AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Closing bell: ಷೇರುಪೇಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ 660 ಪಾಯಿಂಟ್, ನಿಫ್ಟಿ 194 ಪಾಯಿಂಟ್ ಏರಿಕೆ

ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಏಪ್ರಿಲ್ 13ನೇ ತಾರೀಕಿನ ಮಂಗಳವಾರದಂದು ಭರ್ಜರಿ ಏರಿಕೆ ಕಂಡಿವೆ. ಸೋಮವಾರದಂದು ಭಾರೀ ಇಳಿಕೆ ಕಂಡಿದ್ದ ಮಾರುಕಟ್ಟೆಯಲ್ಲಿ ಮತ್ತೆ ಮೇಲ್ಮುಖದ ಪಯಣ ಆತ್ಮವಿಶ್ವಾಸ ಮೂಡಿಸಿದೆ.

Closing bell: ಷೇರುಪೇಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ 660 ಪಾಯಿಂಟ್, ನಿಫ್ಟಿ 194 ಪಾಯಿಂಟ್ ಏರಿಕೆ
ಸಾಂದರ್ಭಿಕ ಚಿತ್ರ
Srinivas Mata
|

Updated on: Apr 13, 2021 | 7:32 PM

Share

ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಮಂಗಳವಾರದಂದು (ಏಪ್ರಿಲ್ 13, 2021) ಭರ್ಜರಿ ಏರಿಕೆ ದಾಖಲಿಸಿವೆ. ಎನ್​​ಎಸ್​ಇ ನಿಫ್ಟಿ 50 ಸೂಚ್ಯಂಕವು 194 ಪಾಯಿಂಟ್ ಮೇಲೇರಿ, 14,504 ಪಾಯಿಂಟ್​ನೊಂದಿಗೆ ದಿನದ ವಹಿವಾಟು ಕೊನೆಗೊಳಿಸಿತು. ಇನ್ನು ಬಿಎಸ್​ಇ ಸೆನ್ಸೆಕ್ಸ್ ಸೂಚ್ಯಂಕವು 660.68 ಪಾಯಿಂಟ್ ಹೆಚ್ಚಳವಾಗಿ, 48,544.06ರಲ್ಲಿ ದಿನದ ಕೊನೆಗೆ ವ್ಯವಹಾರ ಮುಗಿಸಿತು. ನಿಫ್ಟಿ ಬ್ಯಾಂಕ್ ಸೂಚ್ಯಂಕವು 979.60 ಪಾಯಿಂಟ್​ಗಳ ಗಳಿಕೆ ಕಂಡು, 31,771.60 ಪಾಯಿಂಟ್​ನೊಂದಿಗೆ ವ್ಯವಹಾರ ಚುಕ್ತಾ ಮಾಡಿತು. ಈ ದಿನದ ವಹಿವಾಟಿನಲ್ಲಿ 1938 ಕಂಪೆನಿಯ ಷೇರುಗಳ ಬೆಲೆ ಹೆಚ್ಚಳವಾದರೆ, 926 ಕಂಪೆನಿಯ ಷೇರುಗಳ ಬೆಲೆಯಲ್ಲಿ ಇಳಿಕೆ ಆಯಿತು. ಇನ್ನು 182 ಕಂಪೆನಿಯ ಷೇರುಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಲಿಲ್ಲ.

ಬಿಎಸ್​ಇ ಮಿಡ್​ಕ್ಯಾಪ್ ಸೂಚ್ಯಂಕವು ಶೇ 1.46ರಷ್ಟು ಮೇಲೇರಿತು. ಇನ್ನು ಸ್ಮಾಲ್​ಕ್ಯಾಪ್ ಸೂಚ್ಯಂಕವು ಶೇ 1.21ರಷ್ಟು ಹೆಚ್ಚಳವಾಯಿತು. ಸೋಮವಾರದಂದು ದೊಡ್ಡ ಮಟ್ಟದಲ್ಲಿ ಕುಸಿತ ಕಂಡಿದ್ದ ಷೇರು ಮಾರುಕಟ್ಟೆಯಲ್ಲಿ ಶೇಕಡಾ 40ರಷ್ಟು ಚೇತರಿಕೆ ಕಾಣಿಸಿಕೊಳ್ಳಲು ಇಂದಿನ ಏರಿಕೆಯು ಕಾರಣ ಆಯಿತು. ಕೊರೊನಾ ಬಿಕ್ಕಟ್ಟು ನಿಯಂತ್ರಣಕ್ಕಾಗಿ ಸರ್ಕಾರದಿಂದ ವೇಗವಾಗಿ ಲಸಿಕೆ ಹಾಕುವ ಕಾರ್ಯಕ್ಕೆ ಚಾಲನೆ ದೊರೆತಿರುವ ಹಿನ್ನೆಲೆಯಲ್ಲಿ ಹೂಡಿಕೆದಾರರಲ್ಲಿ ಭರವಸೆ ಮೂಡಿದೆ.

ನಿಫ್ಟಿಯಲ್ಲಿ ಏರಿಕೆ ಕಂಡ ಟಾಪ್ 5 ಕಂಪೆನಿಯ ಷೇರುಗಳು ಮಹೀಂದ್ರಾ ಅಂಡ್ ಮಹೀಂದ್ರಾ- ಶೇ 7.95 ಬಜಾಜ್ ಫಿನ್​ಸರ್ವ್- ಶೇ 7.02 ಟಾಟಾ ಮೋಟಾರ್ಸ್- ಶೇ 5.69 ಬಜಾಜ್ ಫೈನಾನ್ಸ್- ಶೇ 4.83 ಮಾರುತಿ ಸುಜುಕಿ- ಶೇ 4.53

ನಿಫ್ಟಿಯಲ್ಲಿ ಇಳಿಕೆ ಕಂಡ ಟಾಪ್ 5 ಕಂಪೆನಿಯ ಷೇರುಗಳು ಡಾ ರೆಡ್ಡೀಸ್ ಲ್ಯಾಬ್ಸ್- ಶೇ 4.40 ಟಿಸಿಎಸ್- ಶೇ 4.39 ಟೆಕ್ ಮಹೀಂದ್ರಾ- ಶೇ 3.65 ವಿಪ್ರೋ- ಶೇ 3.16 ಎಚ್​ಸಿಎಲ್ ಟೆಕ್- ಶೇ 2.58

ಇದನ್ನೂ ಓದಿ: Penny Stocks: ಕೊರೊನಾ ಆತಂಕವಿದ್ದರೂ ಬಂಗಾರದ ಫಸಲು ನೀಡಿದ ಚಿಲ್ಲರೆ ಬೆಲೆಯ ಷೇರುಗಳು ಇವು..

(Closing Bell: On April 13, 2021, Indian stock market index Sensex, nifty gains. Here are the top gainers and losers of nifty.)

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ