AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್- 19ನಿಂದ ಮೃತಪಟ್ಟ ಸಿಬ್ಬಂದಿ ಕುಟುಂಬಕ್ಕೆ 2 ವರ್ಷ ವೇತನ, ಮಕ್ಕಳಿಗೆ ಉಚಿತ ಶಿಕ್ಷಣ ಘೋಷಿಸಿದ ಬೋರೋಸಿಲ್

ಕೋವಿಡ್ 19ಗೆ ಸಿಬ್ಬಂದಿ ಬಲಿಯಾದರೆ ಅವರ ಕುಟುಂಬಕ್ಕೆ ಎರಡು ವರ್ಷ ವೇತನ, ಸಿಬ್ಬಂದಿಯ ಮಕ್ಕಳಿಗೆ ಪದವಿ ಹಂತದ ತನಕ ಶಿಕ್ಷಣ ಕೊಡಿಸುವುದಾಗಿ ಬೋರೋಸಿಲ್ ಲಿಮಿಟೆಡ್ ಮತ್ತು ಬೋರೋಸಿಲ್ ರಿನೀವಬಲ್ಸ್​ ಘೋಷಿಸಿದೆ.

ಕೋವಿಡ್- 19ನಿಂದ ಮೃತಪಟ್ಟ ಸಿಬ್ಬಂದಿ ಕುಟುಂಬಕ್ಕೆ 2 ವರ್ಷ ವೇತನ, ಮಕ್ಕಳಿಗೆ ಉಚಿತ ಶಿಕ್ಷಣ ಘೋಷಿಸಿದ ಬೋರೋಸಿಲ್
ಪ್ರಾತಿನಿಧಿಕ ಚಿತ್ರ
Srinivas Mata
|

Updated on: May 01, 2021 | 1:39 PM

Share

ಬೋರೋಸಿಲ್ ಲಿಮಿಟೆಡ್ ಮತ್ತು ಬೋರೋಸಿಲ್ ರಿನೀವಬಲ್ಸ್​ನಿಂದ ಘೋಷಣೆಯೊಂದನ್ನು ಮಾಡಿದ್ದು, ಒಂದು ವೇಳೆ ಸಿಬ್ಬಂದಿಯು ಕೋವಿಡ್-19ನಿಂದ ಮೃತಪಟ್ಟಲ್ಲಿ, ಆತನ ಅಥವಾ ಆಕೆಯ ಕುಟುಂಬಕ್ಕೆ ಮುಂದಿನ ಎರಡು ವರ್ಷಗಳ ಕಾಲ ವೇತನ ನೀಡಲಾಗುವುದು. ಇದರ ಜತೆಗೆ ಸಿಬ್ಬಂದಿಗೆ ಏನೆಲ್ಲ ಹೆಚ್ಚುವರಿ ಅನುಕೂಲಗಳು ದೊರೆಯುತ್ತಿತ್ತೋ ಅವೆಲ್ಲಕ್ಕೂ ಕುಟುಂಬದವರು ಸಹ ಅರ್ಹರಾಗುತ್ತಾರೆ. ಲಿಂಕ್ಡ್​ಇನ್ ಪೋಸ್ಟ್​ನಲ್ಲಿ ಬೋರೋಸಿಲ್ ಲಿಮಿಟೆಡ್​ನ ಮಾರ್ಕೆಟಿಂಗ್ ಮುಖ್ಯಸ್ಥ ಸ್ವಪ್ನಿಲ್ ವಲುಂಜ್ ಈ ಬಗ್ಗೆ ತಿಳಿಸಿದ್ದಾರೆ. ಇನ್ನು ಇವೆಲ್ಲದರ ಜತೆಗೆ ಸಿಬ್ಬಂದಿಯ ಮಕ್ಕಳ ಶಿಕ್ಷಣದ ಹೊಣೆಯನ್ನು ಪದವಿ ಹಂತದ ತನಕ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

ಕೋವಿಡ್-19 ಬಿಕ್ಕಟ್ಟಿನಿಂದ ಸಂಕಷ್ಟಕ್ಕೆ ಈಡಾದ ಸಿಬ್ಬಂದಿ ಮತ್ತು ಅವರ ಕುಟುಂಬದವರಿಗಾಗಿ ಹಲವು ಕಂಪೆನಿಗಳು ವಿವಿಧ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿವೆ. ಏಪ್ರಿಲ್ 30ರಂದು ಅರ್ಬನ್ ಕಂಪೆನಿಯಿಂದ ಅಗರ್ವಾಲ್ ಅವರ ಸ್ಮರಣೆಯಲ್ಲಿ ಮೋಹಿತ್ ಅಗರ್ವಾಲ್ ಕೋವಿಡ್ ಪರಿಹಾರ ನಿಧಿ ಎಂಬುದನ್ನು ಆರಂಭಿಸಿದೆ. ಅಂದಹಾಗೆ ಮೋಹಿತ್ ಕಂಪೆನಿಯ ಡೈರೆಕ್ಟರ್ ಆಫ್ ಎಂಜಿನಿಯರಿಂಗ್ ಆಗಿದ್ದರು. ಕೋವಿಡ್- 19 ಕಾರಣಕ್ಕೆ ಅವರು ನಿಧನರಾದರು.

ಭಾರತದಾದ್ಯಂತ ಕೊರೊನಾ ಎರಡನೇ ಅಲೆಯ ಪರಿಣಾಮವಾಗಿ ದಿನದಿನಕ್ಕೂ ಸೋಂಕು ಪ್ರಕರಣಗಳು ಹೆಚ್ಚುತ್ತಲೇ ಇವೆ. ವೈದ್ಯಕೀಯ ಆಕ್ಸಿಜನ್ ಕೊರತೆ ಮತ್ತು ಆಸ್ಪತ್ರೆಗಳಲ್ಲಿ ಬೆಡ್​ಗಳಿಗೆ ಕೊರತೆ ಪ್ರಮುಖವಾಗಿ ಕಾಡುತ್ತಿದೆ. ಸ್ಥಳೀಯವಾಗಿ ಹಲವು ರಾಜ್ಯಗಳಲ್ಲಿ ಲಾಕ್​ಡೌನ್ ಘೋಷಣೆ ಮಾಡಲಾಗಿದೆ ಹಾಗೂ ಜತೆಗೆ ಲಸಿಕೆ ಹಾಕುವ ಪ್ರಮಾಣಕ್ಕೆ ವೇಗ ನೀಡಲಾಗಿದೆ. ಇಷ್ಟೆಲ್ಲ ಆದ ನಂತರವೂ ಪರಿಸ್ಥಿತಿ ದಿನದಿನಕ್ಕೂ ಬಿಗಡಾಯಿಸುತ್ತಿದೆ. ಈ ಹಿನ್ನೆಲೆಯಲ್ಲಿ ಹಲವು ಕಂಪೆನಿಗಳು ಸಿಬ್ಬಂದಿಗೆ ವಿವಿಧ ಯೋಜನೆಗಳ ಘೋಷಣೆ ಮಾಡುತ್ತಿವೆ.

ಇದನ್ನೂ ಓದಿ: 7 changes from May: ಮೇ ತಿಂಗಳ ಮೊದಲ ದಿನದಿಂದ ಈ 7 ಬದಲಾವಣೆಗಳನ್ನು ನಿರೀಕ್ಷಿಸಿ, ಸಿದ್ಧರಾಗಿ

(Borosil Company and Borosil Renewables ltd announced covid- 19 relief for employees and their families)

Follow Us
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್