AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Russia- Ukraine Crisis: ರಷ್ಯಾ- ಉಕ್ರೇನ್​ ಬಿಕ್ಕಟ್ಟಿನ ಮಧ್ಯೆ ಕಚ್ಚಾ ತೈಲ ಬ್ಯಾರಲ್​ಗೆ 10 ಯುಎಸ್​ಡಿಗೂ ಜಾಸ್ತಿ ಹೆಚ್ಚಳ

ರಷ್ಯಾ- ಉಕ್ರೇನ್ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಮಾರ್ಚ್ 7ನೇ ತಾರೀಕಿನ ಸೋಮವಾರದ ಒಂದೇ ದಿನ ಪ್ರತಿ ಬ್ಯಾರೆಲ್​​ಗೆ 10 ಯುಎಸ್​ಡಿಗೂ ಹೆಚ್ಚಾಗಿದೆ.

Russia- Ukraine Crisis: ರಷ್ಯಾ- ಉಕ್ರೇನ್​ ಬಿಕ್ಕಟ್ಟಿನ ಮಧ್ಯೆ ಕಚ್ಚಾ ತೈಲ ಬ್ಯಾರಲ್​ಗೆ 10 ಯುಎಸ್​ಡಿಗೂ ಜಾಸ್ತಿ ಹೆಚ್ಚಳ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Mar 07, 2022 | 11:41 AM

Share

ಉಕ್ರೇನ್- ರಷ್ಯಾ ಬಿಕ್ಕಟ್ಟು (Russia- Ukraine Crisis) ತೀವ್ರಗೊಳ್ಳುತ್ತಿದ್ದಂತೆ ಮಾರ್ಚ್ 7ನೇ ತಾರೀಕಿನ ಸೋಮವಾರದಂದು ಪ್ರತಿ ಬ್ಯಾರೆಲ್​ಗೆ ತೈಲ ಬೆಲೆ 10 ಯುಎಸ್​ಡಿಗೂ ಹೆಚ್ಚು ಮೇಲೇರಿದೆ. ರಷ್ಯಾದ ಮೇಲೆ ಮತ್ತಷ್ಟು ಕಠಿಣ ನಿರ್ಬಂಧಗಳನ್ನು ಹೇರಬೇಕು ಎಂಬ ಕರೆ ವ್ಯಾಪಕ ಆಗುತ್ತಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಆಗಿದೆ. ಸೋಮವಾರ ದಿನದ ಆರಂಭದಲ್ಲಿ ಬ್ರೆಂಟ್ ಕಚ್ಚಾ ತೈಲ 10 ಯುಎಸ್​ಡಿಗೂ ಹೆಚ್ಚು ಜಿಗಿತ ಕಂಡು, 130 ಯುಎಸ್​ಡಿ ಸಮೀಪ ಮುಟ್ಟಿತು. ಯು.ಎಸ್. ಕಚ್ಚಾ ತೈಲ ಬೆಂಚ್​ಮಾರ್ಕ್ 9 ಯುಎಸ್​ಡಿಗೂ ಜಾಸ್ತಿ ಮೇಲೇರಿ, ಈಗ ಬ್ಯಾರಲ್​ಗೆ 124 ಡಾಲರ್​ಗೂ ಹೆಚ್ಚಿನ ದರದಲ್ಲಿದೆ. ರಷ್ಯಾದ ಪಡೆಗಳು ಆಯಕಟ್ಟಿನ ಸ್ಥಳಗಳನ್ನು ವಶಕ್ಕೆ ಪಡೆದಿರುವುದರಿಂದ ಉಕ್ರೇನ್​ನ ದೇಶದ ಸ್ಥಾನಮಾನ ಅಪಾಯದಲ್ಲಿದೆ ಎಂದು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಎಚ್ಚರಿಕೆ ನಂತರ ಈ ಹೆಚ್ಚಳ ಆಗಿದೆ.

ಉಕ್ರೇನ್​ನ ಎರಡು ನಗರಗಳಲ್ಲಿ ತಾತ್ಕಾಲಿಕ ಕದನ ವಿರಾಮ ಘೋಷಣೆಯು ವಿಫಲವಾಗಿದೆ. ಇದು ಎರಡೂ ಕಡೆಯಿಂದ ಪರಸ್ಪರ ನಿಂದೆಗೆ ಕಾರಣ ಆಗಿದೆ. ಇನ್ನು, ಜಾಗತಿಕ ಆರ್ಥಿಕತೆಯಿಂದ ರಷ್ಯಾವನ್ನು ಮತ್ತಷ್ಟು ಏಕಾಂಗಿ ಮಾಡುವುದಕ್ಕೆ ಅಮೆರಿಕದ ಹೌಸ್ ಆಫ್ ರೆಪ್ರಸೆಂಟೇಟಿವ್ಸ್ (ಜನ ಪ್ರತಿನಿಧಿಗಳ ಸಭೆ) ಹೊಸ ಕಾನೂನು ಜಾರಿಗೆ ತರಲು ಹೊರಟಿರುವ ಬಗ್ಗೆ ಸ್ಪೀಕರ್ ನ್ಯಾನ್ಸಿ ಪೆಲೋಸಿ ಮಾತನಾಡಿದ್ದಾರೆ. ರಷ್ಯಾದ ತೈಲ, ಇಂಧನ ಉತ್ಪನ್ನಗಳ ಆಮದನ್ನು ಸಹ ಅಮೆರಿಕದೊಳಗೆ ಬಾರದಂತೆ ನಿಷೇಧಿಸಲು ಉದ್ದೇಶಿಸಿರುವ ಕಾನೂನು ಅದು.

ಇದೇ ವೇಳೆ ಅಮೆರಿಕದಲ್ಲಿ ಗ್ಯಾಸೋಲಿನ್ ಬೆಲೆಯು ಏರಿಕೆ ಆಗುತ್ತಲೇ ಇದೆ. ಅಮೆರಿಕದ ಅಧ್ಯಕ್ಷ ಜೋ ಬೈಡನ್ ನೇತೃತ್ವದ ಸರ್ಕಾರವು ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುವ ವಿಚಾರದಲ್ಲಿ ಇನ್ನೂ ನಿರ್ಧಾರ ಕೈಗೊಳ್ಳಬೇಕಿದೆ. ಇತ್ತ ಭಾರತದಲ್ಲಿ ಕೂಡ ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆ ಆಗುವ ನಿರೀಕ್ಷೆ ವ್ಯಾಪಕವಾಗಿದೆ.

ಇದನ್ನೂ ಓದಿ: Petrol- Diesel Price: ಮುಂದಿನ ವಾರ ತೈಲ ದರ ಪರಿಷ್ಕರಣೆ ಶುರು; ಲೀಟರ್​ ಪೆಟ್ರೋಲ್ ರೂ. 175 ಆದರೂ ಅಚ್ಚರಿಯಿಲ್ಲ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ