AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಹಣಕಾಸು ವರ್ಷ ನೇರ ತೆರಿಗೆ ಸಂಗ್ರಹ 12.37 ಲಕ್ಷಕೋಟಿ ರೂ; ಕಳೆದ ವರ್ಷಕ್ಕಿಂತ ಶೇ. 19ರಷ್ಟು ಹೆಚ್ಚಳ

Direct Tax Collections: 2023-24ರ ಹಣಕಾಸು ವರ್ಷದಲ್ಲಿ18 ಲಕ್ಷ ಕೋಟಿ ರೂಗಿಂತ ಹೆಚ್ಚು ನೇರ ತೆರಿಗೆ ಸಂಗ್ರಹ ಆಗಬಹುದು ಎಂದು ಕಳೆದ ಬಜೆಟ್​ನಲ್ಲಿ ಅಂದಾಜು ಮಾಡಲಾಗಿತ್ತು. ಈ ಹಣಕಾಸು ವರ್ಷದ ಮೊದಲಾರ್ಧದಲ್ಲೇ 12.37 ಲಕ್ಷಕೋಟಿ ರೂ ಡೈರೆಕ್ಟ್ ಟ್ಯಾಕ್ಸ್ ಕಲೆಕ್ಟ್ ಆಗಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ ಸಂಗ್ರಹವಾದುದಕ್ಕಿಂತ ಶೇ. 18.59ರಷ್ಟು ಹೆಚ್ಚು ತೆರಿಗೆ ಈಗ ಸಿಕ್ಕಿದೆ.

ಈ ಹಣಕಾಸು ವರ್ಷ ನೇರ ತೆರಿಗೆ ಸಂಗ್ರಹ 12.37 ಲಕ್ಷಕೋಟಿ ರೂ; ಕಳೆದ ವರ್ಷಕ್ಕಿಂತ ಶೇ. 19ರಷ್ಟು ಹೆಚ್ಚಳ
ನೇರ ತೆರಿಗೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 10, 2023 | 4:54 PM

Share

ನವದೆಹಲಿ, ನವೆಂಬರ್ 10: ಪ್ರಸಕ್ತ ಹಣಕಾಸು ವರ್ಷದಲ್ಲಿ ಬಜೆಟ್​ನಲ್ಲಿ ಅಂದಾಜು ಮಾಡಿದ್ದಕ್ಕಿಂತ ನೇರ ತೆರಿಗೆ ಸಂಗ್ರಹ (direct tax collections) ಭರ್ಜರಿಯಾಗಿದೆ. ಏಪ್ರಿಲ್ 1ರಂದು ಆರಂಭವಾಗಿ ನವೆಂಬರ್ 9ರವರೆಗಿನ ಅಂಕಿ ಅಂಶದ ಪ್ರಕಾರ 12.37 ಲಕ್ಷ ಕೋಟಿ ರೂ ಮೊತ್ತದಷ್ಟು ಡೈರೆಕ್ಟ್ ಟ್ಯಾಕ್ಸ್​ಗಳು ಸಂಗ್ರಹಗೊಂಡಿವೆ. ಇದರಲ್ಲಿ ನಿವ್ವಳ ತೆರಿಗೆ ಮೊತ್ತ 10.60 ಲಕ್ಷ ಕೋಟಿ ರೂ ಇದೆ. 1.77 ಲಕ್ಷ ಕೋಟಿ ರೂನಷ್ಟು ಹಣವನ್ನು ರೀಫಂಡ್ ಮಾಡಲಾಗಿದೆ.

ಏನಿದು ನೇರ ತೆರಿಗೆ?

ಇದು ಆದಾಯ ಮತ್ತು ಸಂಪತ್ತುವೃದ್ಧಿಗೆ ವಿಧಿಸುವ ತೆರಿಗೆಯಾಗಿದೆ. ಇನ್ಕಮ್ ಟ್ಯಾಕ್ಸ್, ಪ್ರಾಪರ್ಟಿ ಟ್ಯಾಕ್ಸ್, ಗಿಫ್ಟ್ ಟ್ಯಾಕ್ಸ್, ಕಾರ್ಪೊರೇಶನ್ ಟ್ಯಾಕ್ಸ್, ಇನ್​ಹೆರಿಟೆನ್ಸ್ ಟ್ಯಾಕ್ಸ್ ಇತ್ಯಾದಿಯವು ಡೈರೆಕ್ಟ್ ಟ್ಯಾಕ್ಸ್ ಕೆಟಗರಿಗೆ ಸೇರುತ್ತವೆ. ಕ್ಯಾಪಿಟಲ್ ಗೇನ್ ಟ್ಯಾಕ್ಸ್ ಇತ್ಯಾದಿ ಕೂಡ ಇದೇ ವಿಭಾಗಕ್ಕೆ ಸೇರುತ್ತವೆ.

ಉತ್ಪನ್ನಗಳು ಮತ್ತು ಸೇವೆಗಳಿಗೆ ವಿಧಿಸುವ ಜಿಎಸ್​ಟಿ ಇತ್ಯಾದಿ ತೆರಿಗೆಗಳು ಇನ್​ಡೈರೆಕ್ಟ್ ಟ್ಯಾಕ್ಸ್ ಅಥವಾ ಪರೋಕ್ಷ ತೆರಿಗೆ ವ್ಯವಸ್ಥೆಗೆ ಬರುತ್ತವೆ.

ಇದನ್ನೂ ಓದಿ: Direct Tax Collection: ಜಿಎಸ್​ಟಿ ಮಾತ್ರವಲ್ಲ, ಈ ಹಣಕಾಸು ವರ್ಷದಲ್ಲಿ ನೇರ ತೆರಿಗೆ ಸಂಗ್ರಹದಲ್ಲೂ ಗಮನಾರ್ಹ ಹೆಚ್ಚಳ; ಇಲ್ಲಿದೆ ಡೀಟೇಲ್ಸ್

ಬಜೆಟ್ ಅಂದಾಜಿಗಿಂತ ಬಹಳ ಹೆಚ್ಚು

2023-24ರ ಹಣಕಾಸು ವರ್ಷದಲ್ಲಿ18 ಲಕ್ಷ ಕೋಟಿ ರೂಗಿಂತ ಹೆಚ್ಚು ನೇರ ತೆರಿಗೆ ಸಂಗ್ರಹ ಆಗಬಹುದು ಎಂದು ಕಳೆದ ಬಜೆಟ್​ನಲ್ಲಿ ಅಂದಾಜು ಮಾಡಲಾಗಿತ್ತು. ಈ ಹಣಕಾಸು ವರ್ಷದ ಮೊದಲಾರ್ಧದಲ್ಲೇ 12.37 ಲಕ್ಷಕೋಟಿ ರೂ ಡೈರೆಕ್ಟ್ ಟ್ಯಾಕ್ಸ್ ಕಲೆಕ್ಟ್ ಆಗಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ ಸಂಗ್ರಹವಾದುದಕ್ಕಿಂತ ಶೇ. 18.59ರಷ್ಟು ಹೆಚ್ಚು ತೆರಿಗೆ ಈಗ ಸಿಕ್ಕಿದೆ. ಇದರೊಂದಿಗೆ, ಈ ಹಣಕಾಸು ವರ್ಷದಲ್ಲಿ ಬಜೆಟ್ ನಿರೀಕ್ಷೆಯನ್ನು ಮೀರಿ ತೆರಿಗೆ ಸಂಗ್ರಹ ಹೆಚ್ಚಾಗಬಹುದು ಎಂದು ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: Income Tax: ಹೊಸ ಅದಾಯ ತೆರಿಗೆ ವ್ಯವಸ್ಥೆಯೋ ಹಳೆಯದ್ದೋ? ಆಯ್ಕೆ ಮಾಡಿಕೊಳ್ಳದಿದ್ದರೆ ಏನಾಗುತ್ತದೆ? ಸಿಬಿಡಿಟಿ ಹೊಸ ನೋಟೀಸ್​ನಲ್ಲಿ ಏನು ಹೇಳಿದೆ?

ಈ ಹಣಕಾಸು ವರ್ಷದಲ್ಲಿ ಕಾರ್ಪೊರೇಟ್ ಇನ್ಕಮ್ ಟ್ಯಾಕ್ಸ್ ಮತ್ತು ಪರ್ಸನಲ್ ಇನ್ಕಮ್ ಟ್ಯಾಕ್ಸ್ ಸಂಗ್ರಹವೂ ಕ್ರಮವಾಗಿ ಶೇ. 12.48 ಮತ್ತು ಶೇ. 31.77ರಷ್ಟು ಹೆಚ್ಚಳ ಕಂಡಿವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ