AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG ಸಿಲಿಂಡರ್​ಗೆ 50 ರೂಪಾಯಿ ಹೆಚ್ಚಳವಾಯ್ತು; ವಿಮಾನ ಇಂಧನ ಬೆಲೆಯೂ ಏರಿಕೆ

ಸಬ್ಸಿಡಿ ರಹಿತ 14.2 ಕೆಜಿ ಎಲ್​ಪಿಜಿ ಸಿಲಿಂಡರ್ ಬೆಲೆ ₹644ರಿಂದ ₹694ಕ್ಕೇರಿದೆ. ಜುಲೈ ತಿಂಗಳಲ್ಲಿ ₹594 ಆಗಿದ್ದ ಸಿಲಿಂಡರ್ ಬೆಲೆ ಡಿಸೆಂಬರ್ 1ರಂದು  ₹50 ಏರಿಕೆ ಆಗಿತ್ತು.

LPG ಸಿಲಿಂಡರ್​ಗೆ 50 ರೂಪಾಯಿ ಹೆಚ್ಚಳವಾಯ್ತು; ವಿಮಾನ ಇಂಧನ ಬೆಲೆಯೂ ಏರಿಕೆ
ಸಾಂದರ್ಭಿಕ ಚಿತ್ರ
ರಶ್ಮಿ ಕಲ್ಲಕಟ್ಟ
| Updated By: ಸಾಧು ಶ್ರೀನಾಥ್​|

Updated on: Dec 16, 2020 | 5:23 PM

Share

ನವದೆಹಲಿ: ಬುಧವಾರ ಎಲ್​ಪಿಜಿ ಸಿಲಿಂಡರ್ ದರ ₹50 ಏರಿಕೆಯಾಗಿದೆ. ತಿಂಗಳಲ್ಲಿ ಎರಡನೇ ಬಾರಿ ಅಡುಗೆ ಅನಿಲ ಬೆಲೆ ಏರಿಕೆ ಕಂಡಿದ್ದು, ವಿಮಾನ ಇಂಧನ ಬೆಲೆ ಶೇ. 6.3ರಷ್ಟು ಏರಿಕೆಯಾಗಿದೆ.

ಸಬ್ಸಿಡಿ ರಹಿತ 14.2 ಕೆಜಿ ಎಲ್​ಪಿಜಿ ಸಿಲಿಂಡರ್ ಬೆಲೆ ₹644ರಿಂದ ₹694ಕ್ಕೇರಿದೆ. ಜುಲೈ ತಿಂಗಳಲ್ಲಿ ₹594 ಆಗಿದ್ದ ಸಿಲಿಂಡರ್ ಬೆಲೆ ಡಿಸೆಂಬರ್ 1ರಂದು  ₹50 ಏರಿಕೆ ಆಗಿತ್ತು. ಸಬ್ಸಿಡಿ ಹೊಂದಿದ ಎಲ್​ಪಿಜಿ ಸಿಲಿಂಡರ್ ಕೂಡಾ ಇದೇ ಬೆಲೆಯಲ್ಲಿ ಮಾರಾಟವಾಗುತ್ತಿತ್ತು. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಕುಸಿತ ಮತ್ತು ರೀಫಿಲ್ ದರ ಏರಿಕೆಯಾದ ಕಾರಣ ಮೇ ತಿಂಗಳಿನಿಂದ ಗ್ರಾಹಕರಿಗೆ ಸಬ್ಸಿಡಿ ಸಿಕ್ಕಿರಲಿಲ್ಲ.

ದೆಹಲಿಯಲ್ಲಿ ಜೂನ್ 2019ರಲ್ಲಿ ಅಡುಗೆ ಸಬ್ಸಿಡಿ ಇರುವ ಎಲ್​ಪಿಜಿ ಸಿಲಿಂಡರ್ ಬೆಲೆ ₹497 ಆಗಿತ್ತು. ಆನಂತರ ಇಲ್ಲಿಯವರೆಗೆ ₹147 ಏರಿಕೆಯಾಗಿದೆ. ಆದಾಗ್ಯೂ, ಅನಿಲ ದರ ಹೆಚ್ಚಾಗಿರುವಾಗ ಸರ್ಕಾರ ಗ್ರಾಹಕರಿಗೆ ಸಬ್ಸಿಡಿ ಪಾವತಿಸಬೇಕಾಗುತ್ತದೆ. 15 ದಿನಗಳಿಗೊಮ್ಮೆ ಎಲ್ ಪಿಜಿ ದರವನ್ನು ಪರಿಷ್ಕರಿಸಲಾಗುತ್ತದೆ.

ಜೆಟ್ ಇಂಧನ ದರ ಏರಿಕೆ

ಜೆಟ್ ಇಂಧನ ದರವು 6.3 ಶೇ ಏರಿಕೆ ಆಗಿದೆ. ಅಂದರೆ ಕಿಲೊ ಲೀಟರ್​ಗೆ₹2,941.5. ದೆಹಲಿಯಲ್ಲಿ ಜೆಟ್ ಇಂಧನ ಬೆಲೆ ಕಿಲೋ ಲೀಟರ್​ಗೆ ₹49, 161.16 ಆಗಿದೆ. ಈ ತಿಂಗಳಲ್ಲಿ ಎರಡನೇ ಬಾರಿ ದರ ಏರಿಕೆಯಾಗಿದೆ.

ಎಲ್​ಪಿಜಿ ಸಿಲಿಂಡರ್​ಗೆ ಬೆಲೆ ಏರಿಕೆಯಾಗುವುದರ ಜತೆಗೆ 5 ಕೆಜಿ ಬಾಟಲ್ ಬೆಲೆ ₹18 ಮತ್ತು 19 ಕೆಜಿ ಸಿಲಿಂಡರ್ ಬೆಲೆ ₹36.50 ಏರಿಕೆಯಾಗಿದೆ.

ಭಾರತದಲ್ಲಿ ಗೃಹೋಪಯೋಗಕ್ಕಾಗಿ ವರ್ಷಕ್ಕೆ ಗರಿಷ್ಠ 12 ಎಲ್‌ಪಿಜಿ ಸಿಲಿಂಡರ್ ಖರೀದಿಗೆ ಸಬ್ಸಿಡಿ ದರದಲ್ಲಿ ಅವಕಾಶವಿದೆ. ಸಿಲಿಂಡರ್‌ಗಳನ್ನು ಖರೀದಿಸುವ ಸಮಯದಲ್ಲಿ ಪೂರ್ಣ ಬೆಲೆಗೆ ಖರೀದಿಸಬೇಕಾಗುತ್ತದೆ ಮತ್ತು ಸಬ್ಸಿಡಿಯನ್ನು ಸರ್ಕಾರವು ಗ್ರಾಹಕರ ಬ್ಯಾಂಕ್ ಖಾತೆಗೆ ಜಮೆ ಮಾಡುತ್ತದೆ.

ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್​ಗೆ ಈಗ ಕೋಲ್ಕತ್ತಾದಲ್ಲಿ ₹720.50 ಮುಂಬೈಯಲ್ಲಿ ₹694 ಮತ್ತು ಚೆನ್ನೈನಲ್ಲಿ ₹710 ಆಗಿದೆ. ಬೆಂಗಳೂರಿನಲ್ಲಿ ಎಲ್ ಪಿಜಿ ಸಿಲಿಂಡರ್ ಬೆಲೆ ₹697 ಆಗಿದೆ. ಸ್ಥಳೀಯ ಮಾರಾಟ ತೆರಿಗೆ ಅಥವಾ ವ್ಯಾಟ್‌ನ ಪ್ರಮಾಣವನ್ನು ಅವಲಂಬಿಸಿ ದರಗಳು ರಾಜ್ಯದಿಂದ ರಾಜ್ಯಕ್ಕೆ ಭಿನ್ನವಾಗಿರುತ್ತದೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ