AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಲಿಂಡರ್ ಬೆಲೆ ಏರಿಕೆ: ಇಂದು ಹೋಟೆಲ್ ಮಾಲೀಕರ ಸಂಘದ ಸಭೆ, ಹೋಟೆಲ್‌ ಊಟ-ತಿಂಡಿ ದರ ಏರಿಕೆಯಾಗಲಿದ್ಯಾ?

ಸಿಲಿಂಡರ್ ಬೆಲೆ ಏರಿಕೆ ಹಿನ್ನೆಲೆ ಬೆಂಗಳೂರಿನಲ್ಲಿ ಇಂದು ಹೋಟೆಲ್​ ಮಾಲೀಕರ ಸಂಘ ಸಭೆ ಕರೆದಿದೆ. ಸಭೆಯಲ್ಲಿ ಹೋಟೆಲ್​ ತಿಂಡಿ ದರ ಹೆಚ್ಚಳದ ಬಗ್ಗೆ ಚರ್ಚೆ ನಡೆಯಲಿದೆ.

ಸಿಲಿಂಡರ್ ಬೆಲೆ ಏರಿಕೆ: ಇಂದು ಹೋಟೆಲ್ ಮಾಲೀಕರ ಸಂಘದ ಸಭೆ, ಹೋಟೆಲ್‌ ಊಟ-ತಿಂಡಿ ದರ ಏರಿಕೆಯಾಗಲಿದ್ಯಾ?
ಸಾಂದರ್ಭಿಕ ಚಿತ್ರ
Follow us
ಆಯೇಷಾ ಬಾನು
|

Updated on:Apr 03, 2023 | 2:02 PM

ಬೆಂಗಳೂರು: ಸಿಲಿಂಡರ್ ಬೆಲೆ ಏರಿಕೆ ಹಿನ್ನೆಲೆ ಹೋಟೆಲ್​ ತಿಂಡಿ ದರ ಹೆಚ್ಚಳವಾಗುವ ಸಾಧ್ಯತೆ ಇದೆ. ಹೀಗಾಗಿ ಈ ಬಗ್ಗೆ ಚರ್ಚೆ ನಡೆಸಲು ಬೆಂಗಳೂರಿನಲ್ಲಿ ಇಂದು ಹೋಟೆಲ್​ ಮಾಲೀಕರ ಸಂಘ ಸಭೆ ಕರೆದಿದೆ. ಮಧ್ಯಾಹ್ನ 2 ಗಂಟೆಗೆ ಬೆಂಗಳೂರು ಹೋಟೆಲ್‌ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ.ರಾವ್​ ನೇತೃತ್ವದಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಹೋಟೆಲ್ ಊಟ-ತಿಂಡಿ ಬೆಲೆ ಏರಿಸುವ ಕುರಿತು ಚರ್ಚೆ ನಡೆಯಲಿದೆ. ಪ್ರತಿ ತಿಂಡಿ ಬೆಲೆಯಲ್ಲಿ 5 ರಿಂದ 10 ರೂ. ಹೆಚ್ಚಳವಾಗುವ ಸಾಧ್ಯತೆ ಇದೆ. ಉತ್ತರ ಭಾರತದ ತಿಂಡಿಗಳ ಬೆಲೆ 10 ರೂ. ಏರಿಕೆಯಾಗುವ ಸಾಧ್ಯತೆ ಇದೆ.

ಸಭೆಯಲ್ಲಿ ನಗರದ ಎಲ್ಲಾ ಹೋಟೆಲ್ ಮಾಲೀಕರು ಭಾಗಿಯಾಗಲಿದ್ದಾರೆ. ಇನ್ನು ಸಿಲಿಂಡರ್ ಬೆಲೆ ಹೆಚ್ಚಳದ ಜೊತೆಗೆ ಹಾಲು – ತುಪ್ಪ, ಮೈದಾ ಸೇರಿ ಇತರೆ ಅಡುಗೆ ಸಾಮಾಗ್ರಿಗಳ ಬೆಲೆ ಏರಿಕೆಯಾಗಿದೆ. ಸರಕು ಸಾಕಾಣೆ ಹಾಗೂ ಕಟ್ಟಡಗಳ ಬಾಡಿಗೆ ಹೆಚ್ಚಾಗಿದೆ. ಹಾಲು, ಮೊಸರು ಹಾಗೂ ತುಪ್ಪದ ಕೊರತೆಯಿಂದಾಗಿ ಸಿಹಿ ಪದಾರ್ಥಗಳನ್ನ ಮಾಡುವುದನ್ನೆ ಕಡಿಮೆ ಮಾಡಲಾಗಿದೆ. ಇವೆಲ್ಲವನ್ನ ಗಮನದಲ್ಲಿಟ್ಟುಕೊಂಡು ಇಂದು ಸಭೆ ನಡೆಯುತ್ತಿದ್ದು, ಗ್ರಾಹಕರಿಗೆ ಇಂದಿನಿಂದ ಮತ್ತೊಂದು ಶಾಕ್ ಎದುರಾಗಲಿದೆ.

ಇದನ್ನೂ ಓದಿ: Puducherry: 300 ರೂ. ಮಾಸಿಕ ಎಲ್‌ಪಿಜಿ ಸಬ್ಸಿಡಿ ಘೋಷಿಸಿದ ಪುದುಚೇರಿ ಸರ್ಕಾರ

ನಿರಂತರವಾಗಿ ಸಿಲಿಂಡರ್ ದರ ಹೆಚ್ಚಳದಿಂದ ಹೋಟೆಲ್ ಊಟ-ತಿಂಡಿಗಳ ಮೇಲೆ ದರ ಹೆಚ್ಚಿಸುವ ಬಗ್ಗೆ ಸಭೆ ಕರೆದಿದ್ದೇವೆ. ಸಭೆಯಲ್ಲಿ ಎಲ್ಲ ಹೋಟೆಲ್‌ಗಳ ಮಾಲೀಕರು ಸೇರಿ ದರ ಏರಿಸಬೇಕೋ ಅಥವಾ ಬೇಡವೋ ಎಂಬುದರ ಬಗ್ಗೆ ನಿರ್ಧಾರಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಸಂಘದ ಅಧ್ಯಕ್ಷ ಪಿ.ಸಿ.ರಾವ್ ತಿಳಿಸಿದ್ದಾರೆ.

ಎಲ್‌ಪಿಜಿ ದರ 50 ರೂ ಹೆಚ್ಚಳವಾಗಿದೆ. ಇದರ ಪರಿಣಾಮ ಬೆಂಗಳೂರಿನಲ್ಲಿ 14.2 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್ ಬೆಲೆ 1,105 ರೂಪಾಯಿಗೆ ಏರಿಕೆ ಆಗಿದೆ. ಅದೇ ರೀತಿಯಲ್ಲಿ ವಾಣಿಜ್ಯ ಬಳಕೆಯ 19 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್‌ಗೆ 350 ರೂಪಾಯಿ ಏರಿಕೆ ಮಾಡಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ 

Published On - 10:27 am, Mon, 3 April 23

ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್
ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್
ಪಾಕಿಸ್ತಾನಕ್ಕೆ ಇನ್ನೂ ಹೆಚ್ಚಿನದನ್ನೇ ಮಾಡುವ ತಾಕತ್ತು ನಮಗಿತ್ತು
ಪಾಕಿಸ್ತಾನಕ್ಕೆ ಇನ್ನೂ ಹೆಚ್ಚಿನದನ್ನೇ ಮಾಡುವ ತಾಕತ್ತು ನಮಗಿತ್ತು