AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Closing Bell: ಸೆನ್ಸೆಕ್ಸ್ 327 ಪಾಯಿಂಟ್ಸ್, ನಿಫ್ಟಿ 83 ಪಾಯಿಂಟ್ಸ್ ಏರಿಕೆ; ಹಿಂದೂಸ್ತಾನ್ ಯುನಿಲಿವರ್ ಶೇ 4ರಷ್ಟು ಗಳಿಕೆ

ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಜುಲೈ 4ನೇ ತಾರೀಕಿನ ಸೋಮವಾರದಂದು ಏರಿಕೆ ದಾಖಲಿಸಿದ್ದು, ಪ್ರಮುಖವಾಗಿ ಏರಿಕೆ- ಇಳಿಕೆ ದಾಖಲಿಸಿದ ಷೇರುಗಳ ವಿವರ ಇಲ್ಲಿದೆ.

Closing Bell: ಸೆನ್ಸೆಕ್ಸ್ 327 ಪಾಯಿಂಟ್ಸ್, ನಿಫ್ಟಿ 83 ಪಾಯಿಂಟ್ಸ್ ಏರಿಕೆ; ಹಿಂದೂಸ್ತಾನ್ ಯುನಿಲಿವರ್ ಶೇ 4ರಷ್ಟು ಗಳಿಕೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on:Jul 04, 2022 | 4:27 PM

ಭಾರತದ ಷೇರು ಮಾರುಕಟ್ಟೆ (Stock Market) ಸೂಚ್ಯಂಕಗಳು ಜುಲೈ 4ನೇ ತಾರೀಕಿನ ಸೋಮವಾರದಂದು ಏರಿಕೆಯಲ್ಲಿ ಮುಕ್ತಾಯ ಕಂಡಿವೆ. ನಿಫ್ಟಿ ಸೂಚ್ಯಂಕವು 15,800 ಪಾಯಿಂಟ್ಸ್ ಮೇಲ್ಪಟ್ಟು ವ್ಯವಹಾರವನ್ನು ಚುಕ್ತಾ ಮಾಡಿದೆ. ಬಿಎಸ್​ಇ ಸೆನ್ಸೆಕ್ಸ್ 326.84 ಪಾಯಿಂಟ್ಸ್ ಅಥವಾ ಶೇ 0.62ರಷ್ಟು ಹೆಚ್ಚಳವಾಗಿ 53,234.77 ಪಾಯಿಂಟ್ಸ್​​ನಲ್ಲಿ ವಹಿವಾಟು ಮುಗಿಸಿದ್ದರೆ, ನಿಫ್ಟಿ 83.40 ಅಥವಾ ಶೇ 0.53ರಷ್ಟು ಮೇಲೇರಿ 15,835.40 ಪಾಯಿಂಟ್ಸ್​ನಲ್ಲಿ ಕೊನೆಗೊಂಡಿದೆ. ಇಂದಿನ ವಹಿವಾಟಿನಲ್ಲಿ 1976 ಕಂಪೆನಿ ಷೇರುಗಳು ಏರಿಕೆಯೊಂದಿಗೆ ಮುಕ್ತಾಯ ಕಂಡಿದ್ದರೆ, 1330 ಕಂಪೆನಿ ಷೇರುಗಳು ಇಳಿಕೆಯಲ್ಲಿ ವ್ಯವಹಾರ ಕೊನೆಗೊಳಿಸಿದವು. ಇನ್ನು 171 ಕಂಪೆನಿ ಷೇರುಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಕಾಣಲಿಲ್ಲ.

ವಲಯವಾರು ಗಮನಿಸುವುದಾದರೆ, ಎಫ್​ಎಂಸಿಜಿ, ಬ್ಯಾಂಕ್, ಕ್ಯಾಪಿಟಲ್ ಗೂಡ್ಸ್ ಶೇ 1ರಿಂದ 2ರಷ್ಟು ಹೆಚ್ಚಳವನ್ನು ದಾಖಲಿಸಿದವು. ಆದರೆ ಲೋಹದ ಸೂಚ್ಯಂಕವು ಶೇ 1.5ರಷ್ಟು ಇಳಿಕೆಯನ್ನು ದಾಖಲಿಸಿತು. ಬಿಎಸ್ಇ ಮಿಡ್​ಕ್ಯಾಪ್ ಸೂಚ್ಯಂಕವು ಶೇ 0.8ರಷ್ಟು ಮೇಲೇರಿದ್ದರೆ, ಸ್ಮಾಲ್​ಕ್ಯಾಪ್ ಸೂಚ್ಯಂಕವು ಶೇ 0.6ರಷ್ಟು ನೆಲ ಕಚ್ಚಿತು.

ನಿಫ್ಟಿಯಲ್ಲಿ ಏರಿಕೆ ದಾಖಲಿಸಿದ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ

ಹಿಂದೂಸ್ತಾನ್ ಯುನಿಲಿವರ್ ಶೇ 4.07

ಬ್ರಿಟಾನಿಯಾ ಶೇ 3.24

ಇಂಡಸ್​ಇಂಡ್ ಬ್ಯಾಂಕ್ ಶೇ 3.07

ಐಟಿಸಿ ಶೇ 2.66

ಐಸಿಐಸಿಐ ಬ್ಯಾಂಕ್ ಶೇ 2.30

ನಿಫ್ಟಿಯಲ್ಲಿ ಇಳಿಕೆ ದಾಖಲಿಸಿದ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ

ಜೆಎಸ್​ಡಬ್ಲ್ಯು ಸ್ಟೀಲ್ ಶೇ -4.72

ಒಎನ್​ಜಿಸಿ ಶೇ -3.85

ಟಿಸಿಎಸ್​ ಶೇ -2.41

ಟಾಟಾ ಸ್ಟೀಲ್ ಶೇ -2.10

ಸಿಪ್ಲಾ ಶೇ -1.96

ಇದನ್ನೂ ಓದಿ: Stock Market Prediction For July: ಷೇರು ಮಾರುಕಟ್ಟೆಯಲ್ಲಿ ಜುಲೈನಲ್ಲಿ ಏನೇನಾಗಲಿದೆ? ಇಲ್ಲಿದೆ ಖ್ಯಾತ ಟಾರೋ ಕಾರ್ಡ್ ರೀಡರ್ ಭವಿಷ್ಯ

Published On - 4:27 pm, Mon, 4 July 22

ಯುದ್ಧದ ಭೀತಿ; ಎಲ್​ಒಸಿಗೆ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭೇಟಿ?
ಯುದ್ಧದ ಭೀತಿ; ಎಲ್​ಒಸಿಗೆ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭೇಟಿ?
ಧೋನಿ ಸೇರಿದಂತೆ ಒಂದೇ ಓವರ್​ನಲ್ಲಿ 4 ವಿಕೆಟ್ ಉರುಳಿಸಿದ ಚಾಹಲ್
ಧೋನಿ ಸೇರಿದಂತೆ ಒಂದೇ ಓವರ್​ನಲ್ಲಿ 4 ವಿಕೆಟ್ ಉರುಳಿಸಿದ ಚಾಹಲ್
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ