AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepavali 2021: ದೀಪಾವಳಿಯಲ್ಲಿ ಹಾಲ್ ಮಾರ್ಕ್ ಇರುವ ಚಿನ್ನಾಭರಣ ಖರೀದಿಸುವಂತೆ ಗ್ರಾಹಕರಿಗೆ ಕೇಂದ್ರ ಸರ್ಕಾರ ಮನವಿ

ದೀಪಾವಳಿಯ ಸಂದರ್ಭದಲ್ಲಿ ಚಿನ್ನಾಭರಣ ಖರೀದಿಸುವಾಗ ಹಾಲ್ ಮಾರ್ಕ್ ಇರುವ ಚಿನ್ನಾಭರಣಗಳನ್ನೇ ಖರೀದಿಸಿ ಎಂದು ಕೇಂದ್ರ ಸರ್ಕಾರ ಮನವಿ ಮಾಡಿದೆ.

Deepavali 2021: ದೀಪಾವಳಿಯಲ್ಲಿ ಹಾಲ್ ಮಾರ್ಕ್ ಇರುವ ಚಿನ್ನಾಭರಣ ಖರೀದಿಸುವಂತೆ ಗ್ರಾಹಕರಿಗೆ ಕೇಂದ್ರ ಸರ್ಕಾರ ಮನವಿ
ಚಿನ್ನಾಭರಣ
TV9 Web
| Edited By: |

Updated on:Nov 03, 2021 | 8:33 AM

Share

ದೀಪಾವಳಿಯ ಸಂದರ್ಭದಲ್ಲಿ ಚಿನ್ನಾಭರಣ ಖರೀದಿಸುವಾಗ ಹಾಲ್ ಮಾರ್ಕ್ ಇರುವ ಚಿನ್ನಾಭರಣಗಳನ್ನೇ ಖರೀದಿಸಿ ಎಂದು ಕೇಂದ್ರ ಸರ್ಕಾರ ಮಂಗಳವಾರ ( ನವೆಂಬರ್ 2) ಖರೀದಿದಾರರಿಗೆ ಮನವಿ ಮಾಡಿದೆ. ಗ್ರಾಹಕರ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಸಚಿವಾಲಯದಡಿಯ ಭಾರತೀಯ ಮಾನಕ ಸಂಸ್ಥೆ (ಬಿಐಎಸ್) ದೀಪಾವಳಿಯ ಸಂದರ್ಭದಲ್ಲಿ ತಾವು ಹಾಲ್ ಮಾರ್ಕ್ ಇರುವ ಆಭರಣಗಳನ್ನು ಮಾತ್ರ ಖರೀದಿಸುತ್ತಿರುವುದನ್ನು ಖಾತ್ರಿಪಡಿಸಿಕೊಳ್ಳುವಂತೆ ಜನತೆಗೆ ಮನವಿ ಮಾಡಿದೆ.

ದೀಪಾವಳಿಯ ಶುಭ ದಿನದಂದು ಚಿನ್ನ ಖರೀಸುವ ಕುಟುಂಬಕ್ಕೆ ಒಳ್ಳೆಯದಾಗುತ್ತದೆ. ಸುಖ, ಶಾಂತಿ ನೆಮ್ಮದಿ ಜೊತೆಗೆ ಸಮೃದ್ಧಿ ನೆಲೆಸುತ್ತದೆ ಎಂದು ನಂಬಲಾಗಿದೆ. ಹೀಗಿರುವಾಗ ಅಷ್ಟು ದೊಡ್ಡ ಮೌಲ್ಯದ ಚಿನ್ನಾಭರಣ ಖರೀದಿಸುವಾಗ ಬಂಗಾರದ ಶುದ್ಧತೆಯನ್ನು ಖಾತ್ರಿಪಡಿಸಿಕೊಳ್ಳುವುದು ಮಹತ್ವದ್ದಾಗಿದೆ. ಹೀಗಾಗಿ ಖರೀದಿಗೂ ಮುನ್ನು ಕೆಲವು ಅಂಶಗಳನ್ನು ನೆನಪಿನಲ್ಲಿಡಿ.

2021ರ ಜೂನ್ 23ರಿಂದ ಅನ್ವಯವಾಗುವಂತೆ 14, 18 ಮತ್ತು 22 ಕ್ಯಾರೆಟ್ ಚಿನ್ನದ ಆಭರಣ ಕಲಾಕೃತಿಗಳಿಗೆ ಹಾಲ್ ಮಾರ್ಕ್ ಅನ್ನು ದೇಶದ 256 ಜಿಲ್ಲೆಗಳಲ್ಲಿ ಕಡ್ಡಾಯ ಮಾಡಲಾಗಿದೆ. ಬಿಐಎಸ್ ನೋಂದಾಯಿತ ಆಭರಣಕಾರರು ಮಾತ್ರ ಹಾಲ್‌ ಮಾರ್ಕ್ ಆಭರಣಗಳನ್ನು ಮಾರಾಟ ಮಾಡಬಹುದು.

ಗ್ರಾಹಕರು ಗಮನಿಸಬೇಕಾದ ಅಂಶಗಳು:

*ಬಿಐಎಸ್ ನೋಂದಾಯಿತ ಆಭರಣಕಾರರಿಂದ ಕೇವಲ ಹಾಲ್ ಮಾರ್ಕ್ ಇರುವ ಚಿನ್ನ, ಬೆಳ್ಳಿಯ ಆಭರಣ ಮತ್ತು ಕಲಾಕೃತಿಗಳನ್ನು ಮಾತ್ರ ಖರೀದಿಸಿ

*ಹಾಲ್ ಮಾರ್ಕ್ ಬರಿಗಣ್ಣಿಗೆ ಸ್ಪಷ್ಟವಾಗಿ ಗೋಚರಿಸದಿದ್ದರೆ, ಚಿನ್ನಾಭರಣದ ಅಂಗಡಿಯವರಿಂದ ಮ್ಯಾಗ್ನಿಫೈಯಿಂಗ್ ಗಾಜು ಕೇಳಿ ಪಡೆಯಿರಿ

*ಆಭರಣ ಖರೀದಿಸಿದ ಬಿಲ್ ಮರೆಯದೇ​ ಪಡೆಯಿರಿ

ಬಿಐಎಸ್ ಈ ಸಂಬಂಧ ಟ್ವೀಟ್ ಮಾಡಿದ್ದು, ಕೇವಲ ಹಾಲ್ ಮಾರ್ಕ್ ಇರುವ ಆಭರಣ ಮಾತ್ರವೇ ಖರೀದಿಸುವಂತೆ ಮನವಿ ಮಾಡಿದೆ.

ಇದನ್ನೂ ಓದಿ:

Diwali Muhurat Trading: ದೀಪಾವಳಿ ಹಬ್ಬದ ಮುಹೂರ್ತ ಟ್ರೇಡಿಂಗ್​ಗೆ ಹೂಡಿಕೆ ತಜ್ಞರಿಂದ 5 ಕಂಪೆನಿಯ ಷೇರು ಶಿಫಾರಸು

Deepavali 2021: ದೀಪಾವಳಿ ಹಬ್ಬಕ್ಕೆ ಮನೆಯನ್ನು ಅಲಂಕರಿಸಲು ಕಲರ್​ಫುಲ್​ ರಂಗೋಲಿ ಡಿಸೈನ್ಸ್​ಗಳು; ನಿಮಗಿಷ್ಟದ ರಂಗೋಲಿ ಆಯ್ದುಕೊಳ್ಳಿ

Published On - 8:21 am, Wed, 3 November 21

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್