AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG ಸಿಲಿಂಡರ್​ಗೆ 50 ರೂಪಾಯಿ ಹೆಚ್ಚಳವಾಯ್ತು; ವಿಮಾನ ಇಂಧನ ಬೆಲೆಯೂ ಏರಿಕೆ

ಸಬ್ಸಿಡಿ ರಹಿತ 14.2 ಕೆಜಿ ಎಲ್​ಪಿಜಿ ಸಿಲಿಂಡರ್ ಬೆಲೆ ₹644ರಿಂದ ₹694ಕ್ಕೇರಿದೆ. ಜುಲೈ ತಿಂಗಳಲ್ಲಿ ₹594 ಆಗಿದ್ದ ಸಿಲಿಂಡರ್ ಬೆಲೆ ಡಿಸೆಂಬರ್ 1ರಂದು  ₹50 ಏರಿಕೆ ಆಗಿತ್ತು.

LPG ಸಿಲಿಂಡರ್​ಗೆ 50 ರೂಪಾಯಿ ಹೆಚ್ಚಳವಾಯ್ತು; ವಿಮಾನ ಇಂಧನ ಬೆಲೆಯೂ ಏರಿಕೆ
ಸಾಂದರ್ಭಿಕ ಚಿತ್ರ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ| Edited By: ಸಾಧು ಶ್ರೀನಾಥ್​|

Updated on: Dec 16, 2020 | 5:23 PM

Share

ನವದೆಹಲಿ: ಬುಧವಾರ ಎಲ್​ಪಿಜಿ ಸಿಲಿಂಡರ್ ದರ ₹50 ಏರಿಕೆಯಾಗಿದೆ. ತಿಂಗಳಲ್ಲಿ ಎರಡನೇ ಬಾರಿ ಅಡುಗೆ ಅನಿಲ ಬೆಲೆ ಏರಿಕೆ ಕಂಡಿದ್ದು, ವಿಮಾನ ಇಂಧನ ಬೆಲೆ ಶೇ. 6.3ರಷ್ಟು ಏರಿಕೆಯಾಗಿದೆ.

ಸಬ್ಸಿಡಿ ರಹಿತ 14.2 ಕೆಜಿ ಎಲ್​ಪಿಜಿ ಸಿಲಿಂಡರ್ ಬೆಲೆ ₹644ರಿಂದ ₹694ಕ್ಕೇರಿದೆ. ಜುಲೈ ತಿಂಗಳಲ್ಲಿ ₹594 ಆಗಿದ್ದ ಸಿಲಿಂಡರ್ ಬೆಲೆ ಡಿಸೆಂಬರ್ 1ರಂದು  ₹50 ಏರಿಕೆ ಆಗಿತ್ತು. ಸಬ್ಸಿಡಿ ಹೊಂದಿದ ಎಲ್​ಪಿಜಿ ಸಿಲಿಂಡರ್ ಕೂಡಾ ಇದೇ ಬೆಲೆಯಲ್ಲಿ ಮಾರಾಟವಾಗುತ್ತಿತ್ತು. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಕುಸಿತ ಮತ್ತು ರೀಫಿಲ್ ದರ ಏರಿಕೆಯಾದ ಕಾರಣ ಮೇ ತಿಂಗಳಿನಿಂದ ಗ್ರಾಹಕರಿಗೆ ಸಬ್ಸಿಡಿ ಸಿಕ್ಕಿರಲಿಲ್ಲ.

ದೆಹಲಿಯಲ್ಲಿ ಜೂನ್ 2019ರಲ್ಲಿ ಅಡುಗೆ ಸಬ್ಸಿಡಿ ಇರುವ ಎಲ್​ಪಿಜಿ ಸಿಲಿಂಡರ್ ಬೆಲೆ ₹497 ಆಗಿತ್ತು. ಆನಂತರ ಇಲ್ಲಿಯವರೆಗೆ ₹147 ಏರಿಕೆಯಾಗಿದೆ. ಆದಾಗ್ಯೂ, ಅನಿಲ ದರ ಹೆಚ್ಚಾಗಿರುವಾಗ ಸರ್ಕಾರ ಗ್ರಾಹಕರಿಗೆ ಸಬ್ಸಿಡಿ ಪಾವತಿಸಬೇಕಾಗುತ್ತದೆ. 15 ದಿನಗಳಿಗೊಮ್ಮೆ ಎಲ್ ಪಿಜಿ ದರವನ್ನು ಪರಿಷ್ಕರಿಸಲಾಗುತ್ತದೆ.

ಜೆಟ್ ಇಂಧನ ದರ ಏರಿಕೆ

ಜೆಟ್ ಇಂಧನ ದರವು 6.3 ಶೇ ಏರಿಕೆ ಆಗಿದೆ. ಅಂದರೆ ಕಿಲೊ ಲೀಟರ್​ಗೆ₹2,941.5. ದೆಹಲಿಯಲ್ಲಿ ಜೆಟ್ ಇಂಧನ ಬೆಲೆ ಕಿಲೋ ಲೀಟರ್​ಗೆ ₹49, 161.16 ಆಗಿದೆ. ಈ ತಿಂಗಳಲ್ಲಿ ಎರಡನೇ ಬಾರಿ ದರ ಏರಿಕೆಯಾಗಿದೆ.

ಎಲ್​ಪಿಜಿ ಸಿಲಿಂಡರ್​ಗೆ ಬೆಲೆ ಏರಿಕೆಯಾಗುವುದರ ಜತೆಗೆ 5 ಕೆಜಿ ಬಾಟಲ್ ಬೆಲೆ ₹18 ಮತ್ತು 19 ಕೆಜಿ ಸಿಲಿಂಡರ್ ಬೆಲೆ ₹36.50 ಏರಿಕೆಯಾಗಿದೆ.

ಭಾರತದಲ್ಲಿ ಗೃಹೋಪಯೋಗಕ್ಕಾಗಿ ವರ್ಷಕ್ಕೆ ಗರಿಷ್ಠ 12 ಎಲ್‌ಪಿಜಿ ಸಿಲಿಂಡರ್ ಖರೀದಿಗೆ ಸಬ್ಸಿಡಿ ದರದಲ್ಲಿ ಅವಕಾಶವಿದೆ. ಸಿಲಿಂಡರ್‌ಗಳನ್ನು ಖರೀದಿಸುವ ಸಮಯದಲ್ಲಿ ಪೂರ್ಣ ಬೆಲೆಗೆ ಖರೀದಿಸಬೇಕಾಗುತ್ತದೆ ಮತ್ತು ಸಬ್ಸಿಡಿಯನ್ನು ಸರ್ಕಾರವು ಗ್ರಾಹಕರ ಬ್ಯಾಂಕ್ ಖಾತೆಗೆ ಜಮೆ ಮಾಡುತ್ತದೆ.

ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್​ಗೆ ಈಗ ಕೋಲ್ಕತ್ತಾದಲ್ಲಿ ₹720.50 ಮುಂಬೈಯಲ್ಲಿ ₹694 ಮತ್ತು ಚೆನ್ನೈನಲ್ಲಿ ₹710 ಆಗಿದೆ. ಬೆಂಗಳೂರಿನಲ್ಲಿ ಎಲ್ ಪಿಜಿ ಸಿಲಿಂಡರ್ ಬೆಲೆ ₹697 ಆಗಿದೆ. ಸ್ಥಳೀಯ ಮಾರಾಟ ತೆರಿಗೆ ಅಥವಾ ವ್ಯಾಟ್‌ನ ಪ್ರಮಾಣವನ್ನು ಅವಲಂಬಿಸಿ ದರಗಳು ರಾಜ್ಯದಿಂದ ರಾಜ್ಯಕ್ಕೆ ಭಿನ್ನವಾಗಿರುತ್ತದೆ.

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್