AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Russia- Ukraine Crisis: ರಷ್ಯಾ- ಉಕ್ರೇನ್​ ಬಿಕ್ಕಟ್ಟಿನ ಮಧ್ಯೆ ಕಚ್ಚಾ ತೈಲ ಬ್ಯಾರಲ್​ಗೆ 10 ಯುಎಸ್​ಡಿಗೂ ಜಾಸ್ತಿ ಹೆಚ್ಚಳ

ರಷ್ಯಾ- ಉಕ್ರೇನ್ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಮಾರ್ಚ್ 7ನೇ ತಾರೀಕಿನ ಸೋಮವಾರದ ಒಂದೇ ದಿನ ಪ್ರತಿ ಬ್ಯಾರೆಲ್​​ಗೆ 10 ಯುಎಸ್​ಡಿಗೂ ಹೆಚ್ಚಾಗಿದೆ.

Russia- Ukraine Crisis: ರಷ್ಯಾ- ಉಕ್ರೇನ್​ ಬಿಕ್ಕಟ್ಟಿನ ಮಧ್ಯೆ ಕಚ್ಚಾ ತೈಲ ಬ್ಯಾರಲ್​ಗೆ 10 ಯುಎಸ್​ಡಿಗೂ ಜಾಸ್ತಿ ಹೆಚ್ಚಳ
ಸಾಂದರ್ಭಿಕ ಚಿತ್ರ
TV9 Web
| Updated By: Srinivas Mata|

Updated on: Mar 07, 2022 | 11:41 AM

Share

ಉಕ್ರೇನ್- ರಷ್ಯಾ ಬಿಕ್ಕಟ್ಟು (Russia- Ukraine Crisis) ತೀವ್ರಗೊಳ್ಳುತ್ತಿದ್ದಂತೆ ಮಾರ್ಚ್ 7ನೇ ತಾರೀಕಿನ ಸೋಮವಾರದಂದು ಪ್ರತಿ ಬ್ಯಾರೆಲ್​ಗೆ ತೈಲ ಬೆಲೆ 10 ಯುಎಸ್​ಡಿಗೂ ಹೆಚ್ಚು ಮೇಲೇರಿದೆ. ರಷ್ಯಾದ ಮೇಲೆ ಮತ್ತಷ್ಟು ಕಠಿಣ ನಿರ್ಬಂಧಗಳನ್ನು ಹೇರಬೇಕು ಎಂಬ ಕರೆ ವ್ಯಾಪಕ ಆಗುತ್ತಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಆಗಿದೆ. ಸೋಮವಾರ ದಿನದ ಆರಂಭದಲ್ಲಿ ಬ್ರೆಂಟ್ ಕಚ್ಚಾ ತೈಲ 10 ಯುಎಸ್​ಡಿಗೂ ಹೆಚ್ಚು ಜಿಗಿತ ಕಂಡು, 130 ಯುಎಸ್​ಡಿ ಸಮೀಪ ಮುಟ್ಟಿತು. ಯು.ಎಸ್. ಕಚ್ಚಾ ತೈಲ ಬೆಂಚ್​ಮಾರ್ಕ್ 9 ಯುಎಸ್​ಡಿಗೂ ಜಾಸ್ತಿ ಮೇಲೇರಿ, ಈಗ ಬ್ಯಾರಲ್​ಗೆ 124 ಡಾಲರ್​ಗೂ ಹೆಚ್ಚಿನ ದರದಲ್ಲಿದೆ. ರಷ್ಯಾದ ಪಡೆಗಳು ಆಯಕಟ್ಟಿನ ಸ್ಥಳಗಳನ್ನು ವಶಕ್ಕೆ ಪಡೆದಿರುವುದರಿಂದ ಉಕ್ರೇನ್​ನ ದೇಶದ ಸ್ಥಾನಮಾನ ಅಪಾಯದಲ್ಲಿದೆ ಎಂದು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಎಚ್ಚರಿಕೆ ನಂತರ ಈ ಹೆಚ್ಚಳ ಆಗಿದೆ.

ಉಕ್ರೇನ್​ನ ಎರಡು ನಗರಗಳಲ್ಲಿ ತಾತ್ಕಾಲಿಕ ಕದನ ವಿರಾಮ ಘೋಷಣೆಯು ವಿಫಲವಾಗಿದೆ. ಇದು ಎರಡೂ ಕಡೆಯಿಂದ ಪರಸ್ಪರ ನಿಂದೆಗೆ ಕಾರಣ ಆಗಿದೆ. ಇನ್ನು, ಜಾಗತಿಕ ಆರ್ಥಿಕತೆಯಿಂದ ರಷ್ಯಾವನ್ನು ಮತ್ತಷ್ಟು ಏಕಾಂಗಿ ಮಾಡುವುದಕ್ಕೆ ಅಮೆರಿಕದ ಹೌಸ್ ಆಫ್ ರೆಪ್ರಸೆಂಟೇಟಿವ್ಸ್ (ಜನ ಪ್ರತಿನಿಧಿಗಳ ಸಭೆ) ಹೊಸ ಕಾನೂನು ಜಾರಿಗೆ ತರಲು ಹೊರಟಿರುವ ಬಗ್ಗೆ ಸ್ಪೀಕರ್ ನ್ಯಾನ್ಸಿ ಪೆಲೋಸಿ ಮಾತನಾಡಿದ್ದಾರೆ. ರಷ್ಯಾದ ತೈಲ, ಇಂಧನ ಉತ್ಪನ್ನಗಳ ಆಮದನ್ನು ಸಹ ಅಮೆರಿಕದೊಳಗೆ ಬಾರದಂತೆ ನಿಷೇಧಿಸಲು ಉದ್ದೇಶಿಸಿರುವ ಕಾನೂನು ಅದು.

ಇದೇ ವೇಳೆ ಅಮೆರಿಕದಲ್ಲಿ ಗ್ಯಾಸೋಲಿನ್ ಬೆಲೆಯು ಏರಿಕೆ ಆಗುತ್ತಲೇ ಇದೆ. ಅಮೆರಿಕದ ಅಧ್ಯಕ್ಷ ಜೋ ಬೈಡನ್ ನೇತೃತ್ವದ ಸರ್ಕಾರವು ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುವ ವಿಚಾರದಲ್ಲಿ ಇನ್ನೂ ನಿರ್ಧಾರ ಕೈಗೊಳ್ಳಬೇಕಿದೆ. ಇತ್ತ ಭಾರತದಲ್ಲಿ ಕೂಡ ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆ ಆಗುವ ನಿರೀಕ್ಷೆ ವ್ಯಾಪಕವಾಗಿದೆ.

ಇದನ್ನೂ ಓದಿ: Petrol- Diesel Price: ಮುಂದಿನ ವಾರ ತೈಲ ದರ ಪರಿಷ್ಕರಣೆ ಶುರು; ಲೀಟರ್​ ಪೆಟ್ರೋಲ್ ರೂ. 175 ಆದರೂ ಅಚ್ಚರಿಯಿಲ್ಲ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?