AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Russia- Ukraine Crisis: ರಷ್ಯಾ- ಉಕ್ರೇನ್​ ಬಿಕ್ಕಟ್ಟಿನ ಮಧ್ಯೆ ಕಚ್ಚಾ ತೈಲ ಬ್ಯಾರಲ್​ಗೆ 10 ಯುಎಸ್​ಡಿಗೂ ಜಾಸ್ತಿ ಹೆಚ್ಚಳ

ರಷ್ಯಾ- ಉಕ್ರೇನ್ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಮಾರ್ಚ್ 7ನೇ ತಾರೀಕಿನ ಸೋಮವಾರದ ಒಂದೇ ದಿನ ಪ್ರತಿ ಬ್ಯಾರೆಲ್​​ಗೆ 10 ಯುಎಸ್​ಡಿಗೂ ಹೆಚ್ಚಾಗಿದೆ.

Russia- Ukraine Crisis: ರಷ್ಯಾ- ಉಕ್ರೇನ್​ ಬಿಕ್ಕಟ್ಟಿನ ಮಧ್ಯೆ ಕಚ್ಚಾ ತೈಲ ಬ್ಯಾರಲ್​ಗೆ 10 ಯುಎಸ್​ಡಿಗೂ ಜಾಸ್ತಿ ಹೆಚ್ಚಳ
ಸಾಂದರ್ಭಿಕ ಚಿತ್ರ
TV9 Web
| Updated By: Srinivas Mata|

Updated on: Mar 07, 2022 | 11:41 AM

Share

ಉಕ್ರೇನ್- ರಷ್ಯಾ ಬಿಕ್ಕಟ್ಟು (Russia- Ukraine Crisis) ತೀವ್ರಗೊಳ್ಳುತ್ತಿದ್ದಂತೆ ಮಾರ್ಚ್ 7ನೇ ತಾರೀಕಿನ ಸೋಮವಾರದಂದು ಪ್ರತಿ ಬ್ಯಾರೆಲ್​ಗೆ ತೈಲ ಬೆಲೆ 10 ಯುಎಸ್​ಡಿಗೂ ಹೆಚ್ಚು ಮೇಲೇರಿದೆ. ರಷ್ಯಾದ ಮೇಲೆ ಮತ್ತಷ್ಟು ಕಠಿಣ ನಿರ್ಬಂಧಗಳನ್ನು ಹೇರಬೇಕು ಎಂಬ ಕರೆ ವ್ಯಾಪಕ ಆಗುತ್ತಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಆಗಿದೆ. ಸೋಮವಾರ ದಿನದ ಆರಂಭದಲ್ಲಿ ಬ್ರೆಂಟ್ ಕಚ್ಚಾ ತೈಲ 10 ಯುಎಸ್​ಡಿಗೂ ಹೆಚ್ಚು ಜಿಗಿತ ಕಂಡು, 130 ಯುಎಸ್​ಡಿ ಸಮೀಪ ಮುಟ್ಟಿತು. ಯು.ಎಸ್. ಕಚ್ಚಾ ತೈಲ ಬೆಂಚ್​ಮಾರ್ಕ್ 9 ಯುಎಸ್​ಡಿಗೂ ಜಾಸ್ತಿ ಮೇಲೇರಿ, ಈಗ ಬ್ಯಾರಲ್​ಗೆ 124 ಡಾಲರ್​ಗೂ ಹೆಚ್ಚಿನ ದರದಲ್ಲಿದೆ. ರಷ್ಯಾದ ಪಡೆಗಳು ಆಯಕಟ್ಟಿನ ಸ್ಥಳಗಳನ್ನು ವಶಕ್ಕೆ ಪಡೆದಿರುವುದರಿಂದ ಉಕ್ರೇನ್​ನ ದೇಶದ ಸ್ಥಾನಮಾನ ಅಪಾಯದಲ್ಲಿದೆ ಎಂದು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಎಚ್ಚರಿಕೆ ನಂತರ ಈ ಹೆಚ್ಚಳ ಆಗಿದೆ.

ಉಕ್ರೇನ್​ನ ಎರಡು ನಗರಗಳಲ್ಲಿ ತಾತ್ಕಾಲಿಕ ಕದನ ವಿರಾಮ ಘೋಷಣೆಯು ವಿಫಲವಾಗಿದೆ. ಇದು ಎರಡೂ ಕಡೆಯಿಂದ ಪರಸ್ಪರ ನಿಂದೆಗೆ ಕಾರಣ ಆಗಿದೆ. ಇನ್ನು, ಜಾಗತಿಕ ಆರ್ಥಿಕತೆಯಿಂದ ರಷ್ಯಾವನ್ನು ಮತ್ತಷ್ಟು ಏಕಾಂಗಿ ಮಾಡುವುದಕ್ಕೆ ಅಮೆರಿಕದ ಹೌಸ್ ಆಫ್ ರೆಪ್ರಸೆಂಟೇಟಿವ್ಸ್ (ಜನ ಪ್ರತಿನಿಧಿಗಳ ಸಭೆ) ಹೊಸ ಕಾನೂನು ಜಾರಿಗೆ ತರಲು ಹೊರಟಿರುವ ಬಗ್ಗೆ ಸ್ಪೀಕರ್ ನ್ಯಾನ್ಸಿ ಪೆಲೋಸಿ ಮಾತನಾಡಿದ್ದಾರೆ. ರಷ್ಯಾದ ತೈಲ, ಇಂಧನ ಉತ್ಪನ್ನಗಳ ಆಮದನ್ನು ಸಹ ಅಮೆರಿಕದೊಳಗೆ ಬಾರದಂತೆ ನಿಷೇಧಿಸಲು ಉದ್ದೇಶಿಸಿರುವ ಕಾನೂನು ಅದು.

ಇದೇ ವೇಳೆ ಅಮೆರಿಕದಲ್ಲಿ ಗ್ಯಾಸೋಲಿನ್ ಬೆಲೆಯು ಏರಿಕೆ ಆಗುತ್ತಲೇ ಇದೆ. ಅಮೆರಿಕದ ಅಧ್ಯಕ್ಷ ಜೋ ಬೈಡನ್ ನೇತೃತ್ವದ ಸರ್ಕಾರವು ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುವ ವಿಚಾರದಲ್ಲಿ ಇನ್ನೂ ನಿರ್ಧಾರ ಕೈಗೊಳ್ಳಬೇಕಿದೆ. ಇತ್ತ ಭಾರತದಲ್ಲಿ ಕೂಡ ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆ ಆಗುವ ನಿರೀಕ್ಷೆ ವ್ಯಾಪಕವಾಗಿದೆ.

ಇದನ್ನೂ ಓದಿ: Petrol- Diesel Price: ಮುಂದಿನ ವಾರ ತೈಲ ದರ ಪರಿಷ್ಕರಣೆ ಶುರು; ಲೀಟರ್​ ಪೆಟ್ರೋಲ್ ರೂ. 175 ಆದರೂ ಅಚ್ಚರಿಯಿಲ್ಲ

ಅಪ್ಪನಿಗೆ ಜೀವಾವಧಿ ಶಿಕ್ಷೆ ಆಗಬೇಕು, ಇಲ್ಲಂದ್ರೆ ನಾನೇ ಕೊಲೆ ಮಾಡ್ತೀನಿ ಮಗ
ಅಪ್ಪನಿಗೆ ಜೀವಾವಧಿ ಶಿಕ್ಷೆ ಆಗಬೇಕು, ಇಲ್ಲಂದ್ರೆ ನಾನೇ ಕೊಲೆ ಮಾಡ್ತೀನಿ ಮಗ
ಟೀಂ ಇಂಡಿಯಾಕ್ಕೆ ಗೌತಮ್ ಗಂಭೀರ್ ಮನೆಯಲ್ಲಿ ಆತಿಥ್ಯ
ಟೀಂ ಇಂಡಿಯಾಕ್ಕೆ ಗೌತಮ್ ಗಂಭೀರ್ ಮನೆಯಲ್ಲಿ ಆತಿಥ್ಯ
ಜನರನ್ನು ಕಂಗಾಲಾಗಿಸಿದ ಬೃಹತ್ ಹೆಬ್ಬಾವನ್ನು ಹಿಡಿದ ಟ್ರಾಫಿಕ್ ಪೊಲೀಸ್!
ಜನರನ್ನು ಕಂಗಾಲಾಗಿಸಿದ ಬೃಹತ್ ಹೆಬ್ಬಾವನ್ನು ಹಿಡಿದ ಟ್ರಾಫಿಕ್ ಪೊಲೀಸ್!
ವರ್ಷಕ್ಕೊಮ್ಮೆ ಮಾತ್ರ ಏಕೆ ಭಕ್ತರಿಗೆ ಹಾಸನಾಂಬೆ ದರ್ಶನ? ಇಲ್ಲಿದೆ ನೋಡಿ ಕಾರಣ
ವರ್ಷಕ್ಕೊಮ್ಮೆ ಮಾತ್ರ ಏಕೆ ಭಕ್ತರಿಗೆ ಹಾಸನಾಂಬೆ ದರ್ಶನ? ಇಲ್ಲಿದೆ ನೋಡಿ ಕಾರಣ
ಕಾನ್ಪುರದಲ್ಲಿ 2 ಸ್ಕೂಟರ್‌ಗಳಲ್ಲಿ ಸ್ಫೋಟ; 6 ಜನರಿಗೆ ಗಾಯ
ಕಾನ್ಪುರದಲ್ಲಿ 2 ಸ್ಕೂಟರ್‌ಗಳಲ್ಲಿ ಸ್ಫೋಟ; 6 ಜನರಿಗೆ ಗಾಯ
ಚಾಕುವಿನಿಂದ ಇರಿದು ಪತ್ನಿ ಹತ್ಯೆಗೈದ ಪತಿ: ಅಪ್ಪನ ಅಸಲಿ ಬಣ್ಣ ಬಿಚ್ಚಿಟ್ಟ ಮಗ
ಚಾಕುವಿನಿಂದ ಇರಿದು ಪತ್ನಿ ಹತ್ಯೆಗೈದ ಪತಿ: ಅಪ್ಪನ ಅಸಲಿ ಬಣ್ಣ ಬಿಚ್ಚಿಟ್ಟ ಮಗ
ಅಮಿತ್ ಶಾ ಅವರನ್ನು ನಂಬಬೇಡಿ; ಮೋದಿಗೆ ಸಿಎಂ ಮಮತಾ ಬ್ಯಾನರ್ಜಿ ಎಚ್ಚರಿಕೆ
ಅಮಿತ್ ಶಾ ಅವರನ್ನು ನಂಬಬೇಡಿ; ಮೋದಿಗೆ ಸಿಎಂ ಮಮತಾ ಬ್ಯಾನರ್ಜಿ ಎಚ್ಚರಿಕೆ
ಬಿಗ್ ಬಾಸ್ ಸ್ಥಗಿತ ಆಗಲು ಜಾಲಿವುಡ್ ಸ್ಟುಡಿಯೋ ಮಾಡಿದ ಮುಖ್ಯ ತಪ್ಪು ಏನು?
ಬಿಗ್ ಬಾಸ್ ಸ್ಥಗಿತ ಆಗಲು ಜಾಲಿವುಡ್ ಸ್ಟುಡಿಯೋ ಮಾಡಿದ ಮುಖ್ಯ ತಪ್ಪು ಏನು?
ಲಿಂಗಾಯತ ಪ್ರತ್ಯೇಕ ಧರ್ಮ ಬೇಡಿಕೆ: ಸಚಿವ ದರ್ಶನಾಪುರ ಏನಂದ್ರು?
ಲಿಂಗಾಯತ ಪ್ರತ್ಯೇಕ ಧರ್ಮ ಬೇಡಿಕೆ: ಸಚಿವ ದರ್ಶನಾಪುರ ಏನಂದ್ರು?
ಸಿಸಿ , ಓಸಿ ಪಡೆಯದೇ ಮನೆ ಕಟ್ಟಿದವರಿಗೆ ಗುಡ್ ನ್ಯೂಸ್
ಸಿಸಿ , ಓಸಿ ಪಡೆಯದೇ ಮನೆ ಕಟ್ಟಿದವರಿಗೆ ಗುಡ್ ನ್ಯೂಸ್