Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶಗಳಿಗೆ ರಫ್ತಾಗುತ್ತಿದ್ದ ಕೆಮ್ಮಿನ ಸಿರಪ್​ಗಳಲ್ಲಿ ಅಪಾಯಕಾರಿ ರಾಸಾಯನಿಕಗಳು ಪತ್ತೆ; ಗುಜರಾತ್, ತಮಿಳುನಾಡಿನ ಔಷಧ ಘಟಕಗಳು ಸ್ಥಗಿತ

Substandard Cough Syrup Found In Gujarat and Tamil Nadu: ತಮಿಳುನಾಡು ಮತ್ತು ಗುಜರಾತ್‌ನ ಎರಡು ಔಷಧ ಕಂಪನಿಗಳ ಕೆಮ್ಮಿನ ಸಿರಪ್ ಮತ್ತು ಅಲರ್ಜಿ ನಿವಾರಕ ಸಿರಪ್​ಗಳಲ್ಲಿ ಅಪಾಯಕಾರಿ ರಾಸಾಯನಿಕ ಅಂಶಗಳು ಕಂಡುಬಂದಿವೆ. ಸರ್ಕಾರದ ವರದಿಯಲ್ಲಿ ಈ ಬೆಚ್ಚಿಬೀಳಿಸುವ ಅಂಶ ಹೊರಬಿದ್ದಿದೆ. ಗುಜರಾತ್‌ನ ಅಂಕಲೇಶ್ವರದಲ್ಲಿರುವ ನಾರಿಸ್ ಮೆಡಿಸಿನ್ಸ್​ನ ಘಟಕ ಹಾಗು ತಮಿಳುನಾಡಿನ ಫೋರ್ಟೆಸ್ ಲ್ಯಾಬ್​ನ ಘಟಕಗಳನ್ನು ಮುಚ್ಚಲು ತಿಳಿಸಲಾಗಿದೆ.

ವಿದೇಶಗಳಿಗೆ ರಫ್ತಾಗುತ್ತಿದ್ದ ಕೆಮ್ಮಿನ ಸಿರಪ್​ಗಳಲ್ಲಿ ಅಪಾಯಕಾರಿ ರಾಸಾಯನಿಕಗಳು ಪತ್ತೆ; ಗುಜರಾತ್, ತಮಿಳುನಾಡಿನ ಔಷಧ ಘಟಕಗಳು ಸ್ಥಗಿತ
ಕೆಮ್ಮಿನ ಸಿರಪ್
Follow us
TV9 Web
| Updated By: ಸುಗ್ಗನಹಳ್ಳಿ ವಿಜಯಸಾರಥಿ

Updated on: Oct 06, 2023 | 4:33 PM

ಅಹ್ಮದಾಬಾದ್, ಅಕ್ಟೋಬರ್ 6: ತಮಿಳುನಾಡು ಮತ್ತು ಗುಜರಾತ್‌ನ ಪ್ರಸಿದ್ಧ ಔಷಧ ಕಂಪನಿಗಳು ತಯಾರಿಸಿದ ಕೆಲ ಕೆಮ್ಮಿನ ಸಿರಪ್​ಗಳಲ್ಲಿ ಅಪಾಯಕಾರಿ ರಾಸಾಯನಿಕ ಅಂಶಗಳು (ವಿಷಕಾರಿ) ಕಂಡುಬಂದಿವೆ. ಸರ್ಕಾರಿ ವರದಿಯಲ್ಲಿ ಈ ಆಘಾತಕಾರಿ ಅಂಶ ಹೊರಬಿದ್ದಿದೆ. ಗುಜರಾತ್‌ನ ಅಂಕಲೇಶ್ವರದಲ್ಲಿರುವ ನಾರಿಸ್ ಮೆಡಿಸಿನ್ಸ್ ಕಂಪನಿಯ ಘಟಕ ಹಾಗು ತಮಿಳುನಾಡಿನಲ್ಲಿ ಮತ್ತೊಂದು ಕಂಪನಿಯ ಘಟಕದಲ್ಲಿ ತಯಾರಾದ ಕೆಮ್ಮಿನ ಸಿರಪ್​ಗಳು ಕಳಪೆಯಾಗಿರುವುದು ದೃಢಪಟ್ಟಿದೆ. ಕೇಂದ್ರೀಯ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ (CDSCO) ಇತ್ತೀಚೆಗೆ ಬಿಡುಗಡೆ ಮಾಡಿದ ವರದಿಯಲ್ಲಿ ಈ ಬಗ್ಗೆ ಮಾಹಿತಿ ಇದೆ.

ನಾರಿಸ್ ಮೆಡಿಸಿನ್ಸ್ ಕಂಪನಿಯ 1,166 ಕೆಮ್ಮಿನ ಸಿರಪ್​ಗಳನ್ನು ಆಯ್ದುಕೊಂಡು ಆಗಸ್ಟ್​ನಲ್ಲಿ ಸಿಡಿಎಸ್​ಸಿಒ ಪರೀಕ್ಷೆ ನಡೆಸಿತ್ತು. ಈ ಪೈಕಿ 48 ಸ್ಯಾಂಪಲ್​ಗಳಲ್ಲಿ ಡೈ ಎಥಿಲಿನ್ ಗ್ಲೈಕೋಲ್ (Diethylene glycol) ಮತ್ತು ಎಥಿಲಿನ್ ಗ್ಲೈಕೋಲ್ (ethylene glycol) ರಾಸಾಯನಿಕಗಳು ಅಪಾಯಕಾರಿ ಪ್ರಮಾಣದಲ್ಲಿ ಇರುವುದು ಪತ್ತೆಯಾಗಿದೆ.

ಗುಜರಾತ್​ನ ಭರೂಚ್ ಜಿಲ್ಲೆಯ ಅಂಕಲೇಶ್ವರದಲ್ಲಿರುವ ನಾರಿಸ್ ಮೆಡಿಸಿನ್ಸ್​ನ (Norris Medicines) ಘಟಕದಲ್ಲಿ ಸಿರಪ್ ಉತ್ಪಾದನೆ ನಿಲ್ಲಿಸಲು ಸೆಪ್ಟೆಂಬರ್ ತಿಂಗಳಲ್ಲೇ ತಿಳಿಸಲಾಗಿತ್ತು. ಇದೀಗ ಅಲ್ಲಿ ಉತ್ಪಾದನೆ ನಿಂತಿದೆ.

ಇದನ್ನೂ ಓದಿ: ಪಿಐಡಿ ಫಂಡ್ ಸ್ಕೀಮ್ ಅಡಿಯಲ್ಲಿ ಪಿಎಂ ವಿಶ್ವಕರ್ಮ ಯೋಜನೆ ಒಳಗೊಳ್ಳಲು ಆರ್​ಬಿಐ ನಿರ್ಧಾರ; ಸ್ಕೀಮ್ ಅವಧಿ 2 ವರ್ಷ ವಿಸ್ತರಣೆ

ಇನ್ನು, ತಮಿಳುನಾಡಿನ ಔಷಧ ಕಂಪನಿಯೊಂದರ ಕೋಲ್ಡ್ ಸಿರಪ್​ನ ಮೂರು ಬ್ಯಾಚ್​ಗಳ ಸ್ಯಾಂಪಲ್​ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಅದರಲ್ಲೂ ಡೈ ಎಥಿಲಿನ್ ಗ್ಲೈಕೋಲ್ ಮತ್ತು ಎಥಿಲಿನ್ ಗ್ಲೈಕೋಲ್ ರಾಸಾಯನಿಕಗಳು ಇರುವುದು ಬೆಳಕಿಗೆ ಬಂದಿತ್ತು.

ಕಳೆದ ತಿಂಗಳು ನಾರಿಸ್ ಮೆಡಿಸಿನ್ಸ್ ಲಿಮಿಟೆಡ್​ನ ಔಷಧ ತಪಾಸಣೆ ವೇಳೆ ವಿಷಕಾರಿ ರಾಸಾಯನಿಕಗಳು ಪತ್ತೆಯಾಗಿವೆ. ನಾರ್ರಿಸ್ ಕಾರ್ಖಾನೆಯನ್ನು ಪರಿಶೀಲಿಸಿ ಉತ್ಪಾದನೆಯನ್ನು ಸ್ಥಗಿತಗೊಳಿಸುವಂತೆ ಮತ್ತು ಔಷಧಗಳನ್ನು ಹಿಂಪಡೆಯುವಂತೆ ಆದೇಶ ನೀಡಿರುವುದಾಗಿ ಗುಜರಾತ್ ರಾಜ್ಯ ಆಹಾರ ಮತ್ತು ಔಷಧ ನಿಯಂತ್ರಣ ಆಡಳಿತ ಆಯುಕ್ತ ಎಚ್.ಜಿ.ಕೋಶಿಯಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಗುಣಮಟ್ಟದ ಪರೀಕ್ಷೆಯಲ್ಲಿ 48 ಔಷಧಿಗಳು ವಿಫಲ

ಗ್ಯಾಂಬಿಯಾ, ಉಜ್ಬೇಕಿಸ್ತಾನ್ ಮತ್ತು ಕ್ಯಾಮರೂನ್‌ನಲ್ಲಿ ಎಥಿಲೀನ್ ಗ್ಲೈಕೋಲ್ ಮತ್ತು ಡೈಎಥಿಲೀನ್ ಗ್ಲೈಕೋಲ್ ಅಂಶಗಳಿರುವ ಸಿರಪ್ ಸೇವನೆಯಿಂದ ಮಕ್ಕಳು ಸಾಯುತ್ತಿರುವ ಬಗ್ಗೆ ಹಿಂದೆ ವರದಿಗಳು ಬಂದಿರುವುದುಂಟು. ಇದರ ಬೆನ್ನಲ್ಲೇ ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಷನ್ (CDSCO) ಆಗಸ್ಟ್ ನಲ್ಲಿ ಒಟ್ಟು 1,166 ಸ್ಯಾಂಪಲ್ ಗಳನ್ನು ಪರೀಕ್ಷೆಗೆ ಒಳಪಡಿಸಿದ್ದು, ಈ ಪೈಕಿ 48 ಔಷಧ ಮಾದರಿಗಳು ಗುಣಮಟ್ಟದಿಂದ ಕೂಡಿಲ್ಲ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಸಹಕಾರಿ ಬ್ಯಾಂಕುಗಳಲ್ಲಿ ಚಿನ್ನದ ಮೇಲಿನ ಸಾಲದ ಮಿತಿ 4 ಲಕ್ಷಕ್ಕೆ ಹೆಚ್ಚಳ; ಆರ್​ಬಿಐ ಮಹತ್ವದ ನಿರ್ಧಾರ

ತಮಿಳುನಾಡಿನ ಫೋರ್ಟೆಸ್ ಲ್ಯಾಬ್​ನ ಕೆಮ್ಮಿನ ಸಿರಪ್

ಇದಲ್ಲದೆ, CDSCO ತಮಿಳುನಾಡಿನ ಫೋರ್ಟೆಸ್ ಲ್ಯಾಬೋರೇಟರೀಸ್ ತಯಾರಿಸಿದ ಕೋಲ್ಡ್ ಸಿರಪ್‌ನ ಮೂರು ಬ್ಯಾಚ್‌ಗಳ ವಿರುದ್ಧವೂ ಕ್ರಮ ಕೈಗೊಂಡಿದೆ. ಇರಾಕ್‌ನಲ್ಲಿ ಮಾರಾಟವಾಗುವ ಕೋಲ್ಡ್ ಔಟ್‌ಗಳ ಬ್ಯಾಚ್‌ಗಳು ಸ್ವೀಕಾರಾರ್ಹವಲ್ಲದ ಮಟ್ಟದ DEG ಮತ್ತು EG ಅನ್ನು ಒಳಗೊಂಡಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್