AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಡು ಬಡತನ ತೊಡೆದು ಹಾಕಿದ ಭಾರತ: ಅಧಿಕೃತ ಅಂಕಿಅಂಶಗಳು ಹೇಳೋದೇನು ನೋಡಿ

ಕಡುಬಡತನ ತೊಡೆದು ಹಾಕುವಲ್ಲಿ ಭಾರತ ಬಹಳ ದೊಡ್ಡ ಸಾಧನೆ ಮಾಡಿರುವುದು ಸರ್ಕಾರ ಬಿಡುಗಡೆ ಮಾಡಿರುವ ಅಂಕಿಅಂಶಗಳಿಂದ ತಿಳಿದುಬಂದಿದೆ. ವಿಶ್ವಬ್ಯಾಂಕ್ ಶಿಫಾರಸು ಮಾಡಿರುವ ಅಂಕಿಅಂಶಗಳ ಮಾನದಂಡದ ಪ್ರಕಾರವೂ ಸಮೀಕ್ಷಾ ವರದಿ ಶುಭ ಸುದ್ದಿಯನ್ನೇ ನೀಡಿದೆ. 2011-12ನೇ ಸಾಲಿಗೆ ಹೋಲಿಸಿದರೆ ಇದೀಗ ಭಾರತದ ನಗರ ಮತ್ತು ಗ್ರಾಮೀಣ ಪ್ರದೇಶಗಳೆರಡರಲ್ಲೂ ಉತ್ತಮ ಸಾಧನೆ ಮಾಡಲಾಗಿದೆ.

ಕಡು ಬಡತನ ತೊಡೆದು ಹಾಕಿದ ಭಾರತ: ಅಧಿಕೃತ ಅಂಕಿಅಂಶಗಳು ಹೇಳೋದೇನು ನೋಡಿ
ಸಾಂದರ್ಭಿಕ ಚಿತ್ರ
Ganapathi Sharma
|

Updated on: Mar 02, 2024 | 10:03 AM

Share

ನವದೆಹಲಿ, ಮಾರ್ಚ್​ 2: ತೀವ್ರ ಅಥವಾ ಕಡು ಬಡತನವನ್ನು (Poverty) ತೊಡೆದು ಹಾಕುವ ನಿಟ್ಟಿನಲ್ಲಿ ಭಾರತ (India) ಅತ್ಯುತ್ತಮ ಸಾಧನೆ ಮಾಡಿರುವುದು ಅಂಕಿ ಅಂಶಗಳಿಂದ ತಿಳಿದು ಬಂದಿದೆ. 2022 – 23ನೇ ಸಾಲಿನ ಅನುಭೋಗಿ / ಬಳಕೆಯ ವೆಚ್ಚ ದತ್ತಾಂಶವನ್ನು (Consumption Expenditure Data) ಬಿಡುಗಡೆ ಮಾಡಲಾಗಿದ್ದು, ಇದು 10 ವರ್ಷ ಅವಧಿಯ ಬಡತನ ಸಂಬಂಧಿತ ಸಮೀಕ್ಷೆ ಆಧಾರಿತ ಮಾಹಿತಿಯನ್ನು ಒದಗಿಸಿದೆ. ಈ ಹಿಂದಿನ ಅಧಿಕೃತ ಸಮೀಕ್ಷೆಯನ್ನು 2011 12ನೇ ಸಾಲಿನಲ್ಲಿ ನಡೆಸಲಾಗಿತ್ತು. ಭಾರತವು ಅನುಭೋಗಿ ಅಥವಾ ಬಳಕೆಯ ವೆಚ್ಚಗಳನ್ನು ಅಂದಾಜು ಮಾಡಲು ಎರಡು ವಿಭಿನ್ನ ವಿಧಾನಗಳನ್ನು ಅನುಸರಿಸುತ್ತಿದೆ. ಅವುಗಳು ಯೂನಿಫಾರ್ಮ್ ರಿಕಾಲ್ ಪಿರಿಯಡ್ (URP) ಮತ್ತು ಅಕ್ಯುರೇಟ್ ಮಾಡಿಫೈಡ್ ಮಿಕ್ಸೆಡ್ ರಿಕಾಲ್ ಪಿರಿಯಡ್ (MMRP) ಆಗಿವೆ.

30 ದಿನಗಳ ಅವಧಿಗೆ ಕುಟುಂಬಗಳು ಮಾಡಿದ ವೆಚ್ಚದ ಕುರಿತು ಕೇಳಿದ ಪ್ರಶ್ನೆಗಳಿಗೆ ದೊರೆತ ಉತ್ತರದ ಆಧಾರದಲ್ಲಿ ಯುಆರ್​ಪಿ ವಿಧಾನ ವರದಿ ಸಿದ್ಧಪಡಿಸಲಾಗಿದೆ. ಬೇಗನೆ ಹಾಳಾಗುವ ಸರಕುಗಳಿಗೆ ಸಂಬಂಧಿಸಿದಂತೆ ಕೇಳಲಾದ ಪ್ರಶ್ನೆಗಳಿಗೆ ದೊರೆತ ಉತ್ತರಗಳನ್ನು ಬಳಸಿಕೊಂಡು ಎಂಎಂಆರ್​ಪಿ ವಿಧಾನದ ವರದಿ ಸಿದ್ಧಪಡಿಸಲಾಗಿದೆ. ಹಿಂದೆಲ್ಲ ಈ ಎರಡೂ ವಿಧಾನಗಳಲ್ಲಿ ಸಮೀಕ್ಷೆ ನಡೆಸುತ್ತಿದ್ದ ಭಾರತ ಈ ಬಾರಿ ಇತರ ದೇಶಗಳ ಗುಣಮಟ್ಟ ಮಾನದಂಡ ಆಧಾರಿತ ಎಂಎಂಆರ್​ಪಿ ವಿಧಾನವನ್ನೇ ಆಯ್ಕೆ ಮಾಡಿಕೊಂಡಿತ್ತು ಎಂದು ‘ಬ್ರೂಕಿಂಗ್ಸ್ ಡಾಟ್ ಎಜು’ ವರದಿ ಮಾಡಿದೆ.

ಯುಆರ್​ಪಿ ವಿಧಾನದಲ್ಲಿ ಸಮೀಕ್ಷೆ ಮಾಡಿದ್ದ 1977-78ನೇ ಸಾಲಿನ ಬಡತನ ವರದಿ ಮತ್ತು 2011-12ನೇ ಸಾಲಿನ ವರದಿಯನ್ನು ತುಲನೆ ಮಾಡಿಕೊಂಡು 2022-23ನೇ ಸಾಲಿನ ವರದಿಯನ್ನು ಎಂಎಂಆರ್​​ಪಿ ವಿಧಾನದಲ್ಲಿ ಸಿದ್ಧಪಡಿಸಲಾಗಿದೆ. ಕಡಿಮೆ ಮತ್ತು ಮಧ್ಯಮ ಆದಾಯದ ದೇಶಗಳಿಗೆ ವಿಶ್ವಬ್ಯಾಂಕ್ ನಿಗದಿಪಡಿಸಿದ ಮಾನದಂಡದ ಪ್ರಕಾರ ಬಡತನದ ಅಂದಾಜು ಮಾಡಲಾಗಿದೆ ಎಂದು ವರದಿ ತಿಳಿಸಿದೆ.

ದತ್ತಾಂಶಗಳು ಹೇಳುವುದೇನು?

ರಿಲಯಲ್ ಪರ್ ಕ್ಯಾಪಿಟಾ ಕನ್ಸಂಪ್ಷನ್ ಗ್ರೋತ್ (ನೈಜ ಸಮಯದ ತಲಾ ಆದಾಯ ವೆಚ್ಚದ ಬೆಳವಣಿಗೆ) 2011-12ರಿಂದ ವಾರ್ಷಿಕ ಶೇ 2.9ರ ಬೆಳವಣಿಗೆ ದಾಖಲಿಸಿದೆ. ಗ್ರಾಮೀಣ ಪ್ರದೇಶದಲ್ಲಿ ಇದು ಶೇ 3.1ರ ಬೆಳವಣಿಗೆ ದಾಖಲಿಸಿದೆ. ಒಟ್ಟಾರೆಯಾಗಿ ನಗರ ಪ್ರದೇಶಕ್ಕಿಂತ ಗ್ರಾಮೀಣ ಪ್ರದೇಶದ ವೆಚ್ಚದ ಸಾಮರ್ಥ್ಯದ ಪ್ರಮಾಣ ಹೆಚ್ಚಾಗಿರುವುದು ಅಂಕಿಅಂಶಗಳಿಂದ ತಿಳಿದುಬಂದಿದೆ.

 ಇದನ್ನೂ ಓದಿ: ಬ್ಯಾಂಕ್ ಉದ್ಯೋಗಿಗಳಿಗೆ ಡಬಲ್ ಭಾಗ್ಯ; ಜೂನ್​ನಲ್ಲಿ ಸಂಬಳ ಹೆಚ್ಚಳ; ವಾರಕ್ಕೆ ಐದು ದಿನ ಕೆಲಸ

ವಿಶ್ವಬ್ಯಾಂಕ್ ಅಂದಾಜಿಸಿರುವ ಅಂಕಿಅಂಶಗಳ ಮಾನದಂಡದ ಪ್ರಕಾರ, ಸಮೀಕ್ಷೆಯಲ್ಲಿ ಭಾರತದ ಬಡವರ ಸಂಖ್ಯೆಯು ಗಮನಾರ್ಹವಾಗಿ ಕಡಿಮೆಯಾಗಿದೆ ಎಂಬುದನ್ನು ದತ್ತಾಂಶಗಳು ತೋರಿಸಿವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ