ಡಿಎ ಮತ್ತು ಡಿಆರ್ ಶೇ. 3 ಹೆಚ್ಚಳಕ್ಕೆ ಸಂಪುಟ ಸಮ್ಮತಿ; ಅಧಿಕೃತ ಘೋಷಣೆಯಷ್ಟೇ ಬಾಕಿ

Central govt employees to get 3pc DA hike: ಕೇಂದ್ರ ಸರ್ಕಾರಿ ಉದ್ಯೋಗಿಗಳು ಮತ್ತು ಪಿಂಚಣಿದಾರರಿಗೆ ನೀಡಲಾಗುವ ಡಿಎ ಮತ್ತು ಡಿಆರ್ ಅನ್ನು ಈ ಬಾರಿ ಶೇ. 3ರಷ್ಟು ಏರಿಸಲಾಗಿದೆ. ಕೇಂದ್ರ ಸಂಪುಟದಿಂದ ಸಮ್ಮತಿ ಸಿಕ್ಕಿದ್ದು, ಅಧಿಕೃತ ಘೋಷಣೆ ಇಂದು (ಅ. 16) ಸಂಜೆ ಪ್ರಕಟವಾಗಬಹುದು. ಈಗ ಮೂಲವೇತನಕ್ಕೆ ಶೇ. 50ರಷ್ಟಿರುವ ತುಟ್ಟಿಭತ್ಯೆಯು ಶೇ. 53ಕ್ಕೆ ಏರಿಕೆ ಆಗಲಿದೆ.

ಡಿಎ ಮತ್ತು ಡಿಆರ್ ಶೇ. 3 ಹೆಚ್ಚಳಕ್ಕೆ ಸಂಪುಟ ಸಮ್ಮತಿ; ಅಧಿಕೃತ ಘೋಷಣೆಯಷ್ಟೇ ಬಾಕಿ
ಡಿಎ ಹೆಚ್ಚಳ
Follow us
|

Updated on: Oct 16, 2024 | 2:40 PM

ನವದೆಹಲಿ, ಅಕ್ಟೋಬರ್ 16: ಕೇಂದ್ರ ಸರ್ಕಾರದ ಉದ್ಯೋಗಿಗಳಿಗೆ ದೀಪಾವಳಿ ಗಿಫ್ಟ್ ಎಂಬಂತೆ ತುಟ್ಟಿಭತ್ಯೆ ಹೆಚ್ಚಳವಾಗುತ್ತಿದೆ. ಡಿಎ ಮತ್ತು ಡಿಆರ್ ಅನ್ನು ಶೇ 3ರಷ್ಟು ಹೆಚ್ಚಿಸಲು ಕೇಂದ್ರ ಸಂಪುಟ ಇಂದು ಬುಧವಾರ ಅನುಮೋದನೆ ನೀಡಿದೆ. ಕೇಂದ್ರ ಮಾಹಿತಿ ಮತ್ತು ಪ್ರಸರಣ ಸಚಿವ ಅಶ್ವಿನಿ ವೈಷ್ಣವ್ ಇಂದು ಸಂಜೆ ಅಧಿಕೃತವಾಗಿ ಘೋಷಿಸುವ ನಿರೀಕ್ಷೆ ಇದೆ. ಸರ್ಕಾರದ ಈ ಕ್ರಮವು ಲಕ್ಷಾಂತರ ಕೇಂದ್ರ ಸರ್ಕಾರೀ ಉದ್ಯೋಗಿಗಳು ಹಾಗೂ ಪಿಂಚಣಿದಾರರಿಗೆ ಲಾಭವಾಗಲಿದೆ.

ತುಟ್ಟಿಭತ್ಯೆ ಮತ್ತು ತುಟ್ಟಿಪರಿಹಾರವನ್ನು (ಡಿಆರ್) ಸರ್ಕಾರ ವರ್ಷಕ್ಕೆ ಎರಡು ಬಾರಿ ಹೆಚ್ಚಿಸುತ್ತದೆ. ಜನವರಿ ಮತ್ತು ಜುಲೈನಲ್ಲಿ ಹೆಚ್ಚಳವಾಗುತ್ತದೆ. ಬೆಲೆ ಏರಿಕೆಯ ಬಿಸಿ ತಾಕದಿರಲಿ ಎಂಬ ಕಾರಣಕ್ಕೆ ಸಂಬಳಕ್ಕೆ ಮತ್ತು ಪಿಂಚಣಿಗೆ ಹೆಚ್ಚುವರಿಯಾಗಿ ಡಿಯರ್ನೆಸ್ ಅಲೋಯನ್ಸ್ ಮತ್ತು ಡಿಯರ್ನೆಸ್ ರಿಲೀಫ್ ಅನ್ನು ನೀಡಲಾಗುತ್ತದೆ. ಹಣದುಬ್ಬರ ದರಕ್ಕೆ ಅನುಗುಣವಾಗಿ ಈ ಏರಿಕೆ ಇರುತ್ತದೆ. ಈಗ ಮಾಡಲಿರುವ ಡಿಎ ಮತ್ತು ಡಿಆರ್ ಹೆಚ್ಚಳವು ಜುಲೈ 1ರಿಂದಲೇ ಅನ್ವಯ ಆಗುತ್ತದೆ.

ಇದನ್ನೂ ಓದಿ: ಐದು ವರ್ಷದಲ್ಲಿ 5,00,000 ಉದ್ಯೋಗ ಸೃಷ್ಟಿಸಲಿದ್ದೇವೆ: ಟಾಟಾ ಗ್ರೂಪ್ ಮುಖ್ಯಸ್ಥ ಚಂದ್ರಶೇಖರನ್

ಸದ್ಯ ಡಿಎ ಅಥವಾ ತುಟ್ಟಿಭತ್ಯೆಯು ಮೂಲವೇತನದ ಶೇ. 50ರಷ್ಟಿದೆ. ಈಗ ಹೆಚ್ಚಳವಾದರೆ ಡಿಎ ಶೇ. 53ಕ್ಕೆ ಏರಲಿದೆ. ಒಬ್ಬ ಸರ್ಕಾರಿ ಉದ್ಯೋಗಿಯ ಪೂರ್ಣ ಮಾಸಿಕ ವೇತನದಲ್ಲಿ ಬೇಸಿಕೆ ಪೇ ಅಥವಾ ಮೂಲವೇತನವು 30,000 ರೂ ಇದ್ದಲ್ಲಿ ಈಗ 15,000 ರೂನಷ್ಟು ಡಿಎ ಅನ್ನು ಹೆಚ್ಚುವರಿಯಾಗಿ ನೀಡಲಾಗುತ್ತದೆ. ಈಗ ಶೇ. 3ರಷ್ಟು ಡಿಎ ಹೆಚ್ಚಳವಾದರೆ 900 ರೂ ಸೇರ್ಪಡೆಯಾಗುತ್ತದೆ. ಅಂದರೆ 15,900 ರೂನಷ್ಟು ಡಿಎ ಆಗುತ್ತದೆ.

ಈಗ್ಗೆ ಕೆಲವಾರ ವರ್ಷಗಳಿಂದಲೂ ಸರ್ಕಾರ ವರ್ಷಕ್ಕೆ ಎರಡು ಬಾರಿ ಶೇ. 4ರಷ್ಟು ಡಿಎ ಮತ್ತು ಡಿಆರ್ ಹೆಚ್ಚಳ ಮಾಡುತ್ತಾ ಬಂದಿದೆ. ಈ ಬಾರಿ ಶೇ. 3ರಷ್ಟು ಮಾತ್ರವೇ ಏರಿಕೆ ಆಗಲಿದೆ. ಜೂನ್ ಅಂತ್ಯಕ್ಕೆ ಮುಂಚಿನ 12 ತಿಂಗಳ ಸರಾಸರಿ ಹಣದುಬ್ಬರ ದರದ ಆಧಾರದ ಮೇಲೆ ಡಿಎ ಮತ್ತು ಡಿಆರ್ ಏರಿಕೆಯನ್ನು ನಿರ್ಧರಿಸಲಾಗಿದೆ.

ಇದನ್ನೂ ಓದಿ: ಮಾರಕ 31 ಪ್ರಿಡೇಟರ್ ಡ್ರೋನ್ ಖರೀದಿಗೆ ಅಮೆರಿಕದೊಂದಿಗೆ ಭಾರತ ಒಪ್ಪಂದ; ಅಲ್​ಖೈದಾ ನಾಯಕನನ್ನು ಸಂಹರಿಸಿದ್ದು ಇದೇ ಡ್ರೋನ್

ಸೆಪ್ಟೆಂಬರ್, ಅಕ್ಟೋಬರ್ ತಿಂಗಳುಗಳು ಹಬ್ಬರ ಸೀಸನ್ ಆದ್ದರಿಂದ, ಸೆಪ್ಟೆಂಬರ್​ನಲ್ಲೇ ಉದ್ಯೋಗಿಗಳು ಡಿಎ ಹೆಚ್ಚಳ ನಿರೀಕ್ಷಿಸಿದ್ದರು. ಸಾಮಾನ್ಯವಾಗಿ ಜನವರಿಯ ಡಿಎ ಹೆಚ್ಚಳವನ್ನು ಮಾರ್ಚ್​ನಲ್ಲೂ, ಜುಲೈನ ಹೆಚ್ಚಳವನ್ನು ಸೆಪ್ಟೆಂಬರ್​ನಲ್ಲೂ ಘೋಷಿಸಲಾಗುತ್ತದೆ. ಈ ಬಾರಿ ಸೆಪ್ಟೆಂಬರ್ ಮುಗಿದರೂ ಸರ್ಕಾರದ ವತಿಯಿಂದ ಹೆಚ್ಚಳದ ಘೋಷಣೆ ಬಂದಿರಲಿಲ್ಲ. ಇದರಿಂದ ಬಹಳಷ್ಟು ಸರ್ಕಾರಿ ಉದ್ಯೋಗಿಗಳು ವ್ಯಾಕುಲಗೊಂಡಿದ್ದರು. ಕೇಂದ್ರ ಸರ್ಕಾರಿ ಉದ್ಯೋಗಿಗಳು ಮತ್ತು ಕಾರ್ಮಿಕರ ಮಹಾ ಒಕ್ಕೂಟವು ಈ ಸಂಬಂಧ ಹಣಕಾಸು ಸಚಿವಾಲಯಕ್ಕೆ ಪತ್ರ ಬರೆದು ಡಿಎ ಹೆಚ್ಚಳಕ್ಕೆ ಆಗ್ರಹಿಸಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ತೊರೆಕಾಡನಹಳ್ಳಿಗೆ ಕಾರಿನ ಬದಲು ಲಕ್ಸುರಿ ಬಸ್ಸಲ್ಲಿ ಹೋಗುವ ಅಗತ್ಯವಿತ್ತೇ?
ತೊರೆಕಾಡನಹಳ್ಳಿಗೆ ಕಾರಿನ ಬದಲು ಲಕ್ಸುರಿ ಬಸ್ಸಲ್ಲಿ ಹೋಗುವ ಅಗತ್ಯವಿತ್ತೇ?
ಮಳೆ ಅವಾಂತರ: ಕರ್ನಾಟಕ ಪೊಲೀಸ್ ಅಧಿಕಾರಿ ಮನೆಗೂ ನುಗ್ಗಿದ ನೀರು
ಮಳೆ ಅವಾಂತರ: ಕರ್ನಾಟಕ ಪೊಲೀಸ್ ಅಧಿಕಾರಿ ಮನೆಗೂ ನುಗ್ಗಿದ ನೀರು
ಅಭಿಮಾನಿಗಳ ಹರ್ಷೋದ್ಗಾರ... ಮಳೆಗೂ ಕುಗ್ಗದ ಕಿಂಗ್ ಕೊಹ್ಲಿಯ ಕ್ರೇಝ್
ಅಭಿಮಾನಿಗಳ ಹರ್ಷೋದ್ಗಾರ... ಮಳೆಗೂ ಕುಗ್ಗದ ಕಿಂಗ್ ಕೊಹ್ಲಿಯ ಕ್ರೇಝ್
ಸುರೇಶಣ್ಣ ಸ್ಪರ್ಧಿಸಿದರೆ ಮನೆಮನೆ ತಿರುಗಿ ಪ್ರಚಾರ ಮಾಡುವೆ: ಪ್ರದೀಪ್ ಈಶ್ವರ್
ಸುರೇಶಣ್ಣ ಸ್ಪರ್ಧಿಸಿದರೆ ಮನೆಮನೆ ತಿರುಗಿ ಪ್ರಚಾರ ಮಾಡುವೆ: ಪ್ರದೀಪ್ ಈಶ್ವರ್
ಮಗನೇ ಮತ್ತೊಮ್ಮೆ ಹುಟ್ಟಿಬಂದಷ್ಟು ಸಂತೋಷವಾಗುತ್ತಿದೆ ಎಂದ ಶಿವನಗೌಡ
ಮಗನೇ ಮತ್ತೊಮ್ಮೆ ಹುಟ್ಟಿಬಂದಷ್ಟು ಸಂತೋಷವಾಗುತ್ತಿದೆ ಎಂದ ಶಿವನಗೌಡ
ಪ್ರಕೃತಿಗೆ ಬುದ್ಧಿ ಹೇಳಲಾಗುತ್ತಾ ಅಂತ ಹಾರಿಕೆ ಉತ್ತರಕ್ಕೆ ಶರಣಾದ ಶಿವಕುಮಾರ್
ಪ್ರಕೃತಿಗೆ ಬುದ್ಧಿ ಹೇಳಲಾಗುತ್ತಾ ಅಂತ ಹಾರಿಕೆ ಉತ್ತರಕ್ಕೆ ಶರಣಾದ ಶಿವಕುಮಾರ್
ಪರಪ್ಪನ ಅಗ್ರಹಾರ ಜೈಲಿನಿಂದ ಶಾಸಕ ಮುನಿರತ್ನ ಬಿಡಗುಡೆ
ಪರಪ್ಪನ ಅಗ್ರಹಾರ ಜೈಲಿನಿಂದ ಶಾಸಕ ಮುನಿರತ್ನ ಬಿಡಗುಡೆ
ಇಂದಿರಾನಗರದಲ್ಲಿ ವರುಣಾರ್ಭಟ; 17ನೇ ಡಿ ಕ್ರಾಸ್ ಸಂಪೂರ್ಣ ಜಲಾವೃತ
ಇಂದಿರಾನಗರದಲ್ಲಿ ವರುಣಾರ್ಭಟ; 17ನೇ ಡಿ ಕ್ರಾಸ್ ಸಂಪೂರ್ಣ ಜಲಾವೃತ
ಸುರಿವ ಮಳೆಯಿಂದ ಬೆಂಗಳೂರು ನಿವಾಸಿಗಳಿಗೆ ರಾತ್ರಿಯೂ ತಪ್ಪದ ಬವಣೆ
ಸುರಿವ ಮಳೆಯಿಂದ ಬೆಂಗಳೂರು ನಿವಾಸಿಗಳಿಗೆ ರಾತ್ರಿಯೂ ತಪ್ಪದ ಬವಣೆ
ಮಾನ್ಯತಾ ಟೆಕ್ ಪಾರ್ಕ್ ಮುಖ್ಯ ರಸ್ತೆ ಜಲಾವೃತಗೊಳ್ಳಲು ಕಾರಣ ಇದುವೇ ನೋಡಿ!
ಮಾನ್ಯತಾ ಟೆಕ್ ಪಾರ್ಕ್ ಮುಖ್ಯ ರಸ್ತೆ ಜಲಾವೃತಗೊಳ್ಳಲು ಕಾರಣ ಇದುವೇ ನೋಡಿ!