AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Closing Bell: ಸೆನ್ಸೆಕ್ಸ್ 641 ಪಾಯಿಂಟ್, ನಿಫ್ಟಿ 186 ಪಾಯಿಂಟ್ ಭರ್ಜರಿ ಜಿಗಿತ

ಅಂತೂ ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳು ಏರಿಕೆ ಹಾದಿಗೆ ಮರಳಿವೆ. ಮಾರ್ಚ್ 19ನೇ ತಾರೀಕಿನ ಶುಕ್ರವಾರದಂದು ಸೆನ್ಸೆಕ್ಸ್ ಮತ್ತು ನಿಫ್ಟಿ ಭರ್ಜರಿ ಏರಿಕೆಯನ್ನು ದಾಖಲಿಸಿವೆ.

Closing Bell: ಸೆನ್ಸೆಕ್ಸ್ 641 ಪಾಯಿಂಟ್, ನಿಫ್ಟಿ 186 ಪಾಯಿಂಟ್ ಭರ್ಜರಿ ಜಿಗಿತ
ಸಾಂದರ್ಭಿಕ ಚಿತ್ರ
Srinivas Mata
|

Updated on: Mar 19, 2021 | 4:49 PM

Share

ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿಯ ಎಲ್ಲ ವಲಯದ ಷೇರುಗಳಲ್ಲೂ ಶುಕ್ರವಾರ (ಮಾರ್ಚ್ 19, 2021) ಖರೀದಿ ಕಂಡುಬಂತು. ಆ ಹಿನ್ನೆಲೆಯಲ್ಲಿ ದಿನಾಂತ್ಯದ ಕೊನೆಗೆ ಸೆನ್ಸೆಕ್ಸ್ 641.72 ಪಾಯಿಂಟ್ಸ್ ಅಥವಾ ಶೇಕಡಾ 1.30ಯಷ್ಟು ಏರಿಕೆಯೊಂದಿಗೆ 49,858.24 ಪಾಯಿಂಟ್​ನೊಂದಿಗೆ ವ್ಯವಹಾರ ಮುಗಿಸಿತು. ಇನ್ನು ನಿಫ್ಟಿ ಸೂಚ್ಯಂಕವು 186.10 ಪಾಯಿಂಟ್ ಅಥವಾ ಶೇ 1.28ರಷ್ಟು ಮೇಲೇರಿ, 14,744 ಪಾಯಿಂಟ್​ನೊಂದಿಗೆ ವಹಿವಾಟು ಚುಕ್ತಾ ಮಾಡಿತು.

ಈ ದಿನದ ವಹಿವಾಟಿನಲ್ಲಿ 1461 ಕಂಪೆನಿಯ ಷೇರುಗಳು ಏರಿಕೆ ದಾಖಲಿಸಿದರೆ, 1418 ಕಂಪೆನಿಯ ಷೇರುಗಳ ಬೆಲೆಗಳು ಇಳಿದವು. ಇನ್ನು 200 ಕಂಪೆನಿಯ ಷೇರುಗಳಲ್ಲಿ ಯಾವುದೇ ಬದಲಾವಣೆ ಆಗಲಿಲ್ಲ. ಎಲ್ಲ ವಲಯದ ಸೂಚ್ಯಂಕಗಳು ಗಳಿಕೆಯಲ್ಲೇ ಮುಕ್ತಾಯ ಕಂಡವು. ನಿಫ್ಟಿ ಎನರ್ಜಿ ಶೇ 3ರಷ್ಟು ಏರಿಕೆ ದಾಖಲಿಸಿತು. ಬಿಎಸ್​ಇ ಮಿಡ್​ಕ್ಯಾಪ್ ಹಾಗೂ ಸ್ಮಾಲ್​ಕ್ಯಾಪ್ ಸೂಚ್ಯಂಕಗಳು ಶೇ 0.4ರಿಂದ ಶೇ 1.3ರಷ್ಟು ಏರಿಕೆಗೆ ಕಾರಣ ಆದವು.

ಡಾಲರ್ ವಿರುದ್ಧ ರೂಪಾಯಿ ಮೌಲ್ಯ 72.51ರಲ್ಲಿ ಕೊನೆಯಾಯಿತು. ದಿನದ ಆರಂಭದಲ್ಲಿ ವಹಿವಾಟು 72.58ರೊಂದಿಗೆ ಶುರುವಾಯಿತು. ಈ ಹಿಂದಿನ ಸೆಷನ್​​ನಲ್ಲಿ ರೂಪಾಯಿ ಮೌಲ್ಯ 72.52ರಲ್ಲಿ ಕೊನೆಯಾಗಿತ್ತು. ಈ ದಿನ 72.46ರಿಂದ 72.58ರ ಮಧ್ಯೆ ವಹಿವಾಟು ನಡೆಸಿತು.

ನಿಫ್ಟಿಯಲ್ಲಿ ಏರಿಕೆ ಕಂಡ ಪ್ರಮುಖ ಷೇರುಗಳು ಮತ್ತು ಶೇಕಡಾ ಪ್ರಮಾಣ ಎನ್​ಟಿಪಿಸಿ ಶೇ 4.53 ಎಚ್​ಯುಎಲ್ ಶೇ 4.37 ಪವರ್​ಗ್ರಿಡ್ ಕಾರ್ಪ್ ಶೇ 4.14 ಜೆಎಸ್​ಡಬ್ಲ್ಯು ಸ್ಟೀಲ್ ಶೇ 4.11 ಯುಪಿಎಲ್ ಶೇ 4.02

ನಿಫ್ಟಿಯಲ್ಲಿ ಇಳಿಕೆ ಕಂಡ ಪ್ರಮುಖ ಷೇರುಗಳು ಮತ್ತು ಶೇಕಡಾ ಪ್ರಮಾಣ ಲಾರ್ಸನ್ -ಶೇ 1.18 ಟೆಕ್ ಮಹೀಂದ್ರಾ -ಶೇ 0.68 ಕೋಲ್ ಇಂಡಿಯಾ -ಶೇ 0.55 ಬಜಾಜ್ ಆಟೋ -ಶೇ 0.39 ಟೈಟಾನ್ ಕಂಪೆನಿ -ಶೇ 0.19

ಇದನ್ನೂ ಓದಿ: ಷೇರು ಮಾರ್ಕೆಟ್​ನಲ್ಲಿ ಹಣ ಮಾಡುವುದು ಹೇಗೆ ಎಂಬುದಕ್ಕೆ ಇಲ್ಲಿವೆ 10 ಸಿಂಪಲ್ ಟಿಪ್ಸ್

ಇದನ್ನೂ ಓದಿ: Tata Group Founders Day: ಹೂಡಿಕೆದಾರರಿಗೆ ಅದ್ಭುತ ಲಾಭ ಮೊಗೆದುಕೊಟ್ಟ ಟಾಟಾ ಸಮೂಹ ಕಂಪೆನಿಗಳು

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ