AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಂಕ್​ನಲ್ಲಿ ಠೇವಣಿ ಇಡುವ ಯೋಚನೆ ಹೊಂದಿದ್ದರೆ ಇನ್ನೂ ಹೆಚ್ಚು ಬಡ್ಡಿ ನಿರೀಕ್ಷಿಸಬಹುದು!

ಸಾಲದ ಮೇಲಿನ ಬೇಡಿಕೆ ಹೆಚ್ಚುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಪ್ರಮುಖ ಬ್ಯಾಂಕ್​ಗಳು ಠೇವಣಿಗಳ ಮೇಲಿನ ಬಡ್ಡಿ ದರವನ್ನು ಇನ್ನಷ್ಟು ಹೆಚ್ಚಿಸುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.

ಬ್ಯಾಂಕ್​ನಲ್ಲಿ ಠೇವಣಿ ಇಡುವ ಯೋಚನೆ ಹೊಂದಿದ್ದರೆ ಇನ್ನೂ ಹೆಚ್ಚು ಬಡ್ಡಿ ನಿರೀಕ್ಷಿಸಬಹುದು!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Nov 09, 2022 | 10:43 AM

Share

ನವದೆಹಲಿ: ಆರ್​ಬಿಐ (RBI) ರೆಪೊ ದರಕ್ಕೆ ಅನುಗುಣವಾಗಿ ಅನೇಕ ಬ್ಯಾಂಕ್​ಗಳು ಈಗಾಗಲೇ ಸಾಲ ಮತ್ತು ಠೇವಣಿಗಳ (Deposit) ಮೇಲಿನ ಬಡ್ಡಿ ದರವನ್ನು (Interest Rate) ಹೆಚ್ಚಿಸಿವೆ. ಆದಾಗ್ಯೂ ಸಾಲದ ಮೇಲಿನ ಬೇಡಿಕೆ ಹೆಚ್ಚುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಪ್ರಮುಖ ಬ್ಯಾಂಕ್​ಗಳು ಠೇವಣಿಗಳ ಮೇಲಿನ ಬಡ್ಡಿ ದರವನ್ನು ಇನ್ನಷ್ಟು ಹೆಚ್ಚಿಸುವ ಸಾಧ್ಯತೆಗಳಿವೆ. ಸಾಲದ ಬೇಡಿಕೆ ಹೆಚ್ಚಳ ಮತ್ತು ಹಣಕಾಸು ಹರಿವು ಬಿಗಿಯಾಗಿರುವುದನ್ನು ಗಮನದಲ್ಲಿಟ್ಟುಕೊಂಡು ಬ್ಯಾಂಕ್​ಗಳು ಠೇವಣಿಗಳಿಗೆ 50ರಿಂದ 75 ಮೂಲಾಂಶದಷ್ಟು ಬಡ್ಡಿ ಹೆಚ್ಚಿಸುವ ನಿರೀಕ್ಷೆ ಇದೆ ಎಂದು ವರದಿಯಾಗಿದೆ.

ಬ್ಯಾಂಕ್​ಗಳು ಮತ್ತು ಬ್ಯಾಂಕೇತರ ಹಣಕಾಸು ಸಂಸ್ಥೆಗಳು ಠೇವಣಿಗಳ ಮೇಲಿನ ಬಡ್ಡಿ ದರ ಹೆಚ್ಚಿಸುವ ನಿರೀಕ್ಷೆ ಇದೆ ಎಂದು ಸುಂದರಂ ಫೈನಾನ್ಸ್​ನ ವ್ಯವಸ್ಥಾಪಕ ನಿರ್ದೇಶಕ ರಾಜೀವ್ ಲೋಚನ್ ತಿಳಿಸಿರುವುದಾಗಿ ‘ಫೈನಾನ್ಶಿಯಲ್ ಎಕ್ಸ್​ಪ್ರೆಸ್’ ವರದಿ ಮಾಡಿದೆ. ಈಗಾಗಲೇ ಮೂರು ವರ್ಷಗಳವರೆಗಿನ ಠೇವಣಿಗೆ ಶೇಕಡಾ 7.3ರ ವರೆಗೆ ಬಡ್ಡಿ ನೀಡುತ್ತಿರುವ ಸಂಸ್ಥೆಗಳು ಶೇಕಡಾ 7.9ರ ವರೆಗೂ ಹೆಚ್ಚಿಸುವ ಸಾಧ್ಯತೆ ಇದೆ. ಶೇಕಡಾ 8ರ ವರೆಗೆ ಹೆಚ್ಚಿಸಿದರೂ ಅಚ್ಚರಿಪಡಬೇಕಾಗಿಲ್ಲ ಎಂದು ರಾಜೀವ್ ಲೋಚನ್ ಹೇಳಿದ್ದಾರೆ.

ಹಣಕಾಸು ಹರಿವು ಹೆಚ್ಚಳಕ್ಕಾಗಿ ಕ್ರಮ

ಇದನ್ನೂ ಓದಿ
Image
ಆರೋಗ್ಯ ವಿಮೆ ಪೋರ್ಟ್ ಮಾಡುವುದು ಹೇಗೆ, ಪ್ರಯೋಜನವೇನು? ಇಲ್ಲಿದೆ ವಿವರ
Image
Bank Strike: ನವೆಂಬರ್ 19ಕ್ಕೆ ಬ್ಯಾಂಕ್ ಮುಷ್ಕರ; ಎಟಿಎಂ ಸೇವೆಯಲ್ಲೂ ವ್ಯತ್ಯಯ ಸಾಧ್ಯತೆ
Image
ನಿಮ್ಮ ಪಿಎಫ್​ ಖಾತೆಗೂ ಬಂತೇ ಇಪಿಎಫ್​ ಬಡ್ಡಿ ಹಣ, ಪರಿಶೀಲಿಸುವುದು ಹೇಗೆ? ಇಲ್ಲಿದೆ ನೋಡಿ
Image
ಹೆಚ್ಚಿದ ಡಿಜಿಟಲ್ ಪಾವತಿ, 20 ವರ್ಷಗಳ ಕನಿಷ್ಠಕ್ಕೆ ನಗದು ಚಲಾವಣೆ; ಎಸ್​ಬಿಐ ವರದಿ

ಸಾಲಕ್ಕೆ ಬೇಡಿಕೆ ಹೆಚ್ಚಿದಾಗ ಠೇವಣಿಯನ್ನೂ ಸಮತೋಲನದಲ್ಲಿ ಇಟ್ಟುಕೊಳ್ಳಲು ಬ್ಯಾಂಕ್​ಗಳು ಪ್ರಯತ್ನಿಸುತ್ತವೆ. ಸೂಕ್ತ ಪ್ರಮಾಣದಲ್ಲಿ ಹಣಕಾಸಿನ ಹರಿವು ಇರುವಂತೆ ನೋಡಿಕೊಳ್ಳಬೇಕಾದ್ದು ಬ್ಯಾಂಕ್​ಗಳಿಗೆ ಅನಿವಾರ್ಯವಾಗುತ್ತದೆ. ಹೀಗಾಗಿ ಠೇವಣಿಗಳ ಮೇಲಿನ ಬಡ್ಡಿ ಹೆಚ್ಚಳದ ಮೂಲಕ ತಮ್ಮ ಬ್ಯಾಲೆನ್ಸ್​ಶೀಟ್​ನಲ್ಲಿನ ಸಮತೋಲನ ಕಾಯ್ದುಕೊಳ್ಳಲು ಬ್ಯಾಂಕ್​ಗಳು ಯತ್ನಿಸುತ್ತವೆ ಎಂದು ಹಣಕಾಸು ತಜ್ಞರು ವಿಶ್ಲೇಷಿಸಿದ್ದಾರೆ.

ಇದನ್ನೂ ಓದಿ: ಆರೋಗ್ಯ ವಿಮೆ ಪೋರ್ಟ್ ಮಾಡುವುದು ಹೇಗೆ, ಪ್ರಯೋಜನವೇನು? ಇಲ್ಲಿದೆ ವಿವರ

ಜೂನ್ ಹಾಗೂ ಅಕ್ಟೋಬರ್ ಅವಧಿಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್​ಬಿಐ) 2-3 ವರ್ಷಗಳ ಹಿಂದಿನ ಮಟ್ಟಕ್ಕೆ ಬಡ್ಡಿ ದರವನ್ನು ಹೆಚ್ಚಿಸಿತ್ತು. ಜೂನ್​ನಲ್ಲಿ ಶೇಕಡಾ 5.35 ಇದ್ದುದನ್ನು ಅಕ್ಟೋಬರ್ ವೇಳೆಗೆ ಶೇಕಡಾ 6.25ಕ್ಕೆ ಹೆಚ್ಚಿಸಿತ್ತು. ಕಳೆದ ವಾರವಷ್ಟೇ ಕೆಲವು ಸರ್ಕಾರಿ ಸ್ವಾಮ್ಯದ ಬ್ಯಾಂಕ್​ಗಳು ಶೇಕಡಾ 7.4ರ ಬಡ್ಡಿಯ ವಿಶೇಷ ಠೇವಣಿ ಯೋಜನೆ ಘೋಷಿಸಿದ್ದವು.

ಈ ಮಧ್ಯೆ, ಸಾಲದ ಬೇಡಿಕೆ ಹೀಗೆಯೇ ಮುಂದುವರಿದರೆ ಠೇವಣಿಗೂ ಪೈಪೋಟಿ ಆರಂಭವಾಗಲಿದೆ ಎಂದು ಆದಿತ್ಯ ಬಿರ್ಲಾ ಸನ್​ಲೈಫ್​ ಎಎಂಸಿ ಸಿಇಒ ಎ. ಬಾಲಸುಬ್ರಮಣಿಯನ್ ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ