AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dhanteras 2022: ದೀಪಾವಳಿಯ ಎರಡು ದಿನ 40 ಸಾವಿರ ಕೋಟಿ ರೂ. ವಹಿವಾಟು ನಿರೀಕ್ಷೆ; ಸಿಎಐಟಿ

ಈ ಬಾರಿ ಧನ್​ತೇರಸ್ ಒಳಗೊಂಡಂತೆ ದೀಪಾವಳಿಯ ಎರಡು ದಿನಗಳಲ್ಲಿ 40,000 ಕೋಟಿ ರೂ. ಮೊತ್ತದ ವಹಿವಾಟು ನಡೆಯುವ ನಿರೀಕ್ಷೆ ಇದೆ ಎಂದು ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ ಶನಿವಾರ ಹೇಳಿದೆ.

Dhanteras 2022: ದೀಪಾವಳಿಯ ಎರಡು ದಿನ 40 ಸಾವಿರ ಕೋಟಿ ರೂ. ವಹಿವಾಟು ನಿರೀಕ್ಷೆ; ಸಿಎಐಟಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Oct 22, 2022 | 4:29 PM

Share

ಮುಂಬೈ: ಈ ಬಾರಿ ಧನ್​ತೇರಸ್ (Dhanteras) ಒಳಗೊಂಡಂತೆ ದೀಪಾವಳಿಯ (Diwali) ಎರಡು ದಿನಗಳಲ್ಲಿ 40,000 ಕೋಟಿ ರೂ. ಮೊತ್ತದ ವಹಿವಾಟು ನಡೆಯುವ ನಿರೀಕ್ಷೆ ಇದೆ ಎಂದು ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ (CAIT) ಶನಿವಾರ ಹೇಳಿದೆ. ದೀಪಾವಳಿಯ ಮೊದಲ ದಿನವಾದ ಧನ್​ತೇರಸ್ ಅಥವಾ ಧನತ್ರಯೋದಶಿಯನ್ನು ಖರೀದಿಗೆ ಪವಿತ್ರ ದಿನವೆಂದು ಭಾವಿಸಲಾಗಿದೆ. ಈ ದಿನದಂದು ಗ್ರಾಹಕರು ಚಿನ್ನ, ಬೆಳ್ಳಿಯ ಆಭರಣ, ಎಲ್ಲ ರೀತಿಯ ಪಾತ್ರೆಗಳು, ಅಡುಗೆ ಮನೆ ಉಪಕರಣಗಳು, ವಾಹನ, ಎಲೆಕ್ಟ್ರಿಕಲ್ ಸರಕು ಹಾಗೂ ಇತರ ಸಾಮಗ್ರಿಗಳ ಖರೀದಿ ಮಾಡುತ್ತಾರೆ.

ಈ ವರ್ಷ ಧನ್​ತೇರಸ್ ವಾರಾಂತ್ಯದ ಜತೆಗೇ ಬರುತ್ತದೆ. ಶನಿವಾರ ಮಧ್ಯಾಹ್ನದಿಂದಲೇ ಶುಭ ಮುಹೂರ್ತ ಆರಂಭವಾಗಲಿದ್ದು ಭಾನುವಾರ ಸಂಜೆಯ ವರೆಗೂ ಇರಲಿದೆ. ಹೀಗಾಗಿ ಖರೀದಿ ಭರಾಟೆ ಜೋರಿರಬಹುದು ಎಂಬುದಾಗಿ ನಿರೀಕ್ಷಿಸಲಾಗಿದೆ ಎಂದು ಸಿಎಐಟಿ ಹೇಳಿದೆ.

ಧನ್​ತೇರಸ್ ಪ್ರಯುಕ್ತ ಶನಿವಾರ ಮತ್ತು ಭಾನುವಾರಗಳಲ್ಲಿ ಹೆಚ್ಚು ಆಭರಣ ಮಾರಾಟವಾಗುವ ಬಗ್ಗೆ ದೇಶದಾದ್ಯಂತ ಆಭರಣ ವ್ಯಾಪಾರಿಗಳು ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದ್ದಾರೆ ಎಂದು ಅಖಿಲ ಭಾರತ ಆಭರಣ ಮಾರಾಟಗಾರರ ಮತ್ತು ಅಕ್ಕಲಸಾಲಿಗರ ಒಕ್ಕೂಟದ ರಾಷ್ಟ್ರೀಯ ಅಧ್ಯಕ್ಷ ಪಂಕಜ್ ಆರೋರ ಹೇಳಿದ್ದಾರೆ. ಈ ವರ್ಷ ಕೃತಕ ಆಭರಣಗಳಿಗೂ ಮಾರುಕಟ್ಟೆಗಳಲ್ಲಿ ಹೆಚ್ಚಿನ ಬೇಡಿಕೆಯಿದೆ. ಚಿನ್ನ, ಬೆಳ್ಳಿಯ ಕಾಯಿನ್​ಗಳು, ವಿಗ್ರಹಗಳೂ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗಬಹುದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ
Image
Reliance Jio 5G: 5ಜಿ ಆಧಾರಿತ ಸಾರ್ವಜನಿಕ ವೈಫೈ ಸೇವೆ ಆರಂಭಿಸಿದ ರಿಲಯನ್ಸ್ ಜಿಯೋ
Image
Dhanteras 2022: ದೀಪಾವಳಿ ಸಂದರ್ಭದಲ್ಲಿ ಚಿನ್ನದ ಮೇಲಿನ ಹೂಡಿಕೆಗೆ ಐದು ಆಯ್ಕೆಗಳು
Image
Fixed Deposit: ಎಫ್​ಡಿ ಖಾತೆ ತೆರೆಯಲು ಉದ್ದೇಶಿಸಿದ್ದೀರಾ? ಇಲ್ಲಿದೆ ಎಸ್​ಬಿಐ, ಐಸಿಐಸಿಐ, ಎಚ್​ಡಿಎಫ್​ಸಿ ಬ್ಯಾಂಕ್ ಬಡ್ಡಿ ವಿವರ
Image
PM Rozgar Mela: ಪಿಎಂ ಉದ್ಯೋಗ ಮೇಳ; ಏನಿದು ಯೋಜನೆ, ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

ಇದನ್ನೂ ಓದಿ: Dhanteras 2022: ದೀಪಾವಳಿ ಸಂದರ್ಭದಲ್ಲಿ ಚಿನ್ನದ ಮೇಲಿನ ಹೂಡಿಕೆಗೆ ಐದು ಆಯ್ಕೆಗಳು

ಈ ಬಾರಿ ಹಬ್ಬದ ಪ್ರಯುಕ್ತ ಅಮೆಜಾನ್, ಫ್ಲಿಪ್​ಕಾರ್ಟ್​ನಂಥ ಆನ್​ಲೈನ್ ಮಾರ್ಕೆಟಿಂಗ್ ತಾಣಗಳು ನಡೆಸಿದ್ದ ವಿಶೇಷ ಮಾರಾಟ ಮೇಳಗಳಲ್ಲಿಯೂ ಹೆಚ್ಚಿನ ಪ್ರಮಾಣದ ಮಾರಾಟವಾಗಿತ್ತು. ಅಮೆಜಾನ್​ನ ಗ್ರೇಟ್ ಇಂಡಿಯನ್ ಫೆಸ್ಟಿವಲ್​ ಸೇಲ್​ನಲ್ಲಿ 650 ಮಾರಾಟಗಾರರು ಕೋಟ್ಯಧಿಪತಿಗಳಾಗಿದ್ದರೆ, 23,000 ಮಾರಾಟಗಾರರು ಲಕ್ಷಾಧಿಪತಿಗಳಾಗಿದ್ದಾರೆ. 35,000 ಮಾರಾಟಗಾರರು ದಿನವೊಂದರ ಗರಿಷ್ಠ ಗಳಿಕೆ ದಾಖಲಿಸಿದ್ದಾರೆ ಎಂದು ಕಂಪನಿ ಈಚೆಗೆ ಹೇಳಿತ್ತು.

ಈ ಮಧ್ಯೆ, ಧನ್​ತೇರಸ್ ಹಿನ್ನೆಲೆಯಲ್ಲಿ ಮುಹೂರ್ತ ಟ್ರೇಡಿಂಗ್​ಗೆ ಷೇರುಪೇಟೆ ಸಜ್ಜಾಗಿದೆ. ದೀಪಾವಳಿಯ ಲಕ್ಷ್ಮೀ ಪೂಜೆಯ ದಿನ ಎನ್​ಎಸ್​ಇ ನಿಫ್ಟಿ ಮತ್ತು ಬಿಎಸ್ಇ ಸೆನ್ಸೆಕ್ಸ್ ನಡೆಸುವ ಒಂದು ಗಂಟೆ ಕಾಲ ವಹಿವಾಟಿನಲ್ಲಿ ತೊಡಗಿಕೊಳ್ಳಲು ಹೂಡಿಕೆದಾರರು ಕಾತರರಾಗಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ