AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tax Collections: ನೇರ ತೆರಿಗೆ ಸಂಗ್ರಹದಲ್ಲಿ ಶೇ. 20ರಷ್ಟು ಏರಿಕೆ; ಐಟಿಆರ್ ಸಲ್ಲಿಸುವವರ ಸಂಖ್ಯೆ 10 ವರ್ಷದಲ್ಲಿ ದ್ವಿಗುಣ

Income Tax Returns See 2x Rise In Last 10 Years: ನಿವ್ವಳ ನೇರ ತೆರಿಗೆ ಸಂಗ್ರಹ ಈ ಹಣಕಾಸು ವರ್ಷದಲ್ಲಿ 2023ರ ಏಪ್ರಿಲ್ 1ರಿಂದ 2024ರ ಫೆಬ್ರುವರಿ 10ರವರೆಗೆ 15.60 ಲಕ್ಷ ರೂ ಆಗಿದೆ. ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ಆದ ಸಂಗ್ರಹಕ್ಕಿಂತ ಶೇ. 20ರಷ್ಟು ಹೆಚ್ಚಾಗಿದೆ. ಆದಾಯ ತೆರಿಗೆ ರಿಟರ್ನ್ ಸಲ್ಲಿಸುವವರ ಸಂಖ್ಯೆ ಕಳೆದ 10 ವರ್ಷದ ಅವಧಿಯಲ್ಲಿ ಎರಡು ಪಟ್ಟು ಹೆಚ್ಚಾಗಿದೆ.

Tax Collections: ನೇರ ತೆರಿಗೆ ಸಂಗ್ರಹದಲ್ಲಿ ಶೇ. 20ರಷ್ಟು ಏರಿಕೆ; ಐಟಿಆರ್ ಸಲ್ಲಿಸುವವರ ಸಂಖ್ಯೆ 10 ವರ್ಷದಲ್ಲಿ ದ್ವಿಗುಣ
ನೇರ ತೆರಿಗೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 11, 2024 | 5:25 PM

Share

ನವದೆಹಲಿ, ಫೆಬ್ರುವರಿ 11: ಭಾರತದಲ್ಲಿ ನಿವ್ವಳ ನೇರ ತೆರಿಗೆ ಸಂಗ್ರಹ (Net Direct Taxes) ಈ ಹಣಕಾಸು ವರ್ಷದಲ್ಲಿ ಇಲ್ಲಿಯವರೆಗೆ (ಫೆ. 10) 15.60 ಲಕ್ಷ ರೂ ಆಗಿದೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ತೆರಿಗೆ ಸಂಗ್ರಹದಲ್ಲಿ ಶೇ. 20.25ರಷ್ಟು ಹೆಚ್ಚಿದೆ. ಕೇಂದ್ರೀಯ ನೇರ ತೆರಿಗೆಗಳ ಮಂಡಳಿ ಸಿಬಿಡಿಟಿ ಇಂದು ಭಾನುವಾರ (ಫೆ. 11) ಬಿಡುಗಡೆ ಮಾಡಿದ ವರದಿಯಲ್ಲಿ ಈ ಮಾಹಿತಿ ಇದೆ. 2023ರ ಏಪ್ರಿಲ್ 1ರಿಂದ 2024ರ ಫೆಬ್ರುವರಿ 10ರವರೆಗಿನ ಅಂಕಿ ಅಂಶ ಇದು. ಇನ್ನು, ನಿವ್ವಳ ತೆರಿಗೆ ಸಂಗ್ರಹದಲ್ಲಿ ಮಾತ್ರವಲ್ಲ ಒಟ್ಟು ನೇರ ತೆರಿಗೆ ಅಥವಾ ಗ್ರಾಸ್ ಡೈರೆಕ್ಟ್ ಟ್ಯಾಕ್ಸ್ ಸಂಗ್ರಹ 18.38 ಲಕ್ಷ ಕೋಟಿ ರೂ ಆಗಿದೆ. ಇದರಲ್ಲೂ ಕೂಡ ಶೇ. 17.30ಯಷ್ಟು ಹೆಚ್ಚಳವಾಗಿರುವುದು ಈ ವರದಿಯಿಂದ ತಿಳಿದು ಬಂದಿದೆ.

2023-24ರ ಹಣಕಾಸು ವರ್ಷದಲ್ಲಿ ಮಾಡಲಾಗಿದ್ದ ಪರಿಷ್ಕೃತ ಅಂದಾಜಿನ ಶೇ. 80.23ರಷ್ಟು ನಿವ್ವಳ ನೇರ ತೆರಿಗೆ ಈವರೆಗೆ ಸಂಗ್ರಹವಾಗಿದೆ. ಈ ಹಣಕಾಸು ವರ್ಷ ಮುಗಿಯಲು ಮಾರ್ಚ್ 31ರವರೆಗೆ ಸಮಯ ಇದ್ದು, ನೇರ ತೆರಿಗೆ ಸಂಗ್ರಹವು ನಿರೀಕ್ಷೆಗಿಂತ ಹೆಚ್ಚಿರುವ ಸಾಧ್ಯತೆ ಇದೆ.

‘ನೇರ ತೆರಿಗೆ ಸಂಗ್ರಹ ಸ್ಥಿರವಾಗಿ ಏರುತ್ತಿದೆ. 2023ರ ಫೆಬ್ರುವರಿ 10ರವರೆಗೆ ಒಟ್ಟು ನೇರ ತೆರಿಗೆ ಸಂಗ್ರಹ 18.38 ಲಕ್ಷ ಕೋಟಿ ರೂ ಆಗಿದೆ. ಕಾರ್ಪೊರೇಟ್ ಆದಾಯ ತೆರಿಗೆ (ಸಿಐಟಿ) ಮತ್ತು ವೈಯಕ್ತಿಕ ಆದಾಯ ತೆರಿಗೆ (ಪಿಐಟಿ) ಸಂಗ್ರಹದಲ್ಲೂ ನಿರಂತರ ಹೆಚ್ಚಳ ಕಂಡುಬಂದಿದೆ’ ಎಂದು ಸಿಬಿಡಿಟಿ ವರದಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಇಪಿಎಫ್​ಒ ಬಡ್ಡಿದರ ಶೇ. 8.25ಕ್ಕೆ ಏರಿಕೆ; ಎಲ್ಲಾ ಸ್ಮಾಲ್ ಫೈನಾನ್ಸ್ ಸ್ಕೀಮ್​ಗಳಿಗಿಂತಲೂ ಪಿಎಫ್ ಠೇವಣಿಗೆ ಹೆಚ್ಚು ಬಡ್ಡಿ

ಕಾರ್ಪೊರೇಟ್ ಇನ್ಕಮ್ ಟ್ಯಾಕ್ಸ್ ಸಂಗ್ರಹದಲ್ಲಿ ಶೇ. 13.57ರಷ್ಟು ಹೆಚ್ಚಳವಾದರೆ, ಪರ್ಸನಲ್ ಇನ್ಕಮ್ ಟ್ಯಾಕ್ಸ್ ಸಂಗ್ರಹ ಶೇ. 26.91ರಷ್ಟು ಏರಿದೆ. ಒಟ್ಟು ನೇರ ತೆರಿಗೆ ಸಂಗ್ರಹದ ಪೈಕಿ ಈ ಹಣಕಾಸು ವರ್ಷದಲ್ಲಿ ಇಲ್ಲಿಯವರೆಗೆ 2.77 ಲಕ್ಷ ಕೋಟಿ ರೂನಷ್ಟು ರೀಫಂಡ್​ಗಳನ್ನು ಸರ್ಕಾರ ನೀಡಿದೆ.

ಕಳೆದ 10 ವರ್ಷದಲ್ಲಿ ಆದಾಯ ತೆರಿಗೆ ಪಾವತಿದಾರರ ಸಂಖ್ಯೆ ದ್ವಿಗುಣ

2022-23ರ ಅವಧಿಯಲ್ಲಿ ಐಟಿ ರಿಟರ್ನ್ಸ್ ಫೈಲ್ ಆದ ಸಂಖ್ಯೆ 7.78ರಷ್ಟು. ಕಳೆದ 10 ವರ್ಷದ ಅವಧಿಯಲ್ಲಿ ಐಟಿಆರ್ ಸಲ್ಲಿಕೆ ಸಂಖ್ಯೆ ಎರಡು ಪಟ್ಟು ಹೆಚ್ಚಾಗಿದೆ. 2013-14ರ ಹಣಕಾಸು ವರ್ಷದಲ್ಲಿ ಕೇವಲ 3.8 ಕೋಟಿ ಮಂದಿ ಮಾತ್ರ ಆದಾಯ ತೆರಿಗೆ ಪಾವತಿಸಿದ್ದರು ಎಂಬುದು ಸೆಂಟ್ರಲ್ ಡೈರೆಕ್ಟ್ ಟ್ಯಾಕ್ಸ್ ಬೋರ್ಡ್​ನ ವರದಿಯಲ್ಲಿನ ಅಂಕಿ ಅಂಶಗಳು ಹೇಳುತ್ತವೆ.

ಇದನ್ನೂ ಓದಿ: ಗವರ್ನ್ಮೆಂಟ್ ಬಾಂಡ್​ಗಳಲ್ಲಿ ಹಣ ಹೂಡಿಕೆ ಮಾಡುವುದು ಸರಿಯಾದ ಮಾರ್ಗವಾ? ಈ ವಿಷಯ ತಿಳಿದಿರಲಿ

ಇನ್ನು, ಕಳೆದ 10 ವರ್ಷದ ಅವಧಿಯಲ್ಲಿ ನೇರ ತೆರಿಗೆ ಸಂಗ್ರಹದಲ್ಲಿ ಶೇ. 160.52ರಷ್ಟು ಹೆಚ್ಚಾಗಿದೆ. 2013-14ರಲ್ಲಿ ನಿವ್ವಳ ನೇರ ತೆರಿಗೆ ಸಂಗ್ರಹ 6.38 ಲಕ್ಷ ಕೋಟಿ ರೂ ಇತ್ತು. 2022-23ರಲ್ಲಿ ಇದರ ಪ್ರಮಾಣವು 16.63 ಲಕ್ಷ ಕೋಟಿ ರೂಗೆ ಏರಿದೆ ಎಂದು ಹೇಳಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​