AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG Cylinder Price: ವಾಣಿಜ್ಯ ಎಲ್​ಪಿಜಿ ಸಿಲಿಂಡರ್ ಬೆಲೆಯಲ್ಲಿ 100 ರೂಪಾಯಿಗೂ ಹೆಚ್ಚು ಇಳಿಕೆ ಮಾಡಿದ ತೈಲ ಕಂಪೆನಿಗಳು

ವಾಣಿಜ್ಯ ಬಳಕೆಯ ಎಲ್​ಪಿಜಿ ಅಡುಗೆ ಅನಿಲ ಸಿಲಿಂಡರ್​ಗಳ ಬೆಲೆಯಲ್ಲಿ ಭರ್ಜರಿ ಇಳಿಕೆ ಆಗಿದೆ. ಜೂನ್ 1, 2021ರಿಂದ ಅನ್ವಯ ಆಗುವಂತೆ ರೂ. 100ಕ್ಕೂ ಹೆಚ್ಚು ಬೆಲೆ ಇಳಿದಿದೆ.

LPG Cylinder Price: ವಾಣಿಜ್ಯ ಎಲ್​ಪಿಜಿ ಸಿಲಿಂಡರ್ ಬೆಲೆಯಲ್ಲಿ 100 ರೂಪಾಯಿಗೂ ಹೆಚ್ಚು ಇಳಿಕೆ ಮಾಡಿದ ತೈಲ ಕಂಪೆನಿಗಳು
ಸಾಂದರ್ಭಿಕ ಚಿತ್ರ
Srinivas Mata
|

Updated on:Jun 01, 2021 | 1:26 PM

Share

ತೈಲ ಮಾರ್ಕೆಟಿಂಗ್ ಕಂಪೆನಿಗಳು ಎಲ್​ಪಿಜಿ ಗ್ಯಾಸ್​ ಸಿಲಿಂಡರ್​ಗಳ ಬೆಲೆಯಲ್ಲಿ 100 ರೂಪಾಯಿಗೂ ಹೆಚ್ಚಿನ ಮೊತ್ತವನ್ನು ಇಂದು (ಜೂನ್ 1, 2021) ಇಳಿಕೆ ಮಾಡಿವೆ. ಆದರೆ ಬೆಲೆ ಇಳಿಕೆ ಆಗಿರುವುದು ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್​ಗಳ ಬೆಲೆಯಲ್ಲಿ. ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್ ಬಳಕೆದಾರರ ಪಾಲಿಗೆ ಇದು ಅತಿ ದೊಡ್ಡ ಪ್ರಮಾಣದಲ್ಲಿ ನಿರಾಳ ತಂದಿದೆ. ಐಒಸಿ ಬಳಕೆದಾರರಿಗೆ 19 ಕೇಜಿ ತೂಕದ ಸಿಲಿಂಡರ್ ಬೆಲೆಯಲ್ಲಿ ರೂ. 122 ಕಡಿಮೆ ಆಗಿದೆ. ಈಗಿನ ಬೆಲೆ ಕಡಿತದ ನಂತರ ಜೂನ್ 1ರಿಂದ ದರ ಪರಿಷ್ಕರಣೆ ಆದ ಮೇಲೆ ಒಂದು ಸಿಲಿಂಡರ್​ಗೆ ರೂ. 1473.50 ಆಗುತ್ತದೆ. ಈ ಹಿಂದೆ ವಾಣಿಜ್ಯ ಉದ್ದೇಶದ ಎಲ್​ಪಿಜಿ ಸಿಲಿಂಡರ್ 1595.50 ಇತ್ತು.

ಮೇ ತಿಂಗಳಲ್ಲಿ ತೈಲ ಕಂಪೆನಿಗಳು ಎಲ್​ಪಿಜಿ ಅನಿಲ ದರವನ್ನು ಪ್ರತಿ ಸಿಲಿಂಡರ್​ಗೆ ರೂ. 45 ಇಳಿಕೆ ಮಾಡಿದ್ದವು. ಅಂದಹಾಗೆ ಈ ಎಲ್​ಪಿಜಿ ಗ್ಯಾಸ್​ ಸಿಲಿಂಡರ್ ಬೆಲೆ ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಹಾಗೂ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾಗುತ್ತದೆ. ದೆಹಲಿಯಲ್ಲಿ ಎಲ್​ಪಿಜಿ ಅನಿಲ ಬೆಲೆ ಒಂದು ಸಿಲಿಂಡರ್​ಗೆ ರೂ. 1473.50 ಇದೆ. ಮುಂಬೈನಲ್ಲಿ 1422.50 ಇದ್ದರೆ, ಕೋಲ್ಕತ್ತಾದಲ್ಲಿ ಪ್ರತಿ ಸಿಲಿಂಡರ್​ಗೆ 1544.50 ಇದೆ. ಚೆನ್ನೈನಲ್ಲಿ 19 ಕೇಜಿ ತೂಕದ ಸಿಲಿಂಡರ್ ಬೆಲೆ 1603 ರೂಪಾಯಿ ಇದೆ.

ಮೇ ತಿಂಗಳಲ್ಲಿ ಎಲ್​ಪಿಜಿ ಸಿಲಿಂಡರ್​ ಬೆಲೆ ದೆಹಲಿಯಲ್ಲಿ 1595.50 ರೂಪಾಯಿ ಇತ್ತು. ಮುಂಬೈನಲ್ಲಿ ರೂ. 1545 ಇತ್ತು. ಕೋಲ್ಕತ್ತಾದಲ್ಲಿ 1667.50 ಇದ್ದರೆ, ಚೆನ್ನೈನಲ್ಲಿ ಕಳೆಆದ ತಿಂಗಳು 1725.50 ಇತ್ತು. ಆದರೆ ಗೃಹ ಬಳಕೆ ಎಲ್​ಪಿಜಿ ಅನಿಲ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಇಳಿಕೆ ಆಗಿಲ್ಲ. ಅಂದರೆ 14.2 ಕೇಜಿ ತೂಕದ ಸಿಲಿಂಡರ್ ದರದಲ್ಲಿ ಯಾವುದೇ ಇಳಿಕೆ ಆಗಿಲ್ಲ.

ಇದನ್ನೂ ಓದಿ: LPG cylinder accident insurance: ಅಡುಗೆ ಅನಿಲ ಸಿಲಿಂಡರ್ ಅಪಘಾತಕ್ಕೆ ಡೀಲರ್ ಮೂಲಕವೇ ಸಿಗುತ್ತೆ ಇನ್ಷೂರೆನ್ಸ್

(Commercial LPG cylinder price reduced by more than Rs 100 on June 1, 2021)

Published On - 1:17 pm, Tue, 1 June 21

ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!