Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG Cylinder Price: ವಾಣಿಜ್ಯ ಎಲ್​ಪಿಜಿ ಸಿಲಿಂಡರ್ ಬೆಲೆಯಲ್ಲಿ 100 ರೂಪಾಯಿಗೂ ಹೆಚ್ಚು ಇಳಿಕೆ ಮಾಡಿದ ತೈಲ ಕಂಪೆನಿಗಳು

ವಾಣಿಜ್ಯ ಬಳಕೆಯ ಎಲ್​ಪಿಜಿ ಅಡುಗೆ ಅನಿಲ ಸಿಲಿಂಡರ್​ಗಳ ಬೆಲೆಯಲ್ಲಿ ಭರ್ಜರಿ ಇಳಿಕೆ ಆಗಿದೆ. ಜೂನ್ 1, 2021ರಿಂದ ಅನ್ವಯ ಆಗುವಂತೆ ರೂ. 100ಕ್ಕೂ ಹೆಚ್ಚು ಬೆಲೆ ಇಳಿದಿದೆ.

LPG Cylinder Price: ವಾಣಿಜ್ಯ ಎಲ್​ಪಿಜಿ ಸಿಲಿಂಡರ್ ಬೆಲೆಯಲ್ಲಿ 100 ರೂಪಾಯಿಗೂ ಹೆಚ್ಚು ಇಳಿಕೆ ಮಾಡಿದ ತೈಲ ಕಂಪೆನಿಗಳು
ಸಾಂದರ್ಭಿಕ ಚಿತ್ರ
Follow us
Srinivas Mata
|

Updated on:Jun 01, 2021 | 1:26 PM

ತೈಲ ಮಾರ್ಕೆಟಿಂಗ್ ಕಂಪೆನಿಗಳು ಎಲ್​ಪಿಜಿ ಗ್ಯಾಸ್​ ಸಿಲಿಂಡರ್​ಗಳ ಬೆಲೆಯಲ್ಲಿ 100 ರೂಪಾಯಿಗೂ ಹೆಚ್ಚಿನ ಮೊತ್ತವನ್ನು ಇಂದು (ಜೂನ್ 1, 2021) ಇಳಿಕೆ ಮಾಡಿವೆ. ಆದರೆ ಬೆಲೆ ಇಳಿಕೆ ಆಗಿರುವುದು ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್​ಗಳ ಬೆಲೆಯಲ್ಲಿ. ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್ ಬಳಕೆದಾರರ ಪಾಲಿಗೆ ಇದು ಅತಿ ದೊಡ್ಡ ಪ್ರಮಾಣದಲ್ಲಿ ನಿರಾಳ ತಂದಿದೆ. ಐಒಸಿ ಬಳಕೆದಾರರಿಗೆ 19 ಕೇಜಿ ತೂಕದ ಸಿಲಿಂಡರ್ ಬೆಲೆಯಲ್ಲಿ ರೂ. 122 ಕಡಿಮೆ ಆಗಿದೆ. ಈಗಿನ ಬೆಲೆ ಕಡಿತದ ನಂತರ ಜೂನ್ 1ರಿಂದ ದರ ಪರಿಷ್ಕರಣೆ ಆದ ಮೇಲೆ ಒಂದು ಸಿಲಿಂಡರ್​ಗೆ ರೂ. 1473.50 ಆಗುತ್ತದೆ. ಈ ಹಿಂದೆ ವಾಣಿಜ್ಯ ಉದ್ದೇಶದ ಎಲ್​ಪಿಜಿ ಸಿಲಿಂಡರ್ 1595.50 ಇತ್ತು.

ಮೇ ತಿಂಗಳಲ್ಲಿ ತೈಲ ಕಂಪೆನಿಗಳು ಎಲ್​ಪಿಜಿ ಅನಿಲ ದರವನ್ನು ಪ್ರತಿ ಸಿಲಿಂಡರ್​ಗೆ ರೂ. 45 ಇಳಿಕೆ ಮಾಡಿದ್ದವು. ಅಂದಹಾಗೆ ಈ ಎಲ್​ಪಿಜಿ ಗ್ಯಾಸ್​ ಸಿಲಿಂಡರ್ ಬೆಲೆ ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಹಾಗೂ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾಗುತ್ತದೆ. ದೆಹಲಿಯಲ್ಲಿ ಎಲ್​ಪಿಜಿ ಅನಿಲ ಬೆಲೆ ಒಂದು ಸಿಲಿಂಡರ್​ಗೆ ರೂ. 1473.50 ಇದೆ. ಮುಂಬೈನಲ್ಲಿ 1422.50 ಇದ್ದರೆ, ಕೋಲ್ಕತ್ತಾದಲ್ಲಿ ಪ್ರತಿ ಸಿಲಿಂಡರ್​ಗೆ 1544.50 ಇದೆ. ಚೆನ್ನೈನಲ್ಲಿ 19 ಕೇಜಿ ತೂಕದ ಸಿಲಿಂಡರ್ ಬೆಲೆ 1603 ರೂಪಾಯಿ ಇದೆ.

ಮೇ ತಿಂಗಳಲ್ಲಿ ಎಲ್​ಪಿಜಿ ಸಿಲಿಂಡರ್​ ಬೆಲೆ ದೆಹಲಿಯಲ್ಲಿ 1595.50 ರೂಪಾಯಿ ಇತ್ತು. ಮುಂಬೈನಲ್ಲಿ ರೂ. 1545 ಇತ್ತು. ಕೋಲ್ಕತ್ತಾದಲ್ಲಿ 1667.50 ಇದ್ದರೆ, ಚೆನ್ನೈನಲ್ಲಿ ಕಳೆಆದ ತಿಂಗಳು 1725.50 ಇತ್ತು. ಆದರೆ ಗೃಹ ಬಳಕೆ ಎಲ್​ಪಿಜಿ ಅನಿಲ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಇಳಿಕೆ ಆಗಿಲ್ಲ. ಅಂದರೆ 14.2 ಕೇಜಿ ತೂಕದ ಸಿಲಿಂಡರ್ ದರದಲ್ಲಿ ಯಾವುದೇ ಇಳಿಕೆ ಆಗಿಲ್ಲ.

ಇದನ್ನೂ ಓದಿ: LPG cylinder accident insurance: ಅಡುಗೆ ಅನಿಲ ಸಿಲಿಂಡರ್ ಅಪಘಾತಕ್ಕೆ ಡೀಲರ್ ಮೂಲಕವೇ ಸಿಗುತ್ತೆ ಇನ್ಷೂರೆನ್ಸ್

(Commercial LPG cylinder price reduced by more than Rs 100 on June 1, 2021)

Published On - 1:17 pm, Tue, 1 June 21

‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ