AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pensioners Life Certificate: ಪಿಂಚಣಿದಾರರ ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸುವ ಗಡುವು ಡಿಸೆಂಬರ್​ 31ಕ್ಕೆ ವಿಸ್ತರಣೆ

ಪಿಂಚಣಿದಾರರು ತಮ್ಮ ಜೀವಿತ ಪ್ರಮಾಣ ಪತ್ರವನ್ನು ಸಲ್ಲಿಸುವುದಕ್ಕೆ ಈ ಹಿಂದೆ ಇದ್ದ ಗಡುವನ್ನು ನವೆಂಬರ್ 30ರಿಂದ ಡಿಸೆಂಬರ್ 31ಕ್ಕೆ ವಿಸ್ತರಿಸಲಾಗಿದೆ.

Pensioners Life Certificate: ಪಿಂಚಣಿದಾರರ ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸುವ ಗಡುವು ಡಿಸೆಂಬರ್​ 31ಕ್ಕೆ ವಿಸ್ತರಣೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on: Dec 02, 2021 | 4:56 PM

ಲಕ್ಷಾಂತರ ಸಂಖ್ಯೆಯಲ್ಲಿ ಇರುವ ಪಿಂಚಣಿದಾರರಿಗೆ ನಿರಾಳ ತರುವಂಥ ಸುದ್ದಿಯೊಂದು ಇಲ್ಲಿದೆ. ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿ ಸಚಿವಾಲಯವು ಜೀವಿತ ಪ್ರಮಾಣಪತ್ರವನ್ನು ಸಲ್ಲಿಸುವ ಗಡುವನ್ನು ನವೆಂಬರ್ 30, 2021ರಿಂದ ಡಿಸೆಂಬರ್ 31, 2021ರ ವರೆಗೆ ವಿಸ್ತರಿಸಿದೆ. ಪ್ರತಿಯೊಬ್ಬ ಕೇಂದ್ರ ಸರ್ಕಾರಿ ನಿವೃತ್ತ ಉದ್ಯೋಗಿಯು ತನ್ನ ಪಿಂಚಣಿಯನ್ನು ಮುಂದುವರೆಸಲು ನವೆಂಬರ್ ತಿಂಗಳಿನಲ್ಲಿ ಜೀವಿತ ಪ್ರಮಾಣಪತ್ರವನ್ನು ಸಲ್ಲಿಸಬೇಕಾಗುತ್ತದೆ. ಸಿಬ್ಬಂದಿ ಸಚಿವಾಲಯ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿ ಕಚೇರಿ ಸುತ್ತೋಲೆಯ ಪ್ರಕಾರ, ಈ ಉದ್ದೇಶಕ್ಕಾಗಿ ಹೆಚ್ಚಿನ ಸಂಖ್ಯೆಯ ಕೇಂದ್ರ ಸರ್ಕಾರದ ಪಿಂಚಣಿದಾರರು ದೈಹಿಕವಾಗಿ ಬ್ಯಾಂಕ್ ಶಾಖೆಗೆ ಭೇಟಿ ನೀಡುತ್ತಾರೆ.

ಆದ್ದರಿಂದ, ವಿವಿಧ ರಾಜ್ಯಗಳಲ್ಲಿನ ಕೊವಿಡ್ -19 ಸಾಂಕ್ರಾಮಿಕವನ್ನು ಗಮನದಲ್ಲಿಟ್ಟುಕೊಂಡು ಮತ್ತು ಕೊರೊನಾ ವೈರಸ್‌ಗೆ ವಯಸ್ಸಾದವರಲ್ಲಿ ದುರ್ಬಲತೆಯನ್ನು ದೃಷ್ಟಿಯಲ್ಲಿ ಇರಿಸಿಕೊಂಡು ಎಲ್ಲ ವಯೋಮಾನದ ಪಿಂಚಣಿದಾರರಿಗೆ ಜೀವಿತ ಪ್ರಮಾಣಪತ್ರವನ್ನು ಸಲ್ಲಿಸಲು ಅಸ್ತಿತ್ವದಲ್ಲಿರುವ ಸಮಯವನ್ನು 30/11/2021ರಿಂದ ವಿಸ್ತರಿಸಲು ಸಚಿವಾಲಯವು ನಿರ್ಧರಿಸಿದೆ. ಈಗ ಕೇಂದ್ರ ಸರ್ಕಾರದ ಎಲ್ಲ ಪಿಂಚಣಿದಾರರು 31ನೇ ಡಿಸೆಂಬರ್, 2021ರ ವರೆಗೆ ಜೀವಿತ ಪ್ರಮಾಣಪತ್ರವನ್ನು ಸಲ್ಲಿಸಬಹುದು.

ಈ ವಿಸ್ತೃತ ಅವಧಿಯಲ್ಲಿ, ಪಿಂಚಣಿ ವಿತರಿಸುವ ಅಧಿಕಾರಿಗಳು (ಪಿಡಿಎ) ತಡೆರಹಿತವಾಗಿ ಪಿಂಚಣಿ ಪಾವತಿಸುವುದನ್ನು ಮುಂದುವರಿಸಲಾಗುತ್ತದೆ. ಜೀವಿತ ಪ್ರಮಾಣಪತ್ರಗಳನ್ನು ಪಡೆಯುವಾಗ ಅಗತ್ಯ ಮೇಲಿನ ಕ್ರಮಗಳು ಶಾಖೆಗಳಲ್ಲಿ ನೂಕುನುಗ್ಗಲನ್ನು ತಪ್ಪಿಸಲು ಮತ್ತು ಕೊವಿಡ್-19 ಸೂಕ್ತವಾದ ನಡವಳಿಕೆಯನ್ನು ಕಾಪಾಡಿಕೊಳ್ಳಲು ನಿರೀಕ್ಷಿಸಲಾಗಿದೆ ಎಂದು ಕಚೇರಿ ಸುತ್ತೋಲೆ ಹೇಳಿದೆ. ಶಾಖೆಗಳಲ್ಲಿ ಸರಿಯಾದ ವ್ಯವಸ್ಥೆಗಳು ಮತ್ತು ಸಾಮಾಜಿಕ ಅಂತರದ ಕ್ರಮಗಳನ್ನು ಖಚಿತಪಡಿಸಿಕೊಳ್ಳಲು ಮತ್ತು ಜನಸಂದಣಿಯನ್ನು ತಡೆಯಲು ಪಿಡಿಎಗಳನ್ನು ಸುತ್ತೋಲೆ ಕೇಳಿದೆ.

ಇದನ್ನೂ ಓದಿ: Financial changes: ಡಿಸೆಂಬರ್ 1ರಿಂದ ಜಾರಿ ಆಗಬಹುದಾದ ಪ್ರಮುಖ ಹಣಕಾಸು ವಿಚಾರದ ಬದಲಾವಣೆಗಳಿವು

ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ