AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Closing Bell: ದಾಖಲೆ ಎತ್ತರದಲ್ಲಿ ವಹಿವಾಟು ಮುಗಿಸಿದ ಷೇರುಪೇಟೆ; ಟಾಟಾ ಮೋಟಾರ್ಸ್ ಶೇ 20ರಷ್ಟು ಏರಿಕೆ

ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಅ. 13ರ ಬುಧವಾರದಂದು ದಾಖಲೆಯ ಎತ್ತರದಲ್ಲಿ ವಹಿವಾಟು ಮುಗಿಸಿವೆ. ಟಾಟಾ ಮೋಟಾರ್ಸ್ ಷೇರುಗಳು ಶೇ 20ಕ್ಕಿಂತ ಹೆಚ್ಚು ಗಳಿಕೆ ಕಂಡಿದೆ.

Closing Bell: ದಾಖಲೆ ಎತ್ತರದಲ್ಲಿ ವಹಿವಾಟು ಮುಗಿಸಿದ ಷೇರುಪೇಟೆ; ಟಾಟಾ ಮೋಟಾರ್ಸ್ ಶೇ 20ರಷ್ಟು ಏರಿಕೆ
ಸಾಂದರ್ಭಿಕ ಚಿತ್ರ
TV9 Web
| Updated By: Srinivas Mata|

Updated on: Oct 13, 2021 | 4:11 PM

Share

ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಅಕ್ಟೋಬರ್ 13ನೇ ತಾರೀಕಿನ ಬುಧವಾರ ಹೊಸ ದಾಖಲೆ ಎತ್ತರದಲ್ಲಿ ವಹಿವಾಟು ಮುಕ್ತಾಯಗೊಳಿಸಿದೆ. ವಾಹನ, ಮಾಹಿತಿ ತಂತ್ರಜ್ಞಾನ, ಲೋಹ ಮತ್ತು ಮೂಲಸೌಕರ್ಯ ಷೇರುಗಳ ಬೆಂಬಲದೊಂದಿಗೆ ಭಾರೀ ಎತ್ತರಕ್ಕೆ ಏರಿದೆ. ಇಂದಿನ ವ್ಯವಹಾರದಲ್ಲಿ ಸೆನ್ಸೆಕ್ಸ್ 452.74 ಪಾಯಿಂಟ್ಸ್ ಅಥವಾ ಶೇ 0.75ರಷ್ಟು ಹೆಚ್ಚಳವಾಗಿ, 60,737.05 ಪಾಯಿಂಟ್ಸ್​ನಲ್ಲಿ ಮುಕ್ತಾಯ ಕಂಡಿದೆ. ಇನ್ನು ನಿಫ್ಟಿ ಸೂಚ್ಯಂಕವು 169.80 ಪಾಯಿಂಟ್ಸ್ ಅಥವಾ ಶೇ 0.94ರಷ್ಟು ಮೇಲೇರಿ, 18,161.80 ಪಾಯಿಂಟ್ಸ್​ನೊಂದಿಗೆ ವಹಿವಾಟು ಮುಗಿಸಿದೆ. ಇಂದಿನ ವ್ಯವಹಾರದಲ್ಲಿ 1602 ಕಂಪೆನಿ ಷೇರುಗಳು ಹೆಚ್ಚಳವನ್ನು ದಾಖಲಿಸಿದರೆ, 1504 ಕಂಪೆನಿಯ ಷೇರುಗಳು ಇಳಿಕೆ ಕಂಡಿವೆ. ಮತ್ತು 118 ಕಂಪೆನಿಯ ಷೇರುಗಳಲ್ಲಿ ಯಾವುದೇ ಬದಲಾವಣೆ ಆಗಿಲ್ಲ.

ವಲಯವಾರು ನೋಡುವುದಾದರೆ, ವಾಹನ ಸೂಚ್ಯಂಕವು ಶೇ 3.5ರಷ್ಟು ಸೇರ್ಪಡೆ ಮಾಡಿದೆ. ಎನರ್ಜಿ, ಮೂಲಸೌಕರ್ಯ, ಮಾಹಿತಿ ತಂತ್ರಜ್ಞಾನ, ಲೋಹ, ವಿದ್ಯುತ್ ಮತ್ತು ಕ್ಯಾಪಿಟಲ್ ಗೂಡ್ಸ್ ಸೂಚ್ಯಂಕಗಳು ತಲಾ ಶೇ 1ರಷ್ಟು ಹೆಚ್ಚಳ ಕಂಡಿವೆ. ಬಿಎಸ್​ಇ ಮಿಡ್​ಕ್ಯಾಪ್ ಮತ್ತು ಸ್ಮಾಲ್ ಕ್ಯಾಪ್ ಸೂಚ್ಯಂಕಗಳು ಶೇ 0.6ರಿಂದ ಶೇ 1.5ರ ತನಕ ಏರಿಕೆ ದಾಖಲಿಸಿವೆ.

ನಿಫ್ಟಿಯಲ್ಲಿ ಏರಿಕೆ ಕಂಡ ಪ್ರಮುಖ ಷೇರುಗಳು ಮತ್ತು ಶೇಕಡಾವಾರು ಪ್ರಮಾಣ ಟಾಟಾ ಮೋಟಾರ್ಸ್ ಶೇ 20.45 ಮಹೀಂದ್ರಾ ಅಂಡ್ ಮಹೀಂದ್ರಾ ಶೇ 5.08 ಟಾಟಾ ಕನ್ಸ್ಯೂಮರ್ ಪ್ರಾಡಕ್ಸ್ಟ್ ಶೇ 3.92 ಐಟಿಸಿ ಶೇ 3.27 ಪವರ್ ಗ್ರಿಡ್ ಕಾರ್ಪೊರೇಷನ್ ಶೇ 3.13

ನಿಫ್ಟಿಯಲ್ಲಿ ಇಳಿಕೆ ಕಂಡ ಪ್ರಮುಖ ಷೇರುಗಳು ಮತ್ತು ಶೇಕಡಾವಾರು ಪ್ರಮಾಣ ಮಾರುತಿ ಸುಜುಕಿ ಶೇ -2.75 ಒಎನ್​ಜಿಸಿ ಶೇ -2.17 ಕೋಲ್ ಇಂಡಿಯಾ ಶೇ -1.68 ಎಸ್​ಬಿಐ ಲೈಫ್ ಇನ್ಷೂರೆನ್ಸ್ ಶೇ -1.56 ಹಿಂದೂಸ್ತಾನ್ ಯುನಿಲಿವರ್ ಲಿಮಿಟೆಡ್ ಶೇ -1.10

ಇದನ್ನೂ ಓದಿ: Rakesh Jhunjhunwala: ಟಾಟಾ ಕಂಪೆನಿಯ ಈ ಷೇರಿನಲ್ಲಿ 3 ಟ್ರೇಡಿಂಗ್ ಸೆಷನ್​ನಲ್ಲಿ 310 ಕೋಟಿ ರೂ. ಗಳಿಸಿದ ಜುಂಜುನ್​ವಾಲಾ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?