್ಮಾಲ್​ಕ್ಯಾಪ್ ತಲಾ ಶೇ 1.6ರಷ್ಟು ಸೇರ್ಪಡೆ ಮಾಡಿದೆ. ಅಂದಹಾಗೆ ಯುಪಿಎಲ್, ಗಾಮನ್ ಇನ್​ಫ್ರಾ ಮತ್ತು ಕೆಪಿಐಟಿ ಟೆಕ್ನಾಲಜೀಸ್ ಸೇರಿದಂತೆ 250 ಸ್ಟಾಕ್​ಗಳು ಬಿಎಸ್​ಇಯಲ್ಲಿ ವಾರ್ಷಿಕ ಗರಿಷ್ಠ ಮಟ್ಟ ಮುಟ್ಟಿದವು.

ಜಾಗತಿಕ ಸಕಾರಾತ್ಮಕ ಪ್ರಭಾವ, ಉತ್ತಮ ಗಳಿಕೆ, ಕೊರೊನಾ ಸೋಂಕು ಪ್ರಕರಣಗಳಲ್ಲಿನ ಇಳಿಕೆ, ಬ್ಯಾಂಕಿಂಗ್ ಸ್ಟಾಕ್​ಗಳಲ್ಲಿನ ಪ್ರಬಲ ಗಳಿಕೆ ಹಾಗೂ ತಾಂಂತ್ರಿಕ ದೃಷ್ಟಿಕೋನ (ಟೆಕ್ನಿಕಲ್ ವ್ಯೂ) ಈ ಎಲ್ಲದರ ಹಿನ್ನೆಲೆಯಲ್ಲಿ ಷೇರು ಮಾರುಕಟ್ಟೆ ವಾರದ ಮೊದಲ ದಿನವಾದ ಸೋಮವಾರದಂದು ಭರ್ಜರಿಯಾದ ಏರಿಕೆಯನ್ನೇ ದಾಖಲಿಸಿದೆ.

ನಿಫ್ಟಿಯಲ್ಲಿ ಏರಿಕೆ ದಾಖಲಿಸಿದ ಪ್ರಮುಖ ಷೇರುಗಳು ಇಂಡಸ್​ಇಂಡ್ ಬ್ಯಾಂಕ್ ಶೇ 7.36 ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶೇ 6.28 ಐಸಿಐಸಿಐ ಬ್ಯಾಂಕ್ ಶೇ 4.40 ಎಚ್​ಡಿಎಫ್​ಸಿ ಬ್ಯಾಂಕ್ ಶೇ 3.85 ಯುಪಿಎಲ್ ಶೇ 3.69

ನಿಫ್ಟಿಯಲ್ಲಿ ಇಳಿಕೆ ದಾಖಲಿಸಿದ ಪ್ರಮುಖ ಷೇರುಗಳು ಸಿಪ್ಲಾ ಶೇ -2.53 ಲಾರ್ಸನ್ ಶೇ -2.03 ಭಾರ್ತಿ ಏರ್​ಟೆಲ್ ಶೇ -1.92 ಎಸ್​ಬಿಐ ಲೈಫ್ ಇನ್ಷೂರೆನ್ಸ್ ಶೇ -1.51 ನೆಸ್ಟ್ಲೆ ಶೇ -1.08

ಇದನ್ನೂ ಓದಿ: stock market investor: ವ್ಯಕ್ತಿಯ ಸಾವಿನ ನಂತರ ಷೇರು ವರ್ಗಾವಣೆ ಪ್ರಕ್ರಿಯೆ ಹೇಗೆ ನಡೆಯುತ್ತದೆ?

(Closing bell: Sensex surge 848 points and nifty increased 245 points on May 17, 2021)

Published On - 6:05 pm, Mon, 17 May 21

Follow Us
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು