AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಬರ್ ಸೆಕ್ಯೂರಿಟಿ ಉದ್ಯೋಗಾವಕಾಶ ಶೇ. 14ರಷ್ಟು ಹೆಚ್ಚಳ; ಬೆಂಗಳೂರಿನಲ್ಲೇ ಹೆಚ್ಚು ಪೋಸ್ಟಿಂಗ್ಸ್

Cybersecurity job openings in India: ಸೈಬರ್​ಸೆಕ್ಯೂರಿಟಿ ಪರಿಣಿತರಿಗೆ ಉದ್ಯೋಗಾವಕಾಶ ಹೆಚ್ಚುತ್ತಿದೆ. ಒಂದು ವರ್ಷದಲ್ಲಿ ಸೈಬರ್​ಸೆಕ್ಯೂರಿಟಿ ಹುದ್ದೆಗಳ ಪೋಸ್ಟಿಂಗ್​​ನಲ್ಲಿ ಶೇ. 14ರಷ್ಟು ಹೆಚ್ಚಾಗಿದೆ. ಈ ಲಿಸ್ಟಿಂಗ್​ನಲ್ಲಿ ಸಿಂಹಪಾಲು ಬೆಂಗಳೂರಿನದ್ದಾಗಿದೆ. ಇದರ ಶೇ. 10ರಷ್ಟು ಕೆಲಸಗಳು ಬೆಂಗಳೂರಿನಲ್ಲಿವೆ.

ಸೈಬರ್ ಸೆಕ್ಯೂರಿಟಿ ಉದ್ಯೋಗಾವಕಾಶ ಶೇ. 14ರಷ್ಟು ಹೆಚ್ಚಳ; ಬೆಂಗಳೂರಿನಲ್ಲೇ ಹೆಚ್ಚು ಪೋಸ್ಟಿಂಗ್ಸ್
ಸೈಬರ್ ಸೆಕ್ಯೂರಿಟಿ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Oct 17, 2024 | 5:24 PM

ಬೆಂಗಳೂರು, ಅಕ್ಟೋಬರ್ 17: ಸೈಬರ್ ಸೆಕ್ಯೂರಿಟಿ ಪರಿಣಿತರಿಗೆ ಬೇಡಿಕೆ ಹೆಚ್ಚುತ್ತಿದೆ. ಕಳೆದ ಒಂದು ವರ್ಷದಲ್ಲಿ ಸೈಬರ್ ಸೆಕ್ಯೂರಿಟಿ ಸ್ಥಾನಗಳಿಗೆ ಜಾಬ್ ಪೋಸ್ಟಿಂಗ್​ಗಳು ಶೇ. 14ರಷ್ಟು ಹೆಚ್ಚಿವೆ ಎಂದು ಇಂಡೀಡ್ ಇಂಡಿಯಾ ಎಂಬ ಜಾಬ್ ಪ್ಲಾಟ್​ಫಾರ್ಮ್​ನ ವರದಿಯೊಂದು ಹೇಳಿದೆ. ಇದರ ಪ್ರಕಾರ ಬೇರೆ ನಗರಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಇದರ ಜಾಬ್ ಓಪನಿಂಗ್ಸ್ ಹೆಚ್ಚಿದೆ.

ಒಂದು ವರ್ಷದಲ್ಲಿ ಲಿಸ್ಟ್ ಆಗಿರುವ ಹೆಚ್ಚುವರಿ ಜಾಬ್ ಓಪನಿಂಗ್​ನಲ್ಲಿ ಬೆಂಗಳೂರಿನಲ್ಲೇ ಶೇ. 10ರಷ್ಟಿದೆ. ದೆಹಲಿ, ಹೈದರಾಬಾದ್ ಮತ್ತು ಮುಂಬೈ ನಂತರ ಸ್ಥಾನದಲ್ಲಿವೆ. ವರ್ಕ್ ಫ್ರಂ ಹೋಮ್ ಅವಕಾಶ ಇರುವ ಸೈಬರ್ ಸೆಕ್ಯೂರಿಟಿ ಕೆಲಸಗಳ ಪ್ರಮಾಣವೂ ಸಾಕಷ್ಟಿದೆ.

‘ಆನ್ಲೈನ್​ನಲ್ಲೇ ನಮ್ಮ ಕಾಲಕ್ಷೇಪ ಹೆಚ್ಚಾಗಿರುವುದರಿಂದ ವೈಯಕ್ತಿಕ ಡಾಟಾ ಸುರಕ್ಷತೆ ಅಪಾಯಕ್ಕೆ ಸಿಲುಕುವ ಸಾಧ್ಯತೆ ಹೆಚ್ಚಿರುತ್ತದೆ. ದತ್ತಾಂಶವನ್ನು ಸುರಕ್ಷಿತವಾಗಿರಿಸಲು ಕಂಪನಿಗಳು ಗಮನ ಕೊಡುತ್ತಿವೆ. ಈ ಕಾರಣಕ್ಕೆ ಸೈಬರ್ ಸೆಕ್ಯೂರಿಟಿ ತಜ್ಞರಿಗೆ ಬೇಡಿಕೆ ಹೆಚ್ಚಿದೆ. ಈ ಕ್ಷೇತ್ರದಲ್ಲಿ ಉದ್ಯೋಗಾವಕಾಶ ಸಾಕಷ್ಟು ವೇಗವಾಗಿ ಹೆಚ್ಚುತ್ತಿದೆ,’ ಎಂದು ಇಂಡೀಡ್ ಇಂಡಿಯಾ ಸಂಸ್ಥೆಯ ಸೇಲ್ಸ್ ಮುಖ್ಯಸ್ಥ ಶಶಿಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: ಐಟಿ ಸೆಕ್ಟರ್​ನಲ್ಲಿ ಭರ್ಜರಿ ಉದ್ಯೋಗಾವಕಾಶ; ಎಐ, ಎಂಎಲ್, ಡೇಟಾ ಸೈನ್ಸ್ ಇತ್ಯಾದಿ ಕಲಿತವರಿಗೆ ಒಳ್ಳೆಯ ಬೇಡಿಕೆ

ಬೆಂಗಳೂರಿನಲ್ಲಿ ಹೆಚ್ಚು ಸೈಬರ್ ಸೆಕ್ಯೂರಿಟಿ ಕೆಲಸ ಇರುವುದು ಯಾಕೆ?

ಕಳೆದ ಒಂದು ವರ್ಷದಲ್ಲಿ ಆಫರ್ ಮಾಡಲಾಗಿರುವ ಸೈಬರ್ ಸೆಕ್ಯೂರಿಟಿ ಉದ್ಯೋಗಗಳು ಹೆಚ್ಚಾಗಿ ಬೆಂಗಳೂರಿನಲ್ಲೇ ಇರುವುದು. ಬೆಂಗಳೂರು ಭಾರತದ ಸಿಲಿಕಾನ್ ಸಿಟಿಯಾಗಿದ್ದು ಇಲ್ಲಿ ದೇಶದ ಪ್ರಮುಖ ಐಟಿ ಕಂಪನಿಗಳು, ಸ್ಟಾರ್ಟಪ್​ಗಳು, ಜಾಗತಿಕ ಸಂಸ್ಥೆಗಳು ನೆಲಸಿವೆ.

ಈ ಸಂಸ್ಥೆಗಳ ಡಿಜಿಟಲ್ ಆಪರೇಶನ್ಸ್ ಹೆಚ್ಚುತ್ತಿದೆ. ಪರಿಣಾಮವಾಗಿ ಸೈಬರ್ ಸೆಕ್ಯೂರಿಟಿ ವ್ಯವಸ್ಥೆಯನ್ನು ಬಲಿಷ್ಠಗೊಳಿಸುತ್ತಿವೆ. ಹೀಗಾಗಿ, ಸೈಬರ್ ಸೆಕ್ಯೂರಿಟಿ ತಜ್ಞರಿಗೆ ಬೇಡಿಕೆ ಹೆಚ್ಚುತ್ತಿದೆ.

ಕಾರ್ಪೊರೇಟ್ ಹಬ್ ಆಗಿರುವ ದೆಹಲಿಯಲ್ಲಿ ಬಹಳಷ್ಟು ಬಹುರಾಷ್ಟ್ರೀಯ ಕಂಪನಿಗಳಿವೆ. ಹಲವು ಪ್ರಮುಖ ಸರ್ಕಾರಿ ಸಂಸ್ಥೆಗಳು, ಹಣಕಾಸು ಸಂಸ್ಥೆಗಳು ರಾಷ್ಟ್ರರಾಜಧಾನಿಯಲ್ಲಿ ಇದ್ದು, ಅಲ್ಲಿಯೂ ಬಹಳಷ್ಟು ಸೈಬರ್ ಸೆಕ್ಯೂರಿಟಿ ತಜ್ಞರಿಗೆ ಹೆಚ್ಚಿನ ಕೆಲಸದ ಅವಕಾಶ ಇದೆ. ಇನ್ನು, ಹೈದರಾಬಾದ್ ನಗರ ಕೂಡ ಬಹಳಷ್ಟು ತಂತ್ರಜ್ಞಾನ ಕಂಪನಿಗಳಿಗೆ ತವರಾಗಿದೆ.

ಸೈಬರ್ ಸೆಕ್ಯೂರಿಟಿ ಕೆಲಸಕ್ಕೆ ಬೇಕಾದ ಪ್ರಮುಖ ಪರಿಣಿತಿಗಳು…

  • ಕಮ್ಯೂನಿಕೇಶನ್ ಸ್ಕಿಲ್
  • ಇನ್​ಫಾರ್ಮೇಶನ್ ಸೆಕ್ಯೂರಿಟಿ
  • ಫೈರ್​ವಾಲ್
  • ಅಜುರೆ
  • ಎಡಬ್ಲ್ಯುಎಸ್

ಇದನ್ನೂ ಓದಿ: ವಾಟ್ಸಾಪ್, ಇನ್ಸ್​ಟಾಗ್ರಾಮ್, ರಿಯಾಲಿಟಿ ಲ್ಯಾಬ್ಸ್ ಟೀಮ್​ನಿಂದ ಉದ್ಯೋಗಿಗಳ ಲೇ ಆಫ್

ಅಜುರೆ, ಎಡಬ್ಲ್ಯುಎಸ್ ಇವೆಲ್ಲವೂ ಕ್ಲೌಡ್ ಕಂಪ್ಯೂಟಿಂಗ್ ಕೌಶಲ್ಯಗಳಾಗಿವೆ. ಅಜುರೆಯನ್ನು ಮೈಕ್ರೋಸಾಫ್ಟ್ ಅಭಿವೃದ್ಧಿಪಡಿಸಿದೆ. ಎಡಬ್ಲ್ಯುಎಸ್ ಅಮೇಜಾನ್​ನಿಂದ ನೀಡಲಾಗುವ ಕ್ಲೌಡ್ ಕಂಪ್ಯೂಟಿಂಗ್ ಸರ್ವಿಸ್ ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 5:23 pm, Thu, 17 October 24

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ