AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಬರ್ ಸೆಕ್ಯೂರಿಟಿ ಉದ್ಯೋಗಾವಕಾಶ ಶೇ. 14ರಷ್ಟು ಹೆಚ್ಚಳ; ಬೆಂಗಳೂರಿನಲ್ಲೇ ಹೆಚ್ಚು ಪೋಸ್ಟಿಂಗ್ಸ್

Cybersecurity job openings in India: ಸೈಬರ್​ಸೆಕ್ಯೂರಿಟಿ ಪರಿಣಿತರಿಗೆ ಉದ್ಯೋಗಾವಕಾಶ ಹೆಚ್ಚುತ್ತಿದೆ. ಒಂದು ವರ್ಷದಲ್ಲಿ ಸೈಬರ್​ಸೆಕ್ಯೂರಿಟಿ ಹುದ್ದೆಗಳ ಪೋಸ್ಟಿಂಗ್​​ನಲ್ಲಿ ಶೇ. 14ರಷ್ಟು ಹೆಚ್ಚಾಗಿದೆ. ಈ ಲಿಸ್ಟಿಂಗ್​ನಲ್ಲಿ ಸಿಂಹಪಾಲು ಬೆಂಗಳೂರಿನದ್ದಾಗಿದೆ. ಇದರ ಶೇ. 10ರಷ್ಟು ಕೆಲಸಗಳು ಬೆಂಗಳೂರಿನಲ್ಲಿವೆ.

ಸೈಬರ್ ಸೆಕ್ಯೂರಿಟಿ ಉದ್ಯೋಗಾವಕಾಶ ಶೇ. 14ರಷ್ಟು ಹೆಚ್ಚಳ; ಬೆಂಗಳೂರಿನಲ್ಲೇ ಹೆಚ್ಚು ಪೋಸ್ಟಿಂಗ್ಸ್
ಸೈಬರ್ ಸೆಕ್ಯೂರಿಟಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Oct 17, 2024 | 5:24 PM

Share

ಬೆಂಗಳೂರು, ಅಕ್ಟೋಬರ್ 17: ಸೈಬರ್ ಸೆಕ್ಯೂರಿಟಿ ಪರಿಣಿತರಿಗೆ ಬೇಡಿಕೆ ಹೆಚ್ಚುತ್ತಿದೆ. ಕಳೆದ ಒಂದು ವರ್ಷದಲ್ಲಿ ಸೈಬರ್ ಸೆಕ್ಯೂರಿಟಿ ಸ್ಥಾನಗಳಿಗೆ ಜಾಬ್ ಪೋಸ್ಟಿಂಗ್​ಗಳು ಶೇ. 14ರಷ್ಟು ಹೆಚ್ಚಿವೆ ಎಂದು ಇಂಡೀಡ್ ಇಂಡಿಯಾ ಎಂಬ ಜಾಬ್ ಪ್ಲಾಟ್​ಫಾರ್ಮ್​ನ ವರದಿಯೊಂದು ಹೇಳಿದೆ. ಇದರ ಪ್ರಕಾರ ಬೇರೆ ನಗರಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಇದರ ಜಾಬ್ ಓಪನಿಂಗ್ಸ್ ಹೆಚ್ಚಿದೆ.

ಒಂದು ವರ್ಷದಲ್ಲಿ ಲಿಸ್ಟ್ ಆಗಿರುವ ಹೆಚ್ಚುವರಿ ಜಾಬ್ ಓಪನಿಂಗ್​ನಲ್ಲಿ ಬೆಂಗಳೂರಿನಲ್ಲೇ ಶೇ. 10ರಷ್ಟಿದೆ. ದೆಹಲಿ, ಹೈದರಾಬಾದ್ ಮತ್ತು ಮುಂಬೈ ನಂತರ ಸ್ಥಾನದಲ್ಲಿವೆ. ವರ್ಕ್ ಫ್ರಂ ಹೋಮ್ ಅವಕಾಶ ಇರುವ ಸೈಬರ್ ಸೆಕ್ಯೂರಿಟಿ ಕೆಲಸಗಳ ಪ್ರಮಾಣವೂ ಸಾಕಷ್ಟಿದೆ.

‘ಆನ್ಲೈನ್​ನಲ್ಲೇ ನಮ್ಮ ಕಾಲಕ್ಷೇಪ ಹೆಚ್ಚಾಗಿರುವುದರಿಂದ ವೈಯಕ್ತಿಕ ಡಾಟಾ ಸುರಕ್ಷತೆ ಅಪಾಯಕ್ಕೆ ಸಿಲುಕುವ ಸಾಧ್ಯತೆ ಹೆಚ್ಚಿರುತ್ತದೆ. ದತ್ತಾಂಶವನ್ನು ಸುರಕ್ಷಿತವಾಗಿರಿಸಲು ಕಂಪನಿಗಳು ಗಮನ ಕೊಡುತ್ತಿವೆ. ಈ ಕಾರಣಕ್ಕೆ ಸೈಬರ್ ಸೆಕ್ಯೂರಿಟಿ ತಜ್ಞರಿಗೆ ಬೇಡಿಕೆ ಹೆಚ್ಚಿದೆ. ಈ ಕ್ಷೇತ್ರದಲ್ಲಿ ಉದ್ಯೋಗಾವಕಾಶ ಸಾಕಷ್ಟು ವೇಗವಾಗಿ ಹೆಚ್ಚುತ್ತಿದೆ,’ ಎಂದು ಇಂಡೀಡ್ ಇಂಡಿಯಾ ಸಂಸ್ಥೆಯ ಸೇಲ್ಸ್ ಮುಖ್ಯಸ್ಥ ಶಶಿಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: ಐಟಿ ಸೆಕ್ಟರ್​ನಲ್ಲಿ ಭರ್ಜರಿ ಉದ್ಯೋಗಾವಕಾಶ; ಎಐ, ಎಂಎಲ್, ಡೇಟಾ ಸೈನ್ಸ್ ಇತ್ಯಾದಿ ಕಲಿತವರಿಗೆ ಒಳ್ಳೆಯ ಬೇಡಿಕೆ

ಬೆಂಗಳೂರಿನಲ್ಲಿ ಹೆಚ್ಚು ಸೈಬರ್ ಸೆಕ್ಯೂರಿಟಿ ಕೆಲಸ ಇರುವುದು ಯಾಕೆ?

ಕಳೆದ ಒಂದು ವರ್ಷದಲ್ಲಿ ಆಫರ್ ಮಾಡಲಾಗಿರುವ ಸೈಬರ್ ಸೆಕ್ಯೂರಿಟಿ ಉದ್ಯೋಗಗಳು ಹೆಚ್ಚಾಗಿ ಬೆಂಗಳೂರಿನಲ್ಲೇ ಇರುವುದು. ಬೆಂಗಳೂರು ಭಾರತದ ಸಿಲಿಕಾನ್ ಸಿಟಿಯಾಗಿದ್ದು ಇಲ್ಲಿ ದೇಶದ ಪ್ರಮುಖ ಐಟಿ ಕಂಪನಿಗಳು, ಸ್ಟಾರ್ಟಪ್​ಗಳು, ಜಾಗತಿಕ ಸಂಸ್ಥೆಗಳು ನೆಲಸಿವೆ.

ಈ ಸಂಸ್ಥೆಗಳ ಡಿಜಿಟಲ್ ಆಪರೇಶನ್ಸ್ ಹೆಚ್ಚುತ್ತಿದೆ. ಪರಿಣಾಮವಾಗಿ ಸೈಬರ್ ಸೆಕ್ಯೂರಿಟಿ ವ್ಯವಸ್ಥೆಯನ್ನು ಬಲಿಷ್ಠಗೊಳಿಸುತ್ತಿವೆ. ಹೀಗಾಗಿ, ಸೈಬರ್ ಸೆಕ್ಯೂರಿಟಿ ತಜ್ಞರಿಗೆ ಬೇಡಿಕೆ ಹೆಚ್ಚುತ್ತಿದೆ.

ಕಾರ್ಪೊರೇಟ್ ಹಬ್ ಆಗಿರುವ ದೆಹಲಿಯಲ್ಲಿ ಬಹಳಷ್ಟು ಬಹುರಾಷ್ಟ್ರೀಯ ಕಂಪನಿಗಳಿವೆ. ಹಲವು ಪ್ರಮುಖ ಸರ್ಕಾರಿ ಸಂಸ್ಥೆಗಳು, ಹಣಕಾಸು ಸಂಸ್ಥೆಗಳು ರಾಷ್ಟ್ರರಾಜಧಾನಿಯಲ್ಲಿ ಇದ್ದು, ಅಲ್ಲಿಯೂ ಬಹಳಷ್ಟು ಸೈಬರ್ ಸೆಕ್ಯೂರಿಟಿ ತಜ್ಞರಿಗೆ ಹೆಚ್ಚಿನ ಕೆಲಸದ ಅವಕಾಶ ಇದೆ. ಇನ್ನು, ಹೈದರಾಬಾದ್ ನಗರ ಕೂಡ ಬಹಳಷ್ಟು ತಂತ್ರಜ್ಞಾನ ಕಂಪನಿಗಳಿಗೆ ತವರಾಗಿದೆ.

ಸೈಬರ್ ಸೆಕ್ಯೂರಿಟಿ ಕೆಲಸಕ್ಕೆ ಬೇಕಾದ ಪ್ರಮುಖ ಪರಿಣಿತಿಗಳು…

  • ಕಮ್ಯೂನಿಕೇಶನ್ ಸ್ಕಿಲ್
  • ಇನ್​ಫಾರ್ಮೇಶನ್ ಸೆಕ್ಯೂರಿಟಿ
  • ಫೈರ್​ವಾಲ್
  • ಅಜುರೆ
  • ಎಡಬ್ಲ್ಯುಎಸ್

ಇದನ್ನೂ ಓದಿ: ವಾಟ್ಸಾಪ್, ಇನ್ಸ್​ಟಾಗ್ರಾಮ್, ರಿಯಾಲಿಟಿ ಲ್ಯಾಬ್ಸ್ ಟೀಮ್​ನಿಂದ ಉದ್ಯೋಗಿಗಳ ಲೇ ಆಫ್

ಅಜುರೆ, ಎಡಬ್ಲ್ಯುಎಸ್ ಇವೆಲ್ಲವೂ ಕ್ಲೌಡ್ ಕಂಪ್ಯೂಟಿಂಗ್ ಕೌಶಲ್ಯಗಳಾಗಿವೆ. ಅಜುರೆಯನ್ನು ಮೈಕ್ರೋಸಾಫ್ಟ್ ಅಭಿವೃದ್ಧಿಪಡಿಸಿದೆ. ಎಡಬ್ಲ್ಯುಎಸ್ ಅಮೇಜಾನ್​ನಿಂದ ನೀಡಲಾಗುವ ಕ್ಲೌಡ್ ಕಂಪ್ಯೂಟಿಂಗ್ ಸರ್ವಿಸ್ ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 5:23 pm, Thu, 17 October 24

Follow Us
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್