AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Radhakishan Damani: ವಿಶ್ವದ ಟಾಪ್ 100 ಶ್ರೀಮಂತರ ಪಟ್ಟಿಯೊಳಗೆ ರಾಧಾಕಿಶನ್ ದಮಾನಿಗೆ ಸ್ಥಾನ

ಡಿಮಾರ್ಟ್ ಮಾಲೀಕ ರಾಧಾಕಿಶನ್ ದಮಾನಿ ವಿಶ್ವದ ಟಾಪ್ 100 ಶ್ರೀಮಂತರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಅವರ ಆಸ್ತಿ ಮೌಲ್ಯ ಎಷ್ಟು ಮತ್ತಿತರ ವಿವರ ಇಲ್ಲಿದೆ.

Radhakishan Damani: ವಿಶ್ವದ ಟಾಪ್ 100 ಶ್ರೀಮಂತರ ಪಟ್ಟಿಯೊಳಗೆ ರಾಧಾಕಿಶನ್ ದಮಾನಿಗೆ ಸ್ಥಾನ
ರಾಧಾಕಿಶನ್ ದಮಾನಿ (ಸಂಗ್ರಹ ಚಿತ್ರ)
TV9 Web
| Edited By: |

Updated on: Aug 18, 2021 | 11:11 PM

Share

ಭಾರತದ ಪ್ರಮುಖ ರೀಟೇಲ್ ಜಾಲ ಡಿಮಾರ್ಟ್​ನ ಮಾಲೀಕ ರಾಧಾಕಿಶನ್ ದಮಾನಿ 19.2 ಬಿಲಿಯನ್ ಅಮೆರಿಕನ್ ಡಾಲರ್ (1920 ಕೋಟಿ ಅಮೆರಿಕ ಡಾಲರ್- ಭಾರತದ ರೂಪಾಯಿ ಮೌಲ್ಯದಲ್ಲಿ ಇಂದಿಗೆ 1,42,639.39 ಕೋಟಿ) ನಿವ್ವಳ ಮೌಲ್ಯದೊಂದಿಗೆ ವಿಶ್ವದ 100 ಶ್ರೀಮಂತರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್ ಪಟ್ಟಿಯಲ್ಲಿ ದಮಾನಿ 98ನೇ ಸ್ಥಾನದಲ್ಲಿದ್ದಾರೆ. ಕಳೆದ ವರ್ಷ ಅವರು 117ನೇ ಸ್ಥಾನದಲ್ಲಿದ್ದರು. ಮುಕೇಶ್ ಅಂಬಾನಿ, ಗೌತಮ್ ಅದಾನಿ, ಅಜೀಂ ಪ್ರೇಮ್‌ಜಿ, ಪಲ್ಲೊಂಜಿ ಮಿಸ್ತ್ರಿ, ಶಿವ ನಾಡಾರ್ ಮತ್ತು ಲಕ್ಷ್ಮಿ ಮಿತ್ತಲ್ ಮೊದಲ 100 ಶ್ರೀಮಂತ ವ್ಯಕ್ತಿಗಳ ಪಟ್ಟಿಯಲ್ಲಿರುವ ಇತರ ಭಾರತೀಯರು.

ಬಿಲಿಯನೇರ್ ದಮಾನಿ ಅವರು ಮುಂಬೈನ ಒಂದೇ ಕೊಠಡಿಯ ಅಪಾರ್ಟ್​ಮೆಂಟ್​ನ ಮಾರ್ವಾಡಿ ಕುಟುಂಬದಲ್ಲಿ ಬೆಳೆದವರು. ಮುಂಬೈ ವಿಶ್ವವಿದ್ಯಾಲಯದಲ್ಲಿ ವಾಣಿಜ್ಯ ವಿಷಯವನ್ನು ಅಧ್ಯಯನ ಮಾಡಿ, ಒಂದು ವರ್ಷದ ನಂತರ ಆ ಕೋರ್ಸ್ ಕೈಬಿಟ್ಟರು. ಷೇರು ಮಾರುಕಟ್ಟೆಯಲ್ಲಿ ಕೆಲಸ ಮಾಡುತ್ತಿದ್ದ ಅವರ ತಂದೆಯ ಮರಣದ ನಂತರ ದಮಾನಿ ತನ್ನ ಬಾಲ್ ಬೇರಿಂಗ್ ವ್ಯಾಪಾರವನ್ನು ತೊರೆದು, ಸ್ಟಾಕ್ ಮಾರ್ಕೆಟ್ ಬ್ರೋಕರ್ ಮತ್ತು ಹೂಡಿಕೆದಾರ ಆದರು.

2000ನೇ ಇಸವಿಯಲ್ಲಿ ಸ್ಟಾಕ್ ಮಾರುಕಟ್ಟೆಯನ್ನು ತೊರೆದು, ತಮ್ಮದೇ ಹೈಪರ್ ಮಾರುಕಟ್ಟೆ ಜಾಲ ಡಿಮಾರ್ಟ್ ಅನ್ನು ಆರಂಭಿಸಿದರು. 2002ರಲ್ಲಿ ಪೊವೈಯಲ್ಲಿ ಮೊದಲ ಮಳಿಗೆಯನ್ನು ಸ್ಥಾಪಿಸಿದರು. 2010ರಲ್ಲಿ ಈ ಜಾಲದ 25 ಮಳಿಗೆಗಳನ್ನು ಹೊಂದಿತ್ತು. ಅದರ ನಂತರ ಕಂಪೆನಿಯು ವೇಗವಾಗಿ ಬೆಳೆಯಿತು ಮತ್ತು 2017ರಲ್ಲಿ ಕಂಪೆನಿಯ ಷೇರುಗಳನ್ನು ಸಾರ್ವಜನಿಕ ವಿತರಣೆ ಮಾಡಲಾಯಿತು. ದಮಾನಿ ಸಾಮಾನ್ಯವಾಗಿ ಲೋ ಪ್ರೊಫೈಲ್ ಇಟ್ಟುಕೊಳ್ಳುತ್ತಾರೆ. ವಿರಳವಾಗಿಯೂ ಯಾವುದೇ ಸಂದರ್ಶನಗಳನ್ನು ನೀಡುವುದಿಲ್ಲ. ಅಂದಹಾಗೆ ಭಾರತೀಯ ಬಿಲಿಯನೇರ್ ರಾಕೇಶ್ ಜುನ್​ಜುನ್​ವಾಲಾಗೆ ತಮ್ಮ ಸ್ಟಾಕ್ ಟ್ರೇಡಿಂಗ್ ತಂತ್ರಗಳನ್ನು ಕಲಿಸಿದ್ದರು ರಾಧಾಕಿಶನ್ ದಮಾನಿ.

ಇದನ್ನೂ ಓದಿ: Hurun Global Rich List: Hurunನಿಂದ ಭಾರತದ ಅತ್ಯಂತ ಸಿರಿವಂತರ ಟಾಪ್ 10 ಪಟ್ಟಿ ಬಿಡುಗಡೆ: ಮುಕೇಶ್ ಅಂಬಾನಿ ನಂಬರ್ ಒನ್

(DMart Owner Radhakishan Damani Now In Worlds Top 100 Rich List)

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ