AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

DA Hike: ಶೇ. 4ರಷ್ಟು ಡಿಎ ಹೆಚ್ಚಳ ಮಾಡಿದರೆ ಸಂಬಳದಲ್ಲಿ ಎಷ್ಟು ಏರಿಕೆಯಾಗಬಹುದು? ಇಲ್ಲಿದೆ ಲೆಕ್ಕಾಚಾರ

7th Pay Commission Updates: ಈ ಬಾರಿ ತುಟ್ಟಿಭತ್ಯೆ ಶೇ. 3ರಷ್ಟು ಹೆಚ್ಚು ಮಾಡಲು ಶಿಫಾರಸು ಮಾಡಲಾಗಿದ್ದರೂ ಕೇಂದ್ರ ಸರ್ಕಾರ ಶೇ. 4ರಷ್ಟು ಡಿಎ ಏರಿಸುವ ಸಾಧ್ಯತೆ ಇದೆ. ಅಕ್ಟೋಬರ್ ಕೊನೆಯ ವಾರ ಅಥವಾ ನವೆಂಬರ್ ಮೊದಲ ವಾರದಲ್ಲಿ ಡಿಎ ಮತ್ತು ಡಿಆರ್ ಹೆಚ್ಚಳದ ಬಗ್ಗೆ ಘೋಷಣೆ ಬರಬಹುದು. ಒಂದು ವೇಳೆ, ಡಿಎ ಶೇ. 4ರಷ್ಟು ಹೆಚ್ಚಾದರೆ ಸಂಬಳ ಎಷ್ಟು ಏರಿಕೆ ಆಗಬಹುದು ಎಂಬ ಒಂದು ಲೆಕ್ಕಾಚಾರ ಇಲ್ಲಿದೆ...

DA Hike: ಶೇ. 4ರಷ್ಟು ಡಿಎ ಹೆಚ್ಚಳ ಮಾಡಿದರೆ ಸಂಬಳದಲ್ಲಿ ಎಷ್ಟು ಏರಿಕೆಯಾಗಬಹುದು? ಇಲ್ಲಿದೆ ಲೆಕ್ಕಾಚಾರ
ಹಣ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 09, 2023 | 11:01 AM

Share

ನವದೆಹಲಿ, ಅಕ್ಟೋಬರ್ 9: ಹಬ್ಬದ ಋತುವಿನ ಮಧ್ಯದಲ್ಲಿ ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಡಿಎ (DA- dearness allowance) ಭಾಗ್ಯ ಸಿಗಲಿದೆ. ವರದಿಗಳ ಪ್ರಕಾರ ನವರಾತ್ರಿ ಮತ್ತು ದೀಪಾವಳಿ ಹಬ್ಬಗಳ ನಡುವೆ ತುಟ್ಟಿಭತ್ಯೆಯನ್ನು ಹೆಚ್ಚಿಸುವ ಸಾಧ್ಯತೆ ಇದೆ. ಸಾಮಾನ್ಯವಾಗಿ ವರ್ಷಕ್ಕೆರಡು ಬಾರಿ ಡಿಎ ಮತ್ತು ಡಿಆರ್ ಅನ್ನು ಏರಿಸಲಾಗುತ್ತದೆ. ಜನವರಿಯ ಏರಿಕೆಯನ್ನು ಮಾರ್ಚ್ 24ರಂದು ಪ್ರಕಟಿಸಲಾಗಿತ್ತು. ಇದೀಗ ಜುಲೈ ಪಾಳಿಯ ಏರಿಕೆಯನ್ನು ಅಕ್ಟೋಬರ್ ಕೊನೆಯ ವಾರ ಅಥವಾ ನವೆಂಬರ್ ಮೊದಲ ವಾರದಲ್ಲಿ ಘೋಷಿಸುವ ನಿರೀಕ್ಷೆ ಇದೆ. ಈ ಬಾರಿ ಶೇ. 3ರಷ್ಟು ಡಿಎ ಮತ್ತು ಡಿಆರ್ ಏರಿಸಲು ಶಿಫಾರಸು ಮಾಡಲಾಗಿದ್ದರೂ ಸರ್ಕಾರ ಶೇ. 4ರಷ್ಟು ಹೆಚ್ಚಳ ಮಾಡುವ ಸಾಧ್ಯತೆ ಇದೆ.

ಜನವರಿಯ ಏರಿಕೆಯೂ ಕೂಡ ಶೇ. 4ರಷ್ಟು ಆಗಿತ್ತು. ಸದ್ಯ ಡಿಎ ಮತ್ತು ಡಿಆರ್ ಶೇ. 42ರಷ್ಟಿದೆ. ಈಗ ನಾಲ್ಕ ಪ್ರತಿಶತದಷ್ಟು ಹೆಚ್ಚಾದರೆ ಅದರ ಪ್ರಮಾಣ ಶೇ. 46ಕ್ಕೆ ಏರುತ್ತದೆ.

ಶೇ. 4ರಷ್ಟು ಡಿಎ ಹೆಚ್ಚಾದರೆ ಸಂಬಳ ಎಷ್ಟು ಜಾಸ್ತಿ ಆಗುತ್ತದೆ?

ಡಿಎ ಎಂಬುದು ಹಣದುಬ್ಬರದ ಪರಿಣಾಮವನ್ನು ಸಮಗೊಳಿಸಲು ಸಂಬಳದ ಜೊತೆಗೆ ನೀಡುವ ಹೆಚ್ಚುವರಿ ಭತ್ಯೆಯಾಗಿರುತ್ತದೆ. ವೇತನ ಆಯೋಗದ ಶಿಫಾರಸಿನ ಮೇರೆಗೆ ಡಿಎ ಮತ್ತು ಡಿಆರ್ ನೀಡಲಾಗುತ್ತದೆ. ಮೂಲ ವೇತನಕ್ಕೆ (ಬೇಸಿಕ್ ಸ್ಯಾಲರಿ) ಹೆಚ್ಚುವರಿಯಾಗಿ ಇದು ಇರುತ್ತದೆ.

ಇದನ್ನೂ ಓದಿ: ರೂ 2,000 ನೋಟು ಇನ್ನೂ ಇವೆಯಾ?; ಕೆಲವೇ ಕಡೆ ನೋಟು ವಿನಿಮಯಕ್ಕೆ ಇನ್ನೂ ಇದೆ ಅವಕಾಶ; ಇಲ್ಲಿದೆ ಡೀಟೇಲ್ಸ್

ಒಬ್ಬ ಉದ್ಯೋಗಿಯ ಸಂಬಳ 60,000 ರೂ ಇದ್ದು, ಅದರಲ್ಲಿ ಮೂಲ ವೇತನದ ಪ್ರಮಾಣವು 25,000 ರೂ ಇದೆ ಎಂದಿಟ್ಟುಕೊಳ್ಳಿ. ಈ ಮೂಲ ವೇತನಕ್ಕೆ ಡಿಎ ಶೇ. 42 ಎಂದರೆ 10,500 ರೂ ಆಗುತ್ತದೆ. ಈಗ ಶೇ. 4ರಷ್ಟು ಡಿಎ ಹೆಚ್ಚಾದರೆ ಶೇ. 46 ಆಗುತ್ತದೆ. ಅಂದರೆ ಡಿಎ ಮೊತ್ತ 11,500 ರೂ ಆಗುತ್ತದೆ. 10,500 ರೂ ಇದ್ದದ್ದು 1,000 ರೂನಷ್ಟು ಡಿಎ ಹೆಚ್ಚಳವಾಗುತ್ತದೆ. 60,000 ರೂ ಇದ್ದ ಸಂಬಳ 61,000 ರೂಗೆ ಹೆಚ್ಚಾಗುತ್ತದೆ.

ಡಿಎ ಮತ್ತು ಡಿಆರ್ ಲೆಕ್ಕಾಚಾರ ಹೇಗೆ?

ಡಿಎ ಎಂಬುದನ್ನು ಹಾಲಿ ಸೇವೆಯಲ್ಲಿರುವ ಉದ್ಯೋಗಿಗಳಿಗೆ ನೀಡುವ ಭತ್ಯೆಯಾಗಿದೆ. ಡಿಆರ್ ಎಂಬುದು ಸೇವೆಯಿಂದ ನಿವೃತ್ತರಾಗಿ ಪಿಂಚಣಿ ಪಡೆಯುತ್ತಿರುವವರಿಗೆ ಕೊಡಲಾಗುತ್ತದೆ. ಬೆಲೆ ಏರಿಕೆಯ ಬಿಸಿ ತಾಕದಿರಲೆಂದು ಸಂಬಳ ಅಥವಾ ಪಿಂಚಣಿಗೆ ಹೆಚ್ಚುವರಿಯಾಗಿ ಕೊಡುವ ಹಣ ಇದು.

ಇದನ್ನೂ ಓದಿ: ಸಹಕಾರಿ ಬ್ಯಾಂಕುಗಳಲ್ಲಿ ಚಿನ್ನದ ಮೇಲಿನ ಸಾಲದ ಮಿತಿ 4 ಲಕ್ಷಕ್ಕೆ ಹೆಚ್ಚಳ; ಆರ್​ಬಿಐ ಮಹತ್ವದ ನಿರ್ಧಾರ

ಹಣದುಬ್ಬರದ ಆಧಾರದ ಮೇಲೆ ಡಿಎ ಅನ್ನು ಲೆಕ್ಕ ಮಾಡಲಾಗುತ್ತದೆ. ಅದಕ್ಕೆಂದು ಸಮಿತಿ ಇದ್ದು, ಅದು ಪ್ರತೀ ಬಾರಿಯೂ ಡಿಎ ಹೆಚ್ಚಳಕ್ಕೆ ಶಿಫಾರಸು ಮಾಡುತ್ತದೆ. ಹಣಕಾಸು ಸಚಿವಾಲಯದಿಂದ ಅನುಮೋದನೆ ಸಿಕ್ಕ ಬಳಿಕ ಡಿಎ ಘೋಷಣೆ ಮಾಡಲಾಗುತ್ತದೆ. ಈಗ ನವೆಂಬರ್​ನಲ್ಲಿ ಡಿಎ ಘೋಷಿಸಿದರೂ ಅದನ್ನು ಜುಲೈನಿಂದಲೇ ಅನ್ವಯ ಮಾಡಲಾಗುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ