AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG Price Hike: ಕಮರ್ಷಿಯಲ್ ಸಿಲಿಂಡರ್​ಗಳ ಬೆಲೆಯಲ್ಲಿ 100 ರೂಪಾಯಿ ಏರಿಕೆ

LPG Price Today in Bengaluru: ಡಿಸೆಂಬರ್ 1, 2021ರಿಂದ ಮತ್ತೆ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಗಳನ್ನು ಹೆಚ್ಚಳ ಮಾಡಲಾಗಿದೆ. ನಿಮ್ಮ ನಗರದಲ್ಲಿ ಮನೆಗಳಲ್ಲಿ ಬಳಸುವ ಎಲ್​ಪಿಜಿ ಸಿಲಿಂಡರ್ ದರ ಎಷ್ಟಿದೆ ಎಂಬ ವಿವರ ಇಲ್ಲಿದೆ.

LPG Price Hike: ಕಮರ್ಷಿಯಲ್ ಸಿಲಿಂಡರ್​ಗಳ ಬೆಲೆಯಲ್ಲಿ 100 ರೂಪಾಯಿ ಏರಿಕೆ
ಸಾಂದರ್ಭಿಕ ಚಿತ್ರ
TV9 Web
| Updated By: Srinivas Mata|

Updated on: Dec 01, 2021 | 11:01 AM

Share

ನವದೆಹಲಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು ಇಂದು (ಡಿಸೆಂಬರ್ 1, 2021) ಮತ್ತೆ ಹೆಚ್ಚಿಸಲಾಗಿದ್ದು, ಜನಸಾಮಾನ್ಯರು ಮತ್ತು ವ್ಯಾಪಾರಿಗಳ ಮೇಲೆ ಹೆಚ್ಚಿನ ಹೊರೆ ಬೀಳುತ್ತದೆ. 19 ಕೇಜಿಯ ವಾಣಿಜ್ಯ ಸಿಲಿಂಡರ್‌ನ ಬೆಲೆಯನ್ನು ತಲಾ 100 ರೂಪಾಯಿ ಹೆಚ್ಚಳ ಮಾಡಲಾಗಿದೆ. ನವೆಂಬರ್ 1ರಂದು ಬೆಲೆ ಏರಿಕೆ ಮಾಡಿದ ನಂತರ ಇದು ಎರಡನೇ ಹೆಚ್ಚಳವಾಗಿದೆ.

LPG ವಾಣಿಜ್ಯ ಗ್ಯಾಸ್ ಸಿಲಿಂಡರ್ ಇಂದಿನಿಂದ ಅನ್ವಯ ಆಗುವ ಬೆಲೆ ಬೆಲೆ ಹೆಚ್ಚಳದ ನಂತರ 19 ಕೇಜಿಯ ವಾಣಿಜ್ಯ ಸಿಲಿಂಡರ್ ಈಗ ದೆಹಲಿಯಲ್ಲಿ 2101 ರೂಪಾಯಿ., ಮುಂಬೈನಲ್ಲಿ ಎಲ್‌ಪಿಜಿ ವಾಣಿಜ್ಯ ಸಿಲಿಂಡರ್‌ನ ಬೆಲೆ 2,051 ರೂ., ಕೋಲ್ಕತ್ತಾದಲ್ಲಿ 2,174.50 ರೂ., ಚೆನ್ನೈನಲ್ಲಿ ಎಲ್‌ಪಿಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 2,234.50 ಆಗಿದೆ.

ಇದಕ್ಕೂ ಮುನ್ನ ನವೆಂಬರ್ 1ರಂದು ಎಲ್‌ಪಿಜಿ ವಾಣಿಜ್ಯ ಸಿಲಿಂಡರ್‌ನ ಬೆಲೆಯನ್ನು 266 ರೂಪಾಯಿಯಿಂದ 2000.50 ರೂ.ಗೆ ಹೆಚ್ಚಿಸಲಾಗಿತ್ತು. ನವೆಂಬರ್ 1ರ ಹೆಚ್ಚಳಕ್ಕೆ ಮೊದಲು, ರಾಷ್ಟ್ರ ರಾಜಧಾನಿಯಲ್ಲಿ ಎಲ್​ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆ 1734 ರೂಪಾಯಿಯಿತ್ತು. ಆದರೆ, ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಹೆಚ್ಚಳವಾಗಿಲ್ಲ.

ಈ ಮಧ್ಯೆ, ಸಬ್ಸಿಡಿ ರಹಿತ 14.2 ಕೇಜಿ ಅಡುಗೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ ದೆಹಲಿಯಲ್ಲಿ ರೂ. 899.50, ಕೋಲ್ಕತ್ತಾದಲ್ಲಿ ರೂ. 926, ಮುಂಬೈನಲ್ಲಿ ರೂ. 899.50 ಮತ್ತು ಚೆನ್ನೈನಲ್ಲಿ ಪ್ರತಿ ಸಿಲಿಂಡರ್‌ಗೆ ರೂ. 915.50, ಬೆಂಗಳೂರಿನಲ್ಲಿ 902.50 ರೂಪಾಯಿ ಆಗಿದೆ.

ಇದನ್ನೂ ಓದಿ: ಏರಿಕೆ ಆಗಿಯೇಬಿಡ್ತು ಹೋಟೆಲ್ ತಿಂಡಿ ತಿನಿಸು ದರ; ಗ್ರಾಹಕರ ಕೈ ಸುಡುವಂತಿದೆ ಶೇ. 5-10ರಷ್ಟು ಬೆಲೆ ಏರಿಕೆ

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು