AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರಂಗ್ ಶಕ್ತಿ ಖರೀದಿಸಿದ ಎಲ್​ಎಟಿ ಏರೋಸ್ಪೇಸ್; ಅಗ್ಗದ ವಿಮಾನ ತಯಾರಿಸುವ ಹಾದಿಯಲ್ಲಿ ಜೊಮಾಟೊ ಸಂಸ್ಥಾಪಕ

Deepinder Goyal's LAT Aerospace acquires Sharang Shakti: ದೀಪಿಂದರ್ ಗೋಯಲ್ ಅವರ ಎಲ್​ಎಟಿ ಏರೋಸ್ಪೇಸ್ ತನ್ನ ನಾಗರಿಕ ವಿಮಾನ ತಯಾರಿಕೆಯ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇರಿಸಿದೆ. ಮೂರು ವರ್ಷದ ಹಿಂದೆ ಸ್ಥಾಪನೆಯಾದ ಶಾರಂಗ್ ಶಕ್ತಿ ಎನ್ನುವ ಡಿಫೆನ್ಸ್ ರೋಬೋಟಿಕ್ಸ್ ಸ್ಟಾರ್ಟಪ್ ಅನ್ನು ಖರೀದಿ ಮಾಡಿದೆ.

ಶಾರಂಗ್ ಶಕ್ತಿ ಖರೀದಿಸಿದ ಎಲ್​ಎಟಿ ಏರೋಸ್ಪೇಸ್; ಅಗ್ಗದ ವಿಮಾನ ತಯಾರಿಸುವ ಹಾದಿಯಲ್ಲಿ ಜೊಮಾಟೊ ಸಂಸ್ಥಾಪಕ
ದೀಪಿಂದರ್ ಗೋಯಲ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 24, 2026 | 7:26 PM

Share

ನವದೆಹಲಿ, ಫೆಬ್ರುವರಿ 24: ಜೊಮಾಟೊ ಸಂಸ್ಥಾಪಕ ದೀಪಿಂದರ್ ಗೋಯಲ್ ಮಾಲಕತ್ವದ ಮತ್ತೊಂದು ಕಂಪನಿಯಾದ ಎಲ್​ಎಟಿ ಏರೋಸ್ಪೇಸ್ ಇದೀಗ ಡಿಫೆನ್ಸ್ ಸೆಕ್ಟರ್​ನ ಸ್ಟಾರ್ಟಪ್​ವೊಂದನ್ನು ಖರೀದಿಸಿದೆ. ಗುರುಗ್ರಾಮ್​ನಲ್ಲಿರುವ ಶಾರಂಗ್ ಶಕ್ತಿ ಎನ್ನುವ ಹೊಸ ಡಿಫೆನ್ಸ್ ರೋಬೋಟಿಕ್ಸ್ ಸ್ಟಾರ್ಟಪ್ ಅನ್ನು ಖರೀದಿ ಮಾಡಿದೆ. ಮುಂದಿನ ತಲೆಮಾರಿನ ನಾಗರಿಕ ವಿಮಾನಯಾನ ಪ್ಲಾಟ್​ಫಾರ್ಮ್​ಗಳನ್ನು ನಿರ್ಮಿಸುವ ದೂರಗಾಮಿ ಗುರಿ ಹೊಂದಿರುವ ಎಲ್​ಎಟಿ ಏರೋಸ್ಪೇಸ್​ಗೆ ಇದು ಮಹತ್ವದ ಹೆಜ್ಜೆ ಎನಿಸಿದೆ.

ಡಿಫೆನ್ಸ್ ಏವಿಯೇಶನ್​ನಲ್ಲಿರುವ ಕಂಪನಿಗಳು ಸಿವಿಲ್ ಏವಿಯೇಶನ್​ಗೆ ಬರುವುದು ಕಡಿಮೆ. ದೀಪಿಂದರ್ ಗೋಯಲ್ ಅವರ ಮಹತ್ವಾಕಾಂಕ್ಷೆಯ ಎಲ್​ಎಟಿ ಏರೋಸ್ಪೇಸ್ ಇಂತಹದ್ದೊಂದು ರಿಸ್ಕ್ ತೆಗೆದುಕೊಂಡಿದೆ. ಗೋಯಲ್ ಪ್ರಕಾರ, ವಿಮಾನಯಾನದ ಪ್ರಮುಖ ತಂತ್ರಜ್ಞಾನಗಳು ಎರಡಕ್ಕೂ ಸಾಮಾನ್ಯವಾಗಿರುತ್ತವೆ.

ಶಾರಂಗ್ ಶಕ್ತಿ ಕಂಪನಿ 2023ರಲ್ಲಿ ಆರಂಭವಾಗಿದೆ. ಇದು ಇನ್ನೂ ಆರಂಭಿಕ ಹಂತದಲ್ಲಿದ್ದು, ಕೆಲ ಪ್ರಮುಖ ತಂತ್ರಜ್ಞಾನಗಳನ್ನು ಸ್ವಂತವಾಗಿ ಅಭಿವೃದ್ದಿಪಡಿಸಿದೆ. ಈ ಹಂತದಲ್ಲಿ ಎಲ್​ಎಟಿ ಎರೋಸ್ಪೇಸ್ ಈ ಸ್ಟಾರ್ಟಪ್ ಅನ್ನು ಖರೀದಿ ಮಾಡಿರುವುದು ಗಮನಾರ್ಹ. ಈ ತಂತ್ರಜ್ಞಾನ ಸಾಮರ್ಥ್ಯವನ್ನು ಬಳಸಿ ಡಿಫೆನ್ಸ್ ಮತ್ತು ಸಿಲಿಲ್ ಏವಿಯೇಶನ್ ವಿಮಾನಗಳನ್ನು ತಯಾರಿಸುವ ಆಶಯದಲ್ಲಿದೆ.

ದೀಪಿಂದರ್ ಗೋಯಲ್ ಅವರು ಜೊಮಾಟೊದ ಸಂಸ್ಥಾಪಕರು. ಬ್ಲಿಂಕಿಟ್ ಇತ್ಯಾದಿ ಕಂಪನಿಗಳನ್ನೂ ಖರೀದಿಸಿದ್ದಾರೆ. ಎಟರ್ನಲ್ ಅಡಿಯಲ್ಲಿ ಈ ಕಂಪನಿಗಳಿವೆ. ದೀಪಿಂದರ್ ಅವರು ಎಟರ್ನಲ್ ಸಿಇಒ ಸ್ಥಾನಕ್ಕೆ ರಾಜೀನಾಮೆ ನೀಡಿ, ಎಲ್​ಎಟಿ ಏರೋಸ್ಪೇಸ್ ಹಾಗು ಇತರ ಪ್ರಾಜೆಕ್ಟ್​ಗಳಲ್ಲಿ ನಿರತರಾಗಿದ್ದಾರೆ.

ಸಣ್ಣ ಗಾತ್ರದ ಎಲೆಕ್ಟ್ರಿಕ್ ವಿಮಾನಗಳನ್ನು ನಿರ್ಮಿಸಿ, ಅಗ್ಗದ ದರಕ್ಕೆ ಪ್ರಯಾಣಾವಕಾಶ ಕಲ್ಪಿಸುವುದು ದೀಪಿಂದರ್ ಗೋಯಲ್ ಅವರಿಗಿರುವ ಮಹತ್ವಾಕಾಂಕ್ಷೆ. ಸಣ್ಣ ಪುಟ್ಟ ಪಟ್ಟಣಗಳ ನಡುವೆ ವಿಮಾನ ಹಾರಾಟ ಆರಂಭಿಸುವುದು ಅವರ ಗುರಿ. ಬಸ್ಸು, ಕ್ಯಾಬ್​ಗಳಂತೆ ಸಾಮಾನ್ಯ ಜನರು ವಿಮಾನಗಳ ಬಳಸುವಂತಾಗಬೇಕು ಎಂಬುದು ಅವರ ಉದ್ದೇಶ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಅನನ್ಯಾಗಾಗಿ ಅದ್ಭುತವಾಗಿ ಹಾಡು ಹೇಳಿದ ಅಂಕಿತಾ ಅಮರ್
ಅನನ್ಯಾಗಾಗಿ ಅದ್ಭುತವಾಗಿ ಹಾಡು ಹೇಳಿದ ಅಂಕಿತಾ ಅಮರ್
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!