AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿ ಹಬ್ಬದಂದು ಆರು ದಿನ ಬ್ಯಾಂಕುಗಳ ರಜೆ; ನಿಮ್ಮ ಪ್ರದೇಶದಲ್ಲಿ ಯಾವ್ಯಾವತ್ತು ಇದೆ ರಜೆ, ಇಲ್ಲಿದೆ ಪಟ್ಟಿ

Bank Holidays During Deepavali Festival: ಆರ್​ಬಿಐ ವೇಳಾಪಟ್ಟಿ ಪ್ರಕಾರ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಆರು ದಿನ ರಜೆಗಳಿವೆ. ನವೆಂಬರ್ 10ರಿಂದ ಆರಂಭವಾಗಿ ನವೆಂಬರ್ 15ರವರೆಗೂ ನಿರಂತರವಾಗಿ ಆರು ದಿನ ರಜೆಗಳಿವೆ. ಇದರಲ್ಲಿ ಎರಡನೇ ಶನಿವಾರ ಮತ್ತು ಭಾನುವಾರದ ರಜೆಗಳೂ ಒಳಗೊಂಡಿವೆ. ಸತತ ಆರು ದಿನ ರಜೆ ಎಲ್ಲೆಡೆ ಇಲ್ಲ. ಕರ್ನಾಟಕದಲ್ಲಿ ಬ್ಯಾಂಕುಗಳಿಗೆ ನವೆಂಬರ್ 14ಕ್ಕೆ ದೀಪಾವಳಿ ಹಬ್ಬಕ್ಕೆ ರಜೆ ಇದೆ. ಗುಜರಾತ್, ಮಹಾರಾಷ್ಟ್ರ ಮತ್ತು ಸಿಕ್ಕಿಂ ರಾಜ್ಯಗಳಲ್ಲೂ ಇದೇ ದಿನ ರಜೆ ಇದೆ.

ದೀಪಾವಳಿ ಹಬ್ಬದಂದು ಆರು ದಿನ ಬ್ಯಾಂಕುಗಳ ರಜೆ; ನಿಮ್ಮ ಪ್ರದೇಶದಲ್ಲಿ ಯಾವ್ಯಾವತ್ತು ಇದೆ ರಜೆ, ಇಲ್ಲಿದೆ ಪಟ್ಟಿ
ಬ್ಯಾಂಕ್ ರಜೆ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 09, 2023 | 11:13 AM

ಬೆಂಗಳೂರು, ನವೆಂಬರ್ 9: ಇದೀಗ ಹಬ್ಬದ ಸೀಸನ್​ನ ಉತ್ತುಂಗಕ್ಕೆ ಬಂದಿದ್ದೇವೆ. ನಾಳೆಯಿಂದ ದೀಪಾವಳಿ ಹಬ್ಬ ಶುರುವಾಗುತ್ತದೆ. ದೇಶಾದ್ಯಂತ ಬಹಳ ವ್ಯಾಪಕವಾಗಿ ನಡೆಯುವ ಬೆಳಕಿನ ಹಬ್ಬ ದೀಪಾವಳಿ ಸಂದರ್ಭದಲ್ಲಿ ರಜೆಗಳ ಸುಗ್ಗಿ ಇದೆ. ಆರ್​ಬಿಐ ವೇಳಾಪಟ್ಟಿ ಪ್ರಕಾರ ದೀಪಾವಳಿ ಹಬ್ಬದ ಸಂದರ್ಭದಲ್ಲಿ (Deepavali festival) ಆರು ದಿನ ರಜೆಗಳಿವೆ. ನವೆಂಬರ್ 10ರಿಂದ ಆರಂಭವಾಗಿ ನವೆಂಬರ್ 15ರವರೆಗೂ ನಿರಂತರವಾಗಿ ಆರು ದಿನ ರಜೆಗಳಿವೆ. ಇದರಲ್ಲಿ ಎರಡನೇ ಶನಿವಾರ ಮತ್ತು ಭಾನುವಾರದ ರಜೆಗಳೂ ಒಳಗೊಂಡಿವೆ. ಸತತ ಆರು ದಿನ ರಜೆ (bank holidays) ಎಲ್ಲೆಡೆ ಇಲ್ಲ. ಕರ್ನಾಟಕದಲ್ಲಿ ಬ್ಯಾಂಕುಗಳಿಗೆ ನವೆಂಬರ್ 14ಕ್ಕೆ ದೀಪಾವಳಿ ಹಬ್ಬಕ್ಕೆ ರಜೆ ಇದೆ. ಗುಜರಾತ್, ಮಹಾರಾಷ್ಟ್ರ ಮತ್ತು ಸಿಕ್ಕಿಂ ರಾಜ್ಯಗಳಲ್ಲೂ ಇದೇ ದಿನ ರಜೆ ಇದೆ.

ಇನ್ನು, ಮಹಾರಾಷ್ಟ್ರ, ಉತ್ತರಪ್ರದೇಶ, ರಾಜಸ್ಥಾನ, ಉತ್ತರಾಖಂಡ್ ಮೊದಲಾದ ಕೆಲ ರಾಜ್ಯಗಲ್ಲಿ ನವೆಂಬರ್ 13ಕ್ಕೆ ರಜೆ ಇದೆ. ಸಿಕ್ಕಿಂ ರಾಜ್ಯದ ಬ್ಯಾಂಕುಗಳಿಗೆ ನವೆಂಬರ್ 11ರಂದು ಆರಂಭವಾಗಿ ನವೆಂಬರ್ 15ರವರೆಗೂ ಸತತ ಐದು ದಿನ ರಜೆ ಇದೆ. ನವೆಂಬರ್ 10ರಿಂದ ಆರಂಭವಾಗಿ ಈ ತಿಂಗಳು ಬ್ಯಾಂಕುಗಳ ರಜಾದಿನಗಳ ಪಟ್ಟಿಯನ್ನು ಇಲ್ಲಿ ನೋಡಬಹುದು.

ಇದನ್ನೂ ಓದಿ: Bank Holidays: ನವೆಂಬರ್ ತಿಂಗಳಲ್ಲಿ ಭಾರತದಲ್ಲಿ ಬ್ಯಾಂಕುಗಳಿಗೆ 15 ದಿನ ರಜೆ; ಕರ್ನಾಟಕದಲ್ಲಿ ಎಷ್ಟು?; ಇಲ್ಲಿದೆ ಪಟ್ಟಿ

  • ನವೆಂಬರ್ 10, ಶುಕ್ರವಾರ: ವಂಗಲ ಹಬ್ಬ (ಮೇಘಾಲಯ ರಾಜ್ಯದಲ್ಲಿ ಬ್ಯಾಂಕುಗಳಿಗೆ ರಜೆ)
  • ನವೆಂಬರ್ 11: ಎರಡನೇ ಶನಿವಾರ
  • ನವೆಂಬರ್ 12: ಭಾನುವಾರ
  • ನವೆಂಬರ್ 13, ಸೋಮವಾರ: ಗೋವರ್ಧನ ಪೂಜೆ, ದೀಪಾವಳಿ ಹಬ್ಬ (ತ್ರಿಪುರಾ, ಸಿಕ್ಕಿಂ, ಉತ್ತರಾಖಂಡ್, ಮಣಿಪುರ, ರಾಜಸ್ಥಾನ, ಮಹಾರಾಷ್ಟ್ರ ಮತ್ತು ಉತ್ತರಪ್ರದೇಶದಲ್ಲಿ ಬ್ಯಾಂಕುಗಳಿಗೆ ರಜೆ).
  • ನವೆಂಬರ್ 14, ಮಂಗಳವಾರ: ದೀಪಾವಳಿ ಹಬ್ಬ (ಕರ್ನಾಟಕ, ಗುಜರಾತ್, ಮಹಾರಾಷ್ಟ್ರ, ಸಿಕ್ಕಿಂ ರಾಜ್ಯಗಳಲ್ಲಿ ಬ್ಯಾಂಕುಗಳಿಗೆ ರಜೆ.)
  • ನವೆಂಬರ್ 15, ಬುಧವಾರ: ದೀಪಾವಳಿ, ಚಿತ್ರಗುಪ್ತ ಜಯಂತಿ, ನಿಂಗೋಲ್ ಚಕ್ಕೋಬಾ, ಭ್ರತೃದ್ವಿತೀಯಾ ಆಚರಣೆ (ಸಿಕ್ಕಿಂ, ಮಣಿಪುರ, ಉತ್ತರಪ್ರದೇಶ, ಪಶ್ಚಿಮ ಬಂಗಾಳ ಮತ್ತು ಹಿಮಾಚಲಪ್ರದೇಶದಲ್ಲಿ ಬ್ಯಾಂಕುಗಳಿಗೆ ರಜೆ)
  • ನವೆಂಬರ್ 19: ಭಾನುವಾರದ ರಜೆ
  • ನವೆಂಬರ್ 20, ಸೋಮವಾರ: ಆರ್ಘ್ಯ (ಬಿಹಾರ ಮತ್ತು ರಾಜಸ್ಥಾನದಲ್ಲಿ ಬ್ಯಾಂಕುಗಳಿಗೆ ರಜೆ)
  • ನವೆಂಬರ್ 23, ಮಂಗಳವಾರ: ಸೆಂಗ್ ಕುತ್ಸ್​ನೆಮ್, ಇಗಾಸ್ ಬಾಗವಾಲ್ ಹಬ್ಬ (ಉತ್ತರಾಖಂಡ್ ಮತ್ತು ಸಿಕ್ಕಿಂ ರಾಜ್ಯಗಳಲ್ಲಿ ಬ್ಯಾಂಕುಗಳಿಗೆ ರಜೆ).
  • ನವೆಂಬರ್ 25: ನಾಲ್ಕನೇ ಶನಿವಾರದ ರಜೆ
  • ನವೆಂಬರ್ 26: ಭಾನುವಾರದ ರಜೆ
  • ನವೆಂಬರ್ 27, ಸೋಮವಾರ: ಗುರು ನಾನಕ್ ಜಯಂತಿ, ಕಾರ್ತಿಕ ಪೂರ್ಣಮಾ ಮತ್ತು ರಾಹಸ್ ಪೂರ್ಣಿಮಾ ಹಬ್ಬ ಪ್ರಯುಕ್ತ ಮಧ್ಯಪ್ರದೇಶ, ಒಡಿಶಾ, ತ್ರಿಪುರಾ, ಮಿಜೋರಾಂ, ಮಹಾರಾಷ್ಟ್ರ, ಚಂಡೀಗಡ, ಉತ್ತರಾಖಂಡ್, ತೆಲಂಗಾಣ, ರಾಜಸ್ಥಾನ, ಜಮ್ಮು, ಉತ್ತರಪ್ರದೇಶ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ದೆಹಲಿ, ಬಿಹಾರ, ಜಾರ್ಖಂಡ್ ಮತ್ತು ಹಿಮಾಚಲಪ್ರದೇಶಗಳಲ್ಲಿ ಬ್ಯಾಂಕುಗಳಿಗೆ ರಜೆ.
  • ನವೆಂಬರ್ 30, ಗುರುವಾರ: ಕನಕದಾಸ ಜಯಂತಿ (ಕರ್ನಾಟಕದಲ್ಲಿ ರಜೆ)

ಇದನ್ನೂ ಓದಿ: ವಿಸ್ತಾರ ಏರ್ಲೈನ್ಸ್​ನಿಂದ ಫೆಸ್ಟಿವಲ್ ಆಫರ್; ಕೇವಲ 1,999 ರೂನಿಂದ ಟಿಕೆಟ್ ಬೆಲೆ ಶುರು; ನವೆಂಬರ್ 9ರವರೆಗೆ ಅವಕಾಶ

ಕರ್ನಾಟಕದಲ್ಲಿ ನವೆಂಬರ್ 10ರ ನಂತರ ಬ್ಯಾಂಕುಗಳಿಗೆ ಇರುವ ರಜೆಗಳು

  • ನವೆಂಬರ್ 11: ಎರಡನೇ ಶನಿವಾರ
  • ನವೆಂಬರ್ 12: ಭಾನುವಾರ
  • ನವೆಂಬರ್ 14, ಮಂಗಳವಾರ: ದೀಪಾವಳಿ ಹಬ್ಬ
  • ನವೆಂಬರ್ 19: ಭಾನುವಾರದ ರಜೆ
  • ನವೆಂಬರ್ 25: ನಾಲ್ಕನೇ ಶನಿವಾರದ ರಜೆ
  • ನವೆಂಬರ್ 26: ಭಾನುವಾರದ ರಜೆ
  • ನವೆಂಬರ್ 30, ಗುರುವಾರ: ಕನಕದಾಸ ಜಯಂತಿ

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ