AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Income Tax Exemptions: ಕೊವಿಡ್​ ವೆಚ್ಚಕ್ಕೆ ಆದಾಯ ತೆರಿಗೆ ವಿನಾಯಿತಿ ಅಂದರೇನು? ಇಲ್ಲಿದೆ ಮಾಹಿತಿ

ಕೊವಿಡ್ ವೆಚ್ಚದ ಮೇಲೆ ಆದಾಯ ತೆರಿಗೆ ವಿನಾಯಿತಿ ಅಂದರೇನು? ಅದರ ಲೆಕ್ಕಾಚಾರ ಹೇಗೆ? ಇತ್ಯಾದಿ ವಿಚಾರಗಳ ಬಗ್ಗೆ ಆಸಕ್ತಿಕರವಾದ ಮಾಹಿತಿ ಇಲ್ಲಿದೆ.

Income Tax Exemptions: ಕೊವಿಡ್​ ವೆಚ್ಚಕ್ಕೆ ಆದಾಯ ತೆರಿಗೆ ವಿನಾಯಿತಿ ಅಂದರೇನು? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 26, 2021 | 4:21 PM

Share

ಕೇಂದ್ರ ಸರ್ಕಾರವು ಆದಾಯ ತೆರಿಗೆಯ ವಿವಿಧ ನಿಯಮಾವಳಿಗಳ ಗಡುವನ್ನು ಜೂನ್ 25ರ ಶುಕ್ರವಾರ ವಿಸ್ತರಣೆ ಮಾಡಲಾಗಿದೆ. ಆ ಪ್ರಕಾರ, ಉದ್ಯೋಗದಾತರಿಂದ ಉದ್ಯೋಗಿಗಳಿಗೆ ಕೊವಿಡ್-19 ಚಿಕಿತ್ಸೆಗೆ ನೀಡುವ ಮೊತ್ತಕ್ಕೆ ತೆರಿಗೆಯಿಂದ ವಿನಾಯಿತಿ ದೊರೆಯಲಿದೆ. ಕೊವಿಡ್- 19 ಸನ್ನಿವೇಶಕ್ಕೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಪರಿಹಾರ ಒದಗಿಸಲಾಗುತ್ತದೆ. ಒಂದು ವೇಳೆ ಉದ್ಯೋಗಿ ಕೊರೊನಾ ಕಾರಣಕ್ಕೆ ಮೃತಪಟ್ಟು, ಮೃತ ವ್ಯಕ್ತಿಯ ಕುಟುಂಬಸ್ಥರಿಗೆ ಕಂಪೆನಿಗಳಿಂದ ನೀಡುವ ಪರಿಹಾರಕ್ಕೆ ತೆರಿಗೆಯಿಂದ ವಿನಾಯಿತಿ ಸಿಗುತ್ತದೆ ಎಂದು ಹಣಕಾಸು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಲಾಗಿದೆ. ಈ ಘೋಷಣೆಯಂತೆ, ಒಬ್ಬ ವ್ಯಕ್ತಿಯು ಉದ್ಯೋಗಿಯ ಕೊವಿಡ್ ಚಿಕಿತ್ಸೆಗೆ ಮಾಡುವ ವೆಚ್ಚವು ತೆರಿಗೆಯಿಂದ ಮುಕ್ತವಾಗಿದೆ. ಜತೆಗೆ ಒಬ್ಬ ವ್ಯಕ್ತಿಯು ಚಿಕಿತ್ಸೆಗೆ ಪಾವತಿಸುವ ವೆಚ್ಚವು ಮತ್ತು ಆ ಪಾವತಿಯ ಫಲಾನುಭವಿಗಳಿಗೆ ಯಾವುದೇ ತೆರಿಗೆ ಜವಾಬ್ದಾರಿ ಬರುವುದಿಲ್ಲ. ಹಲವು ತೆರಿಗೆದಾರರಿಗೆ ತಮ್ಮ ಉದ್ಯೋಗದಾತರು ಅಥವಾ ಹಿತೈಷಿಗಳ ಮೂಲಕವಾಗಿ ಕೊವಿಡ್- 19 ಚಿಕಿತ್ಸೆಗೆ ಹಣಕಾಸಿನ ನೆರವು ಪಡೆದಿದ್ದಾರೆ. ಹೀಗೆ ಉದ್ಯೋಗದಾತರು ಅಥವಾ ಯಾವುದೇ ವ್ಯಕ್ತಿಯಿಂದ ಹಣ ಪಡೆದುಕೊಂಡಿದ್ದರೂ ಆ ಮೊತ್ತಕ್ಕೆ ತೆರಿಗೆ ವಿನಾಯಿತಿ ಸಿಗುತ್ತದೆ ಎಂದು ಹೇಳಲಾಗಿದೆ.

ಕೊವಿಡ್- 19ನಿಂದ ಮೃತಪಟ್ಟ ಉದ್ಯೋಗಿಗಳ ಕುಟುಂಬಸ್ಥರಿಗೆ ಉದ್ಯೋಗದಾತರು ಹಣಕಾಸು ನೆರವು ನೀಡುತ್ತಿದ್ದಾರೆ. ದುಡಿಯುವ ಕುಟುಂಬ ಸದಸ್ಯರ ದಿಢೀರ್ ಸಾವಿನ ಕಷ್ಟದ ಸಂದರ್ಭದಲ್ಲಿ ಸಹಾಯ ಹಸ್ತ ಚಾಚಲು ಮುಂದಾಗಿದ್ದಾರೆ. ಕುಟುಂಬ ಸದಸ್ಯರಿಗೆ ಇನ್ನಷ್ಟು ನೆರವಾಗಬೇಕು ಎಂಬ ಕಾರಣಕ್ಕೆ ಹಣಕಾಸಿನ ನೆರವಿನ ಮೊತ್ತದ ಮೇಲೆ ಆದಾಯ ತೆರಿಗೆಯಲ್ಲಿ ಸರ್ಕಾರದಿಂದ ವಿನಾಯಿತಿ ಘೋಷಿಸಲಾಗಿದೆ. ಉದ್ಯೋಗದಾತರಿಂದ ಬರುವ ನೆರವಿನ ಮೊತ್ತಕ್ಕೆ ಯಾವುದೇ ಮಿತಿಯಿಲ್ಲ. ಆದರೆ ಇತರ ವ್ಯಕ್ತಿಗಳಿಂದ ಪಡೆವ ಮೊತ್ತಕ್ಕೆ 10 ಲಕ್ಷ ರೂಪಾಯಿಯ ಸರಾಸರಿಯ ಮಿತಿ ಇದೆ.

ಕೊರೊನಾ ಬಿಕ್ಕಟ್ಟು ಇರುವುದರಿಂದ ತೆರಿಗೆ ವಿನಾಯಿತಿಯನ್ನು ಹೊರತುಪಡಿಸಿದಂತೆ, ತೆರಿಗೆ ನಿಯಮಾವಳಿಗಳ ಗಡುವನ್ನು ವಿಸ್ತರಿಸಲಾಗಿದೆ. ಇನ್ನು ಪ್ಯಾನ್ ಕಾರ್ಡ್ ಜತೆಗೆ ಆಧಾರ್ ಜೋಡಣೆ ಮಾಡುವ ಅವಧಿಯನ್ನು ಸೆಪ್ಟೆಂಬರ್ 30, 2021ರ ತನಕ ವಿಸ್ತರಿಸಲಾಗಿದೆ. ಮೂರನೇ ಬಾರಿಗೆ ಈ ಜೋಡಣೆ ಮುಂದೂಡಲಾಗಿದೆ. ಟಿಡಿಎಸ್ ರಿಟರ್ನ್ ಅಥವಾ ಟ್ಯಾಕ್ಸ್ ಡಿಡಕ್ಟಡ್ ಅಟ್ ಸೋರ್ಸ್ ರಿಟರ್ನ್ ಫೈಲ್ ಮಾಡುವುದಕ್ಕೆ ಕೊನೆ ದಿನವನ್ನು ಜೂನ್ 30ರಿಂದ ಜುಲೈ 31, 2021ಕ್ಕೆ ವಿಸ್ತರಣೆ ಆಗಿದೆ.

ಇದನ್ನೂ ಓದಿ: Tax free interest income: ಈ ಐದು ಹೂಡಿಕೆಗಳ ಮೇಲಿನ ಬಡ್ಡಿ ಆದಾಯಕ್ಕೆ ಯಾವುದೇ ತೆರಿಗೆ ಇಲ್ಲ ಎಂಬ ಸಂಗತಿ ಗೊತ್ತೆ?

(Personal finance: How covid- 19 expenses treated under Income Tax? Here is an explainer)

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ