AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಕಲ್ಲಿದ್ದಲು, ಕಬ್ಬಿಣ ಅದಿರು ಉತ್ಪಾದನೆ, ವಿದ್ಯುತ್ ಬಳಕೆ ಹೆಚ್ಚಳ; ಪ್ರಬಲ ಆರ್ಥಿಕತೆಯ ಸೂಚಕ

India's economic update: ಭಾರತದಲ್ಲಿ ವಿದ್ಯುತ್ ಅನುಭೋಗದ ಪ್ರಮಾಣ ಅಕ್ಟೋಬರ್​ನಲ್ಲಿ 14,047 ಕೋಟಿ ಯುನಿಟ್​ನಷ್ಟಾಗಿದೆ. ಇದೇ ತಿಂಗಳಲ್ಲಿ ಕಲ್ಲಿದ್ದಲು ಉತ್ಪಾದನೆ ಶೇ. 7.4ರಷ್ಟು ಏರಿಕೆ ಆಗಿ 84.45 ಮಿಲಿಯನ್ ಟನ್ ಮುಟ್ಟಿದೆ. ಕಬ್ಬಿಣ ಅದಿರು ಉತ್ಪಾದನೆ ಏಪ್ರಿಲ್​ನಿಂದ ಸೆಪ್ಟೆಂಬರ್​ವರೆಗೆ ಶೇ. 5.5ರಷ್ಟು ಏರಿದೆ.

ಭಾರತದಲ್ಲಿ ಕಲ್ಲಿದ್ದಲು, ಕಬ್ಬಿಣ ಅದಿರು ಉತ್ಪಾದನೆ, ವಿದ್ಯುತ್ ಬಳಕೆ ಹೆಚ್ಚಳ; ಪ್ರಬಲ ಆರ್ಥಿಕತೆಯ ಸೂಚಕ
ಕಲ್ಲಿದ್ದಲು ಉತ್ಪಾದನೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 03, 2024 | 2:00 PM

Share

ನವದೆಹಲಿ, ನವೆಂಬರ್ 3: ದೇಶದಲ್ಲಿ ವಿದ್ಯುತ್ ಬಳಕೆ ಪ್ರಮಾಣ ಅಕ್ಟೋಬರ್​ನಲ್ಲಿ ಅಲ್ಪ ಪ್ರಮಾಣದಲ್ಲಿ ಹೆಚ್ಚಿದೆ. ಕಲ್ಲಿದ್ದಲು ಉತ್ಪಾದನೆ ಅಕ್ಟೋಬರ್ ತಿಂಗಳಲ್ಲಿ ಗಣನೀಯವಾಗಿ ಹೆಚ್ಚಿದೆ. ಏಪ್ರಿಲ್​ನಿಂದ ಸೆಪ್ಟೆಂಬರ್​ವರೆಗಿನ ಆರು ತಿಂಗಳ ಅವಧಿಯಲ್ಲಿ ದೇಶದಲ್ಲಿ ಕಬ್ಬಿಣ ಅದಿರು ಉತ್ಪಾದನೆ ಏರಿಕೆ ಆಗಿದೆ. ಕಬ್ಬಿಣ ಅದಿರು ಮಾತ್ರವಲ್ಲ ಮ್ಯಾಂಗನೀಸ್, ಅದಿರು ಅಲುಮಿನಿಯಮ್, ಸಂಸ್ಕರಿತ ತಾಮ್ರ ಇತ್ಯಾದಿಯ ಉತ್ಪಾದನೆ ಹೆಚ್ಚಾಗಿದೆ. ಇವೆಲ್ಲವೂ ಆರ್ಥಿಕತೆಯ ಬೆಳವಣಿಗೆ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿರುವುದರ ಸೂಚಕವಾಗಿದೆ.

ಅಕ್ಟೋಬರ್​ನಲ್ಲಿ ವಿದ್ಯುತ್ ಬಳಕೆ 14,047 ಕೋಟಿ ಯುನಿಟ್

ಭಾರತದಲ್ಲಿ ಅಕ್ಟೋಬರ್ ತಿಂಗಳಲ್ಲಿ 14,047 ಕೋಟಿ ಯುನಿಟ್​ನಷ್ಟು ವಿದ್ಯುತ್ ಬಳಕೆ ಇದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ವಿದ್ಯುತ್ ಬಳಕೆಯಲ್ಲಿ ಶೇ. 1ರಷ್ಟು ಹೆಚ್ಚಳವಾಗಿದೆ.

ಇದನ್ನೂ ಓದಿ: ಖರ್ಗೆ ಕಣ್ಣಿಗೆ ‘ಕಾಲ್ತುಳಿತ’ ಕಾಣುತ್ತೆ ಹೊರತು ಕಾರ್ಮಿಕ ಸಂಖ್ಯೆ ಹೆಚ್ಚಾಗಿದ್ದು ಕಾಣಲ್ಲ: ಸಚಿವ ಹರ್ದೀಪ್ ಸಿಂಗ್

ಕಲ್ಲಿದ್ದಲು ಉತ್ಪಾದನೆ ಶೇ. 7.4ರಷ್ಟು ಹೆಚ್ಚಳ

ಕಲ್ಲಿದ್ದಲು ಉತ್ಪಾದನೆ ಪ್ರಮಾಣ ಅಕ್ಟೋಬರ್​ನಲ್ಲಿ 84.45 ಮಿಲಿಯನ್ ಟನ್​ನಷ್ಟಾಗಿದೆ. ಹಿಂದಿನ ವರ್ಷದ ಅಕ್ಟೋಬರ್​ನಲ್ಲಿ 78.57 ಎಂಟಿಯಷ್ಟು ಕಲ್ಲಿದ್ದಲು ಉತ್ಪಾದನೆ ಆಗಿತ್ತು. ಅದಕ್ಕೆ ಹೋಲಿಸಿದರೆ ಈ ಬಾರಿ ಉತ್ಪಾದನಾ ಪ್ರಮಾಣ ಶೇ. 7.4ರಷ್ಟು ಹೆಚ್ಚಾದಂತಾಗಿದೆ.

ಏಪ್ರಿಲ್​ನಿಂದ ಅಕ್ಟೋಬರ್​ವರೆಗಿನ ಏಳು ತಿಂಗಳ ಅವಧಿಯಲ್ಲಿ 537.45 ಮಿಲಿಯನ್ ಟನ್​ನಷ್ಟು ಕಲ್ಲಿದ್ದಲು ಉತ್ಪಾದನೆ ಆಗಿದೆ. ಹಿಂದಿನ ವರ್ಷದ ಇದೇ ಅವಧಿಯಲ್ಲಿ ಕಲ್ಲಿದ್ದಲು ಉತ್ಪಾದನೆ 506.56 ಎಂಟಿಯಷ್ಟಿತ್ತು. ಉತ್ಪಾದನೆಯಲ್ಲಿ ಶೇ. 6.1ರಷ್ಟು ಏರಿಕೆ ಆಗಿತ್ತು.

ಕಬ್ಬಿಣ ಅದಿರು ಉತ್ಪಾದನೆ ಶೇ. 5.5ರಷ್ಟು ಹೆಚ್ಚಳ

ದೇಶದಲ್ಲಿ ಈ ಹಣಕಾಸು ವರ್ಷದ ಮೊದಲಾರ್ಧದಲ್ಲಿ (ಏಪ್ರಿಲ್​ನಿಂದ ಸೆಪ್ಟೆಂಬರ್) 135 ಮಿಲಿಯನ್ ಟನ್​​ನಷ್ಟು ಕಬ್ಬಿಣ ಅದಿರಿನ ಉತ್ಪಾದನೆ ಆಗಿದೆ. ಹಿಂದಿನ ವರ್ಷದ ಈ ಅವಧಿಗೆ ಹೋಲಿಸಿದರೆ ಉತ್ಪಾದನಾ ಪ್ರಮಾಣ ಶೇ. 5.5ರಷ್ಟು ಹೆಚ್ಚಾಗಿದೆ.

ಇದನ್ನೂ ಓದಿ: ಬೆಳೆಯುತ್ತಿರುವ ಬಾಹ್ಯಾಕಾಶ ಉದ್ಯಮ; ಎಲ್ ಅಂಡ್ ಟಿ ಇನ್ನಷ್ಟು ಹೆಜ್ಜೆ ಇರಿಸಲು ನಿರ್ಧಾರ

ಮ್ಯಾಂಗನೀಸ್ ಅದಿರಿನ ಉತ್ಪಾದನೆಯು ಈ ಅವಧಿಯಲ್ಲಿ ಶೇ. 6.2ರಷ್ಟು ಹೆಚ್ಚಾಗಿ 1.7 ಮಿಲಿಯನ್ ಟನ್ ಮುಟ್ಟಿದೆ. ಅಲೂಮಿನಿಯಮ್ ಲೋಹದ ಉತ್ಪಾದನೆ 20.90 ಲಕ್ಷ ಟನ್ ಇದೆ. ಸಂಸ್ಕರಿತ ತಾಮ್ರದ ಉತ್ಪಾದನೆ ಎರಡೂವರೆ ಲಕ್ಷ ಟನ್​ಗೆ ಏರಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ