AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Russia- Ukraine Crisis: ರಷ್ಯಾ- ಉಕ್ರೇನ್​ ಬಿಕ್ಕಟ್ಟಿನ ಮಧ್ಯೆ ಕಚ್ಚಾ ತೈಲ ಬ್ಯಾರಲ್​ಗೆ 10 ಯುಎಸ್​ಡಿಗೂ ಜಾಸ್ತಿ ಹೆಚ್ಚಳ

ರಷ್ಯಾ- ಉಕ್ರೇನ್ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಮಾರ್ಚ್ 7ನೇ ತಾರೀಕಿನ ಸೋಮವಾರದ ಒಂದೇ ದಿನ ಪ್ರತಿ ಬ್ಯಾರೆಲ್​​ಗೆ 10 ಯುಎಸ್​ಡಿಗೂ ಹೆಚ್ಚಾಗಿದೆ.

Russia- Ukraine Crisis: ರಷ್ಯಾ- ಉಕ್ರೇನ್​ ಬಿಕ್ಕಟ್ಟಿನ ಮಧ್ಯೆ ಕಚ್ಚಾ ತೈಲ ಬ್ಯಾರಲ್​ಗೆ 10 ಯುಎಸ್​ಡಿಗೂ ಜಾಸ್ತಿ ಹೆಚ್ಚಳ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Mar 07, 2022 | 11:41 AM

Share

ಉಕ್ರೇನ್- ರಷ್ಯಾ ಬಿಕ್ಕಟ್ಟು (Russia- Ukraine Crisis) ತೀವ್ರಗೊಳ್ಳುತ್ತಿದ್ದಂತೆ ಮಾರ್ಚ್ 7ನೇ ತಾರೀಕಿನ ಸೋಮವಾರದಂದು ಪ್ರತಿ ಬ್ಯಾರೆಲ್​ಗೆ ತೈಲ ಬೆಲೆ 10 ಯುಎಸ್​ಡಿಗೂ ಹೆಚ್ಚು ಮೇಲೇರಿದೆ. ರಷ್ಯಾದ ಮೇಲೆ ಮತ್ತಷ್ಟು ಕಠಿಣ ನಿರ್ಬಂಧಗಳನ್ನು ಹೇರಬೇಕು ಎಂಬ ಕರೆ ವ್ಯಾಪಕ ಆಗುತ್ತಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಆಗಿದೆ. ಸೋಮವಾರ ದಿನದ ಆರಂಭದಲ್ಲಿ ಬ್ರೆಂಟ್ ಕಚ್ಚಾ ತೈಲ 10 ಯುಎಸ್​ಡಿಗೂ ಹೆಚ್ಚು ಜಿಗಿತ ಕಂಡು, 130 ಯುಎಸ್​ಡಿ ಸಮೀಪ ಮುಟ್ಟಿತು. ಯು.ಎಸ್. ಕಚ್ಚಾ ತೈಲ ಬೆಂಚ್​ಮಾರ್ಕ್ 9 ಯುಎಸ್​ಡಿಗೂ ಜಾಸ್ತಿ ಮೇಲೇರಿ, ಈಗ ಬ್ಯಾರಲ್​ಗೆ 124 ಡಾಲರ್​ಗೂ ಹೆಚ್ಚಿನ ದರದಲ್ಲಿದೆ. ರಷ್ಯಾದ ಪಡೆಗಳು ಆಯಕಟ್ಟಿನ ಸ್ಥಳಗಳನ್ನು ವಶಕ್ಕೆ ಪಡೆದಿರುವುದರಿಂದ ಉಕ್ರೇನ್​ನ ದೇಶದ ಸ್ಥಾನಮಾನ ಅಪಾಯದಲ್ಲಿದೆ ಎಂದು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಎಚ್ಚರಿಕೆ ನಂತರ ಈ ಹೆಚ್ಚಳ ಆಗಿದೆ.

ಉಕ್ರೇನ್​ನ ಎರಡು ನಗರಗಳಲ್ಲಿ ತಾತ್ಕಾಲಿಕ ಕದನ ವಿರಾಮ ಘೋಷಣೆಯು ವಿಫಲವಾಗಿದೆ. ಇದು ಎರಡೂ ಕಡೆಯಿಂದ ಪರಸ್ಪರ ನಿಂದೆಗೆ ಕಾರಣ ಆಗಿದೆ. ಇನ್ನು, ಜಾಗತಿಕ ಆರ್ಥಿಕತೆಯಿಂದ ರಷ್ಯಾವನ್ನು ಮತ್ತಷ್ಟು ಏಕಾಂಗಿ ಮಾಡುವುದಕ್ಕೆ ಅಮೆರಿಕದ ಹೌಸ್ ಆಫ್ ರೆಪ್ರಸೆಂಟೇಟಿವ್ಸ್ (ಜನ ಪ್ರತಿನಿಧಿಗಳ ಸಭೆ) ಹೊಸ ಕಾನೂನು ಜಾರಿಗೆ ತರಲು ಹೊರಟಿರುವ ಬಗ್ಗೆ ಸ್ಪೀಕರ್ ನ್ಯಾನ್ಸಿ ಪೆಲೋಸಿ ಮಾತನಾಡಿದ್ದಾರೆ. ರಷ್ಯಾದ ತೈಲ, ಇಂಧನ ಉತ್ಪನ್ನಗಳ ಆಮದನ್ನು ಸಹ ಅಮೆರಿಕದೊಳಗೆ ಬಾರದಂತೆ ನಿಷೇಧಿಸಲು ಉದ್ದೇಶಿಸಿರುವ ಕಾನೂನು ಅದು.

ಇದೇ ವೇಳೆ ಅಮೆರಿಕದಲ್ಲಿ ಗ್ಯಾಸೋಲಿನ್ ಬೆಲೆಯು ಏರಿಕೆ ಆಗುತ್ತಲೇ ಇದೆ. ಅಮೆರಿಕದ ಅಧ್ಯಕ್ಷ ಜೋ ಬೈಡನ್ ನೇತೃತ್ವದ ಸರ್ಕಾರವು ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುವ ವಿಚಾರದಲ್ಲಿ ಇನ್ನೂ ನಿರ್ಧಾರ ಕೈಗೊಳ್ಳಬೇಕಿದೆ. ಇತ್ತ ಭಾರತದಲ್ಲಿ ಕೂಡ ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆ ಆಗುವ ನಿರೀಕ್ಷೆ ವ್ಯಾಪಕವಾಗಿದೆ.

ಇದನ್ನೂ ಓದಿ: Petrol- Diesel Price: ಮುಂದಿನ ವಾರ ತೈಲ ದರ ಪರಿಷ್ಕರಣೆ ಶುರು; ಲೀಟರ್​ ಪೆಟ್ರೋಲ್ ರೂ. 175 ಆದರೂ ಅಚ್ಚರಿಯಿಲ್ಲ

Follow Us
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ