AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಕಲ್ಲಿದ್ದಲು, ಕಬ್ಬಿಣ ಅದಿರು ಉತ್ಪಾದನೆ, ವಿದ್ಯುತ್ ಬಳಕೆ ಹೆಚ್ಚಳ; ಪ್ರಬಲ ಆರ್ಥಿಕತೆಯ ಸೂಚಕ

India's economic update: ಭಾರತದಲ್ಲಿ ವಿದ್ಯುತ್ ಅನುಭೋಗದ ಪ್ರಮಾಣ ಅಕ್ಟೋಬರ್​ನಲ್ಲಿ 14,047 ಕೋಟಿ ಯುನಿಟ್​ನಷ್ಟಾಗಿದೆ. ಇದೇ ತಿಂಗಳಲ್ಲಿ ಕಲ್ಲಿದ್ದಲು ಉತ್ಪಾದನೆ ಶೇ. 7.4ರಷ್ಟು ಏರಿಕೆ ಆಗಿ 84.45 ಮಿಲಿಯನ್ ಟನ್ ಮುಟ್ಟಿದೆ. ಕಬ್ಬಿಣ ಅದಿರು ಉತ್ಪಾದನೆ ಏಪ್ರಿಲ್​ನಿಂದ ಸೆಪ್ಟೆಂಬರ್​ವರೆಗೆ ಶೇ. 5.5ರಷ್ಟು ಏರಿದೆ.

ಭಾರತದಲ್ಲಿ ಕಲ್ಲಿದ್ದಲು, ಕಬ್ಬಿಣ ಅದಿರು ಉತ್ಪಾದನೆ, ವಿದ್ಯುತ್ ಬಳಕೆ ಹೆಚ್ಚಳ; ಪ್ರಬಲ ಆರ್ಥಿಕತೆಯ ಸೂಚಕ
ಕಲ್ಲಿದ್ದಲು ಉತ್ಪಾದನೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 03, 2024 | 2:00 PM

Share

ನವದೆಹಲಿ, ನವೆಂಬರ್ 3: ದೇಶದಲ್ಲಿ ವಿದ್ಯುತ್ ಬಳಕೆ ಪ್ರಮಾಣ ಅಕ್ಟೋಬರ್​ನಲ್ಲಿ ಅಲ್ಪ ಪ್ರಮಾಣದಲ್ಲಿ ಹೆಚ್ಚಿದೆ. ಕಲ್ಲಿದ್ದಲು ಉತ್ಪಾದನೆ ಅಕ್ಟೋಬರ್ ತಿಂಗಳಲ್ಲಿ ಗಣನೀಯವಾಗಿ ಹೆಚ್ಚಿದೆ. ಏಪ್ರಿಲ್​ನಿಂದ ಸೆಪ್ಟೆಂಬರ್​ವರೆಗಿನ ಆರು ತಿಂಗಳ ಅವಧಿಯಲ್ಲಿ ದೇಶದಲ್ಲಿ ಕಬ್ಬಿಣ ಅದಿರು ಉತ್ಪಾದನೆ ಏರಿಕೆ ಆಗಿದೆ. ಕಬ್ಬಿಣ ಅದಿರು ಮಾತ್ರವಲ್ಲ ಮ್ಯಾಂಗನೀಸ್, ಅದಿರು ಅಲುಮಿನಿಯಮ್, ಸಂಸ್ಕರಿತ ತಾಮ್ರ ಇತ್ಯಾದಿಯ ಉತ್ಪಾದನೆ ಹೆಚ್ಚಾಗಿದೆ. ಇವೆಲ್ಲವೂ ಆರ್ಥಿಕತೆಯ ಬೆಳವಣಿಗೆ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿರುವುದರ ಸೂಚಕವಾಗಿದೆ.

ಅಕ್ಟೋಬರ್​ನಲ್ಲಿ ವಿದ್ಯುತ್ ಬಳಕೆ 14,047 ಕೋಟಿ ಯುನಿಟ್

ಭಾರತದಲ್ಲಿ ಅಕ್ಟೋಬರ್ ತಿಂಗಳಲ್ಲಿ 14,047 ಕೋಟಿ ಯುನಿಟ್​ನಷ್ಟು ವಿದ್ಯುತ್ ಬಳಕೆ ಇದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ವಿದ್ಯುತ್ ಬಳಕೆಯಲ್ಲಿ ಶೇ. 1ರಷ್ಟು ಹೆಚ್ಚಳವಾಗಿದೆ.

ಇದನ್ನೂ ಓದಿ: ಖರ್ಗೆ ಕಣ್ಣಿಗೆ ‘ಕಾಲ್ತುಳಿತ’ ಕಾಣುತ್ತೆ ಹೊರತು ಕಾರ್ಮಿಕ ಸಂಖ್ಯೆ ಹೆಚ್ಚಾಗಿದ್ದು ಕಾಣಲ್ಲ: ಸಚಿವ ಹರ್ದೀಪ್ ಸಿಂಗ್

ಕಲ್ಲಿದ್ದಲು ಉತ್ಪಾದನೆ ಶೇ. 7.4ರಷ್ಟು ಹೆಚ್ಚಳ

ಕಲ್ಲಿದ್ದಲು ಉತ್ಪಾದನೆ ಪ್ರಮಾಣ ಅಕ್ಟೋಬರ್​ನಲ್ಲಿ 84.45 ಮಿಲಿಯನ್ ಟನ್​ನಷ್ಟಾಗಿದೆ. ಹಿಂದಿನ ವರ್ಷದ ಅಕ್ಟೋಬರ್​ನಲ್ಲಿ 78.57 ಎಂಟಿಯಷ್ಟು ಕಲ್ಲಿದ್ದಲು ಉತ್ಪಾದನೆ ಆಗಿತ್ತು. ಅದಕ್ಕೆ ಹೋಲಿಸಿದರೆ ಈ ಬಾರಿ ಉತ್ಪಾದನಾ ಪ್ರಮಾಣ ಶೇ. 7.4ರಷ್ಟು ಹೆಚ್ಚಾದಂತಾಗಿದೆ.

ಏಪ್ರಿಲ್​ನಿಂದ ಅಕ್ಟೋಬರ್​ವರೆಗಿನ ಏಳು ತಿಂಗಳ ಅವಧಿಯಲ್ಲಿ 537.45 ಮಿಲಿಯನ್ ಟನ್​ನಷ್ಟು ಕಲ್ಲಿದ್ದಲು ಉತ್ಪಾದನೆ ಆಗಿದೆ. ಹಿಂದಿನ ವರ್ಷದ ಇದೇ ಅವಧಿಯಲ್ಲಿ ಕಲ್ಲಿದ್ದಲು ಉತ್ಪಾದನೆ 506.56 ಎಂಟಿಯಷ್ಟಿತ್ತು. ಉತ್ಪಾದನೆಯಲ್ಲಿ ಶೇ. 6.1ರಷ್ಟು ಏರಿಕೆ ಆಗಿತ್ತು.

ಕಬ್ಬಿಣ ಅದಿರು ಉತ್ಪಾದನೆ ಶೇ. 5.5ರಷ್ಟು ಹೆಚ್ಚಳ

ದೇಶದಲ್ಲಿ ಈ ಹಣಕಾಸು ವರ್ಷದ ಮೊದಲಾರ್ಧದಲ್ಲಿ (ಏಪ್ರಿಲ್​ನಿಂದ ಸೆಪ್ಟೆಂಬರ್) 135 ಮಿಲಿಯನ್ ಟನ್​​ನಷ್ಟು ಕಬ್ಬಿಣ ಅದಿರಿನ ಉತ್ಪಾದನೆ ಆಗಿದೆ. ಹಿಂದಿನ ವರ್ಷದ ಈ ಅವಧಿಗೆ ಹೋಲಿಸಿದರೆ ಉತ್ಪಾದನಾ ಪ್ರಮಾಣ ಶೇ. 5.5ರಷ್ಟು ಹೆಚ್ಚಾಗಿದೆ.

ಇದನ್ನೂ ಓದಿ: ಬೆಳೆಯುತ್ತಿರುವ ಬಾಹ್ಯಾಕಾಶ ಉದ್ಯಮ; ಎಲ್ ಅಂಡ್ ಟಿ ಇನ್ನಷ್ಟು ಹೆಜ್ಜೆ ಇರಿಸಲು ನಿರ್ಧಾರ

ಮ್ಯಾಂಗನೀಸ್ ಅದಿರಿನ ಉತ್ಪಾದನೆಯು ಈ ಅವಧಿಯಲ್ಲಿ ಶೇ. 6.2ರಷ್ಟು ಹೆಚ್ಚಾಗಿ 1.7 ಮಿಲಿಯನ್ ಟನ್ ಮುಟ್ಟಿದೆ. ಅಲೂಮಿನಿಯಮ್ ಲೋಹದ ಉತ್ಪಾದನೆ 20.90 ಲಕ್ಷ ಟನ್ ಇದೆ. ಸಂಸ್ಕರಿತ ತಾಮ್ರದ ಉತ್ಪಾದನೆ ಎರಡೂವರೆ ಲಕ್ಷ ಟನ್​ಗೆ ಏರಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ