AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG ಸಿಲಿಂಡರ್​ಗೆ 50 ರೂಪಾಯಿ ಹೆಚ್ಚಳವಾಯ್ತು; ವಿಮಾನ ಇಂಧನ ಬೆಲೆಯೂ ಏರಿಕೆ

ಸಬ್ಸಿಡಿ ರಹಿತ 14.2 ಕೆಜಿ ಎಲ್​ಪಿಜಿ ಸಿಲಿಂಡರ್ ಬೆಲೆ ₹644ರಿಂದ ₹694ಕ್ಕೇರಿದೆ. ಜುಲೈ ತಿಂಗಳಲ್ಲಿ ₹594 ಆಗಿದ್ದ ಸಿಲಿಂಡರ್ ಬೆಲೆ ಡಿಸೆಂಬರ್ 1ರಂದು  ₹50 ಏರಿಕೆ ಆಗಿತ್ತು.

LPG ಸಿಲಿಂಡರ್​ಗೆ 50 ರೂಪಾಯಿ ಹೆಚ್ಚಳವಾಯ್ತು; ವಿಮಾನ ಇಂಧನ ಬೆಲೆಯೂ ಏರಿಕೆ
ಸಾಂದರ್ಭಿಕ ಚಿತ್ರ
ರಶ್ಮಿ ಕಲ್ಲಕಟ್ಟ
| Edited By: |

Updated on: Dec 16, 2020 | 5:23 PM

Share

ನವದೆಹಲಿ: ಬುಧವಾರ ಎಲ್​ಪಿಜಿ ಸಿಲಿಂಡರ್ ದರ ₹50 ಏರಿಕೆಯಾಗಿದೆ. ತಿಂಗಳಲ್ಲಿ ಎರಡನೇ ಬಾರಿ ಅಡುಗೆ ಅನಿಲ ಬೆಲೆ ಏರಿಕೆ ಕಂಡಿದ್ದು, ವಿಮಾನ ಇಂಧನ ಬೆಲೆ ಶೇ. 6.3ರಷ್ಟು ಏರಿಕೆಯಾಗಿದೆ.

ಸಬ್ಸಿಡಿ ರಹಿತ 14.2 ಕೆಜಿ ಎಲ್​ಪಿಜಿ ಸಿಲಿಂಡರ್ ಬೆಲೆ ₹644ರಿಂದ ₹694ಕ್ಕೇರಿದೆ. ಜುಲೈ ತಿಂಗಳಲ್ಲಿ ₹594 ಆಗಿದ್ದ ಸಿಲಿಂಡರ್ ಬೆಲೆ ಡಿಸೆಂಬರ್ 1ರಂದು  ₹50 ಏರಿಕೆ ಆಗಿತ್ತು. ಸಬ್ಸಿಡಿ ಹೊಂದಿದ ಎಲ್​ಪಿಜಿ ಸಿಲಿಂಡರ್ ಕೂಡಾ ಇದೇ ಬೆಲೆಯಲ್ಲಿ ಮಾರಾಟವಾಗುತ್ತಿತ್ತು. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಕುಸಿತ ಮತ್ತು ರೀಫಿಲ್ ದರ ಏರಿಕೆಯಾದ ಕಾರಣ ಮೇ ತಿಂಗಳಿನಿಂದ ಗ್ರಾಹಕರಿಗೆ ಸಬ್ಸಿಡಿ ಸಿಕ್ಕಿರಲಿಲ್ಲ.

ದೆಹಲಿಯಲ್ಲಿ ಜೂನ್ 2019ರಲ್ಲಿ ಅಡುಗೆ ಸಬ್ಸಿಡಿ ಇರುವ ಎಲ್​ಪಿಜಿ ಸಿಲಿಂಡರ್ ಬೆಲೆ ₹497 ಆಗಿತ್ತು. ಆನಂತರ ಇಲ್ಲಿಯವರೆಗೆ ₹147 ಏರಿಕೆಯಾಗಿದೆ. ಆದಾಗ್ಯೂ, ಅನಿಲ ದರ ಹೆಚ್ಚಾಗಿರುವಾಗ ಸರ್ಕಾರ ಗ್ರಾಹಕರಿಗೆ ಸಬ್ಸಿಡಿ ಪಾವತಿಸಬೇಕಾಗುತ್ತದೆ. 15 ದಿನಗಳಿಗೊಮ್ಮೆ ಎಲ್ ಪಿಜಿ ದರವನ್ನು ಪರಿಷ್ಕರಿಸಲಾಗುತ್ತದೆ.

ಜೆಟ್ ಇಂಧನ ದರ ಏರಿಕೆ

ಜೆಟ್ ಇಂಧನ ದರವು 6.3 ಶೇ ಏರಿಕೆ ಆಗಿದೆ. ಅಂದರೆ ಕಿಲೊ ಲೀಟರ್​ಗೆ₹2,941.5. ದೆಹಲಿಯಲ್ಲಿ ಜೆಟ್ ಇಂಧನ ಬೆಲೆ ಕಿಲೋ ಲೀಟರ್​ಗೆ ₹49, 161.16 ಆಗಿದೆ. ಈ ತಿಂಗಳಲ್ಲಿ ಎರಡನೇ ಬಾರಿ ದರ ಏರಿಕೆಯಾಗಿದೆ.

ಎಲ್​ಪಿಜಿ ಸಿಲಿಂಡರ್​ಗೆ ಬೆಲೆ ಏರಿಕೆಯಾಗುವುದರ ಜತೆಗೆ 5 ಕೆಜಿ ಬಾಟಲ್ ಬೆಲೆ ₹18 ಮತ್ತು 19 ಕೆಜಿ ಸಿಲಿಂಡರ್ ಬೆಲೆ ₹36.50 ಏರಿಕೆಯಾಗಿದೆ.

ಭಾರತದಲ್ಲಿ ಗೃಹೋಪಯೋಗಕ್ಕಾಗಿ ವರ್ಷಕ್ಕೆ ಗರಿಷ್ಠ 12 ಎಲ್‌ಪಿಜಿ ಸಿಲಿಂಡರ್ ಖರೀದಿಗೆ ಸಬ್ಸಿಡಿ ದರದಲ್ಲಿ ಅವಕಾಶವಿದೆ. ಸಿಲಿಂಡರ್‌ಗಳನ್ನು ಖರೀದಿಸುವ ಸಮಯದಲ್ಲಿ ಪೂರ್ಣ ಬೆಲೆಗೆ ಖರೀದಿಸಬೇಕಾಗುತ್ತದೆ ಮತ್ತು ಸಬ್ಸಿಡಿಯನ್ನು ಸರ್ಕಾರವು ಗ್ರಾಹಕರ ಬ್ಯಾಂಕ್ ಖಾತೆಗೆ ಜಮೆ ಮಾಡುತ್ತದೆ.

ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್​ಗೆ ಈಗ ಕೋಲ್ಕತ್ತಾದಲ್ಲಿ ₹720.50 ಮುಂಬೈಯಲ್ಲಿ ₹694 ಮತ್ತು ಚೆನ್ನೈನಲ್ಲಿ ₹710 ಆಗಿದೆ. ಬೆಂಗಳೂರಿನಲ್ಲಿ ಎಲ್ ಪಿಜಿ ಸಿಲಿಂಡರ್ ಬೆಲೆ ₹697 ಆಗಿದೆ. ಸ್ಥಳೀಯ ಮಾರಾಟ ತೆರಿಗೆ ಅಥವಾ ವ್ಯಾಟ್‌ನ ಪ್ರಮಾಣವನ್ನು ಅವಲಂಬಿಸಿ ದರಗಳು ರಾಜ್ಯದಿಂದ ರಾಜ್ಯಕ್ಕೆ ಭಿನ್ನವಾಗಿರುತ್ತದೆ.

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?