AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Central Vista: ಪ್ರಧಾನಿ ಕಾರ್ಯಾಲಯ ಸೇರಿ ಪ್ರಮುಖ ಕಚೇರಿಗಳ ನಿರ್ಮಾಣ ಹೊಣೆ ಎಲ್​&ಟಿಗೆ

ಪ್ರಧಾನಿ ಕಾರ್ಯಾಲಯ ಸೇರಿ ಪ್ರಮುಖ ಕಚೇರಿಗಳ ಸಂಕೀರ್ಣದ ನಿರ್ಮಾಣ ಗುತ್ತಿಗೆಯನ್ನು ಎಲ್​&ಟಿಗೆ ನೀಡಲಾಗಿದೆ ಎಂದು ಕೇಂದ್ರ ಲೋಕೋಪಯೋಗಿ ಇಲಾಖೆ ಗುರುವಾರ ಟ್ವೀಟ್ ಮೂಲಕ ಮಾಹಿತಿ ನೀಡಿದೆ.

Central Vista: ಪ್ರಧಾನಿ ಕಾರ್ಯಾಲಯ ಸೇರಿ ಪ್ರಮುಖ ಕಚೇರಿಗಳ ನಿರ್ಮಾಣ ಹೊಣೆ ಎಲ್​&ಟಿಗೆ
ಸೆಂಟ್ರಲ್ ವಿಸ್ತಾ
Follow us
TV9 Web
| Updated By: Ganapathi Sharma

Updated on:Nov 25, 2022 | 3:42 PM

ನವದೆಹಲಿ: ನೂತನ ಸಂಸತ್ ಭವನ ನಿರ್ಮಾಣ ಯೋಜನೆ ಸೆಂಟ್ರಲ್ ವಿಸ್ತಾದಡಿ (Central Vista) ಪ್ರಧಾನಮಂತ್ರಿಗಳ ಕಾರ್ಯಾಲಯ (PMO), ಕ್ಯಾಬಿನೆಟ್ ಸೆಕ್ರೆಟರಿಯೇಟ್​ ಮತ್ತು ಇತರ ಪ್ರಮುಖ ಕಚೇರಿಗಳ ಸಂಕೀರ್ಣದ ನಿರ್ಮಾಣ ಗುತ್ತಿಗೆಯನ್ನು ನಿರ್ಮಾಣ ಮತ್ತು ಎಂಜಿನಿಯರಿಂಗ್ ಕಂಪನಿ ಎಲ್​&ಟಿಗೆ (Larsen & Toubro) ನೀಡಲಾಗಿದೆ. ಸಂಕೀರ್ಣವನ್ನು 1,189 ಕೋಟಿ ರೂ. ಮೊತ್ತದಲ್ಲಿ ನಿರ್ಮಾಣ ಮಾಡಲಾಗುತ್ತದೆ ಎಂದು ಕೇಂದ್ರ ಲೋಕೋಪಯೋಗಿ ತಿಳಿಸಿದೆ.

ನಿರ್ಮಾಣ ಗುತ್ತಿಗೆಯನ್ನು ಎಲ್​&ಟಿಗೆ ನೀಡಿರುವ ಬಗ್ಗೆ ಕೇಂದ್ರ ಲೋಕೋಪಯೋಗಿ ಇಲಾಖೆ ಗುರುವಾರ ಟ್ವೀಟ್ ಮೂಲಕ ಮಾಹಿತಿ ನೀಡಿದೆ. ಪ್ರಧಾನಿ ಕಾರ್ಯಾಲಯ ಸೇರಿ ಪ್ರಮುಖ ಕಚೇರಿಗಳ ಸಂಕೀರ್ಣದ ನಿರ್ಮಾಣ ಗುತ್ತಿಗೆಯನ್ನು ಎಲ್​&ಟಿಗೆ ನೀಡಲಾಗಿದೆ. ಅಂದಾಜು ವೆಚ್ಚಕ್ಕಿಂತ ಶೇಕಡಾ 10.44ರಷ್ಟು ಕಡಿಮೆ ಮೊತ್ತಕ್ಕೆ, ಅಂದರೆ 1,189 ಕೋಟಿ ರೂ.ಗೆ ನವೆಂಬರ್ 15ರಂದು ಗುತ್ತಿಗೆ ನೀಡಲಾಗಿದೆ. ಎರಡು ವರ್ಷಗಳ ಒಳಗಾಗಿ ಕಾಮಗಾರಿ ಮುಕ್ತಾಯಗೊಳಿಸಬೇಕಿದೆ ಎಂದು ಟ್ವೀಟ್​ನಲ್ಲಿ ಉಲ್ಲೇಖಿಸಲಾಗಿದೆ.

ಕಚೇರಿಗಳ ಸಂಕೀರ್ಣದಲ್ಲಿ ರಾಷ್ಟ್ರೀಯ ಭದ್ರತಾ ಮಂಡಳಿ ಕಚೇರಿ ಮತ್ತು ‘ಇಂಡಿಯಾ ಹೌಸ್’ ಇರಲಿದೆ ಎನ್ನಲಾಗಿದೆ. ಹೈದರಾಬಾದ್ ಹೌಸ್ ಮಾದರಿಯಲ್ಲಿ ಉನ್ನತ ಮಟ್ಟದ ಮಾತುಕತೆಗಳಿಗೆ ‘ಇಂಡಿಯಾ ಹೌಸ್’ ಅನ್ನು ಬಳಸಲಾಗುವುದು. ವಿಶೇಷವಾಗಿ ಉನ್ನತ ಮಟ್ಟದ ವಿದೇಶಿ ನಾಯಕರ ಭೇಟಿ ವೇಳೆ ಮಾತುಕತೆಗೆ ಬಳಸಲಾಗುವುದು ಎಂದು ‘ಎಕನಾಮಿಕ್ ಟೈಮ್ಸ್’ ವರದಿ ಮಾಡಿದೆ.

ನೂತನ ಸಂಸತ್ ಭವನದ ನಿರ್ಮಾಣದ ಗುತ್ತಿಗೆಯನ್ನು ಟಾಟಾ ಪ್ರಾಜೆಕ್ಟ್ಸ್ ಲಿಮಿಟೆಡ್‌ ಈಗಾಗಲೇ ಪಡೆದುಕೊಂಡಿದೆ. 64,500 ಚದರ ಮೀಟರ್‌ ವಿಸ್ತೀಣರ್ಣದಲ್ಲಿ ಹೊಸ ಸಂಸತ್ ಭವನ ನಿರ್ಮಾಣವಾಗಲಿದ್ದು, 2020ರಲ್ಲಿ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಿದ್ದರು. ದೆಹಲಿಯ ವಿಜಯ್ ಚೌಕ್ ಮತ್ತು ಮಾನ್ಸಿಂಗ್ ರಸ್ತೆ ನಡುವಿನ ವಿಸ್ತರಿತ ರಾಜಪಥ ‘ದಿ ಸೆಂಟ್ರಲ್ ವಿಸ್ಟಾ ಅವೆನ್ಯೂ’ ಅನ್ನು ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್​ನಲ್ಲಿ ಉದ್ಘಾಟಿಸಿದ್ದರು. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಇದಾಗಿದ್ದು, ಆರಂಭದಲ್ಲಿ ಪ್ರತಿಪಕ್ಷಗಳಿಂದ ವಿರೋಧವೂ ವ್ಯಕ್ತವಾಗಿತ್ತು. ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ‘ಸೆಂಟ್ರಲ್ ವಿಸ್ತಾ’ಕ್ಕೆ ಅಪಾರ ಪ್ರಮಾಣದಲ್ಲಿ ಹಣ ಖರ್ಚು ಮಾಡುವ ಬಗ್ಗೆ ವಿರೋಧ ಪಕ್ಷಗಳು ತಗಾದೆ ತೆಗೆದಿದ್ದವು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:39 pm, Fri, 25 November 22

ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ