AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

GST Collection: ಜನವರಿಯಲ್ಲಿ 1.55 ಲಕ್ಷ ಕೋಟಿ ಜಿಎಸ್​ಟಿ ಸಂಗ್ರಹ; ಏಪ್ರಿಲ್ ನಂತರ ಗರಿಷ್ಠ ಗಳಿಕೆ

ಪ್ರಸಕ್ತ ಹಣಕಾಸು ವರ್ಷದಲ್ಲಿ ಜಿಎಸ್​ಟಿ ಸಂಗ್ರಹ 1.50 ಲಕ್ಷ ಕೋಟಿ ದಾಟಿರುವುದು ಇದೇ ಮೂರನೇ ಬಾರಿ ಎಂದು ಹಣಕಾಸು ಸಚಿವಾಲಯ ಹೇಳಿದೆ.

GST Collection: ಜನವರಿಯಲ್ಲಿ 1.55 ಲಕ್ಷ ಕೋಟಿ ಜಿಎಸ್​ಟಿ ಸಂಗ್ರಹ; ಏಪ್ರಿಲ್ ನಂತರ ಗರಿಷ್ಠ ಗಳಿಕೆ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Feb 01, 2023 | 9:04 AM

Share

ನವದೆಹಲಿ: ಜನವರಿ ತಿಂಗಳಲ್ಲಿ 1.55 ಲಕ್ಷ ಕೋಟಿ ರೂ. ಸರಕು ಮತ್ತು ಸೇವಾ ತೆರಿಗೆ (GST) ಸಂಗ್ರಹವಾಗಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ತಿಂಗಳೊಂದರಲ್ಲಿ ಸಂಗ್ರಹವಾದ ಎರಡನೇ ಅತಿಹೆಚ್ಚಿನ ಜಿಎಸ್​ಟಿ ಸಂಗ್ರಹ (GST Collection) ಇದಾಗಿದೆ. ಈ ಹಿಂದೆ 2022ರ ಏಪ್ರಿಲ್​​ನಲ್ಲಿ 1.68 ಲಕ್ಷ ಕೋಟಿ ರೂ. ಜಿಎಸ್​ಟಿ ಸಂಗ್ರಹವಾಗಿತ್ತು. ಜನವರಿ 31ರ ಸಂಜೆ 5 ಗಂಟೆ ವೇಳೆಗೆ ತಿಂಗಳ ಜಿಎಸ್​ಟಿ ಸಂಗ್ರಹ 1,55,922 ಕೋಟಿ ರೂ. ಆಗಿದೆ. ಈ ಪೈಕಿ 28,963 ಕೋಟಿ ರೂ. ಕೇಂದ್ರ ಜಿಎಸ್​​ಟಿ, 36,730 ಕೋಟಿ ರೂ. ರಾಜ್ಯ ಜಿಎಸ್​​ಟಿ, 79,599 ಕೋಟಿ ರೂ. ಐಜಿಎಸ್​ಟಿ (ಆಮದು ಸರಕುಗಳಿಂದ ಸಂಗ್ರಹಿಸಿದ 37,118 ಕೋಟಿ ರೂ. ಸೇರಿ) ಹಾಗೂ 10,630 ಕೋಟಿ ರೂ. ಸೆಸ್ (ಆಮದು ಸರಕುಗಳಿಂದ ಸಂಗ್ರಹಿಸಿರುವ 768 ಕೋಟಿ ರೂ. ಸೇರಿ) ಒಳಗೊಂಡಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಕಳೆದ ಹಣಕಾಸು ವರ್ಷದ ಜನವರಿ ವರೆಗಿನ ಅವಧಿಗೆ ಹೋಲಿಸಿದರೆ ಪ್ರಸಕ್ತ ಹಣಕಾಸು ವರ್ಷದಲ್ಲಿ 2023ರ ಜನವರಿ ವರೆಗೆ ಜಿಎಸ್​ಟಿ ಆದಾಯ ಶೇ 24ರಷ್ಟು ಹೆಚ್ಚಳವಾಗಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಜಿಎಸ್​ಟಿ ಸಂಗ್ರಹ 1.50 ಲಕ್ಷ ಕೋಟಿ ದಾಟಿರುವುದು ಇದೇ ಮೂರನೇ ಬಾರಿ ಎಂದು ಸಚಿವಾಲಯ ಹೇಳಿದೆ.

ಇದನ್ನೂ ಓದಿ: ಇಂದು ಕೇಂದ್ರ ಬಜೆಟ್​; ಮಂಡನೆ ಸಮಯ, ಲೈವ್​ ವಿಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ

‘ಕಳೆದ ಒಂದು ವರ್ಷದಲ್ಲಿ ತೆರಿಗೆ ಮೂಲಗಳನ್ನು ಹೆಚ್ಚಿಸಲು ಮತ್ತು ಸಹಕಾರ ಹೆಚ್ಚಿಸಲು ವಿವಿಧ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಎಸ್​ಟಿ ರಿಟರ್ನ್ಸ್ ಫೈಲ್ ಮಾಡುವವರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದೆ’ ಎಂದು ಸಚಿವಾಲಯ ಹೇಳಿದೆ.

2022ರ ಅಕ್ಟೋಬರ್ – ಡಿಸೆಂಬರ್ ತ್ರೈಮಾಸಿಕದಲ್ಲಿ ಒಟ್ಟು 2.42 ಕೋಟಿ ಜಿಎಸ್​ಟಿ ರಿಟರ್ನ್ಸ್ ಫೈಲ್ ಮಾಡಲಾಗಿದೆ. ಅದಕ್ಕೂ ಹಿಂದಿನ ವರ್ಷದ ಅಕ್ಟೋಬರ್ – ಡಿಸೆಂಬರ್ ತ್ರೈಮಾಸಿಕದಲ್ಲಿ 2.19 ಕೋಟಿ ಜಿಎಸ್​ಟಿ ರಿಟರ್ನ್ಸ್ ಫೈಲ್ ಮಾಡಲಾಗಿತ್ತು. ಇದು ತೆರಿಗೆ ಮೂಲಗಳನ್ನು ಹೆಚ್ಚಿಸಲು ಮತ್ತು ಸಹಕಾರ ಹೆಚ್ಚಿಸಲು ಕೈಗೊಂಡಿರುವ ಹಲವು ಕ್ರಮಗಳ ಪರಿಣಾಮವಾಗಿದೆ ಎಂದೂ ಸಚಿವಾಲಯ ತಿಳಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ