AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coffee Excellence: ಕಾಫಿ ಮಂಡಳಿಯಿಂದ ಬೆಂಗಳೂರಿನಲ್ಲಿ ಎಕ್ಸಲೆಂಟ್ ಸೆಂಟರ್ ಸ್ಥಾಪನೆಗೆ ಪ್ರಸ್ತಾವ

Coffee Board of India: ಬೆಂಗಳೂರಿನಲ್ಲಿ ಕಾಫಿ ಎಕ್ಸಲೆನ್ಸ್ ಸೆಂಟರ್ ಸ್ಥಾಪನೆ ಮಾಡುವುದಾಗಿ ಭಾರತೀಯ ಕಾಫಿ ಮಂಡಳಿ ಪಸ್ತಾವನೆ ಸಲ್ಲಿಸಿದೆ. ಕಾಫಿ ಮಂಡಳಿ ಬೆಂಗಳೂರಿನಲ್ಲಿ ಕಾಫಿ ಕ್ವಾಲಿಟಿ ಮ್ಯಾನೇಜ್ಮೆಂಟ್​ನಲ್ಲಿ ಒಂದು ವರ್ಷದ ಸ್ನಾತಕೋತ್ತರ ಡಿಪ್ಲೊಮಾ ಕೋರ್ಸ್ ನಡೆಸುತ್ತಿದೆ. ಪಿಜಿ ಡಿಪ್ಲೊಮಾ ಕೋರ್ಸ್​ಗೆ ಸದ್ಯ 15 ಅಭ್ಯರ್ಥಿಗಳಿಗೆ ಮಾತ್ರ ಅವಕಾಶ ಇದ್ದು, ಈ ಸಂಖ್ಯೆಯನ್ನು ಕನಿಷ್ಠ 100ಕ್ಕೆ ಹೆಚ್ಚಿಸುವ ಪ್ರಸ್ತಾಪ ಮಾಡಿದೆ.

Coffee Excellence: ಕಾಫಿ ಮಂಡಳಿಯಿಂದ ಬೆಂಗಳೂರಿನಲ್ಲಿ ಎಕ್ಸಲೆಂಟ್ ಸೆಂಟರ್ ಸ್ಥಾಪನೆಗೆ ಪ್ರಸ್ತಾವ
ಕಾಫಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Feb 12, 2024 | 12:49 PM

Share

ಬೆಂಗಳೂರು, ಫೆಬ್ರುವರಿ 12: ಕಾಫಿ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಬೇಕೆ? ಇಗೋ ಬರುತ್ತಿದೆ ಒಳ್ಳೊಳ್ಳೆಯ ಅವಕಾಶ. ಕಾಫಿ ಜನಪ್ರಿಯತೆ ಹೆಚ್ಚುತ್ತಿದ್ದು, ಈ ಕ್ಷೇತ್ರದಲ್ಲಿ ನುರಿತ ವೃತ್ತಿಪರರಿಗೆ ಉದ್ಯೋಗಾವಕಾಶ ಹೆಚ್ಚುತ್ತಿದೆ. ಕಾಫಿ ನಂಟು ಹೆಚ್ಚು ಇರುವ ಬೆಂಗಳೂರಿನಲ್ಲಿ ಈಗ ಕಾಫಿ ಎಕ್ಸಲೆನ್ಸ್ ಕೇಂದ್ರ ಸ್ಥಾಪನೆಗೆ ಪ್ರಸ್ತಾಪ ಬಂದಿದೆ. ಭಾರತೀಯ ಕಾಫಿ ಮಂಡಳಿ ಇಂಥದ್ದೊಂದು ಪ್ರಸ್ತಾಪವನ್ನು ಸರ್ಕಾರದ ಮುಂದಿಟ್ಟಿದೆ. ‘ಸೆಂಟರ್ ಆಫ್ ಎಕ್ಸಲೆನ್ಸ್ ಫಾರ್ ಕಾಫಿ’ಯಲ್ಲಿ ಕಾಫಿ ಕುರಿತ ಕಿರು ಅವಧಿ ಕೋರ್ಸ್​ಗಳನ್ನು ಆರಂಭಿಸಲು ಕಾಫಿ ಮಂಡಳಿ ಉದ್ದೇಶಿಸಿದೆ.

‘ಕಾಫಿ ಕ್ವಾಲಿಟಿ ಮ್ಯಾನೇಜ್ಮೆಂಟ್​ನಲ್ಲಿ ನಾವು ಒಂದು ವರ್ಷದ ಸ್ನಾತಕೋತ್ತರ ಡಿಪ್ಲೊಮಾ ಕೋರ್ಸ್ ನಡೆಸುತ್ತಿದ್ದೇವೆ. ಇದಕ್ಕೆ ಬಹಳ ಬೇಡಿಕೆ ಇದೆ. ಬೆಂಗಳೂರಿನ ಕಾಫಿ ಕ್ವಾಲಿಟಿ ಇನ್ಸ್​ಟಿಟ್ಯೂಟ್​ನ್ಲಿ ಈ ಕೋರ್ಸ್ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳು ಚಿಕ್ಕಮಗಳೂರಿನಲ್ಲಿರುವ ಸೆಂಟ್ರಲ್ ಕಾಫಿ ರಿಸರ್ಚ್ ಇನ್ಸ್​ಟಿಟ್ಯೂಟ್​ಗೆ (ಸಿಸಿಅರ್​ಐ) ಮೂರು ತಿಂಗಳ ಭೇಟಿ ನೀಡಿ ಕಲಿಯಬಹುದು. ಕೆಫೆಗಳಿಗೆ ಹೋಗುವುದು, ರೋಸ್ಟರಿಗಳನ್ನು ಅರಿಯುವುದು, ಕಾಫಿ ಪ್ಯಾಕೇಜಿಂಗ್ ಮಾಡುವುದು, ಕಾಫಿ ಮಾರುಕಟ್ಟೆ ಪ್ರಚಾರ ಇತ್ಯಾದಿ ಔದ್ಯಮಿಕ ಅನುಭವಗಳನ್ನು ವಿದ್ಯಾರ್ಥಿಗಳು ಪಡೆಯುತ್ತಾರೆ,’ ಎಂದು ಭಾರತೀಯ ಕಾಫಿ ಮಂಡಳಿ ಸಿಇಒ ಮತ್ತು ಕಾರ್ಯದರ್ಶಿ ಡಾ. ಕೆ.ಜಿ. ಜಗದೀಶ ಹೇಳುತ್ತಾರೆ.

ಬೆಂಗಳೂರಿನಲ್ಲಿ ಸದ್ಯ ನಡೆಸಲಾಗುತ್ತಿರುವ ಈ ಸ್ನಾತಕೋತ್ತರ ಡಿಪ್ಲೊಮಾ ಕೋರ್ಸ್​ಗೆ ಬಹಳ ಬೇಡಿಕೆ ಇದೆಯಂತೆ. ಆದರೆ, ಒಂದು ಕೋರ್ಸ್​ನಲ್ಲಿ 15 ಮಂದಿ ವಿದ್ಯಾರ್ಥಿಗಳಿಗಷ್ಟೇ ಅವಕಾಶ ಇರುತ್ತದೆ. ಈ ಕೋರ್ಸ್​ಗೆ ಒಮ್ಮೆಗೆ 500ಕ್ಕೂ ಹೆಚ್ಚು ಅರ್ಜಿಗಳು ಬರುತ್ತವೆ. ಅವರಲ್ಲಿ 15 ಮಂದಿಯನ್ನು ಕೋರ್ಸ್​ಗೆ ಸೇರಿಸಿಕೊಳ್ಳಲಾಗುತ್ತಿದೆ ಎಂದು ಕಾಫಿ ಬೋರ್ಡ್ ಸಿಇಒ ತಿಳಿಸುತ್ತಾರೆ.

ಇದನ್ನೂ ಓದಿ: ಶ್ರೀಲಂಕಾ, ಮಾರಿಷಸ್​ನಲ್ಲೂ ಭಾರತದ ಯುಪಿಐ, ರುಪೇ ಕಾರ್ಡ್ ಸೇವೆಗೆ ಚಾಲನೆ

ಕಾಫಿ ಗುಣಮಟ್ಟ ನಿರ್ವಹಣೆಯ ಪಿಜಿ ಡಿಪ್ಲೊಮಾ ಕೋರ್ಸ್ ಸೇರಬಯಸುವ ಅಭ್ಯರ್ಥಿಗಳು ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ, ಆಹಾರ ವಿಜ್ಞಾನ, ಜೈವಿಕ ವಿಜ್ಞಾನ ಅಥವಾ ಕೃಷಿ ವಿಜ್ಞಾನ ವಿಷಯಗಳಲ್ಲಿ ಬಿಎಸ್​ಸಿ ಪದವಿ ಹೊಂದಿರಬೇಕು. ಅವರ ಶೈಕ್ಷಣಿಕ ಸಾಧನೆ ಉತ್ತಮವಾಗಿರಬೇಕು. ಸಂದರ್ಶನ ಇತ್ಯಾದಿಯಲ್ಲಿ ಅಭ್ಯರ್ಥಿಗಳ ಸಾಧನೆಯನ್ನು ಪರಿಶೀಲಿಸಿ ಆ ಬಳಿಕ ಅವರಿಗೆ ಕೋರ್ಸ್​ಗೆ ಸೇರಲು ಅವಕಾಶ ನೀಡಲಾಗುತ್ತದೆ ಎನ್ನಲಾಗಿದೆ.

ಪಿಜಿ ಡಿಪ್ಲೊಮಾ ಕೋರ್ಸ್ ಮುಗಿಸುವ ಅಭ್ಯರ್ಥಿಗಳಿಗೆ ಕೆಲವೇ ದಿನಗಳಲ್ಲಿ ಎಂಎನ್​ಸಿ ಕಂಪನಿಗಳಲ್ಲಿ ಪ್ಲೇಸ್ಮೆಂಟ್​ಗೆ ಅವಕಾಶ ಸಿಗುತ್ತದೆ. ಕೆಲವರು ಮಿಡಲ್ ಈಸ್ಟ್ ದೇಶಗಳಲ್ಲಿ ಉದ್ಯೋಗ ಗಿಟ್ಟಿಸುತ್ತಾರೆ. ಮಾರುಕಟ್ಟೆ ಬೆಳೆಯುತ್ತಿರುವುದರಿಂದ ಕೋರ್ಸ್​ಗೆ ಇನ್ನಷ್ಟು ಸೀಟ್​ಗಳನ್ನು ಸೇರಿಸುವ ಅವಶ್ಯಕತೆ ಇದೆ. ಸದ್ಯ 15 ಮಂದಿಗೆ ಮಾತ್ರವೇ ಅವಕಾಶ ಇದೆ. ಇದನ್ನು ಕನಿಷ್ಠ 100 ಅಭ್ಯರ್ಥಿಗಳಿಗೆ ವಿಸ್ತರಿಸಬೇಕು ಎನ್ನುವ ಪ್ರಸ್ತಾಪವನ್ನೂ ಮಾಡಲಾಗಿದೆ.

ಈಗ ಕಾಫಿ ಎಕ್ಸಲೆನ್ಸ್ ಸೆಂಟರ್ ಸ್ಥಾಪನೆಗೆ ಮಂಡಳಿ ಪ್ರಸ್ತಾಪ ಮಾಡಿದೆ. ವಿಶೇಷ ಕಾಫಿ ಕೇಂದ್ರ ಹಾಗೂ ಕಾಫಿ ಕ್ಷೇತ್ರದಲ್ಲಿ ಕೌಶಲ್ಯ ಅಭಿವೃದ್ಧಿ ಯೋಜನೆಗಳಿಗೆ ಕಾಫಿ ಮಂಡಳಿಯ ಎಕ್ಸ್​ಪೆಂಡಿಚರ್ ಫೈನಾನ್ಸ್ ಕಮಿಟಿ ಪ್ರಸ್ತಾಪಿಸಿದೆ.

ಮುಂದಿನ ಐದು ವರ್ಷದಲ್ಲಿ ಕೌಶಲ್ಯಾಭಿವೃದ್ಧಿಗೆ ಹಲವು ಯೋಜನೆಗಳನ್ನು ಕಾಫಿ ಮಂಡಳಿ ಹಮ್ಮಿಕೊಳ್ಳುತ್ತಿದೆ. ಇದರಲ್ಲಿ ಸ್ವಸಹಾಯ ಸಂಘ ಮತ್ತು ಗ್ರಾಮೀಣ ಭಾಗದಿಂದ ಒಂದು ಲಕ್ಷ ಮಹಿಳೆಯರಿಗೆ ಕಾಫಿ ತಯಾರಿಸುವ ಸರಿಯಾದ ವಿಧಾನದ ಕುರಿತು ತರಬೇತಿ ನೀಡಲು ಯೋಜಿಸಲಾಗಿದೆ.

ಇದನ್ನೂ ಓದಿ: ನೇರ ತೆರಿಗೆ ಸಂಗ್ರಹದಲ್ಲಿ ಶೇ. 20ರಷ್ಟು ಏರಿಕೆ; ಐಟಿಆರ್ ಸಲ್ಲಿಸುವವರ ಸಂಖ್ಯೆ 10 ವರ್ಷದಲ್ಲಿ ದ್ವಿಗುಣ

ಕಾಫಿ ಉದ್ಯಮದಲ್ಲಿ ಬ್ಯಾರಿಸ್ಟಾಗಳ (ಕಾಫಿ ತಯಾರಿಸುವವರು) ಕೊರತೆ ಇದೆ. ಮುಂದಿನ ಮೂರು ವರ್ಷದಲ್ಲಿ ಒಂದು ಸಾವಿರ ಬಾರಿಸ್ಟಾಗಳಿಗೆ ತರಬೇತಿ ನೀಡಲು ಯೋಜನೆ ಹಾಕಲಾಗಿದೆ. ಇಲ್ಲಿಯವರೆಗೆ 150 ಮಂದಿಗೆ ತರಬೇತಿ ನೀಡಲಾಗಿದೆ ಎಂದು ಕಾಫಿ ಮಂಡಳಿ ಸಿಇಒ ಜಗದೀಶ ಹೇಳಿದ್ದಾರೆ.

ಕಾಫಿ ಶಾಸ್ತ್ರ ಅಧ್ಯಯನ

ಕಾಫಿ ಮಂಡಳಿ ಈಗ ಒಂದು ವರ್ಷದ ಕಾಫಿ ಶಾಸ್ತ್ರ ಹೆಸರಿನ ಕಿರು ಅವಧಿ ಕೋರ್ಸ್​ವೊಂದನ್ನು ನಡೆಸುತ್ತಿದೆ. ಮಾರ್ಚ್ 18ರಿಂದ 22ರವರೆಗೆ ಈ ಕೋರ್ಸ್​ಗೆ ಪ್ರವೇಶಾವಕಾಶ ಇದೆ. ಕಾಫಿ ರೋಸ್ಟಿಂಗ್​ನ ಹೊಸ ತಂತ್ರಜ್ಞಾನ ಬಗ್ಗೆ ವಿದ್ಯಾರ್ಥಿಗಳಲ್ಲಿ ಕೌಶಲ್ಯ ಬೆಳೆಸುವುದು ಈ ಕೋರ್ಸ್​ನ ಉದ್ದೇಶ. ಸದ್ಯ ಇದು ಪ್ರಾಯೋಗಿಕವಾಗಿ ಮಾತ್ರ ಇದೆ. ಯಶಸ್ವಿಯಾದಲ್ಲಿ ಮುಂದಿನ ವರ್ಷಗಳಲ್ಲಿ ಈ ಕೋರ್ಸ್ ಮುಂದುವರಿಯಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:49 pm, Mon, 12 February 24

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ