AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coal supply: 2021ರ ಏಪ್ರಿಲ್​ನಿಂದ ಡಿಸೆಂಬರ್​ ಮಧ್ಯೆ ಶೇ 25ರಷ್ಟು ಕಲ್ಲಿದ್ದಲು ಪೂರೈಕೆ ಹೆಚ್ಚಳ

2021ನೇ ಇಸವಿಯ ಏಪ್ರಿಲ್​ನಿಂದ ಡಿಸೆಂಬರ್​ ಮಧ್ಯೆ ಭಾರತದಲ್ಲಿ ವಿದ್ಯುತ್​ ಸ್ಥಾವರಗಳಿಗೆ ಕಲ್ಲಿದ್ದಲಿನ ಪೂರೈಕೆ ಶೇ 25ರಷ್ಟು ಹೆಚ್ಚಾಗಿದೆ ಎಂದು ತಿಳಿಸಲಾಗಿದೆ.

Coal supply: 2021ರ ಏಪ್ರಿಲ್​ನಿಂದ ಡಿಸೆಂಬರ್​ ಮಧ್ಯೆ ಶೇ 25ರಷ್ಟು ಕಲ್ಲಿದ್ದಲು ಪೂರೈಕೆ ಹೆಚ್ಚಳ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Feb 04, 2022 | 8:32 AM

Share

ಕೇಂದ್ರ ಸರ್ಕಾರವು ಗುರುವಾರ ಹೇಳಿರುವ ಪ್ರಕಾರ, ವಿದ್ಯುತ್ ಸ್ಥಾವರಗಳಲ್ಲಿ ಕಲ್ಲಿದ್ದಲಿನ ಯಾವುದೇ ಕೊರತೆ ಇಲ್ಲ. ಮತ್ತು ಈ ಘಟಕಗಳಲ್ಲಿ 430.6 ಮಿಲಿಯನ್ ಟನ್​ಗಳ ಕಲ್ಲಿದ್ದಲು ಪೂರೈಕೆ 2021ರ ಏಪ್ರಿಲ್​ನಿಂದ ಡಿಸೆಂಬರ್​ ಮಧ್ಯೆ ಆಗಿದೆ. ಅಂದರೆ ಒಂದು ವರ್ಷದ ಹಿಂದಿನ ಇದೇ ಅವಧಿಗೆ ಹೋಲಿಸಿದರೆ ಶೇ 25ರಷ್ಟು ಹೆಚ್ಚಿನ ಕಲ್ಲಿದ್ದಲಿನ ಪೂರೈಕೆ (Coal Supply) ಇದೆ. “ಸದ್ಯಕ್ಕೆ ದೇಶದ ವಿದ್ಯುತ್ ಸ್ಥಾವರಗಳಲ್ಲಿ ಕಲ್ಲಿದ್ದಲಿನ ಕೊರತೆ ಇಲ್ಲ,” ಎಂದು ಗುರುವಾರದಂದು ಲೋಕಸಭೆಯಲ್ಲಿ ನೀಡಿದ ಲಿಖಿತ ಪ್ರತಿಕ್ರಿಯೆಯಲ್ಲಿ ಆರ್​.ಕೆ. ಸಿಂಗ್ ಹೇಳಿದ್ದಾರೆ. ಕೋಲ್ ಇಂಡಿಯಾ ಲಿಮಿಟೆಡ್ (ಸಿಐಎಲ್) ಮತ್ತು ಸಿಂಗರೇಣಿ ಕಾಲೀಯರೀಸ್ ಕಂಪೆನಿ ಲಿಮಿಟೆಡ್ (ಎಸ್‌ಸಿಸಿಎಲ್)ನಿಂದ 2021ರ ಏಪ್ರಿಲ್​ನಿಂದ ಡಿಸೆಂಬರ್ ಅವಧಿಯಲ್ಲಿ ವಿದ್ಯುತ್ ವಲಯಕ್ಕೆ ರವಾನೆ ಆದ ಕಲ್ಲಿದ್ದಲಿನ ಒಟ್ಟು ಪ್ರಮಾಣವು ಸುಮಾರು 430.6 ಮಿಲಿಯನ್ ಟನ್‌ಗಳಷ್ಟಿದೆ (ಎಂಟಿ). ಒಂದು ವರ್ಷದ ಹಿಂದಿನ ಇದೇ ಅವಧಿಯಲ್ಲಿ ಸುಮಾರು 344.2 ಎಂಟಿ ಆಗಿತ್ತು.

ರವಾನೆಯ ವಿಚಾರಕ್ಕೆ ಬಂದರೆ ಹಿಂದಿನ ವರ್ಷಕ್ಕೆ ಸಂಬಂಧಿಸಿದಂತೆ ಸುಮಾರು ಶೇ 25ರಷ್ಟು ಮತ್ತು 2019-20ಕ್ಕೆ ಸುಮಾರು ಶೇ 15ರಷ್ಟು ಬೆಳವಣಿಗೆಯನ್ನು ತೋರಿಸಿದೆ ಎಂದು ಅವರು ಹೇಳಿದ್ದಾರೆ. ಕಲ್ಲಿದ್ದಲು ಆಮದು 2021-22ರ (ಏಪ್ರಿಲ್-ಡಿಸೆಂಬರ್) ಅವಧಿಯಲ್ಲಿ 21.4 ಎಂಟಿಗೆ ಕಡಿಮೆಯಾಗಿದೆ. 2020-21ರ ಇದೇ ಅವಧಿಯಲ್ಲಿ 35.1 ಎಂಟಿ ಮತ್ತು 2019-20 ರ ಇದೇ ಅವಧಿಯಲ್ಲಿ 52.5 ಎಂಟಿ ಇತ್ತು. ಆಮದು ಮಾಡಿಕೊಂಡ ಕಲ್ಲಿದ್ದಲಿನ ಕೊರತೆಯನ್ನು ದೇಶೀಯ ಕಲ್ಲಿದ್ದಲಿನ ಪೂರೈಕೆಯಿಂದ ಸರಿದೂಗಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಈ ಮೇಲಿನ ಕ್ರಮಗಳ ಪರಿಣಾಮವಾಗಿ ವಿದ್ಯುತ್ ಸ್ಥಾವರಗಳಲ್ಲಿ ಲಭ್ಯ ಇರುವ ಕಲ್ಲಿದ್ದಲು ದಾಸ್ತಾನು ಅಕ್ಟೋಬರ್ 8, 2021ಕ್ಕೆ 7.2 ಎಂಟಿಯಿಂದ ಜನವರಿ 26, 2022ಕ್ಕೆ ಸುಮಾರು 25 ಎಂಟಿಗೆ ಹೆಚ್ಚಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಪೂರೈಕೆಯನ್ನು ಹೆಚ್ಚಿಸಲು ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದೆ. ವಿದ್ಯುತ್ ವಲಯದಲ್ಲಿನ ಕಲ್ಲಿದ್ದಲು ಪೂರೈಕೆ ಸಮಸ್ಯೆಗಳನ್ನು ಪರಿಹರಿಸಲು, ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಪೂರೈಕೆಯನ್ನು ಹೆಚ್ಚಿಸಲು ಮತ್ತು ವಿದ್ಯುತ್ ಕ್ಷೇತ್ರಕ್ಕೆ ಸಂಬಂಧಿಸಿದ ಯಾವುದೇ ಅನಿಶ್ಚಿತ ಸಂದರ್ಭಗಳನ್ನು ಪೂರೈಸುವುದಕ್ಕೆ ವಿದ್ಯುತ್ ಸ್ಥಾವರಗಳಲ್ಲಿನ ನಿರ್ಣಾಯಕ ಕಲ್ಲಿದ್ದಲು ದಾಸ್ತಾನು ಸ್ಥಿತಿಯನ್ನು ನಿವಾರಿಸುವುದು ಸೇರಿದಂತೆ ವಿವಿಧ ಕಾರ್ಯಾಚರಣೆ ನಿರ್ಧಾರಗಳನ್ನು ತೆಗೆದುಕೊಳ್ಳಲು ಅಂತರ-ಸಚಿವಾಲಯದ ಉಪ-ಗುಂಪು ನಿಯಮಿತವಾಗಿ ಸಭೆ ಸೇರುತ್ತದೆ.

ಇದನ್ನೂ ಓದಿ: Coal Mines: 40 ಹೊಸ ಕಲ್ಲಿದ್ದಲು ಗಣಿಗಳ ಹರಾಜು ಪ್ರಕ್ರಿಯೆ ಆರಂಭಿಸಿದ ಕೇಂದ್ರ ಸರ್ಕಾರ

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು